Gangolli ಜಾಮೀನಿನಲ್ಲಿ ಬಂದು ವಾರದಲ್ಲಿ ಕದ್ದು ಸಿಕ್ಕಿಬಿದ್ದ


Team Udayavani, Jun 25, 2024, 12:04 AM IST

Gangolli ಜಾಮೀನಿನಲ್ಲಿ ಬಂದು ವಾರದಲ್ಲಿ ಕದ್ದು ಸಿಕ್ಕಿಬಿದ್ದ

ಗಂಗೊಳ್ಳಿ: ಇಲ್ಲಿನ ಪೊಲೀಸ್‌ ಠಾಣಾ ವ್ಯಾಪ್ತಿಯ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ಬಳಿ ಇರುವ ಪಂಚಗಂಗಾ ಸೊಸೈಟಿಯಲ್ಲಿ ಜೂ. 22ರ ತಡರಾತ್ರಿ ಕಳ್ಳತನ ಮಾಡುತ್ತಿದ್ದಾಗಲೇ ಪೊಲೀಸರು ಬಂಧಿಸಿದ್ದಾರೆ. ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

13 ಕಳವು ಪ್ರಕರಣ
ಆರೋಪಿ ಕೊಲ್ಲಂ ಜಿಲ್ಲೆ ಕರುನಾಗಪಳ್ಳಿ ತಾಲೂಕು ಚೆರಿಯಳ್ಳಿಕಲ್‌ ಅಲಪ್ಪಾಡ್‌ ತಾಝಃಚೆಯಿಲ್‌ ವೀಡು ಪ್ರಕಾಶ್‌ ಬಾಬು ಯಾನೆ‌ ನಿಯಾಝ್ (46) ಕುಂಬಳೆ ಪೊಲೀಸ್‌ ಠಾಣೆಯಲ್ಲಿ, ಕ್ಯಾಲಿಕಟ್‌ನ ಮಾರಾಡ ಠಾಣೆ, ತಲಶೆÏàರಿ ಠಾಣೆ, ಕಣ್ಣೂರು ನಗರ ಠಾಣೆ, ಅಲೆಪ್ಪಿ ಮಾವಿಲಕಾರ ಠಾಣೆ, ಚೆಂಗನೂರು ಠಾಣೆ, ಉಡುಪಿ ಜಿಲ್ಲೆಯ, ಗಂಗೊಳ್ಳಿ ಠಾಣೆ, ಕುಂದಾಪುರ ಠಾಣೆ, ದ.ಕ. ಜಿಲ್ಲೆಯ ಕೊಣಾಜೆ ಠಾಣೆ, ಬೆಂಗಳೂರು ಕುಮಾರಸ್ವಾಮಿ ಲೇ ಔಟ್‌ ಠಾಣೆ ವ್ಯಾಪ್ತಿ ಸೇರಿ 13 ಕಡೆ ಕಳವು ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ.

ಸ್ಕೂಟರ್‌ನಲ್ಲಿ ಕೇರಳದಿಂದ ಬಂದಿದ್ದ
ಜೂ. 15ರಂದು ಕೇರಳದ ಮಾವಿಲಕಾರ ಹಾಗೂ ಚೆಂಗನೂರು ಠಾಣಾ ಸರಹದ್ದಿನ ಕಳವು ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಂಗ ಬಂಧನದಿಂದ ಜಾಮೀನಿನ ಮೇಲೆ ಬಿಡುಗಡೆಗೊಂಡು ಬಂದಿದ್ದ ಈತ ಕೇರಳದಿಂದ ಬೆಂಗಳೂರಿಗೆ ಬಂದು, ಅಲ್ಲಿಂದ ಚಿಕ್ಕಮಗಳೂರಿಗೆ ಬಂದು, ಅಲ್ಲಿಂದ ಕುಂದಾಪುರ, ಮುಳ್ಳಿಕಟ್ಟೆಗೆ ಸ್ಕೂಟರ್‌ನಲ್ಲಿ ಬಂದಿದ್ದ.

