ಕರಾವಳಿಯಲ್ಲಿ ಸುರಿದೇ ಇಲ್ಲ ಜಿಟಿ ಜಿಟಿ ಮಳೆ

ರೆಡ್‌ ಅಲರ್ಟ್‌ನಲ್ಲೂ ಭಾರೀ ಮಳೆಯಾಗುತ್ತಿಲ್ಲ

Team Udayavani, Jun 23, 2024, 7:20 AM IST

ಕರಾವಳಿಯಲ್ಲಿ ಸುರಿದೇ ಇಲ್ಲ ಜಿಟಿ ಜಿಟಿ ಮಳೆ

ಮಂಗಳೂರು: ಮುಂಗಾರು ಅವಧಿಯಲ್ಲಿ ಈ ವರೆಗೆ ರಾಜ್ಯದಲ್ಲಿ ಶೇಕಡಾವಾರು ಉತ್ತಮ ಮಳೆಯಾದರೂ ಕರಾವಳಿ ಮತ್ತು ಮಲೆನಾಡಿನಲ್ಲಿ ಅತ್ಯಧಿಕ ಮಳೆ ಕೊರತೆ ಕಂಡುಬಂದಿದೆ.

ರಾಜ್ಯಕ್ಕೆ ಮುಂಗಾರು ಆಗಮಿಸಿ ಮೂರು ವಾರ ಕಳೆದರೂ ನಿರೀಕ್ಷೆಯಷ್ಟು ಮೋಡ ಸೃಷ್ಟಿಯಾಗದ ಪರಿಣಾಮ ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂಗಾರು ಕ್ಷೀಣಿಸಿದೆ. ಕರಾವಳಿಯಲ್ಲಿ ಶೇ. 31 ಮತ್ತು ಮಲೆನಾಡಿನಲ್ಲಿ ಶೇ. 42ರಷ್ಟು ಮಳೆ ಕೊರತೆ ಇದೆ. ಆದರೆ ರಾಜ್ಯದಲ್ಲಿ ಒಟ್ಟಾರೆಯಾಗಿ ಶೇ. 8ರಷ್ಟು ವಾಡಿಕೆಗಿಂತ ಅಧಿಕ ಮಳೆ ಸುರಿದಿದೆ.

ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಮಾನ್ಯವಾಗಿ ಜೂನ್‌ ತಿಂಗಳಲ್ಲಿ ಉತ್ತಮ ಮಳೆ ಸುರಿಯುತ್ತದೆ. ಆದರೆ ಈ ಬಾರಿ ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಮಾತ್ರ ಉತ್ತಮ ಮಳೆಯಾಗಿದೆ. ರಾಜ್ಯದಲ್ಲಿ ಜೂ. 1ರಿಂದ 22ರ ವರೆಗೆ ಒಟ್ಟು 130 ಮಿ.ಮೀ. ವಾಡಿಕೆ ಮಳೆ ಆಗಬೇಕಿದ್ದು, ಹೆಚ್ಚುವರಿ ಅಂದರೆ 140 ಮಿ.ಮೀ. ಮಳೆ ಸುರಿದಿದೆ.

