ಗಂಗಾವತಿ: ಮುಂಗಾರಿಗೆ ಕೆರೆ, ಕೊಳ್ಳಗಳು ಸಂಪೂರ್ಣ ಭರ್ತಿ


Team Udayavani, Jun 22, 2024, 5:55 PM IST

Gangavathi

ಉದಯವಾಣಿ ಸಮಾಚಾರ
ಗಂಗಾವತಿ: ನರೇಗಾ ಯೋಜನೆಯಡಿ ಹೂಳೆತ್ತುವ ಕೆಲಸ ಮಾಡಿದ್ದರಿಂದ ಕೆರೆ, ಕಟ್ಟೆಗಳಲ್ಲಿ ಮುಂಗಾರು ಮಳೆ ನೀರು ನಿಲ್ಲುವಂತಾಗಿದೆ. ಬರದಿಂದ ಬತ್ತಿ ಹೋಗಿದ್ದ ಕೆರೆಗಳು, ನಾಲಾಗಳಲ್ಲಿ ತಾಲೂಕಿನ ಗ್ರಾಮೀಣ ಭಾಗದ ಕೂಲಿಕಾರರು ಹೂಳೆತ್ತುವ ಕೆಲಸ ಮಾಡಿದ್ದರ ಪರಿಣಾಮ ಇದೀಗ ಕಾಲುವೆ, ಹಳ್ಳ, ಕೊಳ್ಳಗಳು ಮೈದುಂಬಿಕೊಂಡು ಹರಿಯುತ್ತಿವೆ.

ತಾಲೂಕಿನ ಬಹುತೇಕ ಪ್ರದೇಶ ಗುಡ್ಡಗಾಡು ಪ್ರದೇಶದಿಂದ ಕೂಡಿದ್ದು ಇಳಿಜಾರು ಪ್ರದೇಶದಿಂದ ಬರುವ ಮಳೆ ನೀರು ಕೆರೆಗಳಲ್ಲಿ ಸಂಗ್ರಹವಾಗುತ್ತಿದೆ. ದನಕರು-ಕಾಡುಪ್ರಾಣಿಗಳಿಗೆ ನೀರು ದೊರೆತಂತಾಗಿದೆ. ಜತೆಗೆ ಅಂತರ್ಜಲ ವೃದ್ಧಿಗೆ ಸಹಕಾರಿಯಾಗಿದೆ.

ತಾಲೂಕಿನ ಸೂರ್ಯನಾಯಕ ತಾಂಡಾ ಕೆರೆ, ಮಲ್ಲಾಪುರ ಬಳಿಗಾರ ಊಟಿಕೆರೆ, ಗಡ್ಡಿ ಕೆರೆ, ಹಂಪಸದುರ್ಗಾದ ತುರುಕನಕೊಳ್ಳ,
ತಿರುಮಲಾಪುರ ಕೆರೆ, ಬಸವನದುರ್ಗಾದ ಡುಮ್ಕಿಕೊಳ್ಳದಲ್ಲಿ ಮಳೆನೀರು ಸಂಗ್ರಹಗೊಂಡಿದೆ. ಜತೆಗೆ ಚಿಕ್ಕಬೆಣಕಲ್‌, ಆಗೋಲಿ ಗ್ರಾಮದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಕೂಲಿಕಾರರು ಹೂಳೆತ್ತಿದ್ದ ಹಳ್ಳಗಳು, ನಾಲಾಗಳು ಮಳೆ ನೀರಿನಿಂದ ತುಂಬಿಕೊಂಡು ಮೈದುಂಬಿ ಹರಿಯುತ್ತಿವೆ.ವಿಠಲಾಪುರದಲ್ಲಿ ಕಂದಕು ಬದುವುಗಳಲ್ಲಿ ಮಳೆ ನೀರು ಇಂಗಿಸಲಾಗಿದ್ದು, ಮಣ್ಣಿನ ಸವಕಳಿ ತಡೆಯಲಾಗಿದೆ.

