Hunsur: ಮೈಮುಲ್ ಅಧ್ಯಕ್ಷ ಸ್ಥಾನದಿಂದ ತಮ್ಮನ್ನು ವಜಾಗೊಳಿಸುವ ಸಚಿವರ ಹುನ್ನಾರ ನಡೆಯಲ್ಲ

ಸಚಿವ ಕೆ.ವೆಂಕಟೇಶ್‌ ರಿಂದ ಸಹಕಾರ ಇಲಾಖೆ ದುರ್ಬಳಕೆ; ಮೈಮುಲ್ ಅಧ್ಯಕ್ಷ ಪಿ.ಎಂ.ಪ್ರಸನ್ನಕುಮಾರ್ ಆರೋಪ

Team Udayavani, Jun 22, 2024, 1:02 PM IST

4-hunsur

ಹುಣಸೂರು: ತಮ್ಮನ್ನು ಮೈಮುಲ್ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಲು ಪಶು ಸಂಗೋಪನೆ ಸಚಿವ ಕೆ.ವೆಂಕಟೇಶ್ ಸಹಕಾರ ಇಲಾಖೆಯ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆಂದು ಮೈಮುಲ್ ಅಧ್ಯಕ್ಷ ಪಿ.ಎಂ. ಪ್ರಸನ್ನಕುಮಾರ್ ತಿಳಿಸಿದರು.

ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಹುಣಸೂರಿನ ಸಹಕಾರ ಸಂಘಗಳ ನಿಬಂಧಕರ ಕಚೇರಿಯ ನ್ಯಾಯಾಲಯಕ್ಕೆ ಆಗಮಿಸಿದ್ದ ಅವರು ಪತ್ರಕರ್ತರೊಂದಿಗೆ ಮಾತನಾಡಿದರು.

ಕ್ಷೇತ್ರದಲ್ಲಿ ತಮ್ಮ ಪುತ್ರನ ರಾಜಕೀಯ ಭವಿಷ್ಯಕ್ಕಾಗಿ ಸಚಿವರು ಇಲ್ಲಸಲ್ಲದ ರಾಜಕೀಯ ಮಾಡುತ್ತಿದ್ದಾರೆ. ತಾವು ಕಗ್ಗುಂಡಿ ಗ್ರಾಮದ ಮತದಾರನಾಗಿದ್ದು, ಗ್ರಾಮದ ಡೇರಿಯ ಅಧ್ಯಕ್ಷನಾಗಿದ್ದು, ಈ ಡೇರಿಯನ್ನು ಪ್ರತಿನಿಧಿಸಿ ಮೈಮುಲ್ ನಿರ್ದೇಶಕನಾಗಿ ಅಧ್ಯಕ್ಷನು ಆಗಿದ್ದು, ವಾಸ ಸ್ಥಳದ ಧೃಡಿಕರಣ ರದ್ದುಗೊಳಿಸುವುದಕ್ಕೆ ಬಾರಿ ಪ್ರಯತ್ನ ನಡೆಸಿದ್ದಾರೆ ಎಂದರು.

ಈ ಸಂಬಂಧ 2015 ರಿಂದಲೂ ನ್ಯಾಯಾಲಯದಲ್ಲಿ ತಡೆಯಾಜ್ಞೆ ಇದ್ದರೂ ಇದೀಗ ಮತ್ತೆ ವಾಸ ಸ್ಥಳದ ಧೃಡಿಕರಣ ರದ್ದಿಗೆ ಸಹಕಾರ ಇಲಾಖೆ ಅಧಿಕಾರಿಗಳ ಮುಖಾಂತರ ಒತ್ತಡ ಹಾಕುತ್ತಿದ್ದಾರೆ. ಅಲ್ಲದೆ ತಾಂತ್ರಿಕ ಕಾರಣ ಮುಂದೊಡ್ಡಿ ಕಗ್ಗುಂಡಿ ಡೇರಿಯ ಎಲ್ಲಾ ನಿರ್ದೇಶಕರಿಗೂ ನೋಟಿಸ್ ನೀಡಿದ್ದಾರೆ. ಮೈಮುಲ್ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸುವಂತೆ ನಿರ್ದೇಶಕರ ಮೇಲೆ ಒತ್ತಡ ಹಾಕುತ್ತಿದ್ದಾರೆಂದು ಗಂಭೀರ ಆರೋಪ ಮಾಡಿದರು.

