![Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್ ರಾಜೀನಾಮೆ!](https://www.udayavani.com/wp-content/uploads/2024/07/Meena-415x233.jpg)
ರಾಜಕೀಯ ಜೀವನಕ್ಕೆ ಬುನಾದಿ ಹಾಕಿದ ಶಿರ್ವದ ಅಭಿವೃದ್ಧಿಗೆ ಕಟಿಬದ್ಧ: ಐವನ್ ಡಿ ಸೋಜಾ
ಶಿರ್ವ: ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ ಅವರಿಗೆ ಸಮ್ಮಾನ
Team Udayavani, Jun 22, 2024, 8:50 PM IST
![ರಾಜಕೀಯ ಜೀವನಕ್ಕೆ ಬುನಾದಿ ಹಾಕಿದ ಶಿರ್ವದ ಅಭಿವೃದ್ಧಿಗೆ ಕಟಿಬದ್ಧ: ಐವನ್ ಡಿ ಸೋಜಾ,](https://www.udayavani.com/wp-content/uploads/2024/06/Shirva-1-620x308.jpg)
ಶಿರ್ವ:ಗ್ರಾಮೀಣ ಪರಿಸರದಲ್ಲಿ ಅಭಿವೃದ್ಧಿಯ ಕೆಲಸಕಾರ್ಯಗಳು ನಡೆಯಬೇಕಿದ್ದು, ಜನಸಂಖ್ಯೆಗೆ ಅನುಗುಣವಾಗಿ ಎಲ್ಲಾ ಮೂಲಭೂತ ಸೌಕರ್ಯಗಳಿರುವ ಶಿರ್ವ ಗ್ರಾಮ ಪಂಚಾಯತನ್ನು ಪಟ್ಟಣ ಪಂಚಾಯತ್ ಆಗಿ ಮೇಲ್ದರ್ಜೆಗೇರಿಸುವ ಅವಶ್ಯಕತೆಯಿದೆ.
ಮುದರಂಗಡಿಯಲ್ಲಿ ಹುಟ್ಟಿ ಬೆಳೆದರೂ,ತನ್ನ ರಾಜಕೀಯ ಜೀವನಕ್ಕೆ ಬುನಾದಿ ಹಾಕಿದ ಶಿರ್ವ ಗ್ರಾಮದ ಅಭಿವೃದ್ಧಿಗೆ ಕಟಿಬದ್ಧನಾಗಿರುವೆ ಎಂದು ಕರ್ನಾಟಕ ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ ಹೇಳಿದರು.
ಅವರು ಶನಿವಾರ ಸಂಜೆ ಶಿರ್ವ ಸಾರ್ವಜನಿಕ ಗಣೇಶೋತ್ಸವ ವೇದಿಕೆಯ ಬಳಿಯಿರುವ ಮಹಿಳಾ ಸೌಧದಲ್ಲಿ ಶಿರ್ವದ ಐವನ್ ಡಿಸೋಜಾ ಅಭಿಮಾನಿ ಬಳಗ ಆಯೋಜಿಸಿದ ಸಮ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಮ್ಮಾನ ಸ್ವೀಕರಿಸಿ ಮಾತನಾಡಿದರು.
ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ ಮಾತನಾಡಿ ಛಲದ ಬಲದಿಂದ ಸಾಧನೆ ಸಾಕ್ಷಾತ್ಕಾರವಾಗಬೇಕು.ಪಕ್ಷ ಸಿದ್ಧಾಂತ ಯಾವುದೇ ಇರಲಿ,ಅಭಿವೃದ್ಧಿಯ ವಿಚಾರದಲ್ಲಿ ರಾಜಕೀಯ ಅಡ್ಡಿಯಾಗಬಾರದು.
ಎಳವೆಯಲ್ಲಿಯೇ ಹೋರಾಟದ ಬದುಕು ಕಟ್ಟಿಕೊಂಡು ಸಮಾಜಕ್ಕೆ ಅರ್ಪಿಸಿಕೊಂಡ ಐವನ್ ಡಿಸೋಜಾ ಅವರೊಂದಿಗೆ ಶಿರ್ವದ ಅಭಿವೃದ್ಧಿಯಲ್ಲಿ ಕೈಜೋಡಿಸುವೆ ಎಂದು ಹೇಳಿದರು.
ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಮಾತನಾಡಿ ಸಾರ್ವಜನಿಕರ ಪ್ರೀತಿಗೆ ಪಾತ್ರರಾಗುವುದು ಸುಲಭವಲ್ಲ. ತಾನು ನಂಬಿರುವ ವಿಚಾರಧಾರೆಯಲ್ಲಿ ಕ್ರಿಯಾಶೀಲರಾಗಿ ಕೆಲಸ ಮಾಡಿದಾಗ ಉನ್ನತ ಅವಕಾಶಗಳು ಒದಗಿ ಬರುತ್ತದೆ ಎಂದು ಹೇಳಿದರು.
ಶಿರ್ವ ಚರ್ಚ್ ದ್ವಾರದ ಬಳಿ ಸಾರ್ವಜನಿಕವಾಗಿ ಸ್ವಾಗತಿಸಿ ಬಳಿಕ ಭವ್ಯ ಮೆರವಣಿಗೆಯಲ್ಲಿ ಬರಮಾಡಿಕೊಂಡು ಮಹಿಳಾ ಸೌಧಕ್ಕೆ ಕರೆತರಲಾಯಿತು. ಕಾರ್ಯಕ್ರಮದಲ್ಲಿ ಐವನ್ ಡಿಸೋಜಾ ಅವರನ್ನು ಸಮ್ಮಾನಿಸಿ ಗೌರವಿಸ ಲಾಯಿತು. ನಿವೃತ್ತ ಶಿಕ್ಷಕ ಗಿಲ್ಬರ್ಟ್ ಪಿಂಟೋ ಸಮ್ಮಾನಪತ್ರ ವಾಚಿಸಿದರು.
ಶಿರ್ವ ಆರೋಗ್ಯ ಮಾತಾ ಚರ್ಚ್ನ ಪ್ರಧಾನ ಧರ್ಮ ಗುರು ವಂ|ಡಾ| ಲೆಸ್ಲಿ ಡಿಸೋಜಾ, ಶಿರ್ವ ಸುನ್ನಿ ಜಾಮಿಯಾ ಮಸೀದಿಯ ಖತೀಬರಾದ ಜ|ಸಿರಾಜುದ್ದೀನ್ ಝೈನಿ ಶುಭ ಹಾರೈಸಿದರು. ಶಿರ್ವ ಗ್ರಾ.ಪಂ. ಅಧ್ಯಕ್ಷೆ ಸವಿತಾ ರಾಜೇಶ್ ಪೂಜಾರಿ ವೇದಿಕೆಯಲ್ಲಿದ್ದರು. ಉಪಾಧ್ಯಕ್ಷ ವಿಲ್ಸನ್ ರೊಡ್ರಿಗಸ್ ಪ್ರಾಸ್ತಾವಿಕವಾಗಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಬೆಳ್ಳೆ ಶಿವಾಜಿ ಎಸ್. ಸುವರ್ಣ, ಮಾಜಿ ತಾ.ಪಂ. ಸದಸ್ಯ ಮೈಕಲ್ ರಮೇಶ್ ಡಿಸೋಜಾ, ಅಲೆವೂರು ಹರೀಶ್ ಕಿಣಿ,ಪ್ರಶಾಂತ್ ಜತ್ತನ್ನ,ಜಿತೇಂದ್ರ ಫುರ್ಟಾಡೋ,ಜೋಸೆಫ್ ಡಿಸೋಜಾ ಮತ್ತಿತರ ಗಣ್ಯರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಅಭಿಮಾನಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
ಐವನ್ ಡಿಸೋಜಾ ಅಭಿಮಾನಿ ಬಳಗದ ಅಧ್ಯಕ್ಷ ಮೆಲ್ವಿನ್ ಅರಾನ್ಹಾ ಸ್ವಾಗತಿಸಿದರು. ಸ್ಟೀವನ್ ಕುಲಾಸೋ ಕಾರ್ಯಕ್ರಮ ನಿರೂಪಿಸಿ,ಕೆ.ಆರ್.ಪಾಟ್ಕರ್ ವಂದಿಸಿದರು.
ಗ್ರಾ.ಪಂ.ಗೆ 10 ಲ. ರೂ. ಅನುದಾನ
ಗ್ರಾ.ಪಂ. ಮೇಲ್ದರ್ಜೆಗೇರಿದರೆ ಹೆಚ್ಚಿನ ಅನುದಾನ ಸಿಗಲಿದ್ದು ಅಭಿವೃದ್ಧಿಗೆ ಪೂರಕವಾಗಲಿದೆ. ಶಿರ್ವ ಗ್ರಾ.ಪಂ.ನ ಹಳೆ ಕಟ್ಟಡದ ದುರಸ್ತಿ ಕಾಮಗಾರಿ ಪೂರ್ತಿಗೊಳಿಸಲು ರಾಜ್ಯ ಸರಕಾರದ ನಿಧಿಯಿಂದ 10 ಲ. ರೂ.ಗಳ ಆನುದಾನ ನೀಡಲು ಶ್ರಮಿಸುವೆ.