ಅಮೃತ ಸರೋವರ: ಕಳೆದೆರೆಡು ವರ್ಷಗಳ ಹಿಂದೆ ವಿವಿಧ ಗ್ರಾಪಂಗಳ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ  ಉದ್ಯೋಗ ಖಾತ್ರಿ ಯೋಜನೆಯಡಿ ಕೆರೆಗಳನ್ನು ಅಮೃತ ಸರೋವರಗಳನ್ನಾಗಿ ಅಭಿವೃದ್ಧಿಪಡಿಸಲಾಗಿತ್ತು. ಈ ವೇಳೆ ಕೆರೆಗಳ ಹೂಳು ತೆಗೆದು
ಒಡ್ಡು, ಪಿಚ್ಚಿಂಗ್‌ ಮಾಡಿ ಅಭಿವೃದ್ಧಿ ಸ್ಪರ್ಶ ನೀಡಲಾಗಿತ್ತು. ಅಲ್ಲದೇ ಈ ಕೆರೆಗಳಲ್ಲಿ 2023-2024, 2024-25 ನೇ ಸಾಲಿನಲ್ಲಿ ಕೂಲಿಕಾರರು ಹೂಳೆತ್ತುವ ಕೆಲಸ ಮಾಡಿದ್ದರಿಂದ ಸದ್ಯ ಅಪಾರ ಪ್ರಮಾಣದ ನೀರು ಕೆರೆಯಲ್ಲಿ ಸಂಗ್ರಹಗೊಂಡಿದೆ. ಕೆರೆಗಳ ಸುತ್ತಲಿನ ರೈತರ ಜಮೀನುಗಳ ಅಂತರ್ಜಲ ಮಟ್ಟ ಹೆಚ್ಚಳಕ್ಕೆ ಅನುಕೂಲವಾಗಿದ್ದು, ಅನ್ನದಾತರ ಮೊಗದಲ್ಲಿ ಮಂದಹಾಸ ಮೂಡಿದೆ.

ಬರಗಾಲದಿಂದ ನೀರಿಗೆ ಹಾಹಾಕಾರ ಅನುಭವಿಸಿದ್ದ ಮೂಕ ಪ್ರಾಣಿಗಳು ನಿಟ್ಟುಸಿರು ಬಿಟ್ಟಿವೆ. ದನಕರ, ಕಾಡುಪ್ರಾಣಿಗಳಿಗೂ ಕುಡಿವ ನೀರಿನ ನೆಲೆ ಸಿಕ್ಕಂತಾಗಿದೆ. ಪ್ರಸಕ್ತ 2024-25 ನೇ ಸಾಲಿನಲ್ಲಿ ತಾಲೂಕಿನ 18 ಗ್ರಾಪಂ ವ್ಯಾಪ್ತಿಯ ನರೇಗಾ ಕೂಲಿಕಾರರಿಗೆ ನೀರಿನ ಮೂಲಗಳಾದ ಕೆರೆ, ನಾಲಾ, ಹಳ್ಳದ ಹೂಳೆತ್ತುವ ಕೆಲಸ ಹೆಚ್ಚಾಗಿ ನೀಡಲಾಗಿತ್ತು. ಪ್ರಸಕ್ತ ಸಾಲಿನಲ್ಲಿ ತಾಲೂಕಿನಲ್ಲಿ ಒಟ್ಟು 5,03,249 ಮಾನವ ದಿನಗಳ ಸೃಷ್ಟಿಸಿ ಕೂಲಿ ಕೆಲಸ ಕಲ್ಪಿಸಲಾಗಿದೆ.

