Sambhavami Yuge Yuge Review; ಊರು ಗೆದ್ದ ಹಳ್ಳಿಹೈದ


Team Udayavani, Jun 22, 2024, 3:35 PM IST

Sambhavami Yuge Yuge Review

ಆಶ್ರಯ ನೀಡಿ, ಬದುಕು ಕಟ್ಟಿಕೊಳ್ಳಲು ಕಾರಣವಾದ ಊರಿಗೆ ಮಗ ಸೇವೆ ಮಾಡಬೇಕು. ಈ ಮೂಲಕ ಊರ ಜನರ ಕಷ್ಟಕ್ಕೆ ಮಗ ಆಗಬೇಕು ಎಂದು ಕನಸು ಕಾಣುವ ತಾಯಿ. ಒಳ್ಳೆಯ ವಿದ್ಯಾವಂತನಾದರೂ ತಾಯಿಯ ಆಸೆಯಂತೆ ಸಿಟಿಯ ಕನಸು ಬಿಟ್ಟು ಹಳ್ಳಿ ಜನರ ಸೇವೆಗೆ ಮುಂದಾಗುವ ಮಗ. ಬಹುಬೇಗನೇ ಊರಮಂದಿಯ ಮೆಚ್ಚುಗೆ ಪಡೆಯುತ್ತಲೇ ಒಂದಷ್ಟು ಮಂದಿಯ ದ್ವೇಷಕ್ಕೂ ಕಾರಣನಾಗುತ್ತಾನೆ. ಅಲ್ಲಿಂದ ಆಟ ಶುರು. ಆ ಆಟ ಏನು ಎಂಬ ಕುತೂಹಲವಿದ್ದರೆ ನೀವು ಸಿನಿಮಾ ನೋಡಬೇಕು.

ಹೌದು, ಈ ವಾರ ತೆರೆಕಂಡಿರುವ “ಸಂಭವಾಮಿ ಯುಗೇ ಯುಗೇ’ ಚಿತ್ರ ಒಂದು ಹಳ್ಳಿ ಕಥಾನಕ. ಊರು ಉದ್ಧಾರ ಮಾಡಲೆಂದು ಹಳ್ಳಿಯಲ್ಲೇ ಉಳಿದು, ಪಂಚಾಯತ್‌ ಅಧ್ಯಕ್ಷನಾಗುವ ಯುವಕನ ಒಳ್ಳೆತನ ಒಂದು ಕಡೆಯಾದರೆ, ಅವ್ಯವಹಾರದಲ್ಲಿ ತೊಡಗಿರುವ ಗುಂಪಿನ ಆಟ ಮತ್ತೂಂದು ಕಡೆ. ಇದರಲ್ಲಿ ಹೀರೋ ಹೇಗೆ ಜಯಿಸುತ್ತಾನೆ ಎಂಬ ಅಂಶದೊಂದಿಗೆ ಸಿನಿಮಾ ಸಾಗುತ್ತದೆ. ಇಡೀ ಸಿನಿಮಾದ ಚಿತ್ರೀಕರಣ ಮಂಡ್ಯ, ಚನ್ನಪಟ್ಟಣ ಸುತ್ತಮುತ್ತ ನಡೆದಿರುವುದರಿಂದ ಅಲ್ಲಿನ ಪರಿಸರ ಕಥೆಯ ಜೊತೆಗೆ ಸಾಗಿದೆ.

ನಿರ್ದೇಶಕರು ಮೂಲ ಕಥೆಯ ಆಶಯಕ್ಕೆ ತಕ್ಕಂತೆ ಸನ್ನಿವೇಶಗಳನ್ನು ಸೃಷ್ಟಿಸಿದ್ದಾರೆ. ಊರಿನ ರಾಜಕೀಯ, ಜನರ ನಿರೀಕ್ಷೆ ಈ ನಡುವೆಯೇ ಚಿಗುರೊಡೆಯುವ ಪ್ರೀತಿ.. ಇಂತಹ ಅಂಶಗಳ ಮೂಲಕ ಸಿನಿಮಾ ಸಾಗಿಬರುತ್ತದೆ. ಶಿಕ್ಷಣ ಪಡೆದ ಯುವಕರೆಲ್ಲಾ ಹಳ್ಳಿ ಬಿಟ್ಟು ಸಿಟಿ ಸೇರಿದರೆ ಹಳ್ಳಿಯನ್ನು ಉದ್ಧಾರ ಮಾಡುವವರು ಯಾರು? ಹಳ್ಳಿಯಲ್ಲೇ ಒಳ್ಳೆಯ ಅವಕಾಶಗಳು ಸೃಷ್ಟಿಯಾಗಬೇಕು ಮತ್ತು ಆ ನಿಟ್ಟಿನಲ್ಲಿ ಎಲ್ಲರೂ ಪ್ರಯತ್ನಿಸಬೇಕು ಎಂಬ ಸಂದೇಶವೂ ಈ ಸಿನಿಮಾದಲ್ಲಿದೆ. ಮೊದಲೇ ಹೇಳಿದಂತೆ ಈ ಚಿತ್ರದಲ್ಲೊಂದು ಸಂದೇಶವಿದೆ, ಜೊತೆಗೆ ಒಂದು

