![Kalaburagi; ರಾಮಮಂದಿರ ಹಾಡಿಗೆ ಡಾನ್ಸ್ ಮಾಡಿದ್ದಕ್ಕೆ ಯುವಕನ ಮೇಲೆ ಅನ್ಯಕೋಮಿನವರಿಂದ ಹಲ್ಲೆ](https://www.udayavani.com/wp-content/uploads/2024/07/unnamed-file-415x229.jpg)
ODI; ಸ್ಮೃತಿ ಅಮೋಘ ಆಟ: ದಕ್ಷಿಣ ಆಫ್ರಿಕಾ ವಿರುದ್ಧ ಸರಣಿ ಕ್ಲೀನ್ ಸ್ವೀಪ್
Team Udayavani, Jun 23, 2024, 8:54 PM IST
![1-wewqewqe](https://www.udayavani.com/wp-content/uploads/2024/06/1-wewqewqe-620x414.jpg)
ಬೆಂಗಳೂರು: ಬಲಿಷ್ಠ ದಕ್ಷಿಣ ಆಫ್ರಿಕಾ ವಿರುದ್ಧ ಭಾರತದ ವನಿತೆಯರು ಭಾರೀ ವಿಕ್ರಮ ಮೆರೆದಿದ್ದು ಭಾನುವಾರ ನಡೆದ ಸರಣಿಯ ಕೊನೆಯ ಪಂದ್ಯದಲ್ಲಿ 6 ವಿಕೆಟ್ ಗಳ ಅಮೋಘ ಜಯ ಸಾಧಿಸಿ ಏಕದಿನ ಸರಣಿಯನ್ನು 3-0 ಅಂತರದಿಂದ ಕ್ಲೀನ್ಸ್ವೀಪ್ ಆಗಿ ವಶಪಡಿಸಿಕೊಂಡಿದ್ದಾರೆ. ಕೊನೆಯ ಪಂದ್ಯವನ್ನು ಗೆದ್ದು ಪ್ರತಿಷ್ಠೆಯನ್ನು ಉಳಿಸಿಕೊಳ್ಳುವ ಪ್ರಯತ್ನದಲ್ಲಿದ್ದ ಲಾರಾ ವೋಲ್ವಾರ್ಟ್ ಬಳಗಕ್ಕೆ ಮುಖಭಂಗವಾಗಿದೆ.
ದಕ್ಷಿಣ ಆಫ್ರಿಕಾ ವನಿತೆಯರು ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. 50 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 215 ರನ್ ಕಲೆ ಹಾಕಿ ಸಾಧಾರಣ ಗುರಿ ಮುಂದಿಟ್ಟರು. ನಾಯಕಿ ವೋಲ್ವಾರ್ಟ್ 61 ರನ್ ಗಳಿಸಿದರು. ತಜ್ಮಿನ್ ಬ್ರಿಟ್ಸ್ 38 ರನ್ ಗಳಿಸಿದ್ದ ವೇಳೆ ರನ್ ಔಟ್ ಆದರು. ನಡಿನ್ ಡಿ ಕ್ಲರ್ಕ್26, ಮೈಕೆ ಡಿ ರಿಡ್ಡರ್ ಔಟಾಗದೆ 26 ರನ್ ಗಳಿಸಿದರು. ಭಾರತದ ಬೌಲಿಂಗ್ ನಲ್ಲಿ ಅರುಂಧತಿ ರೆಡ್ಡಿ ಮತ್ತು ದೀಪ್ತಿ ಶರ್ಮ ಬಿಗಿ ದಾಳಿ ನಡೆಸಿ ತಲಾ 2 ವಿಕೆಟ್ ಕಿತ್ತರು. ಶ್ರೇಯಾಂಕಾ ಪಾಟೀಲ್ ಮತ್ತು ಪೂಜಾ ವಸ್ತ್ರಾಕರ್ ತಲಾ 1 ವಿಕೆಟ್ ಪಡೆದರು.
ಗುರಿ ಬೆನ್ನಟ್ಟಿದ ಭಾರತ ತಂಡ ಸ್ಮೃತಿ ಮಂಧಾನ ಅವರ ಅಮೋಘ ಆಟದ ನೆರವಿನಿಂದ ಸುಲಭ ಜಯ ಸಾಧಿಸಿತು. ಸ್ಮೃತಿ 90(83 ಎಸೆತ) ರನ್ ಗಳಿಸಿದ್ದ ವೇಳೆ ಔಟಾಗುವ ಮೂಲಕ ಶತಕ ವಂಚಿತರಾದರು. ಸಾಥ್ ನೀಡಿದ ಶಫಾಲಿ ವರ್ಮ 25, ಪ್ರಿಯಾ ಪೂನಿಯಾ 28 ರನ್ ಗಳಿಸಿ ಔಟಾದರು. ನಾಯಕಿ ಹರ್ಮನ್ಪ್ರೀತ್ ಕೌರ್ 42 ರನ್ ಗಳಿಸಿದ್ದ ವೇಳೆ ರನ್ ಔಟಾದರು. ಜೆಮಿಮಾ ರೋಡ್ರಿಗಸ್ ಔಟಾಗದೆ 19,ರಿಚಾ ಘೋಷ್ ಔಟಾಗದೆ 6 ರನ್ ಗಳಿಸಿದರು.
ಸ್ಮೃತಿ ಮಂಧಾನ ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಬಿಗು ದಾಳಿ ನಡೆಸಿದ ದೀಪ್ತಿ ಶರ್ಮ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.
