![Tragedy: ಯುವಕನಿಗೆ ನಿದ್ದೆಯಲ್ಲಿ ನಡೆಯುವ ಅಭ್ಯಾಸ… ಆರನೇ ಮಹಡಿಯಿಂದ ಬಿದ್ದು ಮೃತಪಟ್ಟ](https://www.udayavani.com/wp-content/uploads/2024/07/mumbai-1-415x277.jpg)
Kasaragod; ಹಾಸ್ಯ ಸಾಹಿತಿ ಕಕ್ಕೆಪ್ಪಾಡಿ ಶಂಕರನಾರಾಯಣ ಭಟ್ ನಿಧನ
Team Udayavani, Jun 24, 2024, 11:36 AM IST
![writer Kakkappadi Shankaranarayan Bhat passes away](https://www.udayavani.com/wp-content/uploads/2024/06/kakkepdyai-620x342.jpg)
ಕಾಸರಗೋಡು: ಹಾಸ್ಯ ಸಾಹಿತಿ ಕೊಟ್ಯಾಡಿ ಸಮೀಪದ ಕಕ್ಕೆಪ್ಪಾಡಿ ಶಂಕರನಾರಾಯಣ ಭಟ್ (82) ಜೂ. 21ರಂದು ಅನಾರೋಗ್ಯದಿಂದ ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರು ಮೂವರು ಪುತ್ರರನ್ನು ಅಗಲಿದ್ದಾರೆ.
ಅವರು ಕೃಷಿಕರು, ಖ್ಯಾತ ಪಶು ನಾಟಿವೈದ್ಯ, ಯಕ್ಷಗಾನ ಕಲಾವಿದ ಹಾಗೂ ಜನಾನುರಾಗಿ ಹಾಸ್ಯ ಸಾಹಿತಿಯಾಗಿದ್ದರು. ಆಶು ಚುಟುಕು ರಚನೆ ಹವ್ಯಾಸವಾಗಿತ್ತು.
ಅವರಿಗೆ ಸಿರಿಬಾಗಿಲು ವೆಂಕಪ್ಪಯ್ಯ ಸ್ಮಾರಕ ಪ್ರಶಸ್ತಿ, ಸುಳ್ಯದ ಚಂದನ ಸಾಹಿತ್ಯ ಪ್ರಶಸ್ತಿಗಳು ಲಭಿಸಿವೆ. ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತಿನಿಂದ ಸಮ್ಮಾನ, ಮೂಡುಬಿದಿರೆಯ ಆಳ್ವಾಸ್ ನುಡಿಸಿರಿಯಲ್ಲಿ ನಡೆದ ನಾಟಿವೈದ್ಯ ಸಮ್ಮೇಳನದಲ್ಲಿ ಸಮ್ಮಾನ ಸೇರಿದಂತೆ ಅನೇಕ ಕಡೆಗಳಲ್ಲಿ ಸಮ್ಮಾನಿತರಾಗಿದ್ದಾರೆ.
ಅವರ ರಚನೆಗಳು ಚುಟುಕು ರಸಾಯನ, ಹಳಬರ ಜೋಳಿಗೆ, ಹೂಬಾಣ, ನೇಸರ ಮೊದಲಾದ ಪತ್ರಿಕೆಗಳಲ್ಲಿ ಪ್ರಕಟವಾಗಿವೆ.
ಟಾಪ್ ನ್ಯೂಸ್
![Tragedy: ಯುವಕನಿಗೆ ನಿದ್ದೆಯಲ್ಲಿ ನಡೆಯುವ ಅಭ್ಯಾಸ… ಆರನೇ ಮಹಡಿಯಿಂದ ಬಿದ್ದು ಮೃತಪಟ್ಟ](https://www.udayavani.com/wp-content/uploads/2024/07/mumbai-1-415x277.jpg)
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.