ಥ್ರಿಲ್ಲರ್‌ ಅಂಶವೂ ಇದೆ. ಇದನ್ನು ನಿರ್ದೇಶಕರು ಸುದೀರ್ಘ‌ವಾಗಿ ಹೇಳಲು ಪ್ರಯತ್ನಿಸಿದ್ದಾರೆ. ಅದೇ ಕಾರಣದಿಂದ ಸಿನಿಮಾದ ಅವಧಿ ಹೆಚ್ಚಿದೆ. ಒಂದಷ್ಟು ದೃಶ್ಯಗಳಿಗೆ ಕತ್ತರಿ ಪ್ರಯೋಗ ಮಾಡುವ ಅವಕಾಶ ನಿರ್ದೇಶಕರಿಗಿತ್ತು. ಇನ್ನು ಸಿನಿಮಾದ ಹೈಲೈಟ್‌ ಎಂದರೆ ಅದು ಕ್ಲೈಮ್ಯಾಕ್ಸ್‌. ಇಲ್ಲೊಂದು ಊಹಿಸಲಾಗದ ಟ್ವಿಸ್ಟ್‌ ಕೊಡಲಾಗಿದೆ.

ನಾಯಕ ಜಯ್‌ ಶೆಟ್ಟಿ ಪಾತ್ರಕ್ಕೆ ನ್ಯಾಯ ಒದಗಿಸಲು ಪ್ರಯತ್ನಿಸಿದ್ದಾರೆ. ಸೆಂಟಿಮೆಂಟ್‌ ದೃಶ್ಯಗಳಲ್ಲಿ ಅವರು ಪಳಗಬೇಕು. ಉಳಿದಂತೆ ಸುಧಾರಾಣಿ, ವೆಂಕಟೇಶ್‌, ಅಶ್ವಿ‌ನ್‌ ಹಾಸನ್‌ ಸೇರಿದಂತೆ ಇತರರು ತಮ್ಮ ಪಾತ್ರಗಳಿಗೆ ನ್ಯಾಯ ಒದಗಿಸಿದ್ದಾರೆ.

ಆರ್‌.ಪಿ.ರೈ

ಟಾಪ್ ನ್ಯೂಸ್

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

NANGI-KADALKORETA

Nangi: ತೀವ್ರಗೊಂಡ ಕಡಲ್ಕೊರೆತ… ಬೀಚ್‌ ವ್ಯೂ ರೆಸಾರ್ಟ್‌ ಸಮುದ್ರ ಪಾಲಾಗುವ ಸಾಧ್ಯತೆ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jigar movie review

Jigar movie review; ಆ್ಯಕನ್‌ ಡ್ರಾಮಾದಲ್ಲೊಂದು ಪ್ರೇಮ್‌ ಕಹಾನಿ

Kaagada movie review

Kaagada movie review; ಕಾಗದ ಮೇಲೆ ಅರಳಿದ ಮುಗ್ಧ ಪ್ರೀತಿ

love li movie review

Love Li movie review: ಪ್ರೀತಿ, ದ್ವೇಷ ಮತ್ತು ಅವನು!

Shivamma movie review;

Shivamma movie review; ಗಟ್ಟಿಗಿತ್ತಿಯ ಬದುಕಿನ ಕನಸು

Kotee movie review: ಕೋಟಿ ಲೆಕ್ಕ ಹುಲಿಬೇಟೆ ಪಕ್ಕಾ

Kotee movie review: ಕೋಟಿ ಲೆಕ್ಕ ಹುಲಿಬೇಟೆ ಪಕ್ಕಾ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.