Russia: ಡಾಗೆಸ್ತಾನ್‌ನಲ್ಲಿ ಭಯೋತ್ಪಾದಕರ ದಾಳಿ, ಪಾದ್ರಿ, ಪೊಲೀಸರು ಸೇರಿ 15 ಮಂದಿ ಮೃತ್ಯು


Team Udayavani, Jun 24, 2024, 8:47 AM IST

Russia: ಡಾಗೆಸ್ತಾನ್‌ನಲ್ಲಿ ಭಯೋತ್ಪಾದಕರ ದಾಳಿ, ಪಾದ್ರಿ, ಪೊಲೀಸರು ಸೇರಿ 15 ಮಂದಿ ಮೃತ್ಯು

ರಷ್ಯಾ: ರಷ್ಯಾದ ಡಾಗೆಸ್ತಾನ್ ಪ್ರಾಂತ್ಯದಲ್ಲಿ ಪೊಲೀಸ್ ಪೋಸ್ಟ್, ಚರ್ಚ್ ಮತ್ತು ಯಹೂದಿಗಳ ಪೂಜಾ ಸ್ಥಳವನ್ನು ಗುರಿಯಾಗಿಸಿಕೊಂಡು ಪ್ರತ್ಯೇಕ ಸ್ಥಳಗಳಲ್ಲಿ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ ಚರ್ಚ್ ಪಾದ್ರಿ, ಪೊಲೀಸರು ಸೇರಿದಂತೆ ಹದಿನೈದು ಮಾಡಿ ಮೃತಪಟ್ಟಿದ್ದು ಜೊತೆಗೆ ಹಲವಾರು ಮಂದಿ ಗಾಯಗೊಂಡಿರುವುದಾಗಿ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಭಯೋತ್ಪಾದಕ ದಾಳಿಯ ವೇಳೆ ಆರು ಭಯೋತ್ಪಾದಕರು ಮೃತಪಟ್ಟಿರುವುದಾಗಿ ಅಧಿಕಾರಿಗಳು ದೃಢ ಪಡಿಸಿದ್ದಾರೆ.

ದಾಗೆಸ್ತಾನ್‌ನ ಅತಿದೊಡ್ಡ ನಗರವಾದ ಮಖಚ್ಕಲಾ ಮತ್ತು ಕರಾವಳಿ ನಗರವಾದ ಡರ್ಬೆಂಟ್‌ನಲ್ಲಿ ಏಕಕಾಲದಲ್ಲಿ ಗುಂಡಿನ ದಾಳಿಗಳು ನಡೆದಿದ್ದು ಗವರ್ನರ್ ಸೆರ್ಗೆಯ್ ಮೆಲಿಕೋವ್ ಇದನ್ನು “ಭಯೋತ್ಪಾದಕ ದಾಳಿ” ಎಂದು ಹೇಳಿದ್ದಾರೆ.

ಅಧಿಕಾರಿಗಳ ಮಾಹಿತಿಯಂತೆ ಮಖಚ್ಕಲಾದಲ್ಲಿ ನಾಲ್ವರು ಮತ್ತು ಡರ್ಬೆಂಟ್‌ನಲ್ಲಿ ಇಬ್ಬರು ಬಂದೂಕುಧಾರಿಗಳನ್ನು ಪೊಲೀಸ್ ಸಿಬ್ಬಂದಿ ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ.

ಗುಂಡಿನ ದಾಳಿಯಲ್ಲಿ ಮೃತಪಟ್ಟವರಲ್ಲಿ ಪೊಲೀಸ್ ಅಧಿಕಾರಿಗಳು, ನಾಗರಿಕರು ಸೇರಿದಂತೆ ಡರ್ಬೆಂಟ್‌ನಲ್ಲಿ 40 ವರ್ಷಗಳಿಗಳಿಗೂ ಹೆಚ್ಚು ಕಾಲ ಕರ್ತವ್ಯ ನಿರ್ವಹಿಸಿದ ಆರ್ಥೊಡಾಕ್ಸ್ ಪಾದ್ರಿ ಕೂಡ ಸೇರಿದ್ದಾರೆ ಎಂದು ಮೆಲಿಕೋವ್ ಹೇಳಿದರು.

