Renukaswamy ಹಂತಕರಿಂದ ಡೇಟಾ ನಾಶ! ವೆಬ್‌ ಆ್ಯಪ್‌ ಬಳಸಿ ಡೇಟಾ ನಿಷ್ಕ್ರಿಯ

ಆರೋಪಿಗಳ ಹೆಸರಲ್ಲಿ ಹೊಸ ಸಿಮ್‌ ಪಡೆಯಲು ಮುಂದಾದ ಪೊಲೀಸರು ; ಮತ್ತೊಬ್ಬ ಅರೋಪಿಯ ಹೆಸರು ಬಾಯ್ಬಿಟ್ಟ ಪ್ರದೂಷ್‌

Team Udayavani, Jun 23, 2024, 7:20 AM IST

Renukaswamy ಹಂತಕರಿಂದ ಡೇಟಾ ನಾಶ! ವೆಬ್‌ ಆ್ಯಪ್‌ ಬಳಸಿ ಡೇಟಾ ನಿಷ್ಕ್ರಿಯ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆಯ ಎಲ್ಲ ಆರೋಪಿಗಳು ವೆಬ್‌ ಆ್ಯಪ್‌ಗ್ಳನ್ನು ಬಳಸಿ
ಕೊಂಡು ತಮ್ಮ ಮೊಬೈಲ್‌ಗ‌ಳಲ್ಲಿದ್ದ ಡೇಟಾಗಳನ್ನು ನಿಷ್ಕ್ರಿಯಗೊಳಿಸಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಆದ್ದರಿಂದ ಆರೋಪಿಗಳ ಹೆಸರಿನಲ್ಲಿ ಹೊಸ ಸಿಮ್‌ ಕಾರ್ಡ್‌ಗಳನ್ನು ಸಂಬಂಧಪಟ್ಟ ಸೇವಾದಾರರಿಂದ ಪಡೆದುಕೊಂಡು ರೀ ಆ್ಯಕ್ಸೆಸ್‌ ಮಾಡಲು ಕೋರ್ಟ್‌ ಮೂಲಕ ತನಿಖಾಧಿಕಾರಿಗಳು ಅನುಮತಿ ಪಡೆದುಕೊಂಡಿದ್ದಾರೆ.

ದರ್ಶನ್‌ಗೆ ಹಣ ಪೂರೈಸಿದ ಮೋಹನ್‌
ರಾಜ್‌ಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಿದ್ದಾರೆ. ಮತ್ತೂಂದೆಡೆ ಪ್ರದೂಷ್‌ ಕೃತ್ಯ ನಡೆದ ಸ್ಥಳಕ್ಕೆ ಕರೆದೊಯ್ದ ಮತ್ತೂಬ್ಬ ವ್ಯಕ್ತಿಯ ಹೆಸರು ಬಾಯಿಬಿಟ್ಟಿದ್ದಾನೆ. ಆತನನ್ನು ಪತ್ತೆ ಹಚ್ಚಿ ನೋಟಿಸ್‌ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ರೇಣುಕಾಸ್ವಾಮಿಗೆ ಎಲೆಕ್ಟ್ರಿಕ್‌ ಶಾಕ್‌ ನೀಡಲು ಬಳಸಿದ್ದ ಮೆಗ್ಗರ್‌ ಅನ್ನು ಧನರಾಜ್‌ ಆನ್‌ಲೈನ್‌ ಮೂಲಕ ಖರೀದಿಸಿದ್ದಾನೆ ಎಂದು ಬಾಯಿಬಿಟ್ಟಿದ್ದಾನೆ. ವಿನಯ್‌ಗೆ ಸೇರಿದ ಪಟ್ಟಣಗೆರೆ ಶೆಡ್‌ನ‌ ಸೆಕ್ಯೂರಿಟಿ ಗಾರ್ಡ್‌ ಕೋಣೆಯಲ್ಲಿದ್ದ ಲಡ್ಜರ್‌ ಅನ್ನು ಜಪ್ತಿ ಮಾಡಲಾಗಿದೆ.

