Chhattisgarh; ಬಯಲಿಗೆ ಬಂದಿತು ನಕ್ಸಲರ ಕಳ್ಳನೋಟು ಜಾಲ!

ಸುಕ್ಮಾ ಜಿಲ್ಲೆಯಲ್ಲಿ ಅಕ್ರಮ... ಮುದ್ರಣ ವಸ್ತುಗಳು ವಶಕ್ಕೆ

Team Udayavani, Jun 24, 2024, 6:00 AM IST

naksal (2)

ರಾಂಚಿ: ಭಾರತದ ಆರ್ಥಿಕತೆ ಯನ್ನು ಅಸ್ಥಿರಗೊಳಿಸಲೆಂದು ಛತ್ತೀಸ್‌ಗಢದಲ್ಲಿ ನಕ್ಸಲರು ಮುದ್ರಿಸುತ್ತಿದ್ದ ನಕಲಿ ನೋಟುಗಳ ಜಾಲವನ್ನು ಭದ್ರತಪಡೆಗಳು ಭೇದಿಸಿವೆ. 3 ದಶಕದಿಂದ ನಕ್ಸಲ್‌ ಪೀಡಿತ ಪ್ರದೇಶವೆಂಬ ಹಣೆಪಟ್ಟಿ ಹೊಂದಿರುವ ಛತ್ತೀಸ್‌ಗಢದಲ್ಲಿ ಇದೇ ಮೊದಲ ಬಾರಿಗೆ ನಕ್ಸಲರು ಮುದ್ರಿಸಿದ ಭಾರೀ ಪ್ರಮಾಣದ ನಕಲಿ ನೋಟುಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಲ್ಲದೆ ಅವುಗಳ ಮುದ್ರಣಕ್ಕೆ ಬಳಸಲಾಗುತ್ತಿದ್ದ ಸಲಕರಣೆ ಗಳನ್ನೂ ವಶಕ್ಕೆ ಪಡೆದಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಸುಕ್ಮಾ ಜಿಲ್ಲೆಯ ಕೊರಾಜಗುಡ ಗ್ರಾಮದ ಅರಣ್ಯ ಪ್ರದೇಶದಲ್ಲಿ ನಕ್ಸಲರು ನಕಲಿ ನೋಟು ಮುದ್ರಿಸುತ್ತಿದ್ದಾರೆ ಎಂಬ ಗುಪ್ತಚರ ಮಾಹಿತಿಯನ್ನು ಆಧರಿಸಿ ಶನಿವಾರ ರಾತ್ರಿ ಭದ್ರತ ಪಡೆಗಳು ಜಂಟಿ ಶೋಧ ಕಾರ್ಯಾಚರಣೆ ನಡೆಸಿವೆ.

ಭದ್ರತ ಪಡೆಗಳ ಉಪಸ್ಥಿತಿಯ ಬಗ್ಗೆ ತಿಳಿಯುತ್ತಿದ್ದಂತೆಯೇ ನಕ್ಸಲರು ತಮ್ಮೆಲ್ಲ ವಸ್ತುಗಳನ್ನೂ ಬಿಟ್ಟು ಪರಾರಿಯಾಗಿದ್ದಾರೆ. ಅರಣ್ಯದ ಒಳಭಾಗದಲ್ಲಿ ಗುಡ್ಡವೊಂದರ ಶೋಧದ ಸಂದರ್ಭದಲ್ಲಿ ಈ ನಕಲಿ ನೋಟುಗಳ ಮುದ್ರಣ ಜಾಲ ಪತ್ತೆಯಾಗಿದೆ.

