T20 World Cup:‌ ಬಾಂಗ್ಲಾ ವಿರುದ್ಧ ಗೆದ್ದು ಸೆಮಿಫೈನಲ್‌ ಗೇರಿದ ಅಘ್ಘಾನ್; ಆಸೀಸ್‌ಗೆ ಆಘಾತ


Team Udayavani, Jun 25, 2024, 11:18 AM IST

T20 World Cup:‌ ಬಾಂಗ್ಲಾ ವಿರುದ್ಧ ಗೆದ್ದು ಸೆಮಿಫೈನಲ್‌ ಗೇರಿದ ಅಘ್ಘಾನ್; ಆಸೀಸ್‌ಗೆ ಆಘಾತ

ಕಿಂಗ್‌ ಸ್ಟನ್:‌ ಟಿ20 ವಿಶ್ವಕಪ್‌ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಅಫ್ಘಾನಿಸ್ಥಾನ ಬಾಂಗ್ಲಾದೇಶವನ್ನು ಮಣಿಸಿ ಚೊಚ್ಚಲ ಬಾರಿಗೆ ಸೆಮಿಫೈನಲ್ ಗೇರಿದೆ.

ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಗಿಳಿದ ಅಫ್ಘಾನಿಸ್ಥಾನ ಆರಂಭದಲ್ಲಿ ಜೊತೆಯಾಟ ನೀಡಿದ ಬಳಿಕ ಮಂದಗತಿಯ ಆಟವನ್ನು ಆಡಿತು.

ಗುರ್ಬಜ್‌(43 ರನ್), ಇಬ್ರಾಹಿಂ ಜದ್ರಾನ್‌(18‌ ರನ್) ಪವರ್‌ ಪ್ಲೇ ಓವರ್‌ ನಲ್ಲಿ ಬಿರುಸಿನ ಆಟವನ್ನು ನೀಡಿದ ಬಳಿಕ ಅಘ್ಘಾನ್‌ ತಂಡದ ಇತರೆ ಬ್ಯಾಟರ್‌ ಗಳು ಕನಿಷ್ಠ ರನ್‌ ಬಾರಿಸಿ ಪೆವಿಲಿಯನ್‌ ನತ್ತ ಸಾಗಿದರು.

ಅಂತಿಮ ಹಂತದಲ್ಲಿ ಬಂದ ಕ್ಯಾಪ್ಟನ್‌ ರಶೀದ್‌ ಖಾನ್‌ 19 ರನ್‌ ಬಾರಿಸಿ ನೂರಾರ ಗಡಿದಾಟಿಸಿದರು.

ಬಾಂಗ್ಲಾದ ಪರವಾಗಿ ರಿಶಾದ್ ಹುಸೇನ್‌ 3 ಪ್ರಮುಖ ವಿಕೆಟ್‌ ಗಳನ್ನು ಪಡೆದರು. ಮುಸ್ತಫಿಜುರ್, ತಸ್ಕಿನ್ ಅಹ್ಮದ್ ತಲಾ 1 ವಿಕೆಟ್‌ ಪಡೆದರು.‌

20 ಓವರ್‌ ನಲ್ಲಿ 5 ವಿಕೆಟ್‌ ಕಳೆದುಕೊಂಡು 115 ರನ್‌ ಗಳ ಕನಿಷ್ಠ ಗುರಿಯನ್ನು ಅಘ್ಘಾನ್‌ ಬಾಂಗ್ಲಾಕ್ಕೆ ನೀಡಿತು.

12.1 ಓವರ್‌ ಯೊಳಗೆ ಪಂದ್ಯವನ್ನು ಗೆದ್ದರೆ ಬಾಂಗ್ಲಾ ಕೂಡ ಸೆಮಿಪೈನಲ್‌ ಗೆ ಹೋಗುವ ಅವಕಾಶವಿತ್ತು. ಈ ಕಾರಣದಿಂದ ಆರಂಭದಲ್ಲೇ ಬಿರುಸಿದ ಬ್ಯಾಟಿಂಗ್‌ ಮಾಡಲು ಬಾಂಗ್ಲಾ ಆಟಗಾರರು ಮುಂದಾದರು.