ದರ್ಶನ್‌ ಮೊಬೈಲ್‌ ಅನ್‌ಸಿಲ್‌
ದರ್ಶನ್‌ ಸೇರಿ ನಾಲ್ವರು ಆರೋಪಿಗಳ ಮೊಬೈಲ್‌ಗ‌ಳನ್ನು ಜಪ್ತಿ ಮಾಡಿದ್ದು ಅವುಗಳನ್ನು ಅನ್‌ಸಿàಲ್‌ ಮಾಡಿ ಪುನಃ ರಿ ಆ್ಯಕ್ಸೆಸ್‌ ಮಾಡಲು ಕೋರ್ಟ್‌ ಅನುಮತಿ ನೀಡಿದೆ. ಆದರೆ ಆರೋಪಿಗಳು ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ಸುಮ್ಮನಹಳ್ಳಿಯ ರಾಜಕಾಲುವೆಗೆ ಎಸೆದಿದ್ದು ರೇಣುಕಾಸ್ವಾಮಿಯ ಮೊಬೈಲ್‌ನಲ್ಲಿದ್ದ ಡೇಟಾವನ್ನು ನಿಷ್ಕ್ರಿಯಗೊಳಿಸಿದ್ದಾರೆ. ಹೀಗಾಗಿ ಮೃತನ ಹೆಸರಿನಲ್ಲಿ ಹೊಸ ಸಿಮ್‌ಕಾರ್ಡ್‌ಗಳನ್ನು ಸಂಬಂಧಪಟ್ಟ ಸರ್ವಿಸ್‌ ಪ್ರೊವೈಡರ್‌ಗಳಿಂದ ಪಡೆದುಕೊಂಡು ರಿ ಆ್ಯಕ್ಸೆಸ್‌ ಮಾಡಲು ಕೋರ್ಟ್‌ ಅನುಮತಿ ಪಡೆದುಕೊಂಡಿರುವ ತನಿಖಾಧಿಕಾರಿಗಳು, ದರ್ಶನ್‌ ಆ್ಯಂಡ್‌ ಗ್ಯಾಂಗ್‌ ವಿರುದ್ಧ ಪ್ರಬಲ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ. ತಾಂತ್ರಿಕ ಸಾಕ್ಷ್ಯಾಧಾರಗಳಲ್ಲೂ ಆರೋಪಿಗಳು ಕೃತ್ಯದಲ್ಲಿ ನೇರವಾಗಿ ಭಾಗಿಯಾಗಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಇದುವರೆಗಿನ ತನಿಖೆಯಲ್ಲಿ ನಟ ದರ್ಶನ್‌ ಗ್ಯಾಂಗ್‌ಗೆ ಕಾನೂನಿನ ಮೇಲೆ ಕಿಂಚಿತ್‌ ಗೌರವ ಇಲ್ಲದಿರುವುದು ಬೆಳಕಿಗೆ ಬಂದಿದೆ. ಅದು 17 ಮಂದಿ ತಂಡಗಳಿಂದ ಮಾತ್ರವಲ್ಲದೆ, ಪ್ರಕರಣದ ನೂರಾರು ಸಾಕ್ಷ್ಯಾಧಾರಗಳಿಂದ ದೃಢಪಟ್ಟಿದೆ.

ಮೃತನ ಬಟ್ಟೆ ಬದಲಿಸಿದ್ದರು
ಆರೋಪಿಗಳು ರೇಣುಕಾಸ್ವಾಮಿಯನ್ನು ಕೊಲೆಗೈದು ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ಆತನ ಬಟ್ಟೆಗಳನ್ನು ಬದಲಾಯಿಸಿದ್ದಾರೆ. ಆತ ಧರಿಸಿದ್ದ ಪ್ಯಾಂಟ್‌ ಅನ್ನು ಎಸೆದಿದ್ದ ಸಂದರ್ಭದ ಸಾಕ್ಷಿದಾರರನ್ನು ವಿಚಾರಣೆ ಮಾಡಿ ಹೇಳಿಕೆ ಪಡೆದುಕೊಳ್ಳಲಾಗಿದೆ.