ಲಘುವಾಗಿ ಪರಿಗಣಿಸಿದ್ದನೇ?
ರಾತ್ರಿ ಪಂಚಗಂಗಾ ಸೊಸೈಟಿಯ ಹಿಂಬದಿಯ ಕಿಟಕಿ ಮುರಿದು ಸೊಸೈಟಿಗೆ ನುಗ್ಗಿದ ಕಳ್ಳ ಸಿಸಿ ಟಿವಿ ಕೆಮರಾ ಇರುವುದನ್ನು ಗಮನಿಸಿದ್ದ. ಸ್ವಿಚ್‌ ಹಾಕಿ ಲೈಟ್‌ ಕೂಡಾ ಬೆಳಗಿಸಿ ಕೋಣೆಯೆಲ್ಲ ಬೆಲೆಬಾಳುವ ವಸ್ತು, ಹಣಕ್ಕಾಗಿ ತಡಕಾಡಿದ್ದ. ಆದರೆ ಅಲ್ಲಿದ್ದ ಸಿಸಿ ಟಿವಿ ಕುಂದಾಪುರದ ಸೈನ್‌ ಇನ್‌ ಸೆಕ್ಯುರಿಟಿ ಸಂಸ್ಥೆಯ 24 ತಾಸು ನೇರ ವೀಕ್ಷಣೆಯ ಟಿವಿ ಎಂದು ಗೊತ್ತಾಗದೇ ಸಿಕ್ಕಿಬಿದ್ದ. ನೇರ ವೀಕ್ಷಣೆ ಮಾಡುತ್ತಿದ್ದ ಸೈನ್‌ ಇನ್‌ ಸೆಕ್ಯುರಿಟಿ ಸಂಸ್ಥೆಯ ಸಿಬಂದಿ ತತ್‌ಕ್ಷಣ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿ, ರಾತ್ರಿ ರೌಂಡ್ಸ್‌ನಲ್ಲಿ ಬಂಟ್ವಾಡಿ ಸಮೀಪವಿದ್ದ ಪಿಎಸ್‌ಐ ಬಸವರಾಜ ಕನಶೆಟ್ಟಿ ಅವರು 5 ನಿಮಿಷದ ಒಳಗೆ ತಲುಪುವಂತೆ ಮಾಡಿದರು. ಪೊಲೀಸ್‌ ಸಿಬಂದಿ ಮೋಹನ ಪೂಜಾರಿ ಹಾಗೂ ಎಸ್‌ಐ ಘಟನ ಸ್ಥಳಕ್ಕೆ ತೆರಳಿ ಕಿಟಕಿ ಮೂಲಕವೇ ಕಳ್ಳನಿಗೆ ಪೊಲೀಸ್‌ ಬಂದುದನ್ನು ತಿಳಿಸಿ ಎಚ್ಚರಿಸಿ ಅಲ್ಲೇ ಇರುವಂತೆ ಮಾಡಿದರು. ಬ್ರಾಂಚ್‌ ಮ್ಯಾನೇಜರ್‌ ಹಾಗೂ ಸಿಬಂದಿ ಸ್ಥಳಕ್ಕೆ ಬಂದ ಬಳಿಕ ಬಾಗಿಲು ತೆರೆದು ಕಳವು ಮಾಡುತ್ತಿದ್ದವನನ್ನು ವಶಕ್ಕೆ ಪಡೆದಿದ್ದಾರೆ.

ಸ್ವಾಧೀನ
ಆರೋಪಿಯಿಂದ ಕಳವು ಮಾಡಿದ ನಗದು 2 ಸಾವಿರ ರೂ., ಕಳವು ಮಾಡಲು ಬಂದ ಸುಝುಕಿ ಎಕ್ಸೆಸ್‌ ಮೋಟಾರು ಸೈಕಲ್‌, ಮೊಬೈಲ್‌, ಕೃತ್ಯಕ್ಕೆ ಉಪಯೋಗಿಸಿದ ಮೂರು ರಾಡ್‌, ಕಟ್ಟಿಂಗ್‌ ಪ್ಲೇಯರ್‌ ಇನ್ನಿತರ ವಸ್ತುಗಳನ್ನು ಸ್ವಾಧೀನಪಡಿಸಿಕೊಂಡು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಟಾಪ್ ನ್ಯೂಸ್

