ಓವರ್‌ ಡ್ರಾಫ್ಟ್‌ ಗುರಿ ಸಾಧನೆಯಲ್ಲಿ ಹಿನ್ನಡೆ: ಜಿ.ಪಂ.ಸಿಇಒ ಅಸಮಾಧಾನ

ಜಿಲ್ಲಾ ಬ್ಯಾಂಕಿಂಗ್‌ ಅಭಿವೃದ್ಧಿ ಜಿಲ್ಲಾ ಸಮಿತಿ ಪರಿಶೀಲನೆ ಸಭೆ

Team Udayavani, Jun 25, 2024, 12:53 AM IST

ಓವರ್‌ ಡ್ರಾಫ್ಟ್‌ ಗುರಿ ಸಾಧನೆಯಲ್ಲಿ ಹಿನ್ನಡೆ: ಜಿ.ಪಂ.ಸಿಇಒ ಅಸಮಾಧಾನ

ಮಂಗಳೂರು: ಜಿಲ್ಲೆಯ ಜನಧನ್‌ ಖಾತೆದಾರರಿಗೆ ಓವರ್‌ ಡ್ರಾಫ್ಟ್‌ (ಒ.ಡಿ.) ಖಾತೆ ಆರಂಭಿಸಲು ನೀಡಿರುವ ಗುರಿ ಸಾಧನೆಯಲ್ಲಿ ಜಿಲ್ಲೆಯ ಬ್ಯಾಂಕ್‌ಗಳು ಹಿನ್ನಡೆ ಅನುಭವಿಸಿರುವ ಬಗ್ಗೆ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ| ಆನಂದ್‌ ಅಸಮಾಧಾನ ವ್ಯಕ್ತಪಡಿಸಿದರು.

ಜಿಲ್ಲಾ ಪಂಚಾಯತ್‌ ಸಭಾಂಗಣ ದಲ್ಲಿ ಸೋಮವಾರ ಜರಗಿದ ಜಿಲ್ಲಾ ಬ್ಯಾಂಕಿಂಗ್‌ ಅಭಿವೃದ್ಧಿ ಜಿಲ್ಲಾ ಸಮಿತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

2023-24ನೇ ಸಾಲಿಗೆ ಒ.ಡಿ. ಖಾತೆ ತೆರೆಯುವುದಕ್ಕೆ ನೀಡಲಾಗಿದ್ದ ಗುರಿ ಸಾಧಿಸುವಲ್ಲಿ ವಿವಿಧ ಬ್ಯಾಂಕ್‌ಗಳು ವಿಫಲವಾಗಿವೆ. ಜಿಲ್ಲೆಯಲ್ಲಿ 5 ಲಕ್ಷಕ್ಕೂ ಅಧಿಕ ಜನಧನ್‌ ಖಾತೆ ಇದ್ದರೂ ಕೇವಲ 4,368 ಒ.ಡಿ. ತೆರೆದಿರುವುದು ಕಳಪೆ ಸಾಧನೆಯಾಗಿದ್ದು, ಇದನ್ನು ಗಂಭೀರವಾಗಿ ಪರಿಗಣಿಸುವಂತೆ ಸೂಚಿಸಿದರು.

ಜತೆಗೆ, ಅಟಲ್‌ ಪಿಂಚಣಿ ಯೋಜನೆ ಯಡಿ ಕೇವಲ 39,097 ಖಾತೆಗಳನ್ನು ಜಿಲ್ಲೆಯ ಬ್ಯಾಂಕ್‌ಗಳು ತೆರೆದಿವೆ. ಬ್ಯಾಂಕ್‌ಗಳಿಗೆ ನೀಡಿದ ಗುರಿಯ ಶೇ.76ರಷ್ಟು ಮಾತ್ರ ಪ್ರಗತಿಯಾಗಿದೆ. ಜನರಿಗೆ ಸಿಗಬೇಕಾದ ಸರಕಾರಿ ಸೌಲಭ್ಯ ಕೊಡಿಸುವಲ್ಲಿ ನಿರ್ಲಕ್ಷ್ಯ ಮಾಡುವುದು ಸಲ್ಲದು ಎಂದರು.

