Super-8; ಜೋರ್ಡನ್‌ ಹ್ಯಾಟ್ರಿಕ್‌: ಸೆಮಿಫೈನಲ್‌ಗೆ ಇಂಗ್ಲೆಂಡ್‌


Team Udayavani, Jun 24, 2024, 12:01 AM IST

1-jordan

ಬ್ರಿಜ್‌ಟೌನ್‌: ಈ ಬಾರಿಯ ಟಿ20 ವಿಶ್ವಕಪ್‌ನಲ್ಲಿ 3ನೇ ಹ್ಯಾಟ್ರಿಕ್‌ ದಾಖಲಾಗಿದೆ. ಪ್ಯಾಟ್‌ ಕಮಿನ್ಸ್‌ ಅವರ ಸತತ 2 ಹ್ಯಾಟ್ರಿಕ್‌ ಸಾಧನೆಯ ಬಳಿಕ ಇಂಗ್ಲೆಂಡ್‌ನ‌ ಪೇಸ್‌ ಬೌಲರ್‌ ಕ್ರಿಸ್‌ ಜೋರ್ಡನ್‌ ಈ ಯಾದಿಯನ್ನು ಅಲಂ ಕರಿಸಿದ್ದಾರೆ. ಅಮೆರಿಕ ವಿರುದ್ಧದ ರವಿವಾರದ ಸೂಪರ್‌-8 ಮುಖಾಮುಖಿಯಲ್ಲಿ ಜೋರ್ಡನ್‌ 5 ಎಸೆತಗಳಲ್ಲಿ 4 ವಿಕೆಟ್‌ ಉಡಾಯಿಸಿ ಮೆರೆದರು. ಇಂಗ್ಲೆಂಡ್‌ 10 ವಿಕೆಟ್‌ ಜಯದೊಂದಿಗೆ ಸೆಮಿಫೈನಲ್‌ ಪ್ರವೇಶಿಸಿತು.

ಜೋರ್ಡನ್‌ 19ನೇ ಓವರ್‌ನ ಮೊದಲ ಎಸೆತದಲ್ಲಿ ಕೋರಿ ಆ್ಯಂಡರ್ಸನ್‌ ವಿಕೆಟ್‌ ಉಡಾಯಿಸಿದ ಬಳಿಕ 3ನೇ, 4ನೇ ಹಾಗೂ 5ನೇ ಎಸೆತಗಳಲ್ಲಿ ಅಲಿ ಖಾನ್‌, ನೋಸ್ತುಶ್‌ ಕೆಂಜಿಗೆ ಮತ್ತು ಸೌರಭ್‌ ನೇತ್ರಾವಲ್ಕರ್‌ ಅವರನ್ನು ಔಟ್‌ ಮಾಡಿದರು. ಜೋರ್ಡನ್‌ ಸಾಧನೆ 10 ರನ್ನಿಗೆ 4 ವಿಕೆಟ್‌.

ಅಮೆರಿಕ 18.5 ಓವರ್‌ಗಳಲ್ಲಿ 115ಕ್ಕೆ ಕುಸಿದರೆ, ಇಂಗ್ಲೆಂಡ್‌ 9.4 ಓವರ್‌ಗಳಲ್ಲಿ ವಿಕೆಟ್‌ ನಷ್ಟವಿಲ್ಲದೆ 117 ರನ್‌ ಬಾರಿಸಿತು. ಬಟ್ಲರ್‌ 83, ಸಾಲ್ಟ್ 25 ರನ್‌ ಮಾಡಿ ಅಜೇಯರಾಗಿ ಉಳಿದರು. ಹರ್ಮೀತ್‌ ಸಿಂಗ್‌ ಅವರ ಒಂದೇ ಓವರ್‌ನಲ್ಲಿ ಬಟ್ಲರ್‌ ಸತತ 5 ಸಿಕ್ಸರ್‌ ಬಾರಿಸಿ ಅಬ್ಬರಿಸಿದರು.

ವಿಂಡೀಸ್‌ಗೆ ಮಹತ್ವದ ಪಂದ್ಯ

ನಾರ್ತ್‌ ಸೌಂಡ್‌: ಟಿ20 ವಿಶ್ವಕಪ್‌ ಸೂಪರ್‌-8 ಗ್ರೂಪ್‌-2ರ ಅಂಕಪಟ್ಟಿಯ ಅಗ್ರಸ್ಥಾನಿ ದಕ್ಷಿಣ ಆಫ್ರಿಕಾ ತಂಡ, ಸೋಮವಾರ ವೆಸ್ಟ್‌ ಇಂಡೀಸ್‌ ಸವಾಲು ಎದುರಿಸಲಿದೆ. ಸೆಮಿಫೈನಲ್‌ ಪ್ರವೇಶದ ನಿಟ್ಟಿನಲ್ಲಿ ವೆಸ್ಟ್‌ ಇಂಡೀಸ್‌ಗೆ ಇದು ಮಹತ್ವದ ಪಂದ್ಯವಾಗಿದೆ.