-ಐವನ್ ಡಿಸೋಜಾ, ವಿಧಾನ ಪರಿಷತ್ ಸದಸ್ಯರು.
ಟಾಪ್ ನ್ಯೂಸ್
![Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್ ರಾಜೀನಾಮೆ!](https://www.udayavani.com/wp-content/uploads/2024/07/Meena-415x233.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![8-udupi](https://www.udayavani.com/wp-content/uploads/2024/07/8-udupi-150x90.jpg)
Udupi ಜಿಲ್ಲೆಯಲ್ಲಿ ಗಾಳಿ-ಮಳೆ ಹಾನಿ:ಮಾಹಿತಿ ಪಡೆದು,ಕ್ರಮಕ್ಕೆ ಸೂಚಿಸಿದ ಸಚಿವೆ ಹೆಬ್ಬಾಳ್ಕರ್
![5-byndoor](https://www.udayavani.com/wp-content/uploads/2024/07/5-byndoor-150x90.jpg)
Heavy Rain: ಬೈಂದೂರು ವಲಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ
![Manipal ಆನ್ಲೈನ್ ವಂಚಕರ ಬಲೆಗೆ ಬಿದ್ದ ಪಿಎಚ್.ಡಿ. ವಿದ್ಯಾರ್ಥಿನಿ!](https://www.udayavani.com/wp-content/uploads/2024/07/ONLINE-150x84.jpg)
Manipal ಆನ್ಲೈನ್ ವಂಚಕರ ಬಲೆಗೆ ಬಿದ್ದ ಪಿಎಚ್.ಡಿ. ವಿದ್ಯಾರ್ಥಿನಿ!
![Rain ಕಬ್ಬಿನಾಲೆ, ಸಿದ್ದಾಪುರ: ಸುಂಟರಗಾಳಿಗೆ ಅಪಾರ ಹಾನಿ](https://www.udayavani.com/wp-content/uploads/2024/07/r-150x75.jpg)
Rain ಕಬ್ಬಿನಾಲೆ, ಸಿದ್ದಾಪುರ: ಸುಂಟರಗಾಳಿಗೆ ಅಪಾರ ಹಾನಿ
![Ajekar ಪುಸ್ತಕ ಮನೆ ಪ್ರಕಾಶನದ ವಿವಿಧ ಪುಸ್ತಕಗಳ ಅನಾವರಣ](https://www.udayavani.com/wp-content/uploads/2024/07/BOOK-S-150x68.jpg)
Ajekar ಪುಸ್ತಕ ಮನೆ ಪ್ರಕಾಶನದ ವಿವಿಧ ಪುಸ್ತಕಗಳ ಅನಾವರಣ
MUST WATCH
ಹೊಸ ಸೇರ್ಪಡೆ
![Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್ ರಾಜೀನಾಮೆ!](https://www.udayavani.com/wp-content/uploads/2024/07/Meena-150x84.jpg)
Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್ ರಾಜೀನಾಮೆ!
![Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ](https://www.udayavani.com/wp-content/uploads/2024/07/charmadi-150x83.jpg)
Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ
![Transfer of four IPS officers; New SP for Raichur, Koppal](https://www.udayavani.com/wp-content/uploads/2024/07/IPS-150x83.jpg)
IPS Transfer: ಮತ್ತೆ ಐಪಿಎಸ್ ಅಧಿಕಾರಿಗಳ ವರ್ಗಾವಣೆ; ರಾಯಚೂರು, ಕೊಪ್ಪಳಕ್ಕೆ ಹೊಸ ಎಸ್.ಪಿ
![Divorce Case: ಯುವ ರಾಜ್ಕುಮಾರ್ ವಿಚ್ಚೇದನ ಅರ್ಜಿ ವಿಚಾರಣೆ ಆ.23ಕ್ಕೆ ಮುಂದೂಡಿಕೆ](https://www.udayavani.com/wp-content/uploads/2024/07/9-3-150x90.jpg)
Divorce Case: ಯುವ ರಾಜ್ಕುಮಾರ್ ವಿಚ್ಚೇದನ ಅರ್ಜಿ ವಿಚಾರಣೆ ಆ.23ಕ್ಕೆ ಮುಂದೂಡಿಕೆ
![Davanagere: ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು](https://www.udayavani.com/wp-content/uploads/2024/07/gas-1-150x83.jpg)
Davanagere: ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.