ಆರಂಭಿಕ ಆಟಗಾರ ಲಿಟನ್‌ ದಾಸ್ 54 ರನ್‌ ಗಳಿಸಿ ಔಟಾಗದೆ ತಂಡವನ್ನು ಗೆಲುವಿನತ್ತ ಸಾಗಿಸಲು ಪ್ರಯತ್ನಿಸಿದರು. ಆದರೆ ಉಳಿದ ಆಟಗಾರರು ಸಾಲಾಗಿ ವಿಕೆಟ್‌ ಒಪ್ಪಿಸುತ್ತಾ ಹೋದರು. ಬಾಂಗ್ಲಾದ ಭರವಸೆ ಆಟಗಾರರಾದ ಶಾಕಿಬ್ ಅಲ್ ಹಸನ್, ತಂಝೀದ್ ಹಸನ್, ನಜ್ಮುಲ್ ಹೊಸೈನ್ ಶಾಂತೋ, ಸೌಮ್ಯ ಸರ್ಕಾರ್, ಮಹಮ್ಮದುಲ್ಲಾ ಎರಡಂಕಿ ರನ್‌ ಗಳಿಸಲೂ ಕೂಡ ಪರದಾಡುವ ಸ್ಥಿತಿ ಕಂಡುಬಂತು.

ಕನಿಷ್ಠ ಮೊತ್ತದ ಪಂದ್ಯದಲ್ಲಿ ಅಘ್ಘಾನ್‌ ಬ್ಯಾಟರ್‌ ಗಳನ್ನು ಕಟ್ಟಿಹಾಕಿ ಪಂದ್ಯದ ಮೇಲೆ ಗರಿಷ್ಠ ಒತ್ತಡವನ್ನು ಹಾಕಿದರು. ಒಂದು ಹಂತದಲ್ಲಿ ಸುಲಭವಾಗಿ ಪಂದ್ಯವನ್ನು ಗೆಲುವ ಸಾಧ್ಯತೆಯಿದ್ದ ಪಂದ್ಯದಲ್ಲಿ ಅಘ್ಘಾನ್‌ ಬೌಲರ್‌ ಗಳು ಮೈಲುಗೈ ಸಾಧಿಸಿದರು.

ಮಳೆಯ ಕಾರಣದಿಂದ ಪಂದ್ಯವನ್ನು 19 ಓವರ್‌ ಗೆ ಇಳಿಸಲಾಗಿತ್ತು. 114 ರ ಗುರಿಯನ್ನು ನೀಡಲಾಗಿತ್ತು.

ನವೀನ್‌ ಉಲ್‌ ಹಕ್‌ ಹಾಗೂ ನಾಯಕ ರಶೀದ್‌ ಖಾನ್‌ ಅವರ ಬೌಲಿಂಗ್‌ ಬಾಂಗ್ಲಾದ ಬ್ಯಾಟರ್‌ ಗಳು ತತ್ತರಿಸಿದರು. ನವೀನ್‌ ಹಾಗೂ ರಶೀದ್‌ ತಲಾ 4 ವಿಕೆಟ್‌ ಗಳನ್ನು ಪಡೆದರು.

ಅಘ್ಘಾನ್‌ ಇದೇ ಮೊದಲ ಬಾರಿಗೆ ಐಸಿಸಿ ಟೂರ್ನಿಯಲ್ಲಿ ಸೆಮಿಫೈನಲ್‌ ಪ್ರವೇಶವನ್ನು ಪಡೆದಿದೆ. ಇನ್ನೊಂದೆಡೆ  ಆಸ್ಟ್ರೇಲಿಯಾ ಟೂರ್ನಿಯಿಂದ ಹೊರಬಿದ್ದಿದೆ.