ಮುಂಗಾರು ಮಳೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಗ್ರಾಮೀಣ ಜನರಿಗೆ ಉದ್ಯೋಗ ನೀಡುವಾಗ ಕೆರೆಯ ಹೂಳು ತೆಗೆಯಿಸಿದ್ದರಿಂದ ತಾಲೂಕಿನಲ್ಲಿ ಉತ್ತಮ ಮಳೆಯಾಗಿದ್ದು, ನರೇಗಾ ಕೂಲಿಕಾರರು ಹೂಳೆತ್ತಿದ್ದ ಕೆರೆಗಳಲ್ಲಿ ಮಳೆ ನೀರು ಸಂಗ್ರಹಗೊಂಡಿದೆ. ಇದರಿಂದ ಜಾನುವಾರು, ಕಾಡುಪ್ರಾಣಿಗಳಿಗೆ ಕುಡಿಯುವ ನೀರು ಸಿಗುತ್ತದೆ. ಗುಡ್ಡದಿಂದ ವ್ಯರ್ಥವಾಗಿ ಹರಿಯುತ್ತಿದ್ದ ಮಳೆ ನೀರನ್ನು ಕೆರೆಯಲ್ಲಿ ಸಂಗ್ರಹಿಸುವ ಮಹತ್ಕಾರ್ಯ ಮಾಡಲಾಗಿದೆ. ಅಮೃತ ಸರೋವರಗಳಿಗೆ ಇದೀಗ ಜೀವಕಳೆ ಬಂದಿದೆ.
ರಾಹುಲ್‌ ರತ್ನಂ ಪಾಂಡೆಯ, ಸಿಇಒ, ಕೊಪ್ಪಳ

ಮಹಾತ್ಮ ಗಾಂ ಧಿ ಉದ್ಯೋಗ ಖಾತ್ರಿ ಯೋಜನೆಯಡಿ ಕೂಲಿಕಾರರಿಂದ ಕೆರೆ, ನಾಲಾಗಳ ಹೂಳೆತ್ತಲು ಹೆಚ್ಚು ಒತ್ತು ನೀಡಲಾಗಿತ್ತು. ಕಳೆದೊಂದು ವಾರದಿಂದ ಉತ್ತಮ ಮಳೆ ಆಗುತ್ತಿದ್ದುದರಿಂದ ಕೆರೆ, ನಾಲಾಗಳು ತುಂಬಿ ಹರಿಯುತ್ತಿದ್ದು, ಅಂತರ್ಜಲ ವೃದ್ಧಿಗೆ ಅನುಕೂಲವಾಗಿದೆ.
*ಲಕ್ಷ್ಮೀದೇವಿ, ತಾಪಂ ಇಒ, ಗಂಗಾವತಿ

ಮೂಕ ಪ್ರಾಣಿಗಳು ಕುಡಿಯಲು ನೀರಿಲ್ಲದೇ ಪರದಾಡಬೇಕಿತ್ತು. ಸತತ ಮಳೆಯಿಂದ ಕೆರೆ, ಹಳ್ಳಗಳಲ್ಲಿ ನೀರು ಸಂಗ್ರಹಗೊಂಡಿದ್ದು, ತುಂಬಾ ಸಂತಸ ತಂದಿದೆ. ಕುರಿಗಳಿಗೆ ನೀರು ಹಾಗೂ ಮೇವಿಗಾಗಿ ಅಲೆಯುವುದು ತಪ್ಪುತ್ತದೆ.
*ರಾಯಪ್ಪ ಅಲೇಮಾರಿ,ಕುರಿಗಾಹಿ ಸಿದ್ದಿಕೇರಿ

*ಕೆ.ನಿಂಗಜ್ಜ

ಟಾಪ್ ನ್ಯೂಸ್

koratagere

Koratagere: ಎರಡು ವಿದ್ಯುತ್‌ ಉಪಸ್ಥಾವರ ಘಟಕಗಳ ಉದ್ಘಾಟನೆ

Amit Shah

3 new criminal laws; ತಮಿಳು ಸೇರಿ ಪ್ರಾದೇಶಿಕ ಭಾಷೆಗಳಲ್ಲಿ ಲಭ್ಯ: ಶಾ

Shirva: ಅಪರಿಚಿತ ವ್ಯಕ್ತಿ ಆತ್ಮಹತ್ಯೆ

Shirva: ಅಪರಿಚಿತ ವ್ಯಕ್ತಿ ಆತ್ಮಹತ್ಯೆ

America ಸೌಂದರ್ಯ ಸ್ಪರ್ಧೆ: ಶಿರಸಿ ಮೂಲದ ಡಾ|ಶ್ರುತಿಗೆ ಕಿರೀಟ

America ಸೌಂದರ್ಯ ಸ್ಪರ್ಧೆ: ಶಿರಸಿ ಮೂಲದ ಡಾ|ಶ್ರುತಿಗೆ ಕಿರೀಟ

CM Siddu

Leadership change; ಹೈಕಮಾಂಡ್ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ: ಸಿಎಂ ಸಿದ್ದರಾಮಯ್ಯ

