Hajj: ಮೆಕ್ಕಾದಲ್ಲಿ ಬಿಸಿಲ ತಾಪ: ಭಾರತದ 98ಯಾತ್ರಿಕರು ಸೇರಿ ಮೃತರ ಸಂಖ್ಯೆ 1,301ಕ್ಕೆ ಏರಿಕೆ


Team Udayavani, Jun 24, 2024, 9:32 AM IST

Hajj: ಮೆಕ್ಕಾದಲ್ಲಿ ಬಿಸಿಲ ತಾಪ: ಭಾರತದ 98ಯಾತ್ರಿಕರು ಸೇರಿ ಮೃತರ ಸಂಖ್ಯೆ 1,301ಕ್ಕೆ ಏರಿಕೆ

ಮೆಕ್ಕಾ: ಸೌದಿ ಅರೇಬಿಯಾದಲ್ಲಿ ಹಜ್ ಯಾತ್ರಿಕರ ಸಾವಿನ ಸಂಖ್ಯೆ ನಿರಂತರವಾಗಿ ಹೆಚ್ಚುತ್ತಿದೆ. ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಬಿಸಿಲಿನ ಬೇಗೆಯಿಂದ ಈ ವರ್ಷ 1,301 ಹಜ್ ಯಾತ್ರಿಕರು ಮೃತಪಟ್ಟಿರುವುದಾಗಿ ವರದಿಯಾಗಿದೆ.

ಭಾನುವಾರ, ಸೌದಿ ಆರೋಗ್ಯ ಸಚಿವ ಫಹದ್ ಬಿನ್ ಅಬ್ದುರ್ರಹ್ಮಾನ್ ಅಲ್-ಜಲಾಜೆಲ್ ಅವರು ನೀಡಿರುವ ಮಾಹಿತಿ ಪ್ರಕಾರ ಮೃತಪಟ್ಟ 1,301ರಲ್ಲಿ 83% ಯಾತ್ರಿಕರು ಅನಧಿಕೃತವಾಗಿ ಬಂದವರು ಅಂದರೆ ನೋಂದಣಿ ಮಾಡಿಕೊಳ್ಳದೆ ಬಂದವರಾಗಿದ್ದು ಇಲ್ಲಿ ಅವರಿಗೆ ಉಳಿದುಕೊಳ್ಳಲು ಸರಿಯಾದ ವ್ಯವಸ್ಥೆ ಇಲ್ಲದೆ ಮೃತಪಟ್ಟಿರುವುದಾಗಿ ಹೇಳಿಕೊಂಡಿದ್ದಾರೆ.

ಘಟನೆ ಕುರಿತು ಹೇಳಿಕೆ ನೀಡಿರುವ ಸಚಿವರು, 95 ಯಾತ್ರಿಕರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ, ಅವರಲ್ಲಿ ಕೆಲವರನ್ನು ರಾಜಧಾನಿ ರಿಯಾದ್‌ನಲ್ಲಿ ಚಿಕಿತ್ಸೆಗಾಗಿ ವಿಮಾನದಲ್ಲಿ ಕಳುಹಿಸಲಾಗಿದೆ ಎಂದು ಹೇಳಿದರು. ಸೌದಿಯಲ್ಲಿ ಹಜ್ ಯಾತ್ರಿಕರು ಮೃತಪಟ್ಟರೆ ಅಂತವರನ್ನು ಗುರುತಿಸುವುದು ಅತ್ಯಂತ ಕಷ್ಟಕರವಾದ ಕೆಲಸವಾಗಿದೆ ಏಕೆಂದರೆ ಮೃತ ವ್ಯಕ್ತಿಗಳು ನೋಂದಣಿ ಮಾಡದೇ ಬಂದಿರುವುದರಿಂದ ಅವರ ಬಳಿ ಯಾವುದೇ ಅಧಿಕೃತ ದಾಖಲೆಗಳು ಇರುವುದಿಲ್ಲ ಹಾಗಾಗಿ ಗುರುತು ಪತ್ತೆಹಚ್ಚುವ ಕೆಲಸ ಕಷ್ಟ ಎಂದು ಹೇಳಿದ್ದಾರೆ. ಗುರುತು ಪತ್ತೆ ಹಚ್ಚಲಾಗದ ಯಾತ್ರಾರ್ಥಿಗಳನ್ನು ಮೆಕ್ಕಾದಲ್ಲಿ ಸಮಾಧಿ ಮಾಡಲಾಗಿದೆ ಎಂದು ಸಚಿವರು ಹೇಳಿದ್ದಾರೆ.

