ಪೊಲೀಸರಿಗೆ ಸವಾಲಾಗುತ್ತಿರುವ ಪ್ರಚೋದನಕಾರಿ ಪೋಸ್ಟ್‌

ಮತೀಯ ಸಂಘಟನೆ, ರಾಜಕೀಯ ಪಕ್ಷಗಳ ಬೆಂಬಲಿಗರ "ಸೋಶಿಯಲ್‌ ಮೀಡಿಯಾ ವಾರ್‌' ; ನಿರಂತರ ನಿಗಾ ಇಡಲು ಸೂಚನೆ

Team Udayavani, Jun 24, 2024, 6:10 AM IST

ಪೊಲೀಸರಿಗೆ ಸವಾಲಾಗುತ್ತಿರುವ ಪ್ರಚೋದನಕಾರಿ ಪೋಸ್ಟ್‌

ಮಂಗಳೂರು: ಚುನಾವಣೆ ಹೊತ್ತಲ್ಲಿ ಯುದೊœàನ್ಮಾದ ಸ್ಥಿತಿಯಲ್ಲಿದ್ದ ಕರಾವಳಿ ಭಾಗದ “ಸೋಶಿಯಲ್‌ ಮೀಡಿಯಾ ವಾರ್‌ ರೂಂ’ಗಳು ಫ‌ಲಿತಾಂಶ ಹೊರಬಿದ್ದ ಬಳಿಕವೂ ತಣ್ಣಗಾಗಿಲ್ಲ. ಬದಲಾಗಿ, ಕರಾವಳಿ ಭಾಗದಲ್ಲಿ ರಾಜಕೀಯ ಕೆಸರೆರಚಾಟ, ಕೋಮು ಪ್ರಚೋದನೆ, ವೈಯಕ್ತಿಕ ದ್ವೇಷ ಮೊದಲಾದವುಗಳನ್ನು ಒಳಗೊಂಡ
ಪೋಸ್ಟ್‌ಗಳ ಭರಾಟೆ ಹೆಚ್ಚಾಗಿದ್ದು, ಇದರ ನಿಯಂತ್ರಣ ಈಗ ಪೊಲೀಸರಿಗೆ ತಲೆನೋವು ತರಿಸಿದೆ.

