Mangaluru; ಕೋಟಿ ರೂ. ತುಂಬಿಸಲು ಗೋಣಿಚೀಲ ತಂದಿದ್ದರು?

ಉದ್ಯಮಿ ಮನೆಯಲ್ಲಿ ಅಪಾರ ನಗದು ನಿರೀಕ್ಷಿಸಿದ್ದ ದರೋಡೆಕೋರರು

Team Udayavani, Jun 24, 2024, 6:30 AM IST

ಕೋಟಿ ರೂ. ತುಂಬಿಸಲು ಗೋಣಿಚೀಲ ತಂದಿದ್ದರು?

ಮಂಗಳೂರು: ಶುಕ್ರವಾರ ರಾತ್ರಿ ಉಳಾಯಿಬೆಟ್ಟು ಪೆರ್ಮಂಕಿಯ ಉದ್ಯಮಿ ಪದ್ಮನಾಭ ಕೋಟ್ಯಾನ್‌ ಅವರ ಮನೆಗೆ ನುಗ್ಗಿದ್ದ ದರೋಡೆಕೋರರು ಕೋಟ್ಯಂತರ ರೂಪಾಯಿ ದೋಚುವ ಯೋಜನೆ ರೂಪಿಸಿದ್ದರು ಎಂದು ತಿಳಿದುಬಂದಿದೆ.

ಮನೆಯಲ್ಲಿ ಐದಾರು ಕೋಟಿ ರೂಪಾಯಿ ನಗದು ರೂಪದಲ್ಲೇ ಇರಬಹುದು ಎಂಬ ಲೆಕ್ಕಾಚಾರದಿಂದ ಬಂದಿದ್ದ ದರೋಡೆಕೋರರು ಅದನ್ನು ಹೊತ್ತೂಯ್ಯಲು ಗೋಣಿ ಚೀಲವನ್ನೇ ತಂದಿದ್ದರು! ಆದರೆ ಅವರ ನಿರೀಕ್ಷೆಯಷ್ಟು ಹಣ ಸಿಗಲಿಲ್ಲ. ದರೋಡೆಕೋರರು ಮನೆಯವರಲ್ಲಿ ಪದೇ ಪದೆ ಹಣ ಎಲ್ಲಿದೆ ಎಂದು ಪ್ರಶ್ನಿಸುತ್ತಾ ಮನೆಯೆಲ್ಲ ಜಾಲಾಡಿದ್ದಾರೆ. ಹಾಸಿಗೆಗಳ ಅಡಿಯಲ್ಲಿಯೂ ಹುಡು ಕಾಡಿದ್ದಾರೆ. ಭಾರೀ ಹಣ ಸಂಗ್ರಹಿಸಿಟ್ಟಿದ್ದಾರೆ ಎಂಬ ಮಾಹಿತಿ ದರೋಡೆಕೋರರಿಗೆ ಲಭಿಸಿದೆ. ಕೃತ್ಯದಲ್ಲಿ ಸ್ಥಳೀಯ ಸಂಪರ್ಕ ಇರುವ ವ್ಯಕ್ತಿಗಳು ಶಾಮೀಲಾಗಿರುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ನೆರವಾಗದ ಸಿಸಿ ಕೆಮರಾ?
ಪದ್ಮನಾಭ ಕೋಟ್ಯಾನ್‌ ಅವರ ಮನೆಯಲ್ಲಿರುವ ಸಿಸಿಟಿವಿಯಲ್ಲಿ ದರೋಡೆಕೋರರ ಕೃತ್ಯದ ಕೆಲವು ದೃಶ್ಯಗಳು ದಾಖಲಾಗಿವೆ. ಅಲ್ಲದೆ ದರೋಡೆಕೋರರ ವಾಹನದ ಚಿತ್ರ ರಸ್ತೆ ಬದಿಯೊಂದರ ಸಿಸಿ ಕೆಮರಾದಲ್ಲಿ ಸೆರೆಯಾಗಿದ್ದು, ಅದನ್ನು ಪೊಲೀಸರು ಪರಿಶೀಲಿಸಿದ್ದಾರೆ. ಆದರೆ ಅದು ತನಿಖೆಗೆ ಹೆಚ್ಚು ಪ್ರಯೋಜನವಾಗಿಲ್ಲ.