ಸ್ಥಳದಲ್ಲಿ 50 ರೂ., 100, 200 ಹಾಗೂ 500 ರೂ. ಮುಖಬೆಲೆಯ ನಕಲಿ ನೋಟುಗಳು ಪತ್ತೆಯಾಗಿವೆ. ಅಲ್ಲದೆ ನೋಟುಗಳ ಮುದ್ರಣಕ್ಕೆ ಬಳಸುತ್ತಿದ್ದ ಕಲರ್‌ ಪ್ರಿಂಟಿಂಗ್‌ ಯಂತ್ರಗಳು, 200 ಬಾಟಲ್‌ ಶಾಯಿ, 4 ಕಾಟ್ರಿìಡ್ಜ್, ಪ್ರಿಂಟರ್‌, 9 ಪ್ರಿಂಟರ್‌ ರೋಲರ್‌ಗಳು, 6 ವೈರ್‌ಲೆಸ್‌ ಸೆಟ್‌ಗಳು, ಅವುಗಳ ಚಾರ್ಜರ್‌ ಮತ್ತು ಬ್ಯಾಟರಿಗಳೂ ಲಭಿಸಿವೆ. ಇದರ ಜತೆಗೆ 2 ಮಜಲ್‌ ಲೋಡಿಂಗ್‌ ಗನ್‌,ಭಾರೀ ಸ್ಫೋಟಕಗಳು, ನಕ್ಸಲ್‌ ಸಮವಸ್ತ್ರ ಹಾಗೂ ಇನ್ನಿತರ ವಸ್ತುಗಳನ್ನೂ ವಶಪಡಿಸಿಕೊಳ್ಳಲಾಗಿದೆ ಎಂದು ಎಸ್‌ಪಿ ಕಿರಣ್‌ ಹು ಚವಾಣ್‌ ಹೇಳಿದ್ದಾರೆ.

ಬುಡಕಟ್ಟು ಜನರಿಗೆ ವಂಚನೆ

ನಕ್ಸಲರು ತಾವು ಮುದ್ರಿಸಿರುವ ನಕಲಿ ನೋಟುಗಳನ್ನು ಚಲಾಯಿಸಲು ವಾರದ ಮಾರುಕಟ್ಟೆಗಳನ್ನೇ ತಾಣವಾಗಿಸಿಕೊಂಡಿದ್ದರು. ಪ್ರತೀ ವಾರ ನಡೆಯುವ ಸಂತೆ, ಮಾರುಕಟ್ಟೆಗಳಲ್ಲಿ ಈ ನೋಟುಗಳನ್ನು ಬಳಸಿ ಅಗತ್ಯ ವಸ್ತುಗಳನ್ನು ಖರೀದಿಸುತ್ತಿದ್ದರು. ಈ ಮೂಲಕ ಅಮಾಯಕ ಬುಡಕಟ್ಟು ಜನರಿಗೆ ವಂಚನೆ ಮಾಡುತ್ತಿದ್ದರು. ದೇಶದ ಆರ್ಥಿಕತೆಯನ್ನು ಅಸ್ಥಿರಗೊಳಿಸುವುದು ಕೂಡ ಈ ಕೃತ್ಯದ ಹಿಂದಿನ ಪ್ರಮುಖ ಉದ್ದೇಶ ಎನ್ನಲಾಗಿದೆ.

ನಕಲಿ ನೋಟುಗಳ ಮೊರೆ ಹೋದದ್ದೇಕೆ?
ಛತ್ತೀಸ್‌ಗಢದಲ್ಲಿ ಇತ್ತೀಚೆಗೆ ನಕ್ಸಲ್‌ ನಿಗ್ರಹ ಕಾರ್ಯಾಚರಣೆ ಯನ್ನು ಹೆಚ್ಚಿಸಲಾಗಿದ್ದು, ನಕ್ಸಲರಿಗೆ ಆರ್ಥಿಕ ನೆರವು ನೀಡುತ್ತಿದ್ದ ಮೂಲಗಳನ್ನೇ ಭದ್ರತ ಪಡೆಗಳು ಚಿವುಟಿಹಾಕಿವೆ. ಇದರಿಂದ ನಕ್ಸಲರು ಸಂಕಷ್ಟಕ್ಕೆ ಸಿಲುಕಿದ್ದು, ನಕಲಿ ನೋಟುಗಳ ಮುದ್ರಣಕ್ಕೆ ಮುಂದಾಗಿದ್ದಾರೆ ಎಂದು ಅಂದಾಜಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ಮುಂದುವರಿಯುತ್ತಿದೆ ಎಂದು ಎಸ್‌ಪಿ ಕಿರಣ್‌ ಹು ಚವಾಣ್‌ ಅವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

CM-Siddaramaiah

CM Siddaramaiah: ಮುಡಾ ಹಗರಣದಲ್ಲಿ ನನ್ನ ತಪ್ಪಿಲ್ಲ

Heavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟHeavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟ

Heavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟ

Heavy Rain ನಾವುಂದ, ಸಾಲ್ಬುಡಾ, ಅರೆಹೊಳೆ ಜಲಾವೃತ; ನೂರಕ್ಕೂ ಮಿಕ್ಕಿ ಮನೆಗಳು ದಿಗ್ಬಂಧನ

Heavy Rain ನಾವುಂದ, ಸಾಲ್ಬುಡಾ, ಅರೆಹೊಳೆ ಜಲಾವೃತ; ನೂರಕ್ಕೂ ಮಿಕ್ಕಿ ಮನೆಗಳು ದಿಗ್ಬಂಧನ

BJP Meeting; ತಾಕತ್ತಿದ್ದರೆ ಚುನಾವಣೆಗೆ ಬನ್ನಿ: ಬಿ.ಎಸ್‌.ಯಡಿಯೂರಪ್ಪ

ಅಣ್ಣಾಲು ಸೇತುವೆ ಮುಳುಗಡೆ: ವಾಹನ ಸಂಚಾರ ಸ್ಥಗಿತ

Heavy Rain ಅಣ್ಣಾಲು ಸೇತುವೆ ಮುಳುಗಡೆ: ವಾಹನ ಸಂಚಾರ ಸ್ಥಗಿತ

Rain ಪೊರ್ಕೋಡಿ ದೇವಸ್ಥಾನದ ಬಳಿ ಕುಸಿದ ರಸ್ತೆ: ವಾಹನ ಸಂಚಾರ ವ್ಯತ್ಯಯ

Rain ಪೊರ್ಕೋಡಿ ದೇವಸ್ಥಾನದ ಬಳಿ ಕುಸಿದ ರಸ್ತೆ: ವಾಹನ ಸಂಚಾರ ವ್ಯತ್ಯಯ

V.kageri

BJP Meeting: ಸಿದ್ದರಾಮಯ್ಯ ರಾಜೀನಾಮೆ ಸೇರಿ 3 ನಿರ್ಣಯ ಅಂಗೀಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mamata

Governor;ಜು.10ಕ್ಕೆ ಸಿಎಂ ಮಮತಾ ವಿರುದ್ಧ ಮಾನಹಾನಿ ಪ್ರಕರಣ ವಿಚಾರಣೆ

1-weww

Madhya Pradesh;ಜು.15ಕ್ಕೆ ಭೋಜಶಾಲಾ ಸಮೀಕ್ಷೆಯ ವರದಿ ಸಲ್ಲಿಸಿ: ಹೈಕೋರ್ಟ್‌

rape

Hyderabad: ಮಹಿಳೆ ಮೇಲೆ ಕಾರಿನಲ್ಲಿ ರಾತ್ರಿಯಿಡೀ ಅತ್ಯಾಚಾರ

police crime

Jammu; ಶಿವನ ದೇವಾಲಯ ಧ್ವಂಸ: 43 ಆರೋಪಿಗಳ ಬಂಧನ

1-wewqewqe

Rajasthan; ಮೋದಿಗೆ ಕೊಟ್ಟ ಭರವಸೆ ಈಡೇರದ್ದಕ್ಕೆ ಪ್ರಭಾವಿ ಸಚಿವ ರಾಜೀನಾಮೆ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Rohan Bopanna

Wimbledon tennis match: ಬೋಪಣ್ಣ-ಎಬ್ಡೆನ್‌ ಮುನ್ನಡೆ

1-athli

Paris Olympics; ಆ್ಯತ್ಲೀಟ್‌ ಗಳಿಂದ ಶ್ರೇಷ್ಠ ನಿರ್ವಹಣೆ: ಮೋದಿ ವಿಶ್ವಾಸ

CM-Siddaramaiah

CM Siddaramaiah: ಮುಡಾ ಹಗರಣದಲ್ಲಿ ನನ್ನ ತಪ್ಪಿಲ್ಲ

1-jock

Wimbledon ಟೆನಿಸ್‌ : ಜೊಕೋವಿಕ್‌ 3ನೇ ಸುತ್ತಿಗೆ

Heavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟHeavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟ

Heavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.