Davanagere; ಅಲ್ಯೂಮಿನಿಯಂ ವೈರ್ ಕಳ್ಳ 23 ವರ್ಷಗಳ ನಂತರ ಮತ್ತೆ ಬಂಧನ

250 ರೂ. ರೇಡಿಯೋ ಕಳವು ಮಾಡಿದ್ದ ಆರೋಪಿ ಸಾವು; ಪ್ರಕರಣ ಮುಕ್ತಾಯ

Team Udayavani, Jun 24, 2024, 11:18 PM IST

police

ದಾವಣಗೆರೆ: ವಿದ್ಯುತ್ ಕಂಬದಲ್ಲಿನ 45 ಸಾವಿರ ರೂಪಾಯಿ ಮೌಲ್ಯದ ಅಲ್ಯೂಮಿನಿಯಂ ವೈರ್ ಕದ್ದಿದ್ದವನನ್ನು 23 ವರ್ಷಗಳ ನಂತರ ಮತ್ತೆ ಬಂಧಿಸುವಲ್ಲಿ ಹರಿಹರ ಗ್ರಾಮಾಂತರ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.

2001 ರ ಆ. 14 ರಂದು ನಡೆದಿದ್ದ ಕಳ್ಳತನಕ್ಕೆ ಸಂಬಂಧಿಸಿದಂತೆ 23 ವರ್ಷಗಳ ನಂತದ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಶಾಂತಿನಗರ ನಿವಾಸಿ ಎಸ್.ಬಿ. ಪ್ರದೀಪ್ ಎಂಬುವನನ್ನು ಬಂಧಿಸಲಾಗಿದೆ.

ಹರಿಹರ ತಾಲೂಕಿನ ಮಾಜೇನಹಳ್ಳಿ ಬಳಿ ಜಮೀನಿನಲ್ಲಿ ಹಾದು ಹೋಗಿರುವ ವಿದ್ಯುತ್ ಕಂಬದಲ್ಲಿದ್ದ 45 ಸಾವಿರ ರೂಪಾಯಿ ಬೆಲೆಯ 60 ಕೆಜಿ ಅಲ್ಯೂಮಿನಿಯಂ ವೈರ್ ಕಳ್ಳತನದ ಬಗ್ಗೆ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಂತಿನಗರ ನಿವಾಸಿ ಎಸ್.ಬಿ. ಪ್ರದೀಪ್‌ನನ್ನು ಬಂಧಿಸಲಾಗಿತ್ತು. ಜಾಮೀನು ಮೇಲೆ ಹೊರ ಬಂದ ನಂತರ ಪ್ರದೀಪ್ ನ್ಯಾಯಾಲಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದನು. ಜಿಲ್ಲಾ ರಕ್ಷಣಾಽಕಾರಿ ಉಮಾ ಪ್ರಶಾಂತ್ ಸೂಚನೆ ಆರೋಪಿ ಪತ್ತೆಗಾಗಿ ರಚಿಸಲಾಗಿದ್ದ ದಾವಣಗೆರೆ ಗ್ರಾಮಾಂತ ಡಿವೈಎಸ್ಪಿ ಬಿ.ಎಸ್. ಬಸವರಾಜ್, ಹರಿಹರ ವೃತ್ತ ನಿರೀಕ್ಷಕ ಸುರೇಶ್ ಸಗರಿ, ಪಿಎಸ್‌ಐ ಮಂಜುನಾಥ ಕುಪ್ಪೇಲೂರು ನೇತೃತ್ವದಲ್ಲಿನ ತಂಡ 23 ವರ್ಷಗಳ ವರೆಗೆ ತಲೆಮರೆಸಿಕೊಂಡಿದ್ದವನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

250 ರೂ ರೇಡಿಯೋ ಕಳವು ಮಾಡಿದ್ದ ಆರೋಪಿ ಸಾವು; ಪ್ರಕರಣ ಮುಕ್ತಾಯ

ದಾವಣಗೆರೆ: ಮನೆಯಲ್ಲಿದ್ದ ಟ್ರಾನ್ಸಿಸ್ಟರ್ ರೇಡಿಯೋ ಕಳವು ಮಾಡಿದ್ದ ಆರೋಪಿಯ ನಿಧನದ ಹಿನ್ನೆಲೆಯಲ್ಲಿ 38 ವರ್ಷಗಳ ನಂತರ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಮುಕ್ತಾಯಗೊಳಿಸ ಲಾಗಿದೆ.

ಹರಿಹರ ತಾಲೂಕಿನ ಶಂಷೀಪುರ ಗ್ರಾಮದ ಗುರುಸಿದಪ್ಪ ಎನ್ನುವವರ ಮನೆಯಲ್ಲಿ1986 ರ ಆ.13 ರಂದು ಮನೆ ಯ ಹಿಂದಿನ ಬಾಗಿಲು ಒಡೆದು ಒಳಗೆ ಬಂದು ರೇಡಿಯೋ ಸ್ಟಾಂಡಿನಲ್ಲಿಟ್ಟಿದ್ದ ವಿನೋ ಕಾರ್ಟಿಕ್ ಹೆಸರಿನ 250 ರೂಪಾಯಿ ಬೆಲೆಯ ಟ್ರಾನ್ಸಿಸ್ಟರ್ ರೇಡಿಯೋ ಕಳ್ಳತನ ಮಾಡಲಾಗಿತ್ತು. ಹರಿಹರ ಗ್ರಾಮಾಂತರ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿತ್ತು. ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹರಪನಹಳ್ಳಿ ತಾಲೂಕಿನ ಮಾಚೇನ ಹಳ್ಳಿ ಗ್ರಾಮದ ಹುಲುಗ ಅಲಿಯಾಸ್ ಬಾಬಯ್ಯ ಎಂಬುವನನ್ನು ಬಂಽಸಿದ್ದರು. ಆದರೆ, ಪ್ರಮುಖ ಆರೋಪಿ ಲಕ್ಕ ಅಲಿ ಯಾಸ್ ಮ್ಯಾಂಡ್ರಿಗುತ್ತಿ ಲಕ್ಕಪ್ಪ ತಲೆಮರೆಸಿಕೊಂಡಿದ್ದನು.

