Rabkavi-Banhatti; ಉದ್ಘಾಟನೆಗೆ ಕಾಯುತ್ತಿರುವ ಬಸ್ ನಿಲ್ದಾಣ: ಪ್ರಯಾಣಿಕರ ಪರದಾಟ

ಬಸ್ ನಿಲ್ದಾಣದಲ್ಲಿ ನಿಲ್ಲಲು ಮತ್ತು ಕುಳಿತುಕೊಳ್ಳಲು ಸ್ಥಳವೇ ಇಲ್ಲ; ವಿದ್ಯಾರ್ಥಿಗಳಿಗೆ ದಿನನಿತ್ಯದ ತೊಂದರೆ

Team Udayavani, Jun 24, 2024, 8:19 PM IST

Rabkavi-Banhatti; ಉದ್ಘಾಟನೆಗೆ ಕಾಯುತ್ತಿರುವ ಬಸ್ ನಿಲ್ದಾಣ: ಪ್ರಯಾಣಿಕರ ಪರದಾಟ

ರಬಕವಿ ಬನಹಟ್ಟಿ: ಬನಹಟ್ಟಿ ಬಸ್ ನಿಲ್ದಾಣದ ಕಾಮಗಾರಿ ಪೂರ್ಣಗೊಂಡರೂ ಇನ್ನೂ ಉದ್ಘಾಟನೆಯಾಗದೆ ಇರುವುದರಿಂದ ಪ್ರಯಾಣಿಕರಿಗೆ ಮತ್ತು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಬಹಳಷ್ಟು ತೊಂದರೆಯಾಗುತ್ತಿದೆ.

ಹಳೇ ಕಟ್ಟಡ ಕೆಡವಿದ್ದು ಬಸ್ ನಿಲ್ಧಾಣಕ್ಕೆ ಬರುವ ಪ್ರಯಾಣಿಕರು ನಿಂತುಕೊಂಡೇ ಬಸ್ ಗಾಗಿ ಕಾಯುವ ಪರಿಸ್ಥಿತಿ ನಿರ್ಮಾಣಗೊಂಡಿದೆ. ಅದರಲ್ಲೂ ಹಿರಿಯ ವ್ಯಕ್ತಿಗಳಿಗೆ ಮತ್ತು ಚಿಕ್ಕ ಮಕ್ಕಳಿಗೆ ಬಿಸಿಲು ಮತ್ತು ಮಳೆಯಿಂದಾಗಿ ಬಹಳಷ್ಟು ತೊಂದರೆಯಾಗಿದೆ. ವ್ಯವಸ್ಥಿತವಾಗಿ ಬಸ್ ಗಳು ನಿಂತುಕೊಳ್ಳಲು ಸ್ಥಳಾವಕಾಶ ಇಲ್ಲದಂತಾಗಿದೆ.

ದಿನನಿತ್ಯ ಶಾಲಾ ಕಾಲೇಜುಗಳನ್ನು ಮುಗಿಸಿಕೊಂಡು ಮನೆಗಳಿಗೆ ತೆರಳುವ ವಿದ್ಯಾರ್ಥಿಗಳು ತಮ್ಮ ಗ್ರಾಮಗಳ ಬಸ್ ಬರುವವರೆಗೂ ನಿಂತುಕೊಳ್ಳಬೇಕಾಗಿದೆ. ಕೆಲವು ಬಾರಿ ಗಂಟೆಗಟ್ಟಲೇ ನಿಂತುಕೊಂಡು ಕಾಯಬೇಕಾಗಿದೆ.