ಕಿಸಾನ್‌ ಕ್ರೆಡಿಟ್‌ ಕಾರ್ಡ್‌, ರಾಷ್ಟ್ರೀಯ ಪಟ್ಟಣ ಜೀವನೋಪಾಯ ಯೋಜನೆ ಇತ್ಯಾದಿ ಯೋಜನೆಗಳ ಪ್ರಗತಿ ಪರಿಶೀಲನೆ ಮಾಡಲಾಯಿತು.

ಮೀನುಗಾರ ಮಹಿಳೆಯರಿಗೆ ನೀಡುವ ಗುಂಪು ಸಾಲದ ಬಡ್ಡಿಯನ್ನು ಮೀನುಗಾರಿಕೆ ಇಲಾಖೆ ಫಲಾನು ಭವಿಗಳಿಗೆ ಮರುಪಾವತಿಸುತ್ತದೆ. ಆದರೆ 2018ರಿಂದೀಚೆಗೆ ಯೋಜನೆ ಯಲ್ಲಿ ಬ್ಯಾಂಕ್‌ಗಳು ಕ್ಲೇಮುಗಳನ್ನು ಕಳುಹಿಸದೆ ಇರುವುದರಿಂದ ಬಾಕಿ ಉಳಿದಿದೆ ಎಂದು ಮೀನುಗಾರಿಕೆ ಇಲಾಖೆ ಅಧಿಕಾರಿಗಳು ತಿಳಿಸಿದರು.

ವ್ಯವಹಾರದಲ್ಲಿ ಪ್ರಗತಿ
ಜಿಲ್ಲೆಯಲ್ಲಿ ಕಳೆದ ಮಾರ್ಚ್‌ ಅಂತ್ಯಕ್ಕೆ ಬ್ಯಾಂಕ್‌ಗಳ ಒಟ್ಟು ವ್ಯವಹಾರ 1,21,618.98 ಕೋ. ರೂ. ಆಗಿದ್ದು ವರ್ಷದಿಂದ ವರ್ಷಕ್ಕೆ ಶೇ.15.80ರಷ್ಟು ಬೆಳವಣಿಗೆ ಸಾಧಿಸಿದೆ. ಬ್ಯಾಂಕ್‌ಗಳ ಒಟ್ಟು ಠೇವಣಿ 70,986.88 ಕೋ. ರೂ. ಆಗಿದ್ದು, ಶೇ.12.13ರಷ್ಟು ಬೆಳವಣಿಗೆ ಕಂಡಿದೆ. ಒಟ್ಟು ಸಾಲವು 30,632.10 ಕೋ. ರೂ. ಆಗಿದ್ದು, ಶೇ.21.38ರಷ್ಟು ಬೆಳವಣಿಗೆ ಸಾಧಿಸಿವೆ ಎಂದು ಲೀಡ್‌ ಬ್ಯಾಂಕ್‌ ಮ್ಯಾನೇಜರ್‌ ಕವಿತಾ ಶೆಟ್ಟಿ ತಿಳಿಸಿದರು.

ಆದ್ಯತಾ ಮತ್ತು ಆದ್ಯತೇತರ ವಲಯಗಳಲ್ಲಿ 47,210.36 ಕೋ. ರೂ. ಸಾಲ ವಿತರಿಸಲಾಗಿದೆ. ಕೃಷಿ ಕ್ಷೇತ್ರಕ್ಕೆ 14,710.45 ಕೋ. ರೂ. ಸಾಲ ವಿತರಿಸಿದ್ದು, ವಾರ್ಷಿಕ ಗುರಿಯಾದ 8,690.00 ಕೋ. ರೂ. ಮೀರಿ ಶೇ. 169.28ರಷ್ಟು ಸಾಧಿಸಲಾಗಿದೆ. ಅತಿ ಸಣ್ಣ, ಸಣ್ಣ ಮತ್ತು ಮಧ್ಯಮ ಉದ್ದಿಮೆಯಡಿ 6,263.92 ಕೋ.ರೂ., ಶಿಕ್ಷಣಕ್ಕೆ 119.40 ಕೋ. ರೂ., ಗೃಹಸಾಲ ಕ್ಷೇತ್ರದಲ್ಲಿ 432.04 ಕೋ. ರೂ. ಸಾಲ ನೀಡಿದ್ದು, ವಾರ್ಷಿಕ ಗುರಿ ಯಾದ 1,462.50 ಕೋ. ರೂ.ಯ ಶೇ.29.54ರಷ್ಟು ನಿರ್ವಹಣೆ ತೋರಿದೆ ಎಂದು ಹೇಳಿದರು.