ಜಿಟಿ ಜಿಟಿ ಮಳೆ ಮಾಯ!
ಪೂರ್ವ ಮುಂಗಾರು ಮಳೆ ಕೊನೆಗೊಳ್ಳುವ ಸಂದರ್ಭದಲ್ಲಿ ಮಾನ್ಸೂನ್‌ ಮಳೆ ತರುವ ಮೋಡಗಳು ಭೂ ಮಧ್ಯ ರೇಖೆಯ ಮೂಲಕ ಬಂದು ಬಾನಂಗಳದಲ್ಲಿ ಶೇಖರವಾಗಬೇಕು. ಆದರೆ ಈ ಬಾರಿ ಮೋಡದ ಬದಲು ಒಣ ಗಾಳಿ ಮಾತ್ರ ಬೀಸಿದೆ. ಇದರಿಂದಾಗಿ ಪ್ರತೀ ವರ್ಷದಂತೆ ಮುಂಗಾರು ಅವಧಿಯಲ್ಲಿ ಸುರಿಯುವ ಜಿಟಿ ಜಿಟಿ ಮಳೆ ಇನ್ನೂ ಆರಂಭವಾಗಿಲ್ಲ. ಪೂರ್ವ ಮುಂಗಾರು ಮಾರುತಗಳ ಪ್ರಭಾವ ಇನ್ನೂ ಪೂರ್ಣವಾಗಿ ಕಡಿಮೆಯಾಗದ ಪರಿಣಾಮ ಸದ್ಯ ಸಣ್ಣ ಪ್ರಮಾಣದ ಮೋಡಗಳಷ್ಟೇ ಸೃಷ್ಟಿ ಆಗುತ್ತಿವೆ. ಇದೇ ಕಾರಣದಿಂದ ಬೇಸಗೆಯ ರೀತಿಯಲ್ಲೇ ಮಳೆ ಸುರಿಯುತ್ತಿದೆ.

ಪೂರ್ವ ಮುಂಗಾರು ಕಾರಣವೇ?
ಹವಾಮಾನ ಇಲಾಖೆ ತಜ್ಞರ ಪ್ರಕಾರ ಪೂರ್ವ ಮುಂಗಾರು ಮಳೆ ವಾಡಿಕೆಗಿಂತ ಹೆಚ್ಚು ಸುರಿದರೆ ಮುಂದೆ ಆಗಮಿಸುವ ಮುಂಗಾರು ಮಾರುತ ದುರ್ಬಲಗೊಳ್ಳುವ ಸಾಧ್ಯತೆ ಇರುತ್ತದೆ. ವಿಶ್ಲೇಷಕರ ಪ್ರಕಾರ ಪೂರ್ವ ಮುಂಗಾರು ಅವಧಿಯಲ್ಲಿ ಮಳೆ ಹೆಚ್ಚಾದಾಗ ಆಯಾ ಪ್ರದೇಶದಲ್ಲಿ ತೇವಾಂಶವೂ ಹೆಚ್ಚಾಗಿರುತ್ತದೆ. ಆಗ ಆ ಭಾಗದಲ್ಲಿ ವಾತಾವರಣದ ಉಷ್ಣತಾಂಶ ಕಡಿಮೆ ಹಾಗೂ ವಾತಾವರಣದ ಒತ್ತಡ ಹೆಚ್ಚಾಗಿ ಅಲ್ಲಿ ಮೋಡ ಆವರಿಸುವ ಸಾಧ್ಯತೆ ಕಡಿಮೆ. ಇದರಿಂದ ಈ ಪ್ರದೇಶ ದ್ವೀಪದ ರೀತಿ ಮಾರ್ಪಾಡಾಗಿ ಮಳೆಯಾಗುವ ಸಂಭವ ಕಡಿಮೆ ಇರುತ್ತದೆ. ಆದರೆ ಇಲ್ಲಿ ಒಂದು ಪ್ರದೇಶದಿಂದ ಮತ್ತೂಂದು ಪ್ರದೇಶಕ್ಕೆ ಮಳೆ ಪ್ರಮಾಣದಲ್ಲಿ ವ್ಯತ್ಯಾಸ ಇರಬಹುದು.

“ಅನುಭವ ಜ್ಞಾನ’ ಏನು ಹೇಳುತ್ತದೆ?
ಯಾವ ವರ್ಷ ಚಳಿಗಾಲದಲ್ಲಿ ಚಳಿ ಕಡಿಮೆ ಇರುತ್ತದೆಯೋ ಆ ವರ್ಷ ಮಳೆಯೂ ಕಡಿಮೆ ಎಂಬುದು ಕರಾವಳಿಯ ಕೃಷಿಕರ ಅನುಭವದ ಮಾತು. ಈ ವರ್ಷ ಚಳಿಗಾಲದಲ್ಲಿ ಚಳಿ ಕಡಿಮೆ ಇತ್ತು, ಈಗ ಮಳೆಯೂ ಕಡಿಮೆ ಇದೆ. ಕಳೆದ ವರ್ಷವೂ ಹೀಗೆಯೇ ಇತ್ತು ಎಂಬುದಾಗಿ ಸುಳ್ಯ ಭಾಗದ ಹಿರಿಯ ಕೃಷಿಕ ಎ.ಪಿ. ಸದಾಶಿವ ಮರಿಕೆ ಗಮನ ಸೆಳೆದಿದ್ದಾರೆ.