ಮೃತರಲ್ಲಿ ಈಜಿಪ್ಟ್ ನಾಗರಿಕರೇ ಹೆಚ್ಚು:
ಬಿಸಿಲಿನ ತಾಪಕ್ಕೆ ಮೆಕ್ಕಾದಲ್ಲಿ ಮೃತಪಟ್ಟವರಲ್ಲಿ 660ಕ್ಕೂ ಹೆಚ್ಚು ಈಜಿಪ್ಟ್ ನಾಗರಿಕರು ಸೇರಿದ್ದಾರೆ ಎಂದು ಕೈರೋದಲ್ಲಿ ಸೌದಿ ಸರ್ಕಾರಿ ಅಧಿಕಾರಿಗಳು ತಿಳಿಸಿದ್ದಾರೆ. ಇವರಲ್ಲಿ 31 ಮಂದಿಯನ್ನು ಹೊರತುಪಡಿಸಿ ಎಲ್ಲರೂ ಅನಧಿಕೃತ ಯಾತ್ರಿಗಳು. ಸೌದಿ ಅರೇಬಿಯಾದಲ್ಲಿ ಹಲವಾರು ಅನಧಿಕೃತ ಹಜ್ ಯಾತ್ರಾರ್ಥಿಗಳು ಸಾವನ್ನಪ್ಪಿದ ನಂತರ, ಅನಧಿಕೃತ ಯಾತ್ರಿಕರಿಗೆ ಸೌದಿ ಅರೇಬಿಯಾಕ್ಕೆ ಪ್ರಯಾಣಿಸಲು ಸಹಾಯ ಮಾಡುತ್ತಿದ್ದ 16 ಟ್ರಾವೆಲ್ ಏಜೆನ್ಸಿಗಳ ಪರವಾನಗಿಯನ್ನು ಈಜಿಪ್ಟ್ ರದ್ದುಗೊಳಿಸಿದೆ. ಅಡಿಕ್ರಿಗಳ ಮಾಹಿತಿ ಪ್ರಕಾರ ಮೆಕ್ಕಾದ ಅಲ್-ಮುಯಿಸ್ಸಾಮ್ ಪ್ರದೇಶದಲ್ಲಿ ಇರುವ ತುರ್ತು ಸಂಕೀರ್ಣದಲ್ಲಿ ಹೆಚ್ಚಿನ ಸಾವು ಸಂಭವಿಸಿವೆ ಎಂದು ಹೇಳಿದ್ದಾರೆ.

ಈ ವರ್ಷ ಈಜಿಪ್ಟ್ ಮೆಕ್ಕಾಕ್ಕೆ 50 ಸಾವಿರಕ್ಕೂ ಹೆಚ್ಚು ಅಧಿಕೃತ ಯಾತ್ರಿಕರನ್ನು ಕಳುಹಿಸಿದೆ.

ಮೃತರಲ್ಲಿ ಹೆಚ್ಚುನವರು ಕಾಲ್ನಡಿಗೆ ಮಾಡಿದವರು:
ಸೌದಿ ಅಧಿಕಾರಿಗಳು ನೋಂದಣಿ ಮಾಡದೇ ಬರುತ್ತಿರುವ ಯಾತ್ರಿಕರ ಮೇಲೆ ಕಠಿಣ ಕ್ರಮ ಕೈಗೊಂಡಿದ್ದರೂ ಇದರ ಹೊರತಾಗಿಯೂ, ಹೆಚ್ಚಿನ ಸಂಖ್ಯೆಯ ಈಜಿಪ್ಟ್ ಯಾತ್ರಿಕರು ಮೆಕ್ಕಾ ಮತ್ತು ಅದರ ಸುತ್ತಮುತ್ತಲಿನ ಪವಿತ್ರ ಸ್ಥಳಗಳನ್ನು ತಲುಪುವಲ್ಲಿ ಯಶಸ್ವಿಯಾದರು. ಈ ಯಾತ್ರಾರ್ಥಿಗಳಲ್ಲಿ ಹೆಚ್ಚಿನವರು ಕಾಲ್ನಡಿಗೆಯಲ್ಲಿ ಮೆಕ್ಕಾವನ್ನು ತಲುಪಿದರು, ಇದರಿಂದಾಗಿ ಅವರು ಬಿಸಿಲಿನ ಶಾಖದಿಂದ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.