ಸದ್ಯ ಮಳೆಗಾಲ ಇರುವುದರಿಂದ ಪ್ರಯಾಣಿಕರಿಗೆ ಮತ್ತು ವಿದ್ಯಾರ್ಥಿನಿಯರಿಗೆ ಮತ್ತಷ್ಟು ಸಮಸ್ಯೆಯಾಗಿದೆ. ಹಳೆಯ ಬಸ್ ನಿಲ್ದಾಣ ಕಟ್ಟಡವನ್ನು ಸಂಪೂರ್ಣವಾಗಿ ತೆಗೆದು ಹಾಕಿದ್ದರಿಂದ ಮಳೆ ಮತ್ತು ಗಾಳಿಯಿಂದ ರಕ್ಷಣೆ ಪಡೆದುಕೊಳ್ಳಲು ಯಾವುದೆ ವ್ಯವಸ್ಥೆಗಳು ಬಸ್ ನಿಲ್ದಾಣದಲ್ಲಿ ಇಲ್ಲವಾಗಿವೆ.

ಕೆಡವಿದ ಹಳೆಯ ಬಸ್ ನಿಲ್ಧಾಣದ ಕಟ್ಟಡದಲ್ಲಿರುವ ಪ್ರದೇಶವನ್ನು ಇನ್ನಷ್ಟು ಸ್ವಚ್ಛ ಮಾಡಬೇಕಾಗಿದೆ.

ನೂತನ ಬಸ್ ನಿಲ್ದಾಣದಲ್ಲಿ ನಿರ್ಮಾಣ ಮಾಡಲಾಗಿರುವ ಶೌಚಾಲಯಗಳು ಕೂಡಾ ಪ್ರಯಾಣಿಕರಿಗೆ ಲಭ್ಯವಿಲ್ಲ. ಇದು ಕೂಡಾ ಸಮಸ್ಯೆಯಾಗಿದೆ. ಬಹಳಷ್ಟು ಜನರು ಬಸ್ ನಿಲ್ದಾಣದ ಹಿಂದಿರುವ ಪ್ರದೇಶದಲ್ಲಿ ಮೂತ್ರ ವಿಸರ್ಜನೆಯನ್ನು ಮಾಡುತ್ತಿದ್ದಾರೆ. ಇದರಿಂದಾಗಿ ಬಸ್ ನಿಲ್ದಾಣ ಗಬ್ಬೆದ್ದು ನಾರುತ್ತಿದೆ.

ಆದ್ದರಿಂದ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಇತ್ತ ಗಮನ ನೀಡಿ ಆದಷ್ಟು ಬೇಗನೆ ಬಸ್ ನಿಲ್ದಾಣದ ಉದ್ಘಾಟನೆಗೆ ಕ್ರಮ ತೆಗೆದುಕೊಳ್ಳಬೇಕು ಎಂದು ಸ್ಥಳೀಯರಾದ ಬಸವರಾಜ ಪುಟಾಣಿ, ಗೋಪಾಲ ಭಟ್ಟಡ, ಪ್ರಕಾಶ ಹೋಳಗಿ, ಎಸ್.ಎಂ.ಫಕೀರಪೂರ, ಅವಿನಾಶ ಹಟ್ಟಿ, ಮಹಾಶಾಂತ ಶೆಟ್ಟಿ, ಗೌರಿ ಮಿಳ್ಳಿ ಸೇರಿದಂತೆ ಅನೇಕರು ಆಗ್ರಹಿಸಿದ್ದಾರೆ.

ರಬಕವಿ ಮತ್ತು ಬನಹಟ್ಟಿಯಲ್ಲಿ ನಿರ್ಮಾಣ ಮಾಡಲಾಗಿರುವ ಬಸ್ ನಿಲ್ದಾಣಗಳ ಉದ್ಘಾಟನೆಯನ್ನು ನೆರವೇರಿಸಲು ಬಾಗಲಕೋಟೆಯ ಸಾರಿಗೆ ಇಲಾಖೆಯ ಜಿಲ್ಲಾ ಮುಖ್ಯಸ್ಥರ ಗಮನಕ್ಕೆ ತೆಗೆದುಕೊಂಡು ಬರಲಾಗಿದೆ. ಎರಡು ಬಸ್ ನಿಲ್ದಾಣಗಳನ್ನು ಪರಿಶೀಲಿಸುವಂತೆ ತಿಳಿಸಿದ್ಧೇನೆ. ಸಾರಿಗೆ ಇಲಾಖೆಯ ಸಚಿವರನ್ನು ಉದ್ಘಾಟನೆಗೆ ಕರೆಯಿಸಿ ಆದಷ್ಟು ಬೇಗನೆ ಉದ್ಘಾಟನೆಯನ್ನು ನೆರವೇರಿಸುವಂತೆ ಅಧಿಕಾರಿಗಳ ಜೊತೆಗೆ ಚರ್ಚಿಸಿದ್ಧೇನೆ.
-ಸಿದ್ದು ಸವದಿ, ಶಾಸಕ ತೇರದಾಳ ಮತಕ್ಷೇತ್ರ