ಕಳೆದ ವರ್ಷವೂ ಹೀಗಾಗಿತ್ತು
ಕಳೆದ ವರ್ಷ (2023) ರಾಜ್ಯ ಕರಾವಳಿಗೆ ತಡವಾಗಿ ಅಂದರೆ ಜೂ. 10ರಂದು ಮುಂಗಾರು ಪ್ರವೇಶ ಪಡೆದಿತ್ತು. ಮೊದಲ ದಿನ ಜಿಲ್ಲೆಯಾದ್ಯಂತ ಉತ್ತಮ ಮಳೆಯಾದರೂ ಬಳಿಕದ ದಿನಗಳಲ್ಲಿ ಮಳೆ ಕ್ಷೀಣಿಸಿತ್ತು. ವ್ಯಾಪಕವಾಗಿ ಮೋಡ ಸೃಷ್ಟಿಯಾಗದ ಕಾರಣ ಹೀಗಾಗಿತ್ತು. ಮುಂಗಾರು ಆಗಮನದ ಎರಡು ವಾರಗಳ ಬಳಿಕ ಮತ್ತೆ ಮೋಡಗಳು ಸೃಷ್ಟಿಯಾಗಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಾದ್ಯಂತ ಬಿರುಸಿನ ಮಳೆ ಆರಂಭವಾಗಿತ್ತು.

ಅಲರ್ಟ್‌ ರೆಡ್‌: ಮಳೆ ಇಲ್ಲ !
ಭಾರತೀಯ ಹವಾಮಾನ ಇಲಾಖೆ ಕರಾವಳಿಗೆ “ರೆಡ್‌ ಅಲರ್ಟ್‌’ ಘೋಷಣೆ ಮಾಡಿದರೂ ದ.ಕ., ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿಲ್ಲ. ರೆಡ್‌ ಅಲರ್ಟ್‌ ಅವಧಿಯಲ್ಲಿ ಕರಾವಳಿಯಲ್ಲಿ 204.5 ಮಿ.ಮೀ.ಗೂ ಅಧಿಕ ಮಳೆಯಾಗಬೇಕು. ಮುಂಗಾರು ಆರಂಭದ ಬಳಿಕ ಜೂ. 9ರಂದು “ರೆಡ್‌ ಅಲರ್ಟ್‌’ ಘೋಷಿಸಲಾಗಿತ್ತು. ಈ ವೇಳೆ ಕೇವಲ 38 ಮಿ.ಮೀ. ಮಳೆ ಮಾತ್ರ ಸುರಿದಿದೆ. ಬಳಿಕ ಜೂ. 22ರಂದು “ರೆಡ್‌ ಅಲರ್ಟ್‌’ ಘೋಷಿಸಲಾಗಿದೆ.

ಮುಂಗಾರು ಆಗಮನದ ವೇಳೆ ಜಿಟಿ ಜಿಟಿ ಮಳೆ ದಿನವಿಡೀ ಸುರಿಯುತ್ತದೆ. ಕೇರಳದಿಂದ ರಾಜ್ಯ ಕರಾವಳಿ ಭಾಗಕ್ಕೆ ಜೂನ್‌ 2ರಂದು ಮುಂಗಾರು ಪ್ರವೇಶ ಪಡೆದಿತ್ತು. ಆದರೆ ಆ ವೇಳೆ ಮಳೆ ತರುವ ಮೋಡಗಳು ಸೃಷ್ಟಿಯಾಗದೆ ಮಳೆಯ ಪ್ರಮಾಣ ಕಡಿಮೆ ಇತ್ತು. ಸದ್ಯ ಅದೇ ಪರಿಸ್ಥಿತಿ ಇದ್ದು, ಮುಂದಿನ ಕೆಲವು ದಿನಗಳಲ್ಲಿ ಮತ್ತೆ ಭಾರೀ ಮಳೆ ಆರಂಭವಾಗುವ ನಿರೀಕ್ಷೆ ಇದೆ.
– ಡಾ| ರಾಜೇಗೌಡ, ಹವಾಮಾನ ವಿಜ್ಞಾನಿ, ಬೆಂಗಳೂರು