ಫೇಸ್‌ಬುಕ್‌, ವಾಟ್ಸ್‌ಆ್ಯಪ್‌, ಇನ್‌ಸ್ಟಾಗ್ರಾಂ ಮೊದಲಾದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಪೋಸ್ಟ್‌ಗಳು, ಕಾಮೆಂಟ್‌ಗಳು,ಆಡಿಯೋ ತುಣುಕುಗಳು ಸಮಾಜದಸ್ವಾಸ್ಥ್ಯ ಕೆಡಿಸುವ ಅಪಾಯ ಇರುವುದ ರಿಂದ ಇಂತಹ ಚಟುವಟಿಕೆಗಳ ಮೇಲೆನಿರಂತರ ನಿಗಾ ಇಡಲು ಎಲ್ಲ ಠಾಣೆ ಗಳ ಪೊಲೀಸರಿಗೆ ಉನ್ನತ ಪೊಲೀಸ್‌ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ಕೆಲವು ರಾಜಕೀಯ, ಧಾರ್ಮಿಕ, ಮೂಲಭೂತವಾದಿ ಸಂಘಟನೆಗಳು ತಮ್ಮ ದ್ವೇಷಪೂರಿತ ಸಂದೇಶಗಳನ್ನು ಪಸರಲು ಸಾಮಾಜಿಕ ಜಾಲತಾಣವನ್ನು ವೇದಿಕೆಯಾಗಿ ಮಾಡಿಕೊಂಡಿವೆ. ಇಂತಹ ಪೋಸ್ಟ್‌ಗಳು ಕೆಲವು ಘಟನೆ, ವೈಷಮ್ಯಗಳಿಗೆ ಪ್ರಚೋದನೆ ನೀಡುವಂತಿವೆ. ರಾಜಕೀಯ ಪಕ್ಷಗಳ ಕೆಲವು ಮುಖಂಡರು ಕೂಡ ತಮ್ಮ “ಚೇಲಾ’ಗಳ ಮೂಲಕ ಸಂದೇಶಗಳನ್ನು ಹಾಕಿಸುವುದು, ವೈರಲ್‌ ಮಾಡಿಸುವುದು ಮೊದಲಾದವು ಗಳನ್ನು ಮಾಡುತ್ತಿದ್ದಾರೆ. ಇದು ಕೂಡ ಗಮನಕ್ಕೆ ಬಂದಿದೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಕೀ ವರ್ಡ್‌ ಬಳಕೆ
ಸಮುದಾಯಗಳಿಗೆ ಸಂಬಂಧಿ ಸಿದ ಪೋಸ್ಟ್‌ಗಳ ಸಂದರ್ಭದಲ್ಲಿ ಕೀ ವರ್ಡ್‌ಗಳನ್ನು ಬಳಸುತ್ತಿದ್ದಾರೆ. ಕೆಲವು ಅನಾಮಿಕರಿಂದ ಖಾತೆಗಳು ಸೃಷ್ಟಿಯಾಗಿರುವುದು ಗೊತ್ತಾಗಿದೆ. ನಿರಂತರವಾಗಿ ಆಕ್ಷೇಪಾರ್ಹ ಪೋಸ್ಟ್‌,
ಕಮೆಂಟ್‌ಗಳನ್ನು ಹಾಕುವವರನ್ನು ಕೂಡ ಗುರುತಿಸಿ ನಿಗಾ ವಹಿಸ ಲಾಗಿದೆ. ಸಾಮಾಜಿಕ ಜಾಲತಾಣಗಳ ಮೇಲೆ ನಿರಂತರವಾಗಿ ಕಣ್ಗಾವಲು ಇಡಲು ಮಂಗಳೂರು ಪೊಲೀಸ್‌ ಕಮಿಷನರೆಟ್‌ ವ್ಯಾಪ್ತಿಯಲ್ಲಿ “ಸೋಶಿ ಯಲ್‌ ಮೀಡಿಯಾ ಮಾನಿಟರಿಂಗ್‌ ಸೆಲ್‌’ ಕಾರ್ಯಾಚರಿಸುತ್ತಿದ್ದು, ಇದರ ಮೂಲಕ ಈಗಾಗಲೇ ಈ ಪೈಕಿ ಕೆಲವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಸಿಸಿ ಕೆಮರಾ ಫ‌ೂಟೇಜ್‌ ವೈರಲ್‌
ಯಾವುದೇ ಘಟನೆ ನಡೆದ ಕೂಡಲೇ ಸಿಸಿ ಕೆಮರಾದಲ್ಲಿ ದಾಖಲಾಗುವ ದೃಶ್ಯಗಳು ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಕೆಲವೇ ಕ್ಷಣಗಳಲ್ಲಿ ಅಪ್‌ಲೋಡ್‌ ಆಗಿ ವೈರಲ್‌ ಆಗುತ್ತಿರುವುದು ಕೂಡ ಪೊಲೀಸರಿಗೆ ಸವಾಲಾಗುತ್ತಿದೆ. ಸಿಸಿಟಿವಿ ಫ‌ೂಟೇಜ್‌ಗಳು ಜಾಲತಾಣಗಳಿಗೆ ಹೋಗುವ ಮೊದಲು ಪೊಲೀಸ್‌ ಇಲಾಖೆಯ ವಶಕ್ಕೆ ಪಡೆಯುವ ಬಗ್ಗೆಯೂ ಚಿಂತಿಸಲಾಗಿದೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಗಂಭೀರವಾಗಿ ಪರಿಗಣನೆ
ಉಡುಪಿ ಜಿಲ್ಲೆಯಲ್ಲಿ ಈ ವರ್ಷ ಅವಹೇಳನಕಾರಿ ಪೋಸ್ಟ್‌ಗಳು ಸಹಿತ ಆಕ್ಷೇಪಾರ್ಹವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸಂದೇಹ ಹರಿಯಬಿಟ್ಟ ಬಗ್ಗೆ 21 ದೂರುಗಳು ಬಂದಿದ್ದು, ಈ ಪೈಕಿ 12 ಎಫ್ಐಆರ್‌ ದಾಖಲಾಗಿವೆ. ಸಾಮಾಜಿಕ ಜಾಲತಾಣಗಳನ್ನು ಬಳಸುವಾಗ ಎಲ್ಲರೂ ಜವಾಬ್ದಾರಿಯಿಂದ ವರ್ತಿಸಬೇಕು.
ಪೋಸ್ಟ್‌ಗಳನ್ನು ಫಾರ್ವರ್ಡ್‌ ಮಾಡುವುದರಿಂದ ಅದನ್ನು ಒಪ್ಪಿದಂತೆ ಹಾಗೂ ಬೆಂಬಲಿಸಿದಂತೆ ಆಗುತ್ತದೆ. ಸಾರ್ವಜನಿಕರನ್ನು ವಂಚಿಸುವ, ತಪ್ಪು ಸಾರ್ವಜನಿಕ ಅಭಿಪ್ರಾಯ ರೂಪಿಸುವ, ಆತಂಕ ಮೂಡಿಸುವ ಹಾಗೂ ಅಪರಾಧಗಳನ್ನು ನಡೆಸುವ ಉದ್ದೇಶದಿಂದ ಕೆಲವರು ನಕಲಿ ಸಂದೇಶಗಳನ್ನು ಕೂಡ ಪೋಸ್ಟ್‌ ಮಾಡುತ್ತಾರೆ. ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ಜರಗಿಸಲಾಗುವುದು.
-ಡಾ| ಕೆ. ಅರುಣ್‌, ಎಸ್‌ಪಿ, ಉಡುಪಿ