1-csaddasd

Hosanagara: ಅಪಘಾತವಾಗಿ ಪಲ್ಟಿಯಾದ 50ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಸರಕಾರಿ ಬಸ್

Rabakavi

Irrigation: ರೈತರ ವಿಚಾರದಲ್ಲಿ ರಾಜಕಾರಣ ಮಾಡದಿರಿ: ಸಚಿವ ತಿಮ್ಮಾಪುರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bommai BJP

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ: ಬಸವರಾಜ ಬೊಮ್ಮಾಯಿ

2-gadag

Gadag: ಪೊಲೀಸರ ಮೇಲೆ‌ ಹಲ್ಲೆ ನಡೆಸಿ ಪರಾರಿಯಾದ ದುಷ್ಕರ್ಮಿಗಳು

1-ree

Mundargi; ನೀರಾವರಿ ಇಲಾಖೆ‌ ಕಚೇರಿ ಒಳಗೇ ಆತ್ಮಹತ್ಯೆಗೆ ಮುಂದಾದ ರೈತ

ಶಿವಮೂರ್ತಯ್ಯ ಸುರೇಬಾನರ ಚಿಂತನೆ ಅಜರಾಮರ: ವಿನಾಯಕ ಶಾಲದಾರ

ಶಿವಮೂರ್ತಯ್ಯ ಸುರೇಬಾನರ ಚಿಂತನೆ ಅಜರಾಮರ: ವಿನಾಯಕ ಶಾಲದಾರ

Education ಇಲಾಖೆಯ ಆದೇಶಕ್ಕೆ ಕಿಮ್ಮತ್ತು ನೀಡದ ಸೆಂಟ್ ಪಾಲ್ಸ್ ಆಂಗ್ಲ ಮಾಧ್ಯಮ ಶಾಲೆ

Education ಇಲಾಖೆಯ ಆದೇಶಕ್ಕೆ ಕಿಮ್ಮತ್ತು ನೀಡದ ಸೆಂಟ್ ಪಾಲ್ಸ್ ಆಂಗ್ಲ ಮಾಧ್ಯಮ ಶಾಲೆ

MUST WATCH

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

ಹೊಸ ಸೇರ್ಪಡೆ

koratagere

Koratagere: ಎರಡು ವಿದ್ಯುತ್‌ ಉಪಸ್ಥಾವರ ಘಟಕಗಳ ಉದ್ಘಾಟನೆ

Amit Shah

3 new criminal laws; ತಮಿಳು ಸೇರಿ ಪ್ರಾದೇಶಿಕ ಭಾಷೆಗಳಲ್ಲಿ ಲಭ್ಯ: ಶಾ

Shirva: ಅಪರಿಚಿತ ವ್ಯಕ್ತಿ ಆತ್ಮಹತ್ಯೆ

Shirva: ಅಪರಿಚಿತ ವ್ಯಕ್ತಿ ಆತ್ಮಹತ್ಯೆ

America ಸೌಂದರ್ಯ ಸ್ಪರ್ಧೆ: ಶಿರಸಿ ಮೂಲದ ಡಾ|ಶ್ರುತಿಗೆ ಕಿರೀಟ

America ಸೌಂದರ್ಯ ಸ್ಪರ್ಧೆ: ಶಿರಸಿ ಮೂಲದ ಡಾ|ಶ್ರುತಿಗೆ ಕಿರೀಟ

CM Siddu

Leadership change; ಹೈಕಮಾಂಡ್ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.