ಗ್ರೂಪ್‌-2ರಲ್ಲಿ ಎರಡೂ ಪಂದ್ಯ ಗೆದ್ದಿರುವ ದಕ್ಷಿಣ ಆಫ್ರಿಕಾ ಬಹುತೇಕ ಸೆಮಿಫೈನಲ್‌ ಸನಿಹದಲ್ಲಿದೆ. ಆದರೆ ಎರಡರಲ್ಲಿ ಒಂದು ಪಂದ್ಯ ಗೆದ್ದು 2 ಅಂಕ ಗಳಿಸಿರುವ ವಿಂಡೀಸ್‌ಗೆ ಈ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿದೆ.

ಹಿಂದಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ, ಇಂಗ್ಲೆಂಡ್‌ ವಿರುದ್ಧ 7 ರನ್‌ಗಳ ರೋಚಕ ಜಯ ಗಳಿಸಿ ಓಟ ಮುಂದುವರಿಸಿತ್ತು. ವೆಸ್ಟ್‌ ಇಂಡೀಸ್‌ ದುರ್ಬಲ ಅಮೆರಿಕ ವಿರುದ್ಧ 9 ವಿಕೆಟ್‌ಗಳ ಸುಲಭ ಗೆಲುವು ದಾಖಲಿಸಿ ಸೆಮಿಫೈನಲ್‌ ಆಸೆಯನ್ನು ಜೀವಂತವಾಗಿರಿಸಿಕೊಂಡಿತ್ತು. ಟಿ20 ವಿಶ್ವಕಪ್‌ನಲ್ಲಿ ದಕ್ಷಿಣ ಆಫ್ರಿಕಾ ಮತ್ತು ವೆಸ್ಟ್‌ ಇಂಡೀಸ್‌ 22 ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ ಎರಡೂ ತಂಡಗಳೂ ತಲಾ 11 ಬಾರಿ ಗೆದ್ದಿವೆ.

ಟಾಪ್ ನ್ಯೂಸ್

T20 World Cup Final; ಸೂರ್ಯ ಕ್ಯಾಚ್ ಬಗ್ಗೆ ಅನುಮಾನ ಪಟ್ಟವರಿಗೆ ಸಿಕ್ಕಿತು ಉತ್ತರ

T20 World Cup Final; ಸೂರ್ಯ ಕ್ಯಾಚ್ ಬಗ್ಗೆ ಅನುಮಾನ ಪಟ್ಟವರಿಗೆ ಸಿಕ್ಕಿತು ಉತ್ತರ

Bidar; ಲೈಂಗಿಕ ಕಿರುಕುಳ ಪ್ರಕರಣ: ಇಬ್ಬರು ಶಿಕ್ಷಕರ ಅಮಾನತ್ತು

Bidar; ಲೈಂಗಿಕ ಕಿರುಕುಳ ಪ್ರಕರಣ: ಇಬ್ಬರು ಶಿಕ್ಷಕರ ಅಮಾನತ್ತು

Kalaburagi; ರಾಮಮಂದಿರ ಹಾಡಿಗೆ ಡಾನ್ಸ್ ಮಾಡಿದ್ದಕ್ಕೆ ಯುವಕನ ಮೇಲೆ ಅನ್ಯಕೋಮಿನವರಿಂದ ಹಲ್ಲೆ

Kalaburagi; ರಾಮಮಂದಿರ ಹಾಡಿಗೆ ಡಾನ್ಸ್ ಮಾಡಿದ್ದಕ್ಕೆ ಯುವಕನ ಮೇಲೆ ಅನ್ಯಕೋಮಿನವರಿಂದ ಹಲ್ಲೆ

BJP-flag

Congress ಸರ್ಕಾರದಿಂದ ರಾಜ್ಯ ಬರ್ಬಾದ್‌ ; ಬಿಜೆಪಿ ಟೀಕೆ

ಸಿ.ಟಿ ರವಿ

Chikkamagaluru; ರಾಹುಲ್ ಗಾಂಧಿ ತನ್ನ ಅಯೋಗ್ಯತನ ಪ್ರದರ್ಶಿಸಿದ್ದಾರೆ: ಸಿ.ಟಿ ರವಿ

laxmi-hebbalkar

Belagavi; ಅಭಯ್ ಪಾಟೀಲ್ ‘ಕೇಂದ್ರದ ಮೊಬೈಲ್’ ಹೇಳಿಕೆಗೆ ಸಚಿವೆ ಹೆಬ್ಬಾಳ್ಕರ್ ಗರಂ

Vijayapura; ರಾಜ್ಯದ ಅಭಿವೃದ್ಧಿ ಆಗಬೇಕಾದರೆ ನಾನು ಸಿಎಂ ಆಗಬೇಕು: ಯುವಕನ ವಿಡಿಯೋ ವೈರಲ್

Vijayapura; ರಾಜ್ಯದ ಅಭಿವೃದ್ಧಿ ಆಗಬೇಕಾದರೆ ನಾನು ಸಿಎಂ ಆಗಬೇಕು: ಯುವಕನ ವಿಡಿಯೋ ವೈರಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup Final; ಸೂರ್ಯ ಕ್ಯಾಚ್ ಬಗ್ಗೆ ಅನುಮಾನ ಪಟ್ಟವರಿಗೆ ಸಿಕ್ಕಿತು ಉತ್ತರ