ಟಾಪ್ ನ್ಯೂಸ್
![Kalaburagi; ರಾಮಮಂದಿರ ಹಾಡಿಗೆ ಡಾನ್ಸ್ ಮಾಡಿದ್ದಕ್ಕೆ ಯುವಕನ ಮೇಲೆ ಅನ್ಯಕೋಮಿನವರಿಂದ ಹಲ್ಲೆ](https://www.udayavani.com/wp-content/uploads/2024/07/unnamed-file-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Badminton Player: ಪಂದ್ಯಾವಳಿ ವೇಳೆ ಹೃದಯಾಘಾತಗೊಂಡು ಯುವ ಬ್ಯಾಡ್ಮಿಂಟನ್ ಆಟಗಾರ ಮೃತ್ಯು…](https://www.udayavani.com/wp-content/uploads/2024/07/tournament-150x86.jpg)
Badminton Player: ಪಂದ್ಯಾವಳಿ ವೇಳೆ ಹೃದಯಾಘಾತಗೊಂಡು ಕುಸಿದು ಬಿದ್ದ ಬ್ಯಾಡ್ಮಿಂಟನ್ ಆಟಗಾರ
![Zimbabwe series; ಮತ್ತೆ ತಂಡದಲ್ಲಿ ಬದಲಾವಣೆ; ಟೀಂ ಇಂಡಿಯಾ ಸೇರಿದ ಮೂವರು ಯುವ ಆಟಗಾರರು](https://www.udayavani.com/wp-content/uploads/2024/07/team-india-1-150x83.jpg)
Zimbabwe series; ಮತ್ತೆ ತಂಡದಲ್ಲಿ ಬದಲಾವಣೆ; ಟೀಂ ಇಂಡಿಯಾ ಸೇರಿದ ಮೂವರು ಯುವ ಆಟಗಾರರು
![1-rewew](https://www.udayavani.com/wp-content/uploads/2024/07/1-rewew-150x100.jpg)
ICC ತಂಡದಲ್ಲಿ ಚಾಂಪಿಯನ್ ಭಾರತದ ಆರು ಆಟಗಾರರು: ದಕ್ಷಿಣ ಆಫ್ರಿಕಾದ ಒಬ್ಬರೂ ಇಲ್ಲ
![1-asddasdsa](https://www.udayavani.com/wp-content/uploads/2024/07/1-asddasdsa-150x100.jpg)
Storm: ವಿಂಡೀಸ್ನಲ್ಲೇ ಉಳಿದ ಭಾರತ ಕ್ರಿಕೆಟ್ ತಂಡ
![badminton](https://www.udayavani.com/wp-content/uploads/2024/07/badminton-150x90.jpg)
Badminton ಆಡುತ್ತಿದ್ದಾಗಲೇ ಕುಸಿದು ಬಿದ್ದು ಶಟ್ಲರ್ ಸಾವು
MUST WATCH
ಹೊಸ ಸೇರ್ಪಡೆ
![Drought Relief: 4168 ರೈತರ ಖಾತೆಗೆ 2.25ಕೋಟಿ ಜಮೆ](https://www.udayavani.com/wp-content/uploads/2024/07/Drought-Relief-150x82.jpg)
Drought Relief: 4168 ರೈತರ ಖಾತೆಗೆ 2.25ಕೋಟಿ ಜಮೆ
![Kalaburagi; ರಾಮಮಂದಿರ ಹಾಡಿಗೆ ಡಾನ್ಸ್ ಮಾಡಿದ್ದಕ್ಕೆ ಯುವಕನ ಮೇಲೆ ಅನ್ಯಕೋಮಿನವರಿಂದ ಹಲ್ಲೆ](https://www.udayavani.com/wp-content/uploads/2024/07/unnamed-file-150x83.jpg)
Kalaburagi; ರಾಮಮಂದಿರ ಹಾಡಿಗೆ ಡಾನ್ಸ್ ಮಾಡಿದ್ದಕ್ಕೆ ಯುವಕನ ಮೇಲೆ ಅನ್ಯಕೋಮಿನವರಿಂದ ಹಲ್ಲೆ
![BJP-flag](https://www.udayavani.com/wp-content/uploads/2024/07/BJP-flag-150x90.jpg)
Congress ಸರ್ಕಾರದಿಂದ ರಾಜ್ಯ ಬರ್ಬಾದ್ ; ಬಿಜೆಪಿ ಟೀಕೆ
![ಡಿಸಿ ಸಂಕೀರ್ಣಕ್ಕೆ “ಸ್ಮಾರ್ಟ್ ಸಿಟಿ’ ನೆರವು: 20 ಕೋಟಿ ರೂ. ಮೀಸಲು](https://www.udayavani.com/wp-content/uploads/2024/07/DC-1-150x84.jpg)
ಡಿಸಿ ಸಂಕೀರ್ಣಕ್ಕೆ “ಸ್ಮಾರ್ಟ್ ಸಿಟಿ’ ನೆರವು: 20 ಕೋಟಿ ರೂ. ಮೀಸಲು
![ಸಿ.ಟಿ ರವಿ](https://www.udayavani.com/wp-content/uploads/2024/07/c-t-ravi-150x83.jpg)
Chikkamagaluru; ರಾಹುಲ್ ಗಾಂಧಿ ತನ್ನ ಅಯೋಗ್ಯತನ ಪ್ರದರ್ಶಿಸಿದ್ದಾರೆ: ಸಿ.ಟಿ ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.