ಕರಿಯನಿಗೆ ಇದೆಯೇ
ಕ್ರಿಮಿನಲ್‌ಗ‌ಳ ಸಂಪರ್ಕ?
ಅಮಾನುಷವಾಗಿ ರೇಣುಕಾಸ್ವಾಮಿಯ ಹತ್ಯೆಗೈದ ದರ್ಶನ್‌ ಮತ್ತು ಗ್ಯಾಂಗ್‌, ಒಳಸಂಚು ರೂಪಿಸಿ ಸಾಕ್ಷ್ಯ ನಾಶ ಪಡಿಸುವ ಉದ್ದೇಶದಿಂದ ಶವ ಸಾಗಿಸಲು ಹಣದ ಪ್ರಭಾವ ಬಳಸಿದ್ದಾರೆ. ಜತೆಗೆ ಕೆಲವು ಕ್ರಿಮಿನಲ್‌ ಹಿನ್ನೆಲೆಯುಳ್ಳ ವ್ಯಕ್ತಿಗಳು ಹಾಗೂ ಆರ್ಥಿಕ ಸಮಸ್ಯೆ ಹೊಂದಿರುವ ಕೆಲವರಿಗೆ ಆಮಿಷ ತೋರಿಸಿ, ಅವರ ಮೂಲಕ ಮೃತದೇಹವನ್ನು ಕೃತ್ಯ ನಡೆದ ಸ್ಥಳದಿಂದ ಬೇರೆ ಕಡೆ ಸಾಗಿಸಿ ಸಾಕ್ಷಿ ನಾಶ ಪಡಿಸಿರುವುದು ತನಿಖೆಯಲ್ಲಿ ಪತ್ತೆಯಾಗಿದೆ. ದರ್ಶನ್‌, ರಾಘವೇಂದ್ರ, ಕಾರ್ತಿಕ್‌, ಕೇಶವಮೂರ್ತಿ ಕ್ರಿಮಿನಲ್‌ ಹಿನ್ನೆಲೆಯಳ್ಳವರಾಗಿದ್ದಾರೆ. ಅಲ್ಲದೆ ದರ್ಶನ್‌, ಪವಿತ್ರಾ ಗೌಡ ಹಾಗೂ ಇತರ ಆರೋಪಿಗಳು ತಮ್ಮ ಅಭಿಮಾನಿ ಬಳಗವನ್ನು ಬಳಸಿಕೊಂಡು ಪ್ರಕರಣದ ತನಿಖೆಗೆ ನಿರಂತರ ಅಡ್ಡಿಪಡಿಸುತ್ತಿರುವುದು ತನಿಖೆಯಿಂದ ತಿಳಿದುಬಂದಿದೆ.

ಸಾಕ್ಷಿಗಳಿಗೆ ಬೆದರಿಕೆ : ದರ್ಶನ್‌, ಸಹಚರರ ಮೇಲೆ ಮತ್ತೊಂದು ಕೇಸ್‌
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆಯ ಆರೋಪಿ ದರ್ಶನ್‌ ತನ್ನ ಸಹಚರರ ಮೂಲಕ ಸಾಕ್ಷಿದಾರರಿಗೆ ಬೆದರಿಕೆ ಹಾಕಿಸಿರುವ ಆರೋಪ ಸಂಬಂಧ ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣದಲ್ಲಿ 60ಕ್ಕೂ ಹೆಚ್ಚು ಸಾಕ್ಷಿದಾರಗಳನ್ನು ಪತ್ತೆ ಹಚ್ಚಲಾಗಿದೆ. ಆದರೆ ಈ ಎಲ್ಲ ಸಾಕ್ಷಿಗಳಿಗೆ ದರ್ಶನ್‌ನ ಕೆಲವು ಸಹಚರರು ಪ್ರಾಣ ಬೆದರಿಕೆ ಹಾಕಿ, ಸಾಕ್ಷಿ ನುಡಿಯದಂತೆ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ. ಈ ಸಂಬಂಧ ನೊಂದ ಕೆಲವು ಸಾಕ್ಷಿಗಳು ದೂರು ನೀಡಿದ್ದು, ಪೊಲೀಸರು ದರ್ಶನ್‌ ಮತ್ತು ಸಹಚರರ ವಿರುದ್ಧ ಸಾಕ್ಷಿಗಳಿಗೆ ಬೆದರಿಕೆ ಆರೋಪದಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಪ್ರಕರಣದಲ್ಲಿ 60ಕ್ಕೂ ಹೆಚ್ಚು ಸಾಕ್ಷಿದಾರರು ಇದ್ದಾರೆ. ಜತೆಗೆ ಈ ಸಾಕ್ಷಿದಾರರ ಮೊಬೈಲ್‌ಗ‌ಳನ್ನು ರಿಟ್ರೀವ್‌ ಮಾಡಿಸಲು ಎಲ್ಲ ಮೊಬೈಲ್‌ ವಶಕ್ಕೆ ಪಡೆಯಲಾಗಿದೆ.