T20 World Cup Final; ಸೂರ್ಯ ಕ್ಯಾಚ್ ಬಗ್ಗೆ ಅನುಮಾನ ಪಟ್ಟವರಿಗೆ ಸಿಕ್ಕಿತು ಉತ್ತರ

Badminton Player: ಪಂದ್ಯಾವಳಿ ವೇಳೆ ಹೃದಯಾಘಾತಗೊಂಡು ಯುವ ಬ್ಯಾಡ್ಮಿಂಟನ್ ಆಟಗಾರ ಮೃತ್ಯು…

Badminton Player: ಪಂದ್ಯಾವಳಿ ವೇಳೆ ಹೃದಯಾಘಾತಗೊಂಡು ಕುಸಿದು ಬಿದ್ದ ಬ್ಯಾಡ್ಮಿಂಟನ್ ಆಟಗಾರ

Zimbabwe series; ಮತ್ತೆ ತಂಡದಲ್ಲಿ ಬದಲಾವಣೆ; ಟೀಂ ಇಂಡಿಯಾ ಸೇರಿದ ಮೂವರು ಯುವ ಆಟಗಾರರು

Zimbabwe series; ಮತ್ತೆ ತಂಡದಲ್ಲಿ ಬದಲಾವಣೆ; ಟೀಂ ಇಂಡಿಯಾ ಸೇರಿದ ಮೂವರು ಯುವ ಆಟಗಾರರು

1-rewew

ICC ತಂಡದಲ್ಲಿ ಚಾಂಪಿಯನ್‌ ಭಾರತದ ಆರು ಆಟಗಾರರು: ದಕ್ಷಿಣ ಆಫ್ರಿಕಾದ ಒಬ್ಬರೂ ಇಲ್ಲ

1-asddasdsa

Storm: ವಿಂಡೀಸ್‌ನಲ್ಲೇ ಉಳಿದ ಭಾರತ ಕ್ರಿಕೆಟ್‌ ತಂಡ

MUST WATCH

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

ಹೊಸ ಸೇರ್ಪಡೆ

T20 World Cup Final; ಸೂರ್ಯ ಕ್ಯಾಚ್ ಬಗ್ಗೆ ಅನುಮಾನ ಪಟ್ಟವರಿಗೆ ಸಿಕ್ಕಿತು ಉತ್ತರ

T20 World Cup Final; ಸೂರ್ಯ ಕ್ಯಾಚ್ ಬಗ್ಗೆ ಅನುಮಾನ ಪಟ್ಟವರಿಗೆ ಸಿಕ್ಕಿತು ಉತ್ತರ

Anant Ambani ಮದುವೆಗೆ ಮುನ್ನ ಸಾಮೂಹಿಕ ವಿವಾಹ ಆಯೋಜನೆ; ವಧುಗಳಿಗೆ ತಲಾ ಒಂದು 1ರೂ. ವಿತರಣೆ

Anant Ambani ಮದುವೆಗೆ ಮುನ್ನ ಸಾಮೂಹಿಕ ವಿವಾಹ; ವಧುಗಳಿಗೆ ತಲಾ ಒಂದು 1.01 ಲಕ್ಷರೂ. ವಿತರಣೆ

Bidar; ಲೈಂಗಿಕ ಕಿರುಕುಳ ಪ್ರಕರಣ: ಇಬ್ಬರು ಶಿಕ್ಷಕರ ಅಮಾನತ್ತು

Bidar; ಲೈಂಗಿಕ ಕಿರುಕುಳ ಪ್ರಕರಣ: ಇಬ್ಬರು ಶಿಕ್ಷಕರ ಅಮಾನತ್ತು

2-hunsur

Hunsur: ಮಲಗಿದ್ದಲ್ಲೇ ಮೃತಪಟ್ಟ ಕೆಎಸ್‌ಆರ್‌ಟಿಸಿ ಬಸ್ ಕಂಡಕ್ಟರ್

Drought Relief: 4168 ರೈತರ ಖಾತೆಗೆ 2.25ಕೋಟಿ ಜಮೆ

Drought Relief: 4168 ರೈತರ ಖಾತೆಗೆ 2.25ಕೋಟಿ ಜಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.