ಲೋಕಸಭಾ ಸ್ಪೀಕರ್‌ ಆಯ್ಕೆಗೆ ಚುನಾವಣೆ? ಇಂದು ಬಿಜೆಪಿ ಅಭ್ಯರ್ಥಿ ಪ್ರಕಟ

ಉಪಸ್ಪೀಕರ್‌ಗೆ ಕಾಂಗ್ರೆಸ್‌ ಪಟ್ಟು

Team Udayavani, Jun 25, 2024, 7:10 AM IST

ಲೋಕಸಭಾ ಸ್ಪೀಕರ್‌ ಆಯ್ಕೆಗೆ ಚುನಾವಣೆ? ಇಂದು ಬಿಜೆಪಿ ಅಭ್ಯರ್ಥಿ ಪ್ರಕಟ

ಹೊಸದಿಲ್ಲಿ: ಲೋಕಸಭೆ ಸ್ಪೀಕರ್‌ ಆಯ್ಕೆ ಜೂ. 26ರಂದು ನಡೆಯಲಿದ್ದು, ಜೂ. 25ರಂದು ಬಿಜೆಪಿ ತನ್ನ ಅಭ್ಯರ್ಥಿಯ ಹೆಸರನ್ನು ಪ್ರಕಟಿಸಲಿದೆ. ಈ ಮಧ್ಯೆ ಡೆಪ್ಯುಟಿ ಸ್ಪೀಕರ್‌ ಹುದ್ದೆಯನ್ನು ವಿಪಕ್ಷಕ್ಕೆ ನೀಡದಿದ್ದರೆ ಸ್ಪೀಕರ್‌ ಸ್ಥಾನಕ್ಕೆ ಅಭ್ಯರ್ಥಿಯನ್ನು ಕಣಕ್ಕಿಳಿಸುವುದಾಗಿ ಕಾಂಗ್ರೆಸ್‌ ಹೇಳಿದೆ.

ಹಾಗೇನಾದರೂ ಆದರೆ ಲೋಕಸಭೆ ಇತಿಹಾಸದಲ್ಲೇ ಮೊದಲ ಬಾರಿಗೆ ಸ್ಪೀಕರ್‌ ಆಯ್ಕೆ ಚುನಾವಣೆ ಮೂಲಕ ನಡೆಯಲಿದೆ. ಆದರೆ ಮೂಲಗಳ ಪ್ರಕಾರ ಬಿಜೆಪಿಯು ಡೆಪ್ಯುಟಿ ಸ್ಪೀಕರ್‌ ಸ್ಥಾನವನ್ನು ಎನ್‌ಡಿಎ ಮಿತ್ರ ಪಕ್ಷಗಳಿಗೆ ಬಿಟ್ಟುಕೊಡುವ ಸಾಧ್ಯತೆಯಿದೆ. ಸ್ಪೀಕರ್‌ ಹುದ್ದೆಗೆ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಮಂಗಳವಾರ ಮಧ್ಯಾಹ್ನ 12 ಗಂಟೆಗೆ ಮುಕ್ತಾಯವಾಗಲಿದೆ.

ಈಗ ಹಂಗಾಮಿ ಸ್ಪೀಕರ್‌ ಆಗಿರುವ ಭತೃìಹರಿ ಮಹ್ತಾಬ್‌, 17ನೇ ಲೋಕಸಭೆಯಲ್ಲಿ ಸ್ಪೀಕರ್‌ ಆಗಿದ್ದ ಓಂ ಬಿರ್ಲಾ, ಆಂಧ್ರ ಬಿಜೆಪಿ ನಾಯಕಿ ಡಿ. ಪುರಂದೇಶ್ವರಿ ಹಾಗೂ ರಾಧಾ ಮೋಹನ್‌ ಸಿಂಗ್‌ ಅವರು ಸ್ಪೀಕರ್‌ ಸ್ಪರ್ಧೆಗೆ ಮುಂಚೂಣಿಯಲ್ಲಿದ್ದಾರೆ.

543 ಸದಸ್ಯ ಬಲದ ಲೋಕಸಭೆಯಲ್ಲಿ ಎನ್‌ಡಿಎ 293 ಸ್ಥಾನಗಳೊಂದಿಗೆ ಪೂರ್ಣ ಬಹುಮತ ಹೊಂದಿದ್ದರೆ ಐಎನ್‌ಡಿಐಎ ಒಕ್ಕೂಟವು 234 ಸದಸ್ಯರನ್ನು ಹೊಂದಿದೆ.

ಮಿತ್ರಪಕ್ಷಗಳ ಜತೆ ಬಿಜೆಪಿ ಚರ್ಚೆ
ಲೋಕಸಭಾ ಸ್ಪೀಕರ್‌ ಆಯ್ಕೆ ಸಂಬಂಧ ಬಿಜೆಪಿ ತನ್ನ ಮಿತ್ರ ಪಕ್ಷಗಳ ಜತೆ ಮಾತುಕತೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ. ಸ್ಪೀಕರ್‌ ಆಯ್ಕೆ ಸಂಬಂಧ ಟಿಡಿಪಿ ಅಧ್ಯಕ್ಷ, ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಈ ಸಂಬಂಧ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಕೇಂದ್ರ ಸಚಿವ ಕೆ. ರಾಮಮೋಹನ್‌ ನಾಯ್ಡು ಹೇಳಿದ್ದಾರೆ.