Grama Panchayat ಮಟ್ಟದಲ್ಲಿ ಟಾಸ್ಕ್ ಪೋರ್ಸ್‌: ಕೃಷ್ಣ ಬೈರೇಗೌಡ

Grama Panchayat ಮಟ್ಟದಲ್ಲಿ ಟಾಸ್ಕ್ ಪೋರ್ಸ್‌: ಕೃಷ್ಣ ಬೈರೇಗೌಡ

Parameshwar

Congress Party; ನೋಟಿಸ್‌ ಯಾಕೆ ಕೊಡ್ತೀರಿ ಅಂತಾ ಹೇಳಬೇಕು: ಡಾ.ಜಿ.ಪರಮೇಶ್ವರ್‌

Indian based businessman arrested in 8300 crore scam

8300 ಕೋಟಿ ಹಗರಣದಲ್ಲಿ ಭಾರತ ಮೂಲದ ಉದ್ಯಮಿ ಬಂಧನ

Sunil-kumar

CM Siddaramaiah; ಅನುದಾನ ಹಿಂಪಡೆದಂತೆ ಸೈಟ್‌ ವಾಪಸ್‌ ಕೊಡಿ: ಸುನಿಲ್‌ ವ್ಯಂಗ್ಯ

Shivaraj-Thangadagi

Government: ಗಟ್ಟಿತನ ಇದ್ದುದರಿಂದಲೇ ಜಾತಿಗಣತಿ ವರದಿ ಸ್ವೀಕಾರ- ತಂಗಡಗಿ

Dr.Sudhakar

Lokasabha: ಚಿಕ್ಕಬಳ್ಳಾಪುರದಲ್ಲಿ ರಾಷ್ಟ್ರೀಯ ಪುಷ್ಪ ಮಂಡಳಿ; ಡಾ.ಕೆ.ಸುಧಾಕರ್‌ ಪ್ರಸ್ತಾಪ

Bhovi Community ಜು. 20ಕ್ಕೆ ದೀಕ್ಷಾ ರಜತ ಮಹೋತ್ಸವ: ಲಿಂಬಾವಳಿ

Bhovi Community ಜು. 20ಕ್ಕೆ ದೀಕ್ಷಾ ರಜತ ಮಹೋತ್ಸವ: ಲಿಂಬಾವಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಪತ್ರಿಕಾ ದಿನಾಚರಣೆ: ಸಮ್ಮಾನ, ಪ್ರತಿಭಾ ಪುರಸ್ಕಾರ

Udupi ಪತ್ರಿಕಾ ದಿನಾಚರಣೆ: ಸಮ್ಮಾನ, ಪ್ರತಿಭಾ ಪುರಸ್ಕಾರ

Udupi ವಾಯ್ಸ ಆಫ್ ಹೀಲಿಂಗ್ಸ್‌: ಸಾಧಕರಿಗೆ ಸಮ್ಮಾನ

Udupi ವಾಯ್ಸ ಆಫ್ ಹೀಲಿಂಗ್ಸ್‌: ಸಾಧಕರಿಗೆ ಸಮ್ಮಾನ

Manipal ಬ್ಯಾಂಕ್‌ ಖಾತೆಯಿಂದ ಲಕ್ಷಾಂತರ ರೂ. ವರ್ಗಾವಣೆ

Manipal ಬ್ಯಾಂಕ್‌ ಖಾತೆಯಿಂದ ಲಕ್ಷಾಂತರ ರೂ. ವರ್ಗಾವಣೆ

Nandikur ಪರಿಸರ ಮಾಲಿನ್ಯ?ಪರಿಸರ ಅಧಿಕಾರಿಗಳಿಂದ ಪರಿಶೀಲನೆ: ನೀರಿನ ಸ್ಯಾಂಪಲ್‌ ಸಂಗ್ರಹ

Nandikur ಪರಿಸರ ಮಾಲಿನ್ಯ?ಪರಿಸರ ಅಧಿಕಾರಿಗಳಿಂದ ಪರಿಶೀಲನೆ: ನೀರಿನ ಸ್ಯಾಂಪಲ್‌ ಸಂಗ್ರಹ

Karkala: ಉಳುಮೆ ಮಾಡುತಿದ್ದ ಕಾರ್ಮಿಕ ಸಾವು

Karkala: ಉಳುಮೆ ಮಾಡುತಿದ್ದ ಕಾರ್ಮಿಕ ಸಾವು

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

Murder-Represent

Hasana: ಪತ್ನಿಯ ಕೊಂದ ಪಿಸಿಗೆ ಅಕ್ರಮ ಸಂಬಂಧ ?

Grama Panchayat ಮಟ್ಟದಲ್ಲಿ ಟಾಸ್ಕ್ ಪೋರ್ಸ್‌: ಕೃಷ್ಣ ಬೈರೇಗೌಡ

Grama Panchayat ಮಟ್ಟದಲ್ಲಿ ಟಾಸ್ಕ್ ಪೋರ್ಸ್‌: ಕೃಷ್ಣ ಬೈರೇಗೌಡ

bajrang punia

ನಾಡಾ ನನ್ನನ್ನು ಗುರಿಯಾಗಿಸಿ  ದಾಳಿ ಮಾಡುತ್ತಿದೆ: ಬಜರಂಗ್‌

Parameshwar

Congress Party; ನೋಟಿಸ್‌ ಯಾಕೆ ಕೊಡ್ತೀರಿ ಅಂತಾ ಹೇಳಬೇಕು: ಡಾ.ಜಿ.ಪರಮೇಶ್ವರ್‌

Young couple who ready to fly Canada captured in delhi

ಕೆನಡಾಗೆ ಹೊರಟಿದ್ದ ಯುವ ದಂಪತಿ ಸೆರೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.