ಟಾಪ್ ನ್ಯೂಸ್

Jharkhand: ಚಂಪೈ ಸೊರೇನ್‌ ರಾಜೀನಾಮೆ…ಹೇಮಂತ್‌ ಸೊರೇನ್ ಮತ್ತೆ ಜಾರ್ಖಂಡ್‌ ಸಿಎಂ?

Jharkhand: ಚಂಪೈ ಸೊರೇನ್‌ ರಾಜೀನಾಮೆ…ಹೇಮಂತ್‌ ಸೊರೇನ್ ಮತ್ತೆ ಜಾರ್ಖಂಡ್‌ ಸಿಎಂ?

ಕಂಗನಾಗೆ ಕಪಾಳಮೋಕ್ಷ ಮಾಡಿದ್ದ CISF ಮಹಿಳಾ ಕಾನ್ಸ್‌ ಸ್ಟೇಬಲ್‌ ಬೆಂಗಳೂರಿಗೆ ವರ್ಗಾವಣೆ?

ಕಂಗನಾಗೆ ಕಪಾಳಮೋಕ್ಷ ಮಾಡಿದ್ದ CISF ಮಹಿಳಾ ಕಾನ್ಸ್‌ ಸ್ಟೇಬಲ್‌ ಬೆಂಗಳೂರಿಗೆ ವರ್ಗಾವಣೆ?

Salaar 2: ಪ್ರಶಾಂತ್‌ ನೀಲ್‌ – ಪ್ರಭಾಸ್‌ ʼಸಲಾರ್-2‌ʼ ಸೆಟ್ಟೇರಲು ಡೇಟ್‌ ಫಿಕ್ಸ್

Salaar 2: ಪ್ರಶಾಂತ್‌ ನೀಲ್‌ – ಪ್ರಭಾಸ್‌ ʼಸಲಾರ್-2‌ʼ ಸೆಟ್ಟೇರಲು ಡೇಟ್‌ ಫಿಕ್ಸ್

3-chikkamagaluru

ಮಹಿಳೆಯರೊಂದಿಗೆ ಅಸಭ್ಯ ವರ್ತನೆ; ವ್ಯಕ್ತಿಯನ್ನು ಥಳಿಸಿ ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು

Bridges collapse: ಬಿಹಾರದಲ್ಲಿ ಮತ್ತೊಂದು ಸೇತುವೆ ಕುಸಿತ… 15 ದಿನದಲ್ಲಿ 7ನೇ ಪ್ರಕರಣ

Bridges Collapse: ಬಿಹಾರದಲ್ಲಿ ಮತ್ತೊಂದು ಸೇತುವೆ ಕುಸಿತ… 15 ದಿನದಲ್ಲಿ 7ನೇ ಪ್ರಕರಣ

Bollywood: 8 ವರ್ಷದ ಬಳಿಕ ಬಾಲಿವುಡ್‌ಗೆ ಪಾಕ್‌ ನಟ‌ ಫವಾದ್‌ ಖಾನ್ ಕಂಬ್ಯಾಕ್

Bollywood: 8 ವರ್ಷದ ಬಳಿಕ ಬಾಲಿವುಡ್‌ಗೆ ಪಾಕ್‌ ನಟ‌ ಫವಾದ್‌ ಖಾನ್ ಕಂಬ್ಯಾಕ್

ICC T20I Rankings: ವಿಶ್ವಕಪ್‌ನಲ್ಲಿ ಶ್ರೇಷ್ಠ ಸಾಧನೆ; ನಂ.1 ಆಲ್ ರೌಂಡರ್ ಆದ ಪಾಂಡ್ಯ

ICC T20I Rankings: ವಿಶ್ವಕಪ್‌ನಲ್ಲಿ ಶ್ರೇಷ್ಠ ಸಾಧನೆ; ನಂ.1 ಆಲ್ ರೌಂಡರ್ ಆದ ಪಾಂಡ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar ನೂತನ ಎಸ್ಪಿ ಯಾಗಿ ಡಾ.ಬಿ.ಟಿ.ಕವಿತಾ ಅಧಿಕಾರ ಸ್ವೀಕಾರ