ಪಿರಿಯಾಪಟ್ಟಣ ತಾಲೂಕು ಪಂಚವಳ್ಳಿ ಬಳಿಯ 60 ಕೋಟಿ ವೆಚ್ಚದ ಪಶು ಆಹಾರ ಘಟಕ ನಿರ್ಮಾಣಕ್ಕೆ ಹಿಂದೆಯೇ ಗುದ್ದಲಿ ಪೂಜೆ ನಡೆದಿದೆ. ಅದಕ್ಕೂ ತಡೆಯೊಡ್ಡಿದ್ದಾರೆ. ತಮ್ಮ ಅವಧಿಯಲ್ಲಿ ಮೈಮುಲ್ ಪ್ರಗತಿಗೆ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದೇನೆ. ಒಟ್ಟಾರೆ ತಮ್ಮನ್ನು ಕೆಳಗಿಳಿಸಲು ಸಚಿವರು ಜಿದ್ದಿಗೆ ಇಳಿದಿದ್ದಾರೆ. ಅಲ್ಲದೆ ನಂದಿನಾಥಪುರದ ಆಡಳಿತ ಮಂಡಳಿಯನ್ನು ವಜಾಗೊಳಿಸಿ, ಇಲ್ಲಿಂದ ಮೈಮುಲ್ ನಿರ್ದೇಶಕರಾಗಿದ್ದ ರಾಜೇಂದ್ರಪ್ಪರ ಅಕಾರಕ್ಕ ಸಂಚಾಕಾರ ತಂದಿರುವ ಸಚಿವರಿಗೆ ಜಿಲ್ಲೆಗೆ 68 ಕೋಟಿ ಹಾಲಿನ ಪ್ರೋತ್ಸಾಹ ಧನ ಸರಕಾರದಿಂದ ಬಾಕಿ ಬರಬೇಕಿದ್ದು, ಹಣವನ್ನು ಮಂಜೂರು ಮಾಡಿಸಲು ವಿಫಲವಾಗಿದ್ದಾರೆ. ಮುಖ್ಯಮಂತ್ರಿಗಳ ಕ್ಷೇತ್ರದಲ್ಲೇ ಅಧಿಕಾರ ದುರ್ಬಳಕೆಯಾಗುತ್ತಿರುವುದು ಯಾವ ನ್ಯಾಯ ಎಂದು ಪ್ರಶ್ನಿಸಿ, ಇದು ಮುಂದುವರೆದಲ್ಲಿ ಸಹಕಾರಿಗಳು ಬೀದಿಗಿಳಿದು ಹೋರಾಟ ನಡೆಸಲಿದ್ದಾರೆ ಎಂದು ಎಚ್ಚರಿಸಿದರು.

ದೊಡ್ಡ ಬ್ಯಾಲಾಳು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಶಿವಣ್ಣ ಮಾತನಾಡಿ, ತಮ್ಮ ಅಧ್ಯಕ್ಷತೆಯಲ್ಲಿ ನಡೆಯಬೇಕಿದ್ದ ಸಂಘದ ಮಹಾ ಸಭೆಯ ಮುನ್ನಾ ದಿನ ತಮ್ಮ ವಿರುದ್ದ ದೂರು ದಾಖಲಾಗುವಂತೆ ಸಚಿವ ವೆಂಕಟೇಶ್ ಅವರು ಚಿಂತನೆ ನಡೆಸಿ, ಸಭೆ ನಡೆಯದಂತೆ ನೋಡಿಕೊಂಡಿದ್ದಲ್ಲದೆ ಒಂದಿಲ್ಲೊಂದು ರೀತಿಯಲ್ಲಿ ಕಿರುಕುಳ ನೀಡುತ್ತಾ ಬಂದಿದ್ದಾರೆ ಎಂದರು.