ಮೃತರು ಯಾವ ದೇಶಕ್ಕೆ ಸೇರಿದವರು:
ಮಾಧ್ಯಮ ವರದಿಯ ಪ್ರಕಾರ ಮೃತರಲ್ಲಿ ಈಜಿಪ್ಟ್ ನ 660, ಇಂಡೋನೇಷ್ಯಾದ 165, ಭಾರತದ 98 ಯಾತ್ರಿಕರು ಮತ್ತು ಜೋರ್ಡಾನ್, ಟ್ಯುನಿಷಿಯಾ, ಮೊರಾಕೊ, ಅಲ್ಜೀರಿಯಾ ಮತ್ತು ಮಲೇಷ್ಯಾದ ಡಜನ್ಗಟ್ಟಲೆ ಯಾತ್ರಿಕರು ಸೇರಿದ್ದಾರೆ.

ಇದನ್ನೂ ಓದಿ: Russia: ಡಾಗೆಸ್ತಾನ್‌ನಲ್ಲಿ ಭಯೋತ್ಪಾದಕರ ದಾಳಿ, ಪಾದ್ರಿ, ಪೊಲೀಸರು ಸೇರಿ 15 ಮಂದಿ ಮೃತ್ಯು

ಟಾಪ್ ನ್ಯೂಸ್

Thirthahalli: ಗಾಳಿ ಮಳೆಯ ಅಬ್ಬರಕ್ಕೆ ಕುಸಿದು ಬಿತ್ತು ಯಕ್ಷಗಾನ ಕಲಾವಿದನ ಮನೆ

Thirthahalli: ಗಾಳಿ ಮಳೆಯ ಅಬ್ಬರಕ್ಕೆ ಕುಸಿದು ಬಿತ್ತು ಯಕ್ಷಗಾನ ಕಲಾವಿದನ ಮನೆ

Karavali; ಕೋಣಗಳ ಮತ್ತೆ ಕುಳಿತ ಪ್ರಜ್ವಲ್; ಹೊಸ ಪೋಸ್ಟರ್ ಬಂತು

Karavali; ಕೋಣಗಳ ಮತ್ತೆ ಕುಳಿತ ಪ್ರಜ್ವಲ್; ಹೊಸ ಪೋಸ್ಟರ್ ಬಂತು

Kumata: ಭಾರಿ ಮಳೆಗೆ ನದಿಗಳಲ್ಲಿ ನೀರಿನ ಮಟ್ಟ ಏರಿಕೆ… ನೆರೆ ಭೀತಿ

Kumata: ಭಾರಿ ಮಳೆಗೆ ನದಿಗಳಲ್ಲಿ ನೀರಿನ ಮಟ್ಟ ಏರಿಕೆ… ನೆರೆ ಭೀತಿ

Stock Market: ಮುಂದುವರಿದ ಷೇರುಪೇಟೆ ನಾಗಾಲೋಟ-80,000 ಅಂಕ ದಾಟಿದ ಸೆನ್ಸೆಕ್ಸ್

Stock Market: BSE@80,130.53- ಮುಂದುವರಿದ ಷೇರುಪೇಟೆ ನಾಗಾಲೋಟ…

thief

Sorry… ತಿಂಗಳೊಳಗೆ ಕದ್ದ ವಸ್ತು ಹಿಂತಿರುಗಿಸುವೆ, ಪತ್ರ ಬರೆದು ಮನೆಗೆ ಕನ್ನ ಹಾಕಿದ ಕಳ್ಳ

10-honanvar

ಗುಡ್ಡ ಕುಸಿತ: ಹೊನ್ನಾವರದಿಂದ ಗೇರುಸೊಪ್ಪ, ಸಾಗರ, ಶಿವಮೊಗ್ಗ ಮಾರ್ಗದ ಸಂಚಾರ ಸ್ಥಗಿತ

9-Bantwala

Bantwala: ರಾಮಲಕಟ್ಟೆ: ಡಿವೈಡರ್ ಗೆ ಢಿಕ್ಕಿಯಾದ ಖಾಸಗಿ ಬಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pak ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ: ಇಮ್ರಾನ್‌ ಖುಲಾಸೆ