Chamarajanagar ನೂತನ ಎಸ್ಪಿ ಯಾಗಿ ಡಾ.ಬಿ.ಟಿ.ಕವಿತಾ ಅಧಿಕಾರ ಸ್ವೀಕಾರ

Shivamogga: ಕಾರಿನ ಮೇಲೆ ಮಗುಚಿ ಬಿದ್ದ ಬಸ್… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

Shivamogga: ಕಾರಿನ ಮೇಲೆ ಮಗುಚಿ ಬಿದ್ದ ಬಸ್… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

1-vijayendra

CM ಸಿದ್ದರಾಮಯ್ಯ ಮನೆ ಮುತ್ತಿಗೆಗೆ ಯತ್ನ; ಬಿಜೆಪಿ ಪ್ರಮುಖ ನಾಯಕರು ವಶಕ್ಕೆ

vijayapura

Vijayapura; ಕೃಷ್ಣಾ ನದಿ ತೆಪ್ಪ ದುರಂತ: ಮೂವರ ಶವಪತ್ತೆ, ಇಬ್ಬರಿಗಾಗಿ ಶೋಧ

1-raju

Vijayapura: ವೀರಯೋಧ ಹವಾಲ್ದಾರ್ ರಾಜು ಕರ್ಜಗಿ ಪಾರ್ಥಿವ ಶರೀರ ತವರಿಗೆ ಆಗಮನ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Jharkhand: ಚಂಪೈ ಸೊರೇನ್‌ ರಾಜೀನಾಮೆ…ಹೇಮಂತ್‌ ಸೊರೇನ್ ಮತ್ತೆ ಜಾರ್ಖಂಡ್‌ ಸಿಎಂ?

Jharkhand: ಚಂಪೈ ಸೊರೇನ್‌ ರಾಜೀನಾಮೆ…ಹೇಮಂತ್‌ ಸೊರೇನ್ ಮತ್ತೆ ಜಾರ್ಖಂಡ್‌ ಸಿಎಂ?

ಕಂಗನಾಗೆ ಕಪಾಳಮೋಕ್ಷ ಮಾಡಿದ್ದ CISF ಮಹಿಳಾ ಕಾನ್ಸ್‌ ಸ್ಟೇಬಲ್‌ ಬೆಂಗಳೂರಿಗೆ ವರ್ಗಾವಣೆ?

ಕಂಗನಾಗೆ ಕಪಾಳಮೋಕ್ಷ ಮಾಡಿದ್ದ CISF ಮಹಿಳಾ ಕಾನ್ಸ್‌ ಸ್ಟೇಬಲ್‌ ಬೆಂಗಳೂರಿಗೆ ವರ್ಗಾವಣೆ?

5-tavaragera

Tavaragera: ಕಾರು ಅಡ್ಡಗಟ್ಟಿ ಹಾಡಹಗಲೇ 5 ಲಕ್ಷ ರೂ. ದರೋಡೆ !

4-panaji

ಯುವಪೀಳಿಗೆ ಪತ್ರಿಕೆ ಓದುವ ಆಸಕ್ತಿ ಬೆಳೆಸುವ ರೀತಿ ಬರವಣಿಗೆ ಪತ್ರಕರ್ತರಲ್ಲಿರಬೇಕು : ಸಾವಂತ್

Salaar 2: ಪ್ರಶಾಂತ್‌ ನೀಲ್‌ – ಪ್ರಭಾಸ್‌ ʼಸಲಾರ್-2‌ʼ ಸೆಟ್ಟೇರಲು ಡೇಟ್‌ ಫಿಕ್ಸ್

Salaar 2: ಪ್ರಶಾಂತ್‌ ನೀಲ್‌ – ಪ್ರಭಾಸ್‌ ʼಸಲಾರ್-2‌ʼ ಸೆಟ್ಟೇರಲು ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.