![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jun 23, 2024, 6:40 AM IST
ಹೊಸದಿಲ್ಲಿ: ಶೂಟರ್ ಶ್ರೇಯಸಿ ಸಿಂಗ್ ಪ್ಯಾರಿಸ್ ಒಲಿಂಪಿಕ್ಸ್ಗಾಗಿ ಭಾರತ ತಂಡಕ್ಕೆ ಸೇರ್ಪಡೆಗೊಂಡಿದ್ದಾರೆ. ಕಾಮನ್ವೆಲ್ತ್ ಗೇಮ್ಸ್ ಮತ್ತು ಏಷ್ಯಾಡ್ನಲ್ಲಿ ಪದಕ ಜಯಿಸಿರುವ ಶ್ರೇಯಸಿ ಈಗ ಬಿಹಾರದ ಜಮುಯಿ ವಿಧಾನಸಭಾ ಕ್ಷೇತ್ರದ ಶಾಸಕಿ ಎಂಬುದು ವಿಶೇಷ.
ಶ್ರೇಯಸಿ ಸಿಂಗ್, ಮಾಜಿ ಸಚಿವ ದಿವಂಗತ ದಿಗ್ವಿಜಯ್ ಸಿಂಗ್ ಅವರ ಪುತ್ರಿ. “ನಾನು ಒಲಿಂಪಿಕ್ಸ್ನಲ್ಲಿ ದೇಶವನ್ನು ಪ್ರತಿನಿಧಿಸಬೇಕೆಂಬುದು ತಂದೆಯ ದೊಡ್ಡ ಕನಸಾಗಿತ್ತು. ಚಿನ್ನದ ಪದಕ ಗೆಲ್ಲುವುದು ನನ್ನ ಗುರಿ. ಇದಕ್ಕಾಗಿ ಜಮುಯಿ ಜನತೆ ಪ್ರಾರ್ಥಿಸಲಿ’ ಎಂಬುದಾಗಿ ಶ್ರೇಯಸಿ ಹೇಳಿದ್ದಾರೆ.
2014ರ ಕಾಮನ್ವೆಲ್ತ್ ಗೇಮ್ಸ್ ಹಾಗೂ ಏಷ್ಯಾಡ್ನ ಡಬಲ್ ಟ್ರ್ಯಾಪ್ ಸ್ಪರ್ಧೆಯಲ್ಲಿ ಕ್ರಮವಾಗಿ ಬೆಳ್ಳಿ ಹಾಗೂ ಕಂಚಿನ ಪದಕ ಜಯಿಸಿದ್ದರು.
ಮೊದಲು ಆರಿಸಲಾದ ಒಲಿಂಪಿಕ್ಸ್ ಆಯ್ಕೆ ಯಾದಿಯಲ್ಲಿ ಶ್ರೇಯಸಿ ಹೆಸರಿರಲಿಲ್ಲ. ಆದರೆ ಟೋಕಿಯೊ ಒಲಿಂಪಿಯನ್ ಮನು ಭಾಕರ್ ವನಿತೆಯರ 10 ಮೀ. ಪಿಸ್ತೂಲ್ ಮತ್ತು 25 ಮೀ. ಪಿಸ್ತೂಲ್ ಸ್ಪರ್ಧೆಗಳಲ್ಲಿ ಅರ್ಹತೆ ಪಡೆದಿದ್ದರು. ಹೀಗಾಗಿ ಒಂದು ಕೋಟಾವನ್ನು ಮರುಹಂಚಿಕೆ ಮಾಡಬಹುದಾಗಿತ್ತು. ಇದನ್ನು ಟ್ರ್ಯಾಪ್ ಶೂಟರ್ಗಾಗಿ ಬದಲಾಯಿಸಲಾಯಿತು.
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್ ವಿವಾದ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.