-ಕಿರಣ ಶ್ರೀಶೈಲ ಆಳಗಿ

ಟಾಪ್ ನ್ಯೂಸ್

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

vidhana-Soudha

Cabinet Decission: ಏಳು ತಾಲೂಕುಗಳಲ್ಲಿ 100 ಹಾಸಿಗೆಗಳ ಆಸ್ಪತ್ರೆ

CM-Siddaramaiah

CM Siddaramaiah: ಮುಡಾ ಹಗರಣದಲ್ಲಿ ನನ್ನ ತಪ್ಪಿಲ್ಲ

Heavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟHeavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟ

Heavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟ

Heavy Rain ನಾವುಂದ, ಸಾಲ್ಬುಡಾ, ಅರೆಹೊಳೆ ಜಲಾವೃತ; ನೂರಕ್ಕೂ ಮಿಕ್ಕಿ ಮನೆಗಳು ದಿಗ್ಬಂಧನ

Heavy Rain ನಾವುಂದ, ಸಾಲ್ಬುಡಾ, ಅರೆಹೊಳೆ ಜಲಾವೃತ; ನೂರಕ್ಕೂ ಮಿಕ್ಕಿ ಮನೆಗಳು ದಿಗ್ಬಂಧನ

BJP Meeting; ತಾಕತ್ತಿದ್ದರೆ ಚುನಾವಣೆಗೆ ಬನ್ನಿ: ಬಿ.ಎಸ್‌.ಯಡಿಯೂರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ವಿಪತ್ತು ನಿರ್ವಹಣೆಗೆ ಸೂಕ್ತ ಮುಂಜಾಗ್ರತಾ ಕ್ರಮ ಅಗತ್ಯ: ಈರಣ್ಣ

Rain ವಿಪತ್ತು ನಿರ್ವಹಣೆಗೆ ಸೂಕ್ತ ಮುಂಜಾಗ್ರತಾ ಕ್ರಮ ಅಗತ್ಯ: ಈರಣ್ಣ

Plastic ತ್ಯಾಜ್ಯ ಮನುಕುಲಕ್ಕೆ ಮಾರಕ: ಫ್ರಾನ್ಸ್ ದೇಶದ ವಿದ್ಯಾರ್ಥಿ ಸೋರೇನ್‌

Plastic ತ್ಯಾಜ್ಯ ಮನುಕುಲಕ್ಕೆ ಮಾರಕ: ಫ್ರಾನ್ಸ್ ದೇಶದ ವಿದ್ಯಾರ್ಥಿ ಸೋರೇನ್‌

Rabakavi

Irrigation: ರೈತರ ವಿಚಾರದಲ್ಲಿ ರಾಜಕಾರಣ ಮಾಡದಿರಿ: ಸಚಿವ ತಿಮ್ಮಾಪುರ

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ

Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

vidhana-Soudha

Cabinet Decission: ಏಳು ತಾಲೂಕುಗಳಲ್ಲಿ 100 ಹಾಸಿಗೆಗಳ ಆಸ್ಪತ್ರೆ

Rohan Bopanna

Wimbledon tennis match: ಬೋಪಣ್ಣ-ಎಬ್ಡೆನ್‌ ಮುನ್ನಡೆ

1-athli

Paris Olympics; ಆ್ಯತ್ಲೀಟ್‌ ಗಳಿಂದ ಶ್ರೇಷ್ಠ ನಿರ್ವಹಣೆ: ಮೋದಿ ವಿಶ್ವಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.