ದೇವರಾಜ ಅರಸರ ನಂತರ ಜಿಲ್ಲೆಯಲ್ಲಿ ಸಿದ್ದಮಯ್ಯನವರು ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಹಿಂದುಳಿದವರು, ಬಡವರು ಶೋಷಿತರ ಧ್ವನಿಯಾಗಿ ಉತ್ತಮ ಕಾರ್ಯ ನಿರ್ವಹಿಸುತ್ತಿದ್ದು, ಇಂತಹ ನಾಯಕತ್ವದಲ್ಲಿ ವೆಂಕಟೇಶ್ ಸಚಿವರಾಗಿದ್ದುಕೊಂಡು ಬಡವರ ಕೆಲಸ ಮಾಡುವ ಬದಲು ಸಹಕಾರ ಸಂಘಗಳಲ್ಲಿ ಒಡಕು ಮೂಡಿಸುವುದು, ಸೂಪರ್ ಸೀಡ್ ಮಾಡಿಸುವುದು ಮಾಡುತ್ತಿರುವುದು ತರವಲ್ಲಾ, ವರ್ತನೆಯನ್ನು ಬದಲಾಯಿಸಿಕೊಳ್ಳದಿದ್ದಲ್ಲಿ ಜಿಲ್ಲಾದ್ಯಂತ ಸಹಕಾರಿಗಳೊಳಗೂಡಿ ಪ್ರತಿಭಟನೆ ನಡೆಸಲಾಗುವುದೆಂದು ಎಚ್ಚರಿಸಿದರು.

ಈ ವೇಳೆ ಕಗ್ಗುಂಡಿ ಡೇರಿಯ ಉಪಾಧ್ಯಕ್ಷ ಕೆ.ಟಿ.ಕೃಷ್ಣೇಗೌಡ ಹಾಗೂ ನಿರ್ದೇಶಕರು ಇದ್ದರು.

ಟಾಪ್ ನ್ಯೂಸ್

1-raju

Vijayapura: ವೀರಯೋಧ ಹವಾಲ್ದಾರ್ ರಾಜು ಕರ್ಜಗಿ ಪಾರ್ಥಿವ ಶರೀರ ತವರಿಗೆ ಆಗಮನ

1-PTI

Mumbai ಬೀದಿಗಳನ್ನು ವ್ಯಾಪಾರಿಗಳು ವಶಪಡಿಸಿಕೊಂಡಿದ್ದು ಪಾದಚಾರಿಗಳಿಗೆ ಸ್ಥಳವಿಲ್ಲ: ಹೈಕೋರ್ಟ್

1-asddasdsa

Hurricane; ಯಾವುದೇ ವಿಳಂಬಗಳಾಗದಿದ್ದಲ್ಲಿ ನಾಳೆ ಬೆಳಗ್ಗೆ ದಿಲ್ಲಿಗೆ ಟೀಮ್ ಇಂಡಿಯಾ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆಯ ಜಿಗಿತ…@80,000

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆಯ ಜಿಗಿತ…@80,000

Tragic: ಸೊಸೆ ಮನೆ ಬಿಟ್ಟು ಹೋಗಿದ್ದಕ್ಕೆ ಅತ್ತೆ, ಮಾವ ನೇಣಿಗೆ ಶರಣು

Tragic: ಸೊಸೆ ಮನೆ ಬಿಟ್ಟು ಹೋಗಿದ್ದಕ್ಕೆ ಅತ್ತೆ, ಮಾವ ನೇಣಿಗೆ ಶರಣು

1-lo

Police; ದಕ್ಷಿಣ ಕನ್ನಡ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಯತೀಶ್ ಎನ್.