ಘಾತಯೇ ಕುರಿತು ಟೆಲಿಗ್ರಾಮ್ ಮಾಹಿತಿ ಹಂಚಿಕೊಂಡ ಮೆಲಿಕೋವ್ ಭಾನುವಾರ ಸಂಜೆ ದಾಳಿಕೋರರ ತಂಡ ಡರ್ಬೆಂಟ್ ಮತ್ತು ಮಖಚ್ಕಲಾದಲ್ಲಿ ಗುಂಡಿನ ದಾಳಿ ನಡೆಸುವ ಮೂಲಕ ಇಲ್ಲಿನ ಪರಿಸ್ಥಿತಿಯನ್ನು ಅಸ್ಥಿರಗೊಳಿಸಲು ಯತ್ನಿಸಲಾಗಿದೆ, ಈ ಭಯೋತ್ಪಾದಕ ದಾಳಿಯ ಹಿಂದೆ ಯಾರಿದ್ದಾರೆ ಮತ್ತು ಅವರು ಯಾವ ಉದ್ದೇಶವನ್ನು ಇಟ್ಟುಕೊಂಡು ಈ ದಾಳಿ ನಡೆಸಿದ್ದಾರೆ ಎಂಬುದು ನಮಗೆ ಚೆನ್ನಾಗಿ ಅರಿತಿದೆ, ಇದು ಯುದ್ಧದ ಮುನ್ಸೂಚನೆಯೂ ಆಗಿರಬಹುದು ಯಾವುದಕ್ಕೂ ನಾವು ಸಿದ್ದರಿದ್ದೇವೆ ಎಂದು ರಷ್ಯಾ-ಉಕ್ರೇನ್ ನಡುವಿನ ಸಂಘರ್ಷದ ವಿಚಾರವನ್ನು ಮುಂದಿಟ್ಟುಕೊಂಡು ವಿಚಾರ ಪ್ರಸ್ತಾಪಿಸಿದ್ದಾರೆ.

ಡರ್ಬೆಂಟ್ ಮತ್ತು ಮಖಚ್ಕಲಾದಲ್ಲಿ ನಮ್ಮ ತಂಡ ಕಾರ್ಯಾಚರಣೆ ನಡೆಸಿ ಆರು ಭಯೋತ್ಪಾದಕರನ್ನು ಮಟ್ಟ ಹಾಕಿದೆ ಅಲ್ಲದೆ ಭಯೋತ್ಪಾದಕರ ದಮನಕ್ಕೆ ಕಾರ್ಯಾಚರಣೆ ಕೂಡ ನಡೆಯುತ್ತಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Daily Horoscope: ಉದ್ಯೋಗಕ್ಕಾಗಿ ಕಾಯುತ್ತಿರುವವರಿಗೆ ಸೂಕ್ತ ಮಾರ್ಗದರ್ಶನ ಲಭ್ಯ