-  ನವೀನ್‌ ಭಟ್‌ ಇಳಂತಿಲ

ಟಾಪ್ ನ್ಯೂಸ್

Kalaburagi; ರಾಮಮಂದಿರ ಹಾಡಿಗೆ ಡಾನ್ಸ್ ಮಾಡಿದ್ದಕ್ಕೆ ಯುವಕನ ಮೇಲೆ ಅನ್ಯಕೋಮಿನವರಿಂದ ಹಲ್ಲೆ

Kalaburagi; ರಾಮಮಂದಿರ ಹಾಡಿಗೆ ಡಾನ್ಸ್ ಮಾಡಿದ್ದಕ್ಕೆ ಯುವಕನ ಮೇಲೆ ಅನ್ಯಕೋಮಿನವರಿಂದ ಹಲ್ಲೆ

BJP-flag

Congress ಸರ್ಕಾರದಿಂದ ರಾಜ್ಯ ಬರ್ಬಾದ್‌ ; ಬಿಜೆಪಿ ಟೀಕೆ

ಸಿ.ಟಿ ರವಿ

Chikkamagaluru; ರಾಹುಲ್ ಗಾಂಧಿ ತನ್ನ ಅಯೋಗ್ಯತನ ಪ್ರದರ್ಶಿಸಿದ್ದಾರೆ: ಸಿ.ಟಿ ರವಿ

laxmi-hebbalkar

Belagavi; ಅಭಯ್ ಪಾಟೀಲ್ ‘ಕೇಂದ್ರದ ಮೊಬೈಲ್’ ಹೇಳಿಕೆಗೆ ಸಚಿವೆ ಹೆಬ್ಬಾಳ್ಕರ್ ಗರಂ

Vijayapura; ರಾಜ್ಯದ ಅಭಿವೃದ್ಧಿ ಆಗಬೇಕಾದರೆ ನಾನು ಸಿಎಂ ಆಗಬೇಕು: ಯುವಕನ ವಿಡಿಯೋ ವೈರಲ್

Vijayapura; ರಾಜ್ಯದ ಅಭಿವೃದ್ಧಿ ಆಗಬೇಕಾದರೆ ನಾನು ಸಿಎಂ ಆಗಬೇಕು: ಯುವಕನ ವಿಡಿಯೋ ವೈರಲ್

Uttar Pradesh: ಸತ್ಸಂಗ ಕಾರ್ಯಕ್ರಮದಲ್ಲಿ ಕಾಲ್ತುಳಿತ-ಮಕ್ಕಳು ಸೇರಿ 27 ಮಂದಿ ದುರ್ಮರಣ

Uttar Pradesh: ಸತ್ಸಂಗ ಕಾರ್ಯಕ್ರಮದಲ್ಲಿ ಕಾಲ್ತುಳಿತ-ಮಕ್ಕಳು ಸೇರಿ 50 ಮಂದಿ ದುರ್ಮರಣ

Miracle: ಈ ಊರಿನ ಮನೆ, ಅಂಗಡಿ, ಕಚೇರಿಗಳಿಗೆ ಬಾಗಿಲೇ ಇಲ್ವಂತೆ… ಶನಿಯೇ ಇದರ ರಕ್ಷಕನಂತೆ

Miracle: ಈ ಊರಿನ ಮನೆ, ಅಂಗಡಿ, ಕಚೇರಿಗಳಿಗೆ ಬಾಗಿಲೇ ಇಲ್ವಂತೆ… ಶನಿಯೇ ಇದರ ರಕ್ಷಕನಂತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಡಿಸಿ ಸಂಕೀರ್ಣಕ್ಕೆ “ಸ್ಮಾರ್ಟ್‌ ಸಿಟಿ’ ನೆರವು: 20 ಕೋಟಿ ರೂ. ಮೀಸಲು

