![Ajilamogaru: ಗಾಳ ಹಾಕುತ್ತಿದ್ದ ವ್ಯಕ್ತಿ ನೀರು ಪಾಲು](https://www.udayavani.com/wp-content/uploads/2024/07/malpe-415x234.jpg)
ಕರಾವಳಿಯ ಪ್ರಮುಖ ದೇಗುಲಗಳಲ್ಲಿ ಭಕ್ತಸಂದಣಿ
Team Udayavani, Jun 24, 2024, 1:17 AM IST
![ಕರಾವಳಿಯ ಪ್ರಮುಖ ದೇಗುಲಗಳಲ್ಲಿ ಭಕ್ತಸಂದಣಿ](https://www.udayavani.com/wp-content/uploads/2024/06/kukke-s-620x424.jpg)
ಸುಬ್ರಹ್ಮಣ್ಯ/ ಬೆಳ್ತಂಗಡಿ/ ಕೊಲ್ಲೂರು: ವಾರಾಂತ್ಯ ಹಾಗೂ ಮಳೆಯೂ ಬಿರುಸಾಗದ ಕಾರಣ ರವಿವಾರ ಕರಾವಳಿಯ ಪ್ರಮುಖ ದೇಗುಲಗಳಲ್ಲಿ ಭಕ್ತರ ಸಂಖ್ಯೆ ಹೆಚ್ಚಿತ್ತು. ಪ್ರಮುಖ ಪ್ರವಾಸಿ ತಾಣಗಳಲ್ಲೂ ಪ್ರವಾಸಿಗರ ದಂಡು ಕಂಡು ಬಂದಿದೆ.
ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಮಳೆಯ ನಡುವೆಯೂ ಅಪಾರ ಸಂಖ್ಯೆಯ ಭಕ್ತರು ಕಂಡುಬಂದರು. ದೇಗುಲದ ರಥಬೀದಿ, ಹೊರಾಂಗಣ ಭಕ್ತರಿಂದ ತುಂಬಿತ್ತು. ಭಕ್ತರು ಸರತಿ ಸಾಲಿನಲ್ಲಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ದೇಗುಲದ ವತಿಯಿಂದ ಪೂರಕ ವ್ಯವಸ್ಥೆ ಕಲ್ಪಿಸಲಾಗಿತ್ತು.
ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ದೇಗುಲದಲ್ಲೂ ಭಕ್ತರ ಸಂಖ್ಯೆ ಹೆಚ್ಚಿತ್ತು. ಭಕ್ತರು ಸರತಿ ಸಾಲಿನಲ್ಲಿ ಬಂದು ದೇವರ ದರ್ಶನ ಪಡೆದು ಅನ್ನಪ್ರಸಾದ ಸ್ವೀಕರಿಸಿದರು. ಎಲ್ಲ ಕಡೆಯೂ ಜನಜಂಗುಳಿ ಕಂಡುಬಂದಿದ್ದು, ವಾಹನ ಪಾರ್ಕಿಂಗ್ ಸ್ಥಳಗಳೂ ತುಂಬಿದ್ದವು. ಉಡುಪಿ ಜಿಲ್ಲೆಯ ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲದಲ್ಲೂ ಭಕ್ತರ ಸಂಖ್ಯೆ ಹೆಚ್ಚಿತ್ತು. ಸಮೀಪದ ಮಾರಣಕಟ್ಟೆ ಕ್ಷೇತ್ರದಲ್ಲೂ ಜನಸಂದಣಿ ಕಂಡು ಬಂದಿದೆ.
ಟಾಪ್ ನ್ಯೂಸ್
![Ajilamogaru: ಗಾಳ ಹಾಕುತ್ತಿದ್ದ ವ್ಯಕ್ತಿ ನೀರು ಪಾಲು](https://www.udayavani.com/wp-content/uploads/2024/07/malpe-415x234.jpg)
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.