Udupi ಮಲ್ಪೆಗೆ ಹೊರರಾಜ್ಯದ ಮೀನು ಆವಕ : ಕರಾವಳಿಯಲ್ಲಿ ಮೀನುಗಾರಿಕೆ ನಿಷೇಧ

ಹೊರರಾಜ್ಯದ ಮೀನಿಗೆ ಬೇಡಿಕೆ

Team Udayavani, Jun 24, 2024, 6:50 AM IST

Udupi ಮಲ್ಪೆಗೆ ಹೊರರಾಜ್ಯದ ಮೀನು ಆವಕ : ಕರಾವಳಿಯಲ್ಲಿ ಮೀನುಗಾರಿಕೆ ನಿಷೇಧ

ಮಲ್ಪೆ: ಮಳೆಗಾಲದಲ್ಲಿ ಯಾಂತ್ರೀಕೃತ ಮೀನುಗಾರಿಕೆ ನಿಷೇಧವಿದ್ದು, ಪ್ರಸ್ತುತ ನಾಡದೋಣಿ ಮೀನುಗಾರಿಕೆಗೆ ಮಾತ್ರ ಅವಕಾಶ. ಆದ್ದರಿಂದ ಕರಾವಳಿಯ ಬೇಡಿಕೆ ಈಡೇರಿಸಲು ಒಡಿಶಾ, ತಮಿಳುನಾಡು, ಆಂಧ್ರ ಪ್ರದೇಶದ ಮೀನುಗಳು ಬರುತ್ತಿದ್ದು, ಅದಕ್ಕೆ ಭಾರೀ ಬೇಡಿಕೆಯೂ ಇದೆ. ಪ್ರತಿನಿತ್ಯ ಸುಮಾರು 15 ವಾಹನಗಳ ಮೂಲಕ ಟನ್‌ಗಟ್ಟಲೆ ಮೀನು ಮಲ್ಪೆ ಮಾರುಕಟ್ಟೆಗೆ ಆವಕವಾಗುತ್ತಿದೆ.

ಗುಜರಾತ್‌, ಕರ್ನಾಟಕ, ಗೋವಾ, ಮಹಾರಾಷ್ಟ್ರ ಮತ್ತು ಕೇರಳ ರಾಜ್ಯಗಳಲ್ಲಿ ಒಂದೇ ಅವಧಿಯಲ್ಲಿ ಮೀನುಗಾರಿಕೆ ನಿಷೇಧವಿದೆ. ಆದರೆ ಈ ಸಮಯದಲ್ಲಿ ಒಡಿಶಾ, ಆಂಧ್ರ, ತಮಿಳುನಾಡು ವ್ಯಾಪ್ತಿಯಲ್ಲಿ ನಿಷೇಧವಿರುವುದಿಲ್ಲ. ಕರ್ನಾಟಕ ವ್ಯಾಪ್ತಿಯಲ್ಲಿ ಮೀನುಗಾರಿಕೆ ಆರಂಭದ ಸಮಯದಲ್ಲಿ ಅಲ್ಲಿ ನಿಷೇಧವಿರುತ್ತದೆ.

ಒಡಿಶಾದಿಂದ ಬೊಳಂಜೀರ್‌, ಬೂತಾಯಿ ಮತ್ತು ಸಣ್ಣ ಗಾತ್ರದ ಬಂಗುಡೆ, ಆಂಧ್ರಪ್ರದೇಶದಿಂದ ಬೂತಾಯಿ ಮತ್ತು ಸಣ್ಣ ಬಂಗುಡೆ, ತಮಿಳುನಾಡಿನಿಂದ ಅಲ್ಪ ಪ್ರಮಾಣ ದಲ್ಲಿ ಬೂತಾಯಿ ಮೀನನ್ನು ತರಿಸಲಾ ಗುತ್ತದೆ. ಪ್ರಸ್ತುತ ತೂಫಾನ್‌ ಅಗದೇ ಮೀನು ಸಿಗುವುದು ಕಡಿಮೆ. ಅಲ್ಪ ಪ್ರಮಾಣದಲ್ಲಿ ಸಿಗಡಿ ದೊರೆಯುತ್ತಿದೆ ಎಂದು ವ್ಯಾಪಾರಸ್ಥರು ತಿಳಿಸುತ್ತಾರೆ. ಮಳೆಗಾಲದಲ್ಲೂ ನಿತ್ಯ ಲಕ್ಷಾಂತರ ರೂ. ವ್ಯವಹಾರ ನಡೆಯುತ್ತದೆ.