ಮೊದಲ ಸೆಮಿಫೈನಲ್‌ ಜೂ.26 ರಂದು ದಕ್ಷಿಣ ಆಫ್ರಿಕಾ – ಅಫ್ಘಾನಿಸ್ತಾನ ನಡುವೆ ನಡೆಯಲಿದೆ. ಎರಡನೇ ಸೆಮಿಫೈನಲ್‌ ಜೂ.27 ರಂದು ಭಾರತ – ಇಂಗ್ಲೆಂಡ್‌ ನಡುವೆ ನಡೆಯಲಿದೆ.

ಟಾಪ್ ನ್ಯೂಸ್

Road

Traffic Jam: ಬಿ.ಸಿ.ರೋಡು-ಕಲ್ಲಡ್ಕ ಮಧ್ಯೆ ಹದಗೆಟ್ಟ ಹೆದ್ದಾರಿ

ಸೇತುವೆ ದುಃಸ್ಥಿತಿ; ಘನ ವಾಹನ ಸಂಚಾರ ನಿಷೇಧ

Bridge ದುಃಸ್ಥಿತಿ; ಘನ ವಾಹನ ಸಂಚಾರ ನಿಷೇಧ: ಜಿಲ್ಲಾಧಿಕಾರಿ ಆದೇಶ

Mangaluru ಉಳಾಯಿಬೆಟ್ಟು ಉದ್ಯಮಿಯ ಮನೆ ದರೋಡೆ ಪ್ರಕರಣ: 8 ಮಂದಿ ಪೊಲೀಸರ ವಶಕ್ಕೆ

Mangaluru ಉಳಾಯಿಬೆಟ್ಟು ಉದ್ಯಮಿಯ ಮನೆ ದರೋಡೆ ಪ್ರಕರಣ: 8 ಮಂದಿ ಪೊಲೀಸರ ವಶಕ್ಕೆ

Rain ಕರಾವಳಿಯಲ್ಲಿ ಸಾಧಾರಣ ಮಳೆ: ಜು. 5ರಿಂದ “ಆರೆಂಜ್‌ ಅಲರ್ಟ್‌’

Rain ಕರಾವಳಿಯಲ್ಲಿ ಸಾಧಾರಣ ಮಳೆ: ಜು. 5ರಿಂದ “ಆರೆಂಜ್‌ ಅಲರ್ಟ್‌’

Shiroor : ಗಾಳಿ ಮಳೆಗೆ ಹಾರಿ ಹೋದ ಹೊಟೇಲ್‌ ಮೇಲ್ಛಾವಣಿ

Shiroor : ಗಾಳಿ ಮಳೆಗೆ ಹಾರಿ ಹೋದ ಹೊಟೇಲ್‌ ಮೇಲ್ಛಾವಣಿ

Kodagu: ಆನೆ ದಾಳಿ; ರಿಕ್ಷಾ ಜಖಂ, ತೋಟಕ್ಕೆ ಹಾನಿ

Kodagu: ಆನೆ ದಾಳಿ; ರಿಕ್ಷಾ ಜಖಂ, ತೋಟಕ್ಕೆ ಹಾನಿ

Elephant ತುಳಿತದಿಂದ ಜೀವ ಹಾನಿ ತಡೆಗೆ ಕಾರ್ಯಾಗಾರ

Elephant ತುಳಿತದಿಂದ ಜೀವ ಹಾನಿ ತಡೆಗೆ ಕಾರ್ಯಾಗಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wimbledon-2024: Shock for champion Vondrousova