ವಿಪಕ್ಷ ಸ್ಪರ್ಧೆ
ಲೋಕಸಭೆ ಸ್ಪೀಕರ್‌ ಆಯ್ಕೆ ಸಂಬಂಧ ಸರಕಾರವು ವಿಪಕ್ಷಗಳ ಜತೆಗೆ ಒಮ್ಮತವನ್ನು ಸಾಧಿಸದಿದ್ದರೆ ವಿಪಕ್ಷವು ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಲಿದೆ ಎಂದು ಐಎನ್‌ಡಿಐಎ ಒಕ್ಕೂಟದ ಪಾಲುದಾರ ರೆವಲೂಶನರಿ ಸೋಷಿಯಲಿಸ್ಟ್‌ ಪಾರ್ಟಿ (ಆರ್‌ಎಸ್‌ಪಿ) ಸಂಸದ ಎನ್‌.ಕೆ. ಪ್ರೇಮಚಂದ್ರನ್‌ ಹೇಳಿದ್ದಾರೆ.

ಮೊದಲ ದಿನವೇ
ಬಿಜೆಪಿ-ವಿಪಕ್ಷ ಕದನ
18ನೇ ಲೋಕಸಭಾ ಅಧಿವೇಶನದ ಮೊದಲ ದಿನವೇ ಬಿಜೆಪಿ-ಐಎನ್‌ಡಿಐಎ ಮಿತ್ರಕೂಟದ ನಡುವೆ ಕದನ ನಡೆದಿದೆ. ಕಲಾಪ ಆರಂಭಕ್ಕೆ ಮುನ್ನ ಮೋದಿಯವರು ದೇಶಕ್ಕೆ ಬೇಕಿರುವುದು ಒಳ್ಳೆಯ ವಿಪಕ್ಷ ಎಂದರೆ, ಮೋದಿ ಪ್ರಮಾಣವಚನದ ವೇಳೆ ಕಾಂಗ್ರೆಸ್‌ ಸಂಸದರು ಸಂವಿಧಾನದ ಪ್ರತಿ ತೋರಿಸಿ ವ್ಯಂಗ್ಯವಾಡಿದರು.

ರಾಜ್ಯದ 21 ಮಂದಿ ಕನ್ನಡದಲ್ಲಿ ,
ಕಾಗೇರಿ ಸಂಸ್ಕೃತದಲ್ಲಿ ಪ್ರಮಾಣ
ಕೇಂದ್ರ ಸಚಿವರಾದ ಎಚ್‌.ಡಿ. ಕುಮಾರಸ್ವಾಮಿ, ಪ್ರಹ್ಲಾದ್‌ ಜೋಶಿ, ಕರಾವಳಿಯ ಕೋಟ ಶ್ರೀನಿವಾಸ ಪೂಜಾರಿ, ಕ್ಯಾ| ಬ್ರಿಜೇಶ್‌ ಚೌಟ ಸೇರಿ ಕರ್ನಾಟಕದ 22 ಮಂದಿ ಲೋಕಸಭಾ ಸಂಸದರಾಗಿ ಸೋಮವಾರ ಪ್ರಮಾಣ ಸ್ವೀಕರಿಸಿದರು. ವಿಶ್ವೇಶ್ವರ ಹೆಗಡೆ ಕಾಗೇರಿ ಮಾತ್ರ ಸಂಸ್ಕೃತದಲ್ಲಿ ಪ್ರಮಾಣ ಸ್ವೀಕರಿಸಿದರು.

ಟಾಪ್ ನ್ಯೂಸ್

Road Mishap ಶಿವಪುರ: ಜೆಸಿಬಿ-ಬೈಕ್ ಡಿಕ್ಕಿ : ಪತ್ರಿಕೆ ವಿತರಕ ಸಾವು

Road Mishap ಶಿವಪುರ: ಜೆಸಿಬಿ-ಬೈಕ್ ಡಿಕ್ಕಿ: ಪತ್ರಿಕೆ ವಿತರಕ ಸಾವು

RadhaMohan-das

BJP Incharge: ರಾಜ್ಯ ಬಿಜೆಪಿಗೆ ಉಸ್ತುವಾರಿ, ಸಹ ಉಸ್ತುವಾರಿ ನೇಮಕ

ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್

RJD: ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್

Bajaj

Bajaj Freedom: ಬಜಾಜ್‌ ಫ್ರೀಡಂ 125 CNG ಬೈಕ್‌ ಭಾರತದಲ್ಲಿ ಬಿಡುಗಡೆ; ಬೆಲೆ ಎಷ್ಟು?