ದರ ಹೆಚ್ಚಳ
ಪ್ರತಿಯೊಂದು ತಳಿಯ ಮೀನಿಗೂ ಕಳೆದ ಎರಡು ತಿಂಗಳನ್ನು ಹೋಲಿಸಿ ದರೆ ದರ ವಿಪರೀತ ಹೆಚ್ಚಳವಾಗಿದೆ. ಸಣ್ಣ ಗಾತ್ರದ ಬಂಗುಡೆ 25 ಕೆಜಿಯ (1ಕೆ.ಜಿ. ತೂಕದಲ್ಲಿ 16 -18 ಮೀನು) ಒಂದು ಬಾಕ್ಸ್‌ಗೆ 4,000 ರೂಪಾಯಿಗೆ ಮಾರಾಟವಾಗುತ್ತದೆ. ಬೂತಾಯಿ 5,500-6,000 ರೂ ಇದ್ದು, 1 ಕೆ.ಜಿ.ಯಲ್ಲಿಲ್ಲಿ 20 -22 ಮೀನುಗಳು ಇರುತ್ತವೆ. ತಾಜಾ ಬೊಳಂಜೀರ್‌ ಇದ್ದರೆ ಕೆ.ಜಿ.ಗೆ 150-160 ರೂ.ಗೆ ಮಾರಾಟವಾಗುತ್ತಿದೆ.

ಪ್ರತಿ ವರ್ಷ ಮಳೆಗಾಲದಲ್ಲಿ ಹೊರರಾಜ್ಯದ ಮೀನನ್ನು ತಂದು ಮಾರಾಟ ಮಾಡಲಾಗುತ್ತದೆ. ಈಗ ಆಂಧ್ರಪ್ರದೇಶ ,ಒಡಿಶಾ, ತಮಿಳುನಾಡಿನಿಂದ ಮೀನುಗಳು ಬರುತ್ತಿದೆ. ಈ ಬಾರಿ ಮೀನು ಕಡಿಮೆಯಾಗಿ ದರ ಹೆಚ್ಚಿದೆ. ಇಲ್ಲಿನ ನಾಡದೋಣಿಗೆ ಮೀನುಗಳು ದೊರೆತಾಗ ಹೊರರಾಜ್ಯದ ಮೀನುಗಳಿಗೆ ಬೇಡಿಕೆ ಇಳಿಮುಖವಾಗುತ್ತದೆ.
-ದಿನೇಶ್‌ ಜಿ. ಸುವರ್ಣ, ಮೀನು ವ್ಯಾಪಾರಸ್ಥರು, ಮಲ್ಪೆ

ಮಲ್ಪೆ ಫಿಶ್‌ಟ್ರೇಡ್‌ ಸೆಂಟರಿನಲ್ಲಿ ವಹಿವಾಟು
ಈ ಹಿಂದಿನ ವರ್ಷದವರೆಗೆ ಮಳೆಗಾಲದಲ್ಲಿ ಬಂದರಿನ ಒಳಗೆಯೇ ಹೊರರಾಜ್ಯದ ಮೀನುಗಾರಿಕೆ ಚಟುವಟಿಕೆಗಳು ನಡೆಯುತ್ತಿದ್ದವು. ಈ ಬಾರಿ ಬಂದರಿನ ಹೊರಗೆ ಮೀನುಗಾರಿಕೆ ಇಲಾಖೆಗೆ ಸೇರಿದ ಜಾಗದಲ್ಲಿ ಮಲ್ಪೆ ಫಿಶ್‌ಟ್ರೇಡ್‌ ಸೆಂಟರ್‌ ತೆರೆಯಲಾಗಿದ್ದು, ಹೊರರಾಜ್ಯದ ಮೀನುಗಳನ್ನು ಇಲ್ಲೇ ರಖಂ ಆಗಿ ವಿಲೇವಾರಿ ಮಾಡಲಾಗುತ್ತದೆ.
-ವಿನಯ ಕರ್ಕೇರ, ಕಾರ್ಯದರ್ಶಿ, ಮೀನು ವ್ಯಾಪಾರಸ್ಥರ ಸಂಘ, ಮಲ್ಪೆ