ಸಂದೇಶ ರವಾನಿಸುವವರ ಮೇಲೆ ನಿಗಾ
ಇತ್ತೀಚೆಗಿನ ಕೆಲವು ಸಮಯದಿಂದ ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷ ಹಾಗೂ ಕೋಮು ಭಾವನೆಯನ್ನು ಪ್ರಚೋದಿಸುವ ಸಂದೇಶಗಳನ್ನು ಹರಿಯಬಿಡಲಾಗುತ್ತಿರುವುದನ್ನು ಗಮನಿಸಲಾಗಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ನಗರದಲ್ಲಿ ಕಳೆದ ಕೆಲವು ದಿನಗಳಲ್ಲಿ ಹಲವು ಎಫ್ಐಆರ್‌ ದಾಖಲಾಗಿವೆ. ಆಕ್ಷೇಪಾರ್ಹ ಸಂದೇಶಗಳನ್ನು ಪೋಸ್ಟ್‌ ಮಾಡುವುದು, ಫಾರ್ವರ್ಡ್‌ ಮಾಡುವುದು ತಪ್ಪು. ಮುಖ್ಯವಾಗಿ ಕೋಮುಭಾವನೆ ಕೆರಳಿಸುವ ಸಂದೇಶಗಳನ್ನು ರವಾನಿಸುವವರ ಮೇಲೆ ವಿಶೇಷ ನಿಗಾ ಇಡಲಾಗುತ್ತಿದೆ.
-ಅನುಪಮ್‌ ಅಗರ್‌ವಾಲ್‌, ಪೊಲೀಸ್‌ ಆಯುಕ್ತರು ಮಂಗಳೂರು

50ಕ್ಕೂ ಅಧಿಕ ಪ್ರಕರಣ
ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ, ಪ್ರಚೋದನಾತ್ಮಕ ಸಂದೇಶಗಳನ್ನು ರವಾನಿಸಿದರೆ ಸೂಕ್ತ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ. ಕಳೆದ 1 ವರ್ಷಗಳಲ್ಲಿ 50ಕ್ಕೂ ಅಧಿಕ ಪ್ರಕರಣಗಳನ್ನು ದಾಖಲಿಸಿ ಕೊಳ್ಳಲಾಗಿದೆ. ಕೋಮು ಸಾಮರಸ್ಯ, ಕಾನೂನು ಸುವ್ಯವಸ್ಥೆಗೆ ಧಕ್ಕೆಯುಂಟಾಗುವಂಥ ಯಾವುದೇ ಪೋಸ್ಟ್‌, ವಾಯ್ಸ ಮೆಸೇಜ್‌ ಮೊದಲಾದವುಗಳನ್ನು ರವಾನಿಸುವವರ ಮೇಲೆ ನಿರಂತರ ನಿಗಾ ಇಡಲಾಗಿದೆ.
-ರಿಷ್ಯಂತ್‌ ಸಿ.ಬಿ. ಎಸ್‌ಪಿ, ದ.ಕ.