ಪ್ರಮುಖ ಆರೋಪಿ ಲಕ್ಕ ಅಲಿ ಯಾಸ್ ಮ್ಯಾಂಡ್ರಿಗುತ್ತಿ ಲಕ್ಕಪ್ಪನ ಪತ್ತೆಗಾಗಿ ರಚಿಸಿದ್ದ ಅಧಿಕಾರಿಗಳ ತಂಡ ಮನೆಗೆ ತೆರಳಿದ್ದಾಗ ಆತ 2008ರಲ್ಲೇ ಮೃತಪಟ್ಟಿದ್ದು ಗೊತ್ತಾಗಿದೆ. ಹರಪನಹಳ್ಳಿ ತಾಲೂಕು ಕಚೇರಿಯಲ್ಲಿ ಆತನ ಮರಣ ಪ್ರಮಾಣ ಪತ್ರವನ್ನು ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿ,38 ವರ್ಷಗಳ ಹಿಂದಿನ ಪ್ರಕರಣವನ್ನು ಮುಕ್ತಾಯ ಮಾಡಲಾಗಿದೆ.

ಟಾಪ್ ನ್ಯೂಸ್

krishne-bhyre-gowda

ಸರಕಾರಿ ಕಾರ್ಯಕ್ರಮಕ್ಕೆ ಬಂದು ಸ್ವಾಮೀಜಿ ರಾಜಕೀಯ ಮಾತಾಡಿದರೆ ಹೇಗೆ?: ಕೃಷ್ಣಭೈರೇಗೌಡ ಅಸಮಾಧಾನ

Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!

Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!

Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?

Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?

Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್…  25 ಲಕ್ಷಕ್ಕೆ ಡೀಲ್

Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್… 25 ಲಕ್ಷಕ್ಕೆ ಡೀಲ್

Kunigal: ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಆಂಬ್ಯುಲೆನ್ಸ್ ಪಲ್ಟಿ; ಚಾಲಕ ಸ್ಥಳದಲ್ಲೇ ಸಾವು

Kunigal: ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಆಂಬ್ಯುಲೆನ್ಸ್ ಪಲ್ಟಿ; ಚಾಲಕ ಸ್ಥಳದಲ್ಲೇ ಸಾವು

Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್‌ ವಂಚನೆ, ಹೂಡಿಕೆದಾರರು ಕಂಗಾಲು!

Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್‌ ವಂಚನೆ, ಹೂಡಿಕೆದಾರರು ಕಂಗಾಲು!

10

Bengaluru: ನಿಮ್ಮ ಮನೆ ಬಳಿ ಸಸಿ ನೆಡಬೇಕಾ? ಹಸಿರು ತೇರು ಸಂಪರ್ಕಿಸಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; Protest by BJP Zilla Raitamorcha condemning the price hike

Davanagere; ಬೆಲೆ ಏರಿಕೆ ಖಂಡಿಸಿ ಬಿಜೆಪಿ ಜಿಲ್ಲಾ ರೈತಮೋರ್ಚಾದಿಂದ ಪ್ರತಿಭಟನೆ

1-sadsadasd

Congress; ಈ ಬಾರಿಯೇ ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಶಾಸಕ ಬಸವರಾಜ ವಿ.ಶಿವಗಂಗಾ

7

Honnali: ಡೆಂಘೀಗೆ ವಿದ್ಯಾರ್ಥಿನಿ ಬಲಿ

ಸ್ವಾಮೀಜಿಗಳು ಹೇಳಿದ ಮಾತ್ರಕ್ಕೆ ಸಿಎಂ ಬದಲಾವಣೆ ಆಗುತ್ತದೆಯೇ…? : ಶಾಮನೂರು ಪ್ರಶ್ನೆ

ಸ್ವಾಮೀಜಿಗಳು ಹೇಳಿದ ಮಾತ್ರಕ್ಕೆ ಸಿಎಂ ಬದಲಾವಣೆ ಆಗುತ್ತದೆಯೇ…? : ಶಾಮನೂರು ಪ್ರಶ್ನೆ

Valmiki Corporation case: Siddaramaiah should resign on moral responsibility: Bellad

Valmiki Corporation case: ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಬೆಲ್ಲದ್

MUST WATCH

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

ಹೊಸ ಸೇರ್ಪಡೆ

krishne-bhyre-gowda

ಸರಕಾರಿ ಕಾರ್ಯಕ್ರಮಕ್ಕೆ ಬಂದು ಸ್ವಾಮೀಜಿ ರಾಜಕೀಯ ಮಾತಾಡಿದರೆ ಹೇಗೆ?: ಕೃಷ್ಣಭೈರೇಗೌಡ ಅಸಮಾಧಾನ

Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!

Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!

12

Chowkidar Movie: ಚೌಕಿದಾರ್‌ಗೆ ಮುಹೂರ್ತ ಇಟ್ರಾ!

Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?

Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?

Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್…  25 ಲಕ್ಷಕ್ಕೆ ಡೀಲ್

Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್… 25 ಲಕ್ಷಕ್ಕೆ ಡೀಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.