ಟಾಪ್ ನ್ಯೂಸ್

1-weww

Madhya Pradesh;ಜು.15ಕ್ಕೆ ಭೋಜಶಾಲಾ ಸಮೀಕ್ಷೆಯ ವರದಿ ಸಲ್ಲಿಸಿ: ಹೈಕೋರ್ಟ್‌

Manjeshwar ಜುವೆಲರಿ ದರೋಡೆ: ಇನ್ನಿಬ್ಬರ ಬಂಧನ

Manjeshwar ಜುವೆಲರಿ ದರೋಡೆ: ಇನ್ನಿಬ್ಬರ ಬಂಧನ

ರಾಷ್ಟ್ರ ಸಂತ ವಿರಾಗ ಸಾಗರ ಮುನಿಮಹಾರಾಜ್‌ ಸಮಾಧಿ ಮರಣ

ರಾಷ್ಟ್ರ ಸಂತ ವಿರಾಗ ಸಾಗರ ಮುನಿಮಹಾರಾಜ್‌ ಸಮಾಧಿ ಮರಣ

Ajilamogaru: ಗಾಳ ಹಾಕುತ್ತಿದ್ದ ವ್ಯಕ್ತಿ ನೀರು ಪಾಲು

Ajilamogaru: ಗಾಳ ಹಾಕುತ್ತಿದ್ದ ವ್ಯಕ್ತಿ ನೀರು ಪಾಲು

Dakshina Kannada; ಹಲವು ಸಚಿವರ ಭೇಟಿಯಾಗಿ ಅಭಿವೃದ್ಧಿಗೆ ಸಹಕಾರ ಕೇಳಿದ ಕ್ಯಾ| ಚೌಟ

Dakshina Kannada; ಹಲವು ಸಚಿವರ ಭೇಟಿಯಾಗಿ ಅಭಿವೃದ್ಧಿಗೆ ಸಹಕಾರ ಕೇಳಿದ ಕ್ಯಾ| ಚೌಟ

Toll Plazas ಸ್ಥಳೀಯರಿಗೆ ಟೋಲ್‌ ವಿನಾಯಿತಿ ಮುಂದುವರಿಸಲು ಡಿ.ಸಿ. ಸೂಚನೆ

Toll Plazas ಸ್ಥಳೀಯರಿಗೆ ಟೋಲ್‌ ವಿನಾಯಿತಿ ಮುಂದುವರಿಸಲು ಡಿ.ಸಿ. ಸೂಚನೆ

Tax

Tax ಸ್ಟಾಂಡರ್ಡ್‌ ಡಿಡಕ್ಷನ್‌ ಒಂದು ಲಕ್ಷ ರೂ.ಗೆ ಏರಿಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal ಷೇರು ಹೂಡಿಕೆ ಹೆಸರಲ್ಲಿ ವಂಚನೆ: ದೂರು ದಾಖಲು

Manipal ಷೇರು ಹೂಡಿಕೆ ಹೆಸರಲ್ಲಿ ವಂಚನೆ: ದೂರು ದಾಖಲು

Udupi ರೆಡ್‌ಕ್ರಾಸ್‌ ಸಂಸ್ಥೆಗೆ ಲಕ್ಷಾಂತರ ರೂ. ವಂಚನೆ ಆರೋಪ

Udupi ರೆಡ್‌ಕ್ರಾಸ್‌ ಸಂಸ್ಥೆಗೆ ಲಕ್ಷಾಂತರ ರೂ. ವಂಚನೆ ಆರೋಪ

1-asdsdas

Yakshagana; ಖ್ಯಾತ ಪ್ರಸಾಧನ ಕಲಾವಿದ ಬಾಲಕೃಷ್ಣ ನಾಯಕ್‌ ವಿಧಿವಶ

8-udupi

Udupi ಜಿಲ್ಲೆಯಲ್ಲಿ ಗಾಳಿ-ಮಳೆ ಹಾನಿ:ಮಾಹಿತಿ ಪಡೆದು,ಕ್ರಮಕ್ಕೆ ಸೂಚಿಸಿದ ಸಚಿವೆ ಹೆಬ್ಬಾಳ್ಕರ್

5-byndoor

Heavy Rain: ಬೈಂದೂರು ವಲಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

1-weww

Madhya Pradesh;ಜು.15ಕ್ಕೆ ಭೋಜಶಾಲಾ ಸಮೀಕ್ಷೆಯ ವರದಿ ಸಲ್ಲಿಸಿ: ಹೈಕೋರ್ಟ್‌

Manjeshwar ಜುವೆಲರಿ ದರೋಡೆ: ಇನ್ನಿಬ್ಬರ ಬಂಧನ

Manjeshwar ಜುವೆಲರಿ ದರೋಡೆ: ಇನ್ನಿಬ್ಬರ ಬಂಧನ

ರಾಷ್ಟ್ರ ಸಂತ ವಿರಾಗ ಸಾಗರ ಮುನಿಮಹಾರಾಜ್‌ ಸಮಾಧಿ ಮರಣ

ರಾಷ್ಟ್ರ ಸಂತ ವಿರಾಗ ಸಾಗರ ಮುನಿಮಹಾರಾಜ್‌ ಸಮಾಧಿ ಮರಣ

Ajilamogaru: ಗಾಳ ಹಾಕುತ್ತಿದ್ದ ವ್ಯಕ್ತಿ ನೀರು ಪಾಲು

Ajilamogaru: ಗಾಳ ಹಾಕುತ್ತಿದ್ದ ವ್ಯಕ್ತಿ ನೀರು ಪಾಲು

Dakshina Kannada; ಹಲವು ಸಚಿವರ ಭೇಟಿಯಾಗಿ ಅಭಿವೃದ್ಧಿಗೆ ಸಹಕಾರ ಕೇಳಿದ ಕ್ಯಾ| ಚೌಟ

Dakshina Kannada; ಹಲವು ಸಚಿವರ ಭೇಟಿಯಾಗಿ ಅಭಿವೃದ್ಧಿಗೆ ಸಹಕಾರ ಕೇಳಿದ ಕ್ಯಾ| ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.