![vijayapura](https://www.udayavani.com/wp-content/uploads/2024/07/vijayapura-415x249.jpg)
Election ದಿನಾಂಕದಲ್ಲೂ ಬೆಟ್ಟಿಂಗ್:ರಿಷಿ ಸುನಕ್ಗೆ ಮುಜುಗರ
Team Udayavani, Jun 24, 2024, 6:36 AM IST
![rishi-sunak](https://www.udayavani.com/wp-content/uploads/2024/06/rishi-sunak-620x414.jpg)
ಲಂಡನ್: ಬ್ರಿಟನ್ ಸಂಸತ್ಗೆ ಅವಧಿ ಪೂರ್ವ ಚುನಾವಣೆ ಘೋಷಿಸಿರುವ ಪ್ರಧಾನಿ ರಿಷಿ ಸುನಕ್ ನೇತೃತ್ವದ ಸರಕಾರಕ್ಕೆ ಮತ್ತೊಂದು ಮುಜುಗರ ಉಂಟಾಗಿದೆ. ಸರಕಾರದ ಹಿರಿಯ ಅಧಿಕಾರಿಯೊಬ್ಬರು ಚುನಾವಣ ದಿನಾಂಕಕ್ಕೆ ಸಂಬಂಧಿಸಿದಂತೆಯೇ ಬೆಟ್ಟಿಂಗ್ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಬೆಟ್ಟಿಂಗ್ನಲ್ಲಿ ಪಾಲ್ಗೊಂಡಿದ್ದ ಆ ಅಧಿಕಾಯನ್ನು ಬ್ರಿಟನ್ನ ಬೆಟ್ಟಿಂಗ್ ನಿಯಂತ್ರಣ ಆಯೋಗ ತನಿಖೆ ನಡೆಸಿದೆ. ಈ ಬೆಳವಣಿಗೆಯಿಂದ ರಿಷಿ ಸುನಕ್ ಅವರು ಕ್ರುದ್ಧಗೊಂಡಿದ್ದಾರೆ.
ಜು.4ರಂದೇ ಸಂಸತ್ ಚುನಾವಣೆ ನಡೆಸಲಾಗುತ್ತದೆ ಎಂಬ ಬಗ್ಗೆ ಆ ಅಧಿಕಾರಿ ಬೆಟ್ ಕಟ್ಟಿದ್ದರು ಎಂದು ಆರೋಪಿಸಲಾಗಿದೆ. ನಿಕ್ ಮೇಸನ್ ಎಂಬ ಅಧಿಕಾರಿ ಚುನಾವಣ ದಿನಾಂಕ ಘೋಷಣೆಯ ಬೆಟ್ಟಿಂಗ್ ಹಿಂದೆ ಇದ್ದಾರೆ ಎಂಬ ಅಂಶವು ಈ ವರದಿಯಲ್ಲಿತ್ತು. ಈ ವಿವಾದವು ಈಗ ರಾಜಕೀಯ ತಿರುವು ಪಡೆದುಕೊಳ್ಳುವ ಸಾಧ್ಯತೆಯಿದೆ. ವಿಪಕ್ಷ ಲೇಬರ್ ಪಾರ್ಟಿಯನ್ನು ಸೋಲಿಸಿ ಅಧಿಕಾರ ದಲ್ಲಿ ಮುಂದುವರಿಯಬೇಕು ಎಂಬ ರಿಷಿ ಸುನಕ್ ನೇತೃತ್ವದ ಕನ್ಸರ್ವೇಟಿವ್ ಪಕ್ಷಕ್ಕೆ ಈ ಪ್ರಕರಣದಿಂದ ಸವಾಲು ಎದುರಾಗುವ ಸಾಧ್ಯತೆಗಳು ಇವೆ ಎನ್ನಲಾಗಿದೆ.
ಟಾಪ್ ನ್ಯೂಸ್
![vijayapura](https://www.udayavani.com/wp-content/uploads/2024/07/vijayapura-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![vijayapura](https://www.udayavani.com/wp-content/uploads/2024/07/vijayapura-150x90.jpg)
Vijayapura; ಕೃಷ್ಣಾ ನದಿಯಲ್ಲಿ ತೆಪ್ಪ ಮುಳುಗಿ ಹಲವರು ನಾಪತ್ತೆ, ಓರ್ವನ ಶವ ಪತ್ತೆ
![3-crime](https://www.udayavani.com/wp-content/uploads/2024/07/3-crime-150x90.jpg)
Crime News: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು
![Krishna-Byregowda](https://www.udayavani.com/wp-content/uploads/2024/07/Krishna-Byregowda-150x90.jpg)
DK, Udupi: ಕಾಲು ಸಂಕಗಳ ಅಭಿವೃದ್ಧಿಗೆ ಕ್ರಿಯಾ ಯೋಜನೆ: ಕೃಷ್ಣ ಭೈರೇಗೌಡ
![Kishkindha Anjanadri ,ಅಂಜನಾದ್ರಿ ಹುಂಡಿ,Africa, Italy, England currency](https://www.udayavani.com/wp-content/uploads/2024/07/TEMPLE-150x87.jpg)
Kishkindha ಅಂಜನಾದ್ರಿ ಹುಂಡಿಯಲ್ಲಿ ಆಫ್ರಿಕಾ, ಇಟಲಿ, ಇಂಗ್ಲೆಂಡ್ ಕರೆನ್ಸಿ
![ಚಾರಣಪಥಗಳ ಆನ್ ಲೈನ್ ಟಿಕೆಟ್ ಗೆ ಶೀಘ್ರ ಚಾಲನೆ: ಈಶ್ವರ ಖಂಡ್ರೆ](https://www.udayavani.com/wp-content/uploads/2024/07/eshwar-150x83.jpg)
Trekking: ಚಾರಣಪಥಗಳ ಆನ್ ಲೈನ್ ಟಿಕೆಟ್ ಗೆ ಶೀಘ್ರ ಚಾಲನೆ: ಈಶ್ವರ ಖಂಡ್ರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.