ಕೃಷಿ ಸಾಲದ ಅರ್ಜಿ ತಿರಸ್ಕರಿಸಬೇಡಿ: ಆರ್‌ಬಿಐ ಅಧಿಕಾರಿ
ಕೃಷಿ ಸಾಲ ಪಡೆಯುವ ರೈತರ ಅರ್ಜಿಯನ್ನು ತಿರಸ್ಕರಿಸಬೇಡಿ ಎಂದು ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) ಮ್ಯಾನೇಜರ್‌ ವೆಂಕಟರಾಮಯ್ಯ ಟಿ.ಎನ್‌. ಅವರು ಬ್ಯಾಂಕ್‌ ಅಧಿಕಾರಿಗಳಿಗೆ ಸೂಚಿಸಿದರು. ರೈತರ ಆತ್ಮಹತ್ಯೆ ತಡೆಯುವ ಉದ್ದೇಶದಿಂದ ಇದು ಅತ್ಯಗತ್ಯ. ರೈತರು ಖಾಸಗಿ ಲೇವಾದೇವಿ ದಾರರಿಂದ ಅಧಿಕ ಬಡ್ಡಿದರಕ್ಕೆ ಸಾಲ ಪಡೆದು ಮರುಪಾವತಿಸಲಾಗದೆ ಆತ್ಮಹತ್ಯೆ ಮಾಡಿಕೊಂಡ ಬಹಳಷ್ಟು ಉದಾಹರಣೆಗಳಿವೆ. ಡಿಸೆಂಬರ್‌ ಅಂತ್ಯದವರೆಗಿನ ವರದಿ ಪ್ರಕಾರ, ರಾಜ್ಯದಲ್ಲಿ 456 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು, ಅದರಲ್ಲಿ 354 ಮಂದಿಯ ಕುಟುಂಬಗಳಿಗೆ ಮಾತ್ರ ಪರಿಹಾರ ಸಿಕ್ಕಿದೆ. ಉಳಿದವರು ಬ್ಯಾಂಕ್‌ಗಳಿಂದ ಸಾಲ ಪಡೆದಿಲ್ಲ ಎಂಬ ಕಾರಣಕ್ಕೆ ಪರಿಹಾರವೇ ದೊರೆತಿಲ್ಲ. ಬ್ಯಾಂಕ್‌ಗಳು ರೈತರಿಗೆ ಆದ್ಯತೆ ನೆಲೆಯಲ್ಲಿ ಸಾಲ ನೀಡಬೇಕು ಎಂದರು.

 

ಟಾಪ್ ನ್ಯೂಸ್

vidhana-Soudha

Karnataka Government: 7ನೇ ವೇತನ ಆಯೋಗದ ಶಿಫಾರಸಿಗೆ ಎಳ್ಳುನೀರು?

High-Court

HSRP ಅಳವಡಿಕೆ ಅವಧಿ ಸೆ. 15ರವರೆಗೆ ವಿಸ್ತರಣೆ

Dengue

Health Problem: ಕರುನಾಡ‌ ಜೀವ‌ ಹಿಂಡುತ್ತಿರುವ ಡೆಂಗ್ಯೂ!