2021ರ ದರೋಡೆ: 3 ದಿನಗಳಲ್ಲೇ ಬಂಧನ
2021ರ ಮಾರ್ಚ್‌ನಲ್ಲಿ ಮೂಡುಬಿದಿರೆ, ಬಜಪೆ ಮತ್ತು ಮೂಲ್ಕಿ ಠಾಣೆಯ ಹಲವೆಡೆ ದರೋಡೆ, ಕಳ್ಳತನ ನಡೆಸಿದ್ದ ಗ್ಯಾಂಗಿನ 9 ಮಂದಿಯನ್ನು ಪೊಲೀಸರು ಮೂರು ದಿನಗಳೊಳಗೆ ಬಂಧಿಸಿದ್ದರು. ಈ ತಂಡ ಫಾರ್ಮ್ಹೌಸ್‌, ಗೋದಾಮು, ಮನೆಗಳಲ್ಲಿ ಭಾರೀ ಪ್ರಮಾಣದಲ್ಲಿ ಹಣ ಸಂಗ್ರಹಿಸುತ್ತಿದ್ದವರ ಮಾಹಿತಿ ಪಡೆದು ದಾಳಿ ನಡೆಸುತ್ತಿತ್ತು.

ಅಲ್ಲದೆ ಬಂಧಿತರು 2020ರಲ್ಲಿ ಉಪ್ಪಿನಂಗಡಿಯಲ್ಲಿ ನಡೆದ ದರೋಡೆ, ಅರೆಹಳ್ಳಿ ಹಾಸನದಲ್ಲಿ ಮನೆಗಳ್ಳತನ, ಪುಂಜಾಲಕಟ್ಟೆಯಲ್ಲಿ ತಾಯಿ ಮಗನಿದ್ದ ಮನೆಯಲ್ಲಿ ಕಳ್ಳತನ, ಕೊಕ್ಕಡದಲ್ಲಿ ದರೋಡೆ ವೇಳೆ ಮಹಿಳೆಯೊಬ್ಬರು ಒಬ್ಟಾತನನ್ನು ಹಿಡಿಯಲು ಯತ್ನಿಸಿದಾಗ ಹಲ್ಲೆ ನಡೆಸಿದ ಪ್ರಕರಣ, ಮೂಡಬಿದಿರೆಯ ದರೋಡೆ, ಬೆಂಗಳೂರು ವಿಜಯನಗರಗಳಲ್ಲಿ ನಡೆದ ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿದ್ದುದು ತನಿಖೆಯಿಂದ ಗೊತ್ತಾಗಿತ್ತು.

2020ರ ಸೌತಡ್ಕ ದರೋಡೆ ಪ್ರಕರಣ
ಉಪ್ಪಿನಂಗಡಿಯ ಸೌತಡ್ಕದಲ್ಲಿ 2020ರ ಡಿಸೆಂಬರ್‌ನಲ್ಲಿ ರಾತ್ರಿ ವೇಳೆ ಯಜಮಾನನ್ನು ಕಟ್ಟಿ ಹಾಕಿ ಮನೆಯೊಡತಿಗೆ ಚೂರಿಯಿಂದ ಇರಿದು ದರೋಡೆಕೋರರ ತಂಡ ಹಣ ಮತ್ತು ಚಿನ್ನಾಭರಣ ದೋಚಿತ್ತು. ಸುಮಾರು 9 ಮಂದಿ ದರೋಡೆಕೋರರ ತಂಡ ಮನೆಯವರನ್ನು ಬೆದರಿಸಿ ಕಪಾಟಿನ ಕೀಲಿ ಕೈಯನ್ನು ಪಡೆದಿತ್ತು. ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದರು.