Wimbledon-2024: ಚಾಂಪಿಯನ್‌ ವೊಂಡ್ರೂಸೋವಾಗೆ ಆಘಾತ

bajrang punia

ನಾಡಾ ನನ್ನನ್ನು ಗುರಿಯಾಗಿಸಿ  ದಾಳಿ ಮಾಡುತ್ತಿದೆ: ಬಜರಂಗ್‌

T20 World Cup Final; ಸೂರ್ಯ ಕ್ಯಾಚ್ ಬಗ್ಗೆ ಅನುಮಾನ ಪಟ್ಟವರಿಗೆ ಸಿಕ್ಕಿತು ಉತ್ತರ

T20 World Cup Final; ಸೂರ್ಯ ಕ್ಯಾಚ್ ಬಗ್ಗೆ ಅನುಮಾನ ಪಟ್ಟವರಿಗೆ ಸಿಕ್ಕಿತು ಉತ್ತರ

Badminton Player: ಪಂದ್ಯಾವಳಿ ವೇಳೆ ಹೃದಯಾಘಾತಗೊಂಡು ಯುವ ಬ್ಯಾಡ್ಮಿಂಟನ್ ಆಟಗಾರ ಮೃತ್ಯು…

Badminton Player: ಪಂದ್ಯಾವಳಿ ವೇಳೆ ಹೃದಯಾಘಾತಗೊಂಡು ಕುಸಿದು ಬಿದ್ದ ಬ್ಯಾಡ್ಮಿಂಟನ್ ಆಟಗಾರ

Zimbabwe series; ಮತ್ತೆ ತಂಡದಲ್ಲಿ ಬದಲಾವಣೆ; ಟೀಂ ಇಂಡಿಯಾ ಸೇರಿದ ಮೂವರು ಯುವ ಆಟಗಾರರು

Zimbabwe series; ಮತ್ತೆ ತಂಡದಲ್ಲಿ ಬದಲಾವಣೆ; ಟೀಂ ಇಂಡಿಯಾ ಸೇರಿದ ಮೂವರು ಯುವ ಆಟಗಾರರು

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

Road

Traffic Jam: ಬಿ.ಸಿ.ರೋಡು-ಕಲ್ಲಡ್ಕ ಮಧ್ಯೆ ಹದಗೆಟ್ಟ ಹೆದ್ದಾರಿ

ಸೇತುವೆ ದುಃಸ್ಥಿತಿ; ಘನ ವಾಹನ ಸಂಚಾರ ನಿಷೇಧ

Bridge ದುಃಸ್ಥಿತಿ; ಘನ ವಾಹನ ಸಂಚಾರ ನಿಷೇಧ: ಜಿಲ್ಲಾಧಿಕಾರಿ ಆದೇಶ

Mangaluru ಉಳಾಯಿಬೆಟ್ಟು ಉದ್ಯಮಿಯ ಮನೆ ದರೋಡೆ ಪ್ರಕರಣ: 8 ಮಂದಿ ಪೊಲೀಸರ ವಶಕ್ಕೆ

Mangaluru ಉಳಾಯಿಬೆಟ್ಟು ಉದ್ಯಮಿಯ ಮನೆ ದರೋಡೆ ಪ್ರಕರಣ: 8 ಮಂದಿ ಪೊಲೀಸರ ವಶಕ್ಕೆ

Rain ಕರಾವಳಿಯಲ್ಲಿ ಸಾಧಾರಣ ಮಳೆ: ಜು. 5ರಿಂದ “ಆರೆಂಜ್‌ ಅಲರ್ಟ್‌’

Rain ಕರಾವಳಿಯಲ್ಲಿ ಸಾಧಾರಣ ಮಳೆ: ಜು. 5ರಿಂದ “ಆರೆಂಜ್‌ ಅಲರ್ಟ್‌’

Shiroor : ಗಾಳಿ ಮಳೆಗೆ ಹಾರಿ ಹೋದ ಹೊಟೇಲ್‌ ಮೇಲ್ಛಾವಣಿ

Shiroor : ಗಾಳಿ ಮಳೆಗೆ ಹಾರಿ ಹೋದ ಹೊಟೇಲ್‌ ಮೇಲ್ಛಾವಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.