1-24-friday

Daily Horoscope: ಉದ್ಯೋಗ ಸ್ಥಾನದಲ್ಲಿ ಅನಿರೀಕ್ಷಿತ ಶ್ಲಾಘನೆ, ನೌಕರರಿಗೆ ವರ್ಗಾವಣೆಯ ಸೂಚನೆ

Agri

Agriculture: ಗ್ರಾಮೀಣ ಬದುಕಿನ ಚಾವಡಿ ಚರ್ಚೆ; ಕೇವಲ ನೆನಪು

Prajwal-revanna

Hasana Pendrive Case; ಪ್ರಜ್ವಲ್‌ ಸಮರ್ಥ ಪುರುಷ: ವೈದ್ಯಕೀಯ ವರದಿ

Udupi ಪ್ರೇಯಸಿ ಜತೆ ಜಗಳ: ರಸ್ತೆಯಲ್ಲೇ ಬಸ್‌ ನಿಲ್ಲಿಸಿ ಹೋದ ಚಾಲಕ!

Udupi ಪ್ರೇಯಸಿ ಜತೆ ಜಗಳ: ರಸ್ತೆಯಲ್ಲೇ ಬಸ್‌ ನಿಲ್ಲಿಸಿ ಹೋದ ಚಾಲಕ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ulaibettu ಪೆರ್ಮಂಕಿ ಉದ್ಯಮಿ ದರೋಡೆ ಪ್ರಕರಣ; 10 ಮಂದಿ ಆರೋಪಿಗಳ ಬಂಧನ

Ulaibettu ಪೆರ್ಮಂಕಿ ಉದ್ಯಮಿ ದರೋಡೆ ಪ್ರಕರಣ; 10 ಮಂದಿ ಆರೋಪಿಗಳ ಬಂಧನ

Dengue ಕರಾವಳಿಯಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಳ : ಮುಂಜಾಗರೂಕತೆಯೇ ಮದ್ದು

Dengue ಕರಾವಳಿಯಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಳ : ಮುಂಜಾಗರೂಕತೆಯೇ ಮದ್ದು

Heavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟHeavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟ

Heavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟ

Rain ಪೊರ್ಕೋಡಿ ದೇವಸ್ಥಾನದ ಬಳಿ ಕುಸಿದ ರಸ್ತೆ: ವಾಹನ ಸಂಚಾರ ವ್ಯತ್ಯಯ

Rain ಪೊರ್ಕೋಡಿ ದೇವಸ್ಥಾನದ ಬಳಿ ಕುಸಿದ ರಸ್ತೆ: ವಾಹನ ಸಂಚಾರ ವ್ಯತ್ಯಯ

Retirement ಬಳಿಕ ಎಸ್‌ಪಿ ಪದೋನ್ನತಿಗೆ ಪೂರ್ವಾನ್ವಯ ಆದೇಶ

Retirement ಬಳಿಕ ಎಸ್‌ಪಿ ಪದೋನ್ನತಿಗೆ ಪೂರ್ವಾನ್ವಯ ಆದೇಶ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

vidhana-Soudha

Karnataka Government: 7ನೇ ವೇತನ ಆಯೋಗದ ಶಿಫಾರಸಿಗೆ ಎಳ್ಳುನೀರು?

High-Court

HSRP ಅಳವಡಿಕೆ ಅವಧಿ ಸೆ. 15ರವರೆಗೆ ವಿಸ್ತರಣೆ

Dengue

Health Problem: ಕರುನಾಡ‌ ಜೀವ‌ ಹಿಂಡುತ್ತಿರುವ ಡೆಂಗ್ಯೂ!

1-24-friday

Daily Horoscope: ಉದ್ಯೋಗ ಸ್ಥಾನದಲ್ಲಿ ಅನಿರೀಕ್ಷಿತ ಶ್ಲಾಘನೆ, ನೌಕರರಿಗೆ ವರ್ಗಾವಣೆಯ ಸೂಚನೆ

Agri

Agriculture: ಗ್ರಾಮೀಣ ಬದುಕಿನ ಚಾವಡಿ ಚರ್ಚೆ; ಕೇವಲ ನೆನಪು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.