ಡಿಸಿ ಸಂಕೀರ್ಣಕ್ಕೆ “ಸ್ಮಾರ್ಟ್‌ ಸಿಟಿ’ ನೆರವು: 20 ಕೋಟಿ ರೂ. ಮೀಸಲು

1-mng-protest

Mangaluru: ನೀಟ್ ಅವ್ಯವಹಾರ: ಎನ್.ಎಸ್.ಯು.ಐ., ಕಾಂಗ್ರೆಸ್ ಪ್ರತಿಭಟನೆ

Ullal: ಟಿಪ್ಪರ್‌ ಅಪಘಾತ; ಗಾಯಾಳು ಸ್ಕೂಟರ್‌ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು

Ullal: ಟಿಪ್ಪರ್‌ ಅಪಘಾತ; ಗಾಯಾಳು ಸ್ಕೂಟರ್‌ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು

July 5: “ಧರ್ಮದೈವ’ ತುಳು ಚಲನಚಿತ್ರ ತೆರೆಗೆ

July 5: “ಧರ್ಮದೈವ’ ತುಳು ಚಲನಚಿತ್ರ ತೆರೆಗೆ

Theft Case ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ 67.75 ಲ.ರೂ. ಮೌಲ್ಯದ ಚಿನ್ನಾಭರಣ ಕಳವು

Theft Case ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ 67.75 ಲ.ರೂ. ಮೌಲ್ಯದ ಚಿನ್ನಾಭರಣ ಕಳವು

MUST WATCH

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

ಹೊಸ ಸೇರ್ಪಡೆ

Drought Relief: 4168 ರೈತರ ಖಾತೆಗೆ 2.25ಕೋಟಿ ಜಮೆ

Drought Relief: 4168 ರೈತರ ಖಾತೆಗೆ 2.25ಕೋಟಿ ಜಮೆ

Kalaburagi; ರಾಮಮಂದಿರ ಹಾಡಿಗೆ ಡಾನ್ಸ್ ಮಾಡಿದ್ದಕ್ಕೆ ಯುವಕನ ಮೇಲೆ ಅನ್ಯಕೋಮಿನವರಿಂದ ಹಲ್ಲೆ

Kalaburagi; ರಾಮಮಂದಿರ ಹಾಡಿಗೆ ಡಾನ್ಸ್ ಮಾಡಿದ್ದಕ್ಕೆ ಯುವಕನ ಮೇಲೆ ಅನ್ಯಕೋಮಿನವರಿಂದ ಹಲ್ಲೆ

BJP-flag

Congress ಸರ್ಕಾರದಿಂದ ರಾಜ್ಯ ಬರ್ಬಾದ್‌ ; ಬಿಜೆಪಿ ಟೀಕೆ

ಡಿಸಿ ಸಂಕೀರ್ಣಕ್ಕೆ “ಸ್ಮಾರ್ಟ್‌ ಸಿಟಿ’ ನೆರವು: 20 ಕೋಟಿ ರೂ. ಮೀಸಲು

ಡಿಸಿ ಸಂಕೀರ್ಣಕ್ಕೆ “ಸ್ಮಾರ್ಟ್‌ ಸಿಟಿ’ ನೆರವು: 20 ಕೋಟಿ ರೂ. ಮೀಸಲು

ಸಿ.ಟಿ ರವಿ

Chikkamagaluru; ರಾಹುಲ್ ಗಾಂಧಿ ತನ್ನ ಅಯೋಗ್ಯತನ ಪ್ರದರ್ಶಿಸಿದ್ದಾರೆ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.