ಕುದ್ಕಾಡಿಯಲ್ಲಿ ದರೋಡೆ: ಎಲ್ಲ ಆರೋಪಿಗಳ ಬಂಧನ
ಪುತ್ತೂರು: ಪಡುವನ್ನೂರು ಗ್ರಾಮದ ಕುದ್ಕಾಡಿ ತೋಟದ ಮೂಲೆಯ ಮನೆಯೊಂದಕ್ಕೆ 2023ರ ಆ.7ರಂದು ತಡರಾತ್ರಿ ದರೋಡೆಕೋರರು ನುಗ್ಗಿ ಮನೆ ಮಂದಿಯನ್ನು ಕಟ್ಟಿ ಹಾಕಿ 15 ಪವನ್‌ ಚಿನ್ನಾಭರಣ ಹಾಗೂ ರೂ. 40 ಸಾವಿರ ರೂ. ದೋಚಿದ ಘಟನೆ ನಡೆದಿತ್ತು. ಬಡಗನ್ನೂರು ಗ್ರಾ.ಪಂ.ಮಾಜಿ ಸದಸ್ಯ ಗುರುಪ್ರಸಾದ್‌ ರೈ ಕುದ್ಕಾಡಿ ಅವರ ಮನೆಯಲ್ಲಿ ಈ ಘಟನೆ ನಡೆದಿತ್ತು. ದರೋಡೆ ನಡೆದ ತಿಂಗಳುಗಳೊಳಗೇ ಎಲ್ಲ ಆರೋಪಿಗಳನ್ನು ಪೊಲೀಸರು ಬಂಧಿಸುವ ಮೂಲಕ ಪ್ರಕರಣ ವನ್ನು ಭೇದಿಸಿದ್ದರು.

ಹೊಂಚು
ಹಾಕಿ ಸಿಕ್ಕಿಬಿದ್ದಿದ್ದರು
2021ರ ಎಪ್ರಿಲ್‌ನಲ್ಲಿ ಮಂಗಳೂರು ಗ್ರಾಮಾಂತರ ಪೊಲೀಸರು ಉಳಾಯಿಬೆಟ್ಟು ಗ್ರಾಮದ ಪರಾರಿಯಲ್ಲಿ ದರೋಡೆಗೆ ಸಂಚು ಹಾಕುತ್ತಿದ್ದ ತಂಡವನ್ನು ಬಂಧಿಸಿದ್ದರು. ಈ ತಂಡ ಇನ್ನೋವಾ ಕಾರಿನಲ್ಲಿ ಮಾರಕಾಯುಧಗಳೊಂದಿಗೆ ಹೊಂಚು ಹಾಕುತ್ತಿತ್ತು.