– ಸಂತೋಷ್‌ ಬೊಳ್ಳೆಟ್ಟು

ಟಾಪ್ ನ್ಯೂಸ್

1-mofdd

NEET ವಿಚಾರ; ಯುವಕರ ಭವಿಷ್ಯದ ಜತೆ ಆಟವಾಡುವವರನ್ನು ನಾವು ಬಿಡುವುದಿಲ್ಲ ಎಂದ ಪ್ರಧಾನಿ

SSMB29:‌ ರಾಜಮೌಳಿ – ಮಹೇಶ್‌ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್

SSMB29:‌ ರಾಜಮೌಳಿ – ಮಹೇಶ್‌ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್

1-mangaluru

Mangaluru; ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ: ಸಿಲುಕಿದ ಕಾರ್ಮಿಕರು

10

ದೇವಮಾನವರ ದರ್ಶನ..ಧಾರ್ಮಿಕ ಕಾರ್ಯಕ್ರಮದ ವೇಳೆ ನಡೆದ ದೇಶದ ಪ್ರಮುಖ ಕಾಲ್ತುಳಿತ ಘಟನೆಗಳಿವು

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

1-vijayendra

CM ಸಿದ್ದರಾಮಯ್ಯ ಮನೆ ಮುತ್ತಿಗೆಗೆ ಯತ್ನ; ಬಿಜೆಪಿ ಪ್ರಮುಖ ನಾಯಕರು ವಶಕ್ಕೆ

vijayapura

Vijayapura; ಕೃಷ್ಣಾ ನದಿ ತೆಪ್ಪ ದುರಂತ: ಮೂವರ ಶವಪತ್ತೆ, ಇಬ್ಬರಿಗಾಗಿ ಶೋಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-mangaluru

Mangaluru; ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ: ಸಿಲುಕಿದ ಕಾರ್ಮಿಕರು

Court-Symbol

Dakshina Kannada: ಅಕ್ರಮ ಆಸ್ತಿ ಗಳಿಕೆ ಪ್ರಕರಣ; ನಿವೃತ್ತ ಕಮಾಂಡೆಂಟ್‌ ದೋಷಮುಕ್ತ

Court-Symbol

Mangaluru: ಪತಿಯ ಹತ್ಯೆ ಪ್ರಕರಣ; ಮಹಿಳೆ ಸಹಿತ ಐವರಿಗೆ ಜೀವಾವಧಿ ಶಿಕ್ಷೆ

Mangaluru ಸಮವಸ್ತ್ರದಲ್ಲೇ ಹಾರೆ ಹಿಡಿದು ಗುಂಡಿ ಮುಚ್ಚಿದ ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌

Mangaluru ಸಮವಸ್ತ್ರದಲ್ಲೇ ಹಾರೆ ಹಿಡಿದು ಗುಂಡಿ ಮುಚ್ಚಿದ ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌

Mangaluru ಅಡಿಕೆಯ ಮೇಲಿನ ಜಿಎಸ್‌ಟಿ ಇಳಿಸಲು ಕ್ಯಾಂಪ್ಕೊ ಆಗ್ರಹ

Mangaluru ಅಡಿಕೆಯ ಮೇಲಿನ ಜಿಎಸ್‌ಟಿ ಇಳಿಸಲು ಕ್ಯಾಂಪ್ಕೊ ಆಗ್ರಹ

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

1-mofdd

NEET ವಿಚಾರ; ಯುವಕರ ಭವಿಷ್ಯದ ಜತೆ ಆಟವಾಡುವವರನ್ನು ನಾವು ಬಿಡುವುದಿಲ್ಲ ಎಂದ ಪ್ರಧಾನಿ

SSMB29:‌ ರಾಜಮೌಳಿ – ಮಹೇಶ್‌ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್

SSMB29:‌ ರಾಜಮೌಳಿ – ಮಹೇಶ್‌ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್

1-mangaluru

Mangaluru; ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ: ಸಿಲುಕಿದ ಕಾರ್ಮಿಕರು

10

ದೇವಮಾನವರ ದರ್ಶನ..ಧಾರ್ಮಿಕ ಕಾರ್ಯಕ್ರಮದ ವೇಳೆ ನಡೆದ ದೇಶದ ಪ್ರಮುಖ ಕಾಲ್ತುಳಿತ ಘಟನೆಗಳಿವು

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.