1-aaaa

Mumbai; ಟೀಮ್ ಇಂಡಿಯಾ ಸ್ವಾಗತ ಮೆರವಣಿಗೆ ಬಳಿಕ ಭಾರೀ ಕಸ ಸಂಗ್ರಹ

pune

Pune Porsche crash; 300 ಪದಗಳ ಪ್ರಬಂಧ ಬರೆದು ಸಲ್ಲಿಸಿದ ಬಾಲಾಪರಾಧಿ

ತನಗೆ ಕಚ್ಚಿದ ಹಾವಿಗೆ ಎರಡು ಬಾರಿ ಕಚ್ಚಿದ ವ್ಯಕ್ತಿ… ಹಾವು ಸತ್ತಿತು, ವ್ಯಕ್ತಿ ಬದುಕಿದ

Snake: ಹಾವು ಕಚ್ಚಿತೆಂದು ಹಾವಿಗೆ ಎರಡು ಬಾರಿ ಕಚ್ಚಿದ… ಹಾವು ಸತ್ತಿತು, ವ್ಯಕ್ತಿ ಬದುಕಿದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್

RJD: ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್

1-aaaa

Mumbai; ಟೀಮ್ ಇಂಡಿಯಾ ಸ್ವಾಗತ ಮೆರವಣಿಗೆ ಬಳಿಕ ಭಾರೀ ಕಸ ಸಂಗ್ರಹ

pune

Pune Porsche crash; 300 ಪದಗಳ ಪ್ರಬಂಧ ಬರೆದು ಸಲ್ಲಿಸಿದ ಬಾಲಾಪರಾಧಿ

ತನಗೆ ಕಚ್ಚಿದ ಹಾವಿಗೆ ಎರಡು ಬಾರಿ ಕಚ್ಚಿದ ವ್ಯಕ್ತಿ… ಹಾವು ಸತ್ತಿತು, ವ್ಯಕ್ತಿ ಬದುಕಿದ

Snake: ಹಾವು ಕಚ್ಚಿತೆಂದು ಹಾವಿಗೆ ಎರಡು ಬಾರಿ ಕಚ್ಚಿದ… ಹಾವು ಸತ್ತಿತು, ವ್ಯಕ್ತಿ ಬದುಕಿದ

Panaji: ಮಹದಾಯಿ ಪ್ರವಾಹ ಪ್ರಾಧಿಕಾರದ ನಿಯೋಗದಿಂದ ಕಳಸಾ ಬಂಡೂರಿ ಕಾಮಗಾರಿ ಪರಿಶೀಲನೆ

Panaji: ಮಹದಾಯಿ ಪ್ರವಾಹ ಪ್ರಾಧಿಕಾರದ ನಿಯೋಗದಿಂದ ಕಳಸಾ ಬಂಡೂರಿ ಕಾಮಗಾರಿ ಪರಿಶೀಲನೆ

MUST WATCH

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

udayavani youtube

ಅಬ್ಬಬ್ಬಾ ನೀವೆಂದೂ ಕಂಡಿರದ Coin Collection ನೋಡಿ

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

ಹೊಸ ಸೇರ್ಪಡೆ

Road Mishap ಶಿವಪುರ: ಜೆಸಿಬಿ-ಬೈಕ್ ಡಿಕ್ಕಿ : ಪತ್ರಿಕೆ ವಿತರಕ ಸಾವು

Road Mishap ಶಿವಪುರ: ಜೆಸಿಬಿ-ಬೈಕ್ ಡಿಕ್ಕಿ: ಪತ್ರಿಕೆ ವಿತರಕ ಸಾವು

RadhaMohan-das

BJP Incharge: ರಾಜ್ಯ ಬಿಜೆಪಿಗೆ ಉಸ್ತುವಾರಿ, ಸಹ ಉಸ್ತುವಾರಿ ನೇಮಕ

ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್

RJD: ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್

ಕರ್ಮಫ‌ಲ ಶಿಕಣದಿಂದ ಆತ್ಮೋನ್ನತಿ; ಬ್ರಹ್ಮಕುಮಾರೀಸ್‌ ಈಶ್ವರೀಯ ವಿಶ್ವವಿದ್ಯಾಲಯದ ಬಿ.ಕೆ. ಕರುಣ

ಕರ್ಮಫ‌ಲ ಶಿಕಣದಿಂದ ಆತ್ಮೋನ್ನತಿ; ಬ್ರಹ್ಮಕುಮಾರೀಸ್‌ ಈಶ್ವರೀಯ ವಿಶ್ವವಿದ್ಯಾಲಯದ ಬಿ.ಕೆ. ಕರುಣ

Bajaj

Bajaj Freedom: ಬಜಾಜ್‌ ಫ್ರೀಡಂ 125 CNG ಬೈಕ್‌ ಭಾರತದಲ್ಲಿ ಬಿಡುಗಡೆ; ಬೆಲೆ ಎಷ್ಟು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.