ಟಾಪ್ ನ್ಯೂಸ್

Dr.Sudhakar

Lokasabha: ಚಿಕ್ಕಬಳ್ಳಾಪುರದಲ್ಲಿ ರಾಷ್ಟ್ರೀಯ ಪುಷ್ಪ ಮಂಡಳಿ; ಡಾ.ಕೆ.ಸುಧಾಕರ್‌ ಪ್ರಸ್ತಾಪ

Bhovi Community ಜು. 20ಕ್ಕೆ ದೀಕ್ಷಾ ರಜತ ಮಹೋತ್ಸವ: ಲಿಂಬಾವಳಿ

Bhovi Community ಜು. 20ಕ್ಕೆ ದೀಕ್ಷಾ ರಜತ ಮಹೋತ್ಸವ: ಲಿಂಬಾವಳಿ

Congress ಸ್ಥಾನಮಾನ ಬೇಕಿದ್ರೆ ವರಿಷ್ಠರ ಬಳಿ ಕೇಳಬೇಕು: ರಾಜಣ್ಣಗೆ ಕೃಷ್ಣ ಬೈರೇಗೌಡ ತಿರುಗೇಟು

Congress ಸ್ಥಾನಮಾನ ಬೇಕಿದ್ರೆ ವರಿಷ್ಠರ ಬಳಿ ಕೇಳಬೇಕು: ರಾಜಣ್ಣಗೆ ಕೃಷ್ಣ ಬೈರೇಗೌಡ ತಿರುಗೇಟು

DK Shivakumar ಚೇರ್‌ ಖಾಲಿ ಇರುವುದಕ್ಕೆ ನಾನು ಬಂದು ಕೂತಿದ್ದೇನೆ

DK Shivakumar ಚೇರ್‌ ಖಾಲಿ ಇರುವುದಕ್ಕೆ ನಾನು ಬಂದು ಕೂತಿದ್ದೇನೆ

HD Revanna ಒಂದು ತಿಂಗಳಿಂದ ದೇವೇಗೌಡರು ನೋವಿನಲ್ಲೇ ಇದ್ದಾರೆ

HD Revanna ಒಂದು ತಿಂಗಳಿಂದ ದೇವೇಗೌಡರು ನೋವಿನಲ್ಲೇ ಇದ್ದಾರೆ

B. Y. Vijayendra ಹಿಂದೂಗಳ ತೇಜೋವಧೆ ಮಾಡಿರುವ ರಾಹುಲ್‌ ಕ್ಷಮೆ ಕೇಳಲಿ

B. Y. Vijayendra ಹಿಂದೂಗಳ ತೇಜೋವಧೆ ಮಾಡಿರುವ ರಾಹುಲ್‌ ಕ್ಷಮೆ ಕೇಳಲಿ

5-sulya

Crime: ಸುಳ್ಯ ಭಾಗದ ಅಪರಾಧ ಸುದ್ದಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚಾರಣಪಥಗಳ ಆನ್ ಲೈನ್ ಟಿಕೆಟ್ ಗೆ ಶೀಘ್ರ ಚಾಲನೆ: ಈಶ್ವರ ಖಂಡ್ರೆ

Trekking: ಚಾರಣಪಥಗಳ ಆನ್ ಲೈನ್ ಟಿಕೆಟ್ ಗೆ ಶೀಘ್ರ ಚಾಲನೆ: ಈಶ್ವರ ಖಂಡ್ರೆ

ಡಿಸಿ ಸಂಕೀರ್ಣಕ್ಕೆ “ಸ್ಮಾರ್ಟ್‌ ಸಿಟಿ’ ನೆರವು: 20 ಕೋಟಿ ರೂ. ಮೀಸಲು

ಡಿಸಿ ಸಂಕೀರ್ಣಕ್ಕೆ “ಸ್ಮಾರ್ಟ್‌ ಸಿಟಿ’ ನೆರವು: 20 ಕೋಟಿ ರೂ. ಮೀಸಲು

1-mng-protest

Mangaluru: ನೀಟ್ ಅವ್ಯವಹಾರ: ಎನ್.ಎಸ್.ಯು.ಐ., ಕಾಂಗ್ರೆಸ್ ಪ್ರತಿಭಟನೆ

Ullal: ಟಿಪ್ಪರ್‌ ಅಪಘಾತ; ಗಾಯಾಳು ಸ್ಕೂಟರ್‌ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು

Ullal: ಟಿಪ್ಪರ್‌ ಅಪಘಾತ; ಗಾಯಾಳು ಸ್ಕೂಟರ್‌ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು

July 5: “ಧರ್ಮದೈವ’ ತುಳು ಚಲನಚಿತ್ರ ತೆರೆಗೆ

July 5: “ಧರ್ಮದೈವ’ ತುಳು ಚಲನಚಿತ್ರ ತೆರೆಗೆ

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

Will not believe EVMs says akhilesh yadav

ಉ.ಪ್ರ.ದ 80 ಕ್ಷೇತ್ರ ಗೆದ್ದರೂ EVM ನಂಬಲ್ಲ: ಅಖೀಲೇಶ್‌

Dr.Sudhakar

Lokasabha: ಚಿಕ್ಕಬಳ್ಳಾಪುರದಲ್ಲಿ ರಾಷ್ಟ್ರೀಯ ಪುಷ್ಪ ಮಂಡಳಿ; ಡಾ.ಕೆ.ಸುಧಾಕರ್‌ ಪ್ರಸ್ತಾಪ

Question paper ready 2 hours before NEET-PG exam start?

NEET-PG ಪರೀಕ್ಷೆ ಆರಂಭಕ್ಕಿಂತ 2 ಗಂಟೆ ಮುಂಚೆ ಪ್ರಶ್ನೆಪತ್ರಿಕೆ ಸಿದ್ಧ?

Indian Prime Minister visits Austria after 41 years!

Narendra Modi; 41 ವರ್ಷಗಳ ಬಳಿಕ ಆಸ್ಟ್ರಿಯಾಗೆ ಭಾರತದ ಪ್ರಧಾನಿ ಭೇಟಿ!

Bhovi Community ಜು. 20ಕ್ಕೆ ದೀಕ್ಷಾ ರಜತ ಮಹೋತ್ಸವ: ಲಿಂಬಾವಳಿ

Bhovi Community ಜು. 20ಕ್ಕೆ ದೀಕ್ಷಾ ರಜತ ಮಹೋತ್ಸವ: ಲಿಂಬಾವಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.