ಟಾಪ್ ನ್ಯೂಸ್

Parameshwar

Congress Party; ನೋಟಿಸ್‌ ಯಾಕೆ ಕೊಡ್ತೀರಿ ಅಂತಾ ಹೇಳಬೇಕು: ಡಾ.ಜಿ.ಪರಮೇಶ್ವರ್‌

Indian based businessman arrested in 8300 crore scam

8300 ಕೋಟಿ ಹಗರಣದಲ್ಲಿ ಭಾರತ ಮೂಲದ ಉದ್ಯಮಿ ಬಂಧನ

Sunil-kumar

CM Siddaramaiah; ಅನುದಾನ ಹಿಂಪಡೆದಂತೆ ಸೈಟ್‌ ವಾಪಸ್‌ ಕೊಡಿ: ಸುನಿಲ್‌ ವ್ಯಂಗ್ಯ

Shivaraj-Thangadagi

Government: ಗಟ್ಟಿತನ ಇದ್ದುದರಿಂದಲೇ ಜಾತಿಗಣತಿ ವರದಿ ಸ್ವೀಕಾರ- ತಂಗಡಗಿ

Dr.Sudhakar

Lokasabha: ಚಿಕ್ಕಬಳ್ಳಾಪುರದಲ್ಲಿ ರಾಷ್ಟ್ರೀಯ ಪುಷ್ಪ ಮಂಡಳಿ; ಡಾ.ಕೆ.ಸುಧಾಕರ್‌ ಪ್ರಸ್ತಾಪ

Bhovi Community ಜು. 20ಕ್ಕೆ ದೀಕ್ಷಾ ರಜತ ಮಹೋತ್ಸವ: ಲಿಂಬಾವಳಿ

Bhovi Community ಜು. 20ಕ್ಕೆ ದೀಕ್ಷಾ ರಜತ ಮಹೋತ್ಸವ: ಲಿಂಬಾವಳಿ

Congress ಸ್ಥಾನಮಾನ ಬೇಕಿದ್ರೆ ವರಿಷ್ಠರ ಬಳಿ ಕೇಳಬೇಕು: ರಾಜಣ್ಣಗೆ ಕೃಷ್ಣ ಬೈರೇಗೌಡ ತಿರುಗೇಟು

Congress ಸ್ಥಾನಮಾನ ಬೇಕಿದ್ರೆ ವರಿಷ್ಠರ ಬಳಿ ಕೇಳಬೇಕು: ರಾಜಣ್ಣಗೆ ಕೃಷ್ಣ ಬೈರೇಗೌಡ ತಿರುಗೇಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Indian based businessman arrested in 8300 crore scam

8300 ಕೋಟಿ ಹಗರಣದಲ್ಲಿ ಭಾರತ ಮೂಲದ ಉದ್ಯಮಿ ಬಂಧನ

Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್‌ ವಂಚನೆ, ಹೂಡಿಕೆದಾರರು ಕಂಗಾಲು!

Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್‌ ವಂಚನೆ, ಹೂಡಿಕೆದಾರರು ಕಂಗಾಲು!

Exam

Australia;ಇನ್ನು ವಿದ್ಯಾರ್ಥಿ ಶುಲ್ಕ ದುಪ್ಪಟ್ಟು: ಭಾರತೀಯರಿಗೂ ಸಂಕಷ್ಟ

arrested

POK ರಾವಲ್‌ಕೋಟ್‌ ಜೈಲಿಂದ 18 ಕೈದಿಗಳು ಪರಾರಿ!

1-kim-un-jang

North Korea; ದಕ್ಷಿಣ ಕೊರಿಯ ಹಾಡು ಕೇಳಿದ ಯುವಕನ ಶಿರಚ್ಛೇದ!

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

Parameshwar

Congress Party; ನೋಟಿಸ್‌ ಯಾಕೆ ಕೊಡ್ತೀರಿ ಅಂತಾ ಹೇಳಬೇಕು: ಡಾ.ಜಿ.ಪರಮೇಶ್ವರ್‌

Young couple who ready to fly Canada captured in delhi

ಕೆನಡಾಗೆ ಹೊರಟಿದ್ದ ಯುವ ದಂಪತಿ ಸೆರೆ!

Indian based businessman arrested in 8300 crore scam

8300 ಕೋಟಿ ಹಗರಣದಲ್ಲಿ ಭಾರತ ಮೂಲದ ಉದ್ಯಮಿ ಬಂಧನ

Government should promote prevention of uterine cancer: Sudha Murthy

Rajyasabha; ಗರ್ಭಕೋಶ ಕ್ಯಾನ್ಸರ್‌ ತಡೆಗಟ್ಟಲು ಸರ್ಕಾರ ಉತ್ತೇಜಿಸಬೇಕು: ಸುಧಾಮೂರ್ತಿ

Sunil-kumar

CM Siddaramaiah; ಅನುದಾನ ಹಿಂಪಡೆದಂತೆ ಸೈಟ್‌ ವಾಪಸ್‌ ಕೊಡಿ: ಸುನಿಲ್‌ ವ್ಯಂಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.