Pak ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ: ಇಮ್ರಾನ್‌ ಖುಲಾಸೆ

UK Election 2024: ಇಂದು ಬ್ರಿಟನ್‌ನಲ್ಲಿ ಸಂಸತ್‌ ಚುನಾವಣೆ… ನಾಳೆ ಫ‌ಲಿತಾಂಶ

UK Election 2024: ಇಂದು ಬ್ರಿಟನ್‌ನಲ್ಲಿ ಸಂಸತ್‌ ಚುನಾವಣೆ… ನಾಳೆ ಫ‌ಲಿತಾಂಶ

1-sadsad

Italy; ಕೈ ತುಂಡಾದ ಭಾರತೀಯ ಕಾರ್ಮಿಕನನ್ನು ರಸ್ತೆಗೆ ಎಸೆದ ಮಾಲಕ ಅರೆಸ್ಟ್

Indian based businessman arrested in 8300 crore scam

8300 ಕೋಟಿ ಹಗರಣದಲ್ಲಿ ಭಾರತ ಮೂಲದ ಉದ್ಯಮಿ ಬಂಧನ

Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್‌ ವಂಚನೆ, ಹೂಡಿಕೆದಾರರು ಕಂಗಾಲು!

Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್‌ ವಂಚನೆ, ಹೂಡಿಕೆದಾರರು ಕಂಗಾಲು!

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Thirthahalli: ಗಾಳಿ ಮಳೆಯ ಅಬ್ಬರಕ್ಕೆ ಕುಸಿದು ಬಿತ್ತು ಯಕ್ಷಗಾನ ಕಲಾವಿದನ ಮನೆ

Thirthahalli: ಗಾಳಿ ಮಳೆಯ ಅಬ್ಬರಕ್ಕೆ ಕುಸಿದು ಬಿತ್ತು ಯಕ್ಷಗಾನ ಕಲಾವಿದನ ಮನೆ

Karavali; ಕೋಣಗಳ ಮತ್ತೆ ಕುಳಿತ ಪ್ರಜ್ವಲ್; ಹೊಸ ಪೋಸ್ಟರ್ ಬಂತು

Karavali; ಕೋಣಗಳ ಮತ್ತೆ ಕುಳಿತ ಪ್ರಜ್ವಲ್; ಹೊಸ ಪೋಸ್ಟರ್ ಬಂತು

Kumata: ಭಾರಿ ಮಳೆಗೆ ನದಿಗಳಲ್ಲಿ ನೀರಿನ ಮಟ್ಟ ಏರಿಕೆ… ನೆರೆ ಭೀತಿ

Kumata: ಭಾರಿ ಮಳೆಗೆ ನದಿಗಳಲ್ಲಿ ನೀರಿನ ಮಟ್ಟ ಏರಿಕೆ… ನೆರೆ ಭೀತಿ

Crime: ಕುಡಿದಿದ್ದಕ್ಕೆ ಕಾಲೇಜಿಗೆ ಬಿಡಲ್ಲ ಎಂದ ಸೆಕ್ಯುರಿಟಿಯನ್ನು ಕೊಂದ ವಿದ್ಯಾರ್ಥಿ!

Crime: ಕುಡಿದಿದ್ದಕ್ಕೆ ಕಾಲೇಜಿಗೆ ಬಿಡಲ್ಲ ಎಂದ ಸೆಕ್ಯುರಿಟಿಯನ್ನು ಕೊಂದ ವಿದ್ಯಾರ್ಥಿ!

Love Matter: ಕೈಗೆ ಹಗ್ಗ ಕಟ್ಟಿಕೊಂಡು ಕೆರೆಗೆ ಹಾರಿ ಪ್ರೇಮಿಗಳಿಬ್ಬರ ಆತ್ಮಹತ್ಯೆ

Love Matter: ಕೈಗೆ ಹಗ್ಗ ಕಟ್ಟಿಕೊಂಡು ಕೆರೆಗೆ ಹಾರಿ ಪ್ರೇಮಿಗಳಿಬ್ಬರ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.