1-anurag

Constitution ನಲ್ಲಿ ಎಷ್ಟು ಪುಟಗಳಿವೆ?: ವಿಪಕ್ಷಗಳಿಗೆ ಅನುರಾಗ್ ಠಾಕೂರ್ ಪ್ರಶ್ನೆ ವೈರಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Grama Panchayat ಮಟ್ಟದಲ್ಲಿ ಟಾಸ್ಕ್ ಪೋರ್ಸ್‌: ಕೃಷ್ಣ ಬೈರೇಗೌಡ

Grama Panchayat ಮಟ್ಟದಲ್ಲಿ ಟಾಸ್ಕ್ ಪೋರ್ಸ್‌: ಕೃಷ್ಣ ಬೈರೇಗೌಡ

Congress ಸ್ಥಾನಮಾನ ಬೇಕಿದ್ರೆ ವರಿಷ್ಠರ ಬಳಿ ಕೇಳಬೇಕು: ರಾಜಣ್ಣಗೆ ಕೃಷ್ಣ ಬೈರೇಗೌಡ ತಿರುಗೇಟು

Congress ಸ್ಥಾನಮಾನ ಬೇಕಿದ್ರೆ ವರಿಷ್ಠರ ಬಳಿ ಕೇಳಬೇಕು: ರಾಜಣ್ಣಗೆ ಕೃಷ್ಣ ಬೈರೇಗೌಡ ತಿರುಗೇಟು

Chirathe

Hunasuru: ಹಬ್ಬನಕುಪ್ಪೆಯಲ್ಲಿ ಬೋನಿಗೆ ಬಿದ್ದ ಚಿರತೆ

HD Revanna ಒಂದು ತಿಂಗಳಿಂದ ದೇವೇಗೌಡರು ನೋವಿನಲ್ಲೇ ಇದ್ದಾರೆ

HD Revanna ಒಂದು ತಿಂಗಳಿಂದ ದೇವೇಗೌಡರು ನೋವಿನಲ್ಲೇ ಇದ್ದಾರೆ

Krishna-Byregowda

DK, Udupi: ಕಾಲು ಸಂಕಗಳ ಅಭಿವೃದ್ಧಿಗೆ ಕ್ರಿಯಾ ಯೋಜನೆ: ಕೃಷ್ಣ ಭೈರೇಗೌಡ

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

1-raju

Vijayapura: ವೀರಯೋಧ ಹವಾಲ್ದಾರ್ ರಾಜು ಕರ್ಜಗಿ ಪಾರ್ಥಿವ ಶರೀರ ತವರಿಗೆ ಆಗಮನ

1-PTI

Mumbai ಬೀದಿಗಳನ್ನು ವ್ಯಾಪಾರಿಗಳು ವಶಪಡಿಸಿಕೊಂಡಿದ್ದು ಪಾದಚಾರಿಗಳಿಗೆ ಸ್ಥಳವಿಲ್ಲ: ಹೈಕೋರ್ಟ್

1-asddasdsa

Hurricane; ಯಾವುದೇ ವಿಳಂಬಗಳಾಗದಿದ್ದಲ್ಲಿ ನಾಳೆ ಬೆಳಗ್ಗೆ ದಿಲ್ಲಿಗೆ ಟೀಮ್ ಇಂಡಿಯಾ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆಯ ಜಿಗಿತ…@80,000

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆಯ ಜಿಗಿತ…@80,000

Shiva Rajkumar: ನಾಳೆ ಶಿವಣ್ಣ ಹೊಸ ಚಿತ್ರದ ಟೈಟಲ್‌ ಲಾಂಚ್‌

Shiva Rajkumar: ನಾಳೆ ಶಿವಣ್ಣ ಹೊಸ ಚಿತ್ರದ ಟೈಟಲ್‌ ಲಾಂಚ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.