Sagara: ಭಾಗವತ ವೇಣುಗೋಪಾಲ ಕೆಳಮನೆ ಇನ್ನಿಲ್ಲ
Team Udayavani, Jun 25, 2024, 5:08 PM IST
ಸಾಗರ: ತಾಲೂಕಿನ ಸಿಗಂದೂರು ಚೌಡಮ್ಮದೇವಿ ಕೃಪಾಪೋಷಿತ ಯಕ್ಷಗಾನ ಮೇಳದ ಭಾಗವತರಾಗಿ ಕಾರ್ಯ ನಿರ್ವಹಿಸುತ್ತಿದ್ದ ಕೆ.ಜಿ. ವೇಣುಗೋಪಾಲ ಕೆಳಮನೆ(44) ಅಪಘಾತದಿಂದ ತೀವ್ರವಾಗಿ ಗಾಯಗೊಂಡಿದ್ದ ಹಿನ್ನೆಲೆ ಮಂಗಳವಾರ ಕೊನೆಯುಸಿರೆಳೆದಿದ್ದಾರೆ.
ಮೃತರು ತಂದೆ, ಭಾಗವತ ಕೆ.ಜಿ.ರಾಮರಾವ್, ತಾಯಿ ಹಾಗೂ ಓರ್ವ ಸಹೋದರನನ್ನು ಅಗಲಿದ್ದಾರೆ.
ಕಲಾವಿದರ ಕುಟುಂಬದ ಕುಡಿಯಾಗಿದ್ದ ವೇಣುಗೋಪಾಲ ಉಡುಪಿಯ ಕಲಾಕೇಂದ್ರದಲ್ಲಿ ಭಾಗವತಿಕೆ ಸೇರಿದಂತೆ ಯಕ್ಷಗಾನದ ಸಾಂಪ್ರದಾಯಿಕ ಶಿಕ್ಷಣ ಪಡೆದಿದ್ದರು. ಈ ಹಿಂದೆ ಸಾಲಿಗ್ರಾಮ ಮೇಳದ ಭಾಗವತರಾಗಿಯೂ ಕೆಲಸ ಮಾಡಿದ್ದರು. ಕೆಲಕಾಲ ಉಡುಪಿ ಕಲಾಕೇಂದ್ರದಲ್ಲಿ ಗುರುಗಳಾಗಿಯೂ ಕೆಲಸ ಮಾಡಿದ್ದರು. ಇತ್ತೀಚಿನ ವರ್ಷಗಳಲ್ಲಿ ಸಿಗಂದೂರು ಮೇಳದಲ್ಲಿ ಭಾಗವತರ ತಂಡದಲ್ಲಿ ಕೆಲಸ ಮಾಡಿದ್ದ ಅವರು ಬರಲಿರುವ ಋತುವಿನಿಂದ ಮೇಳದ ಮುಖ್ಯ ಭಾಗವತರಾಗಿ ಕಾರ್ಯ ನಿರ್ವಹಿಸುತ್ತಾರೆ ಎಂಬ ಮಾಹಿತಿ ಲಭ್ಯವಾಗಿತ್ತು.
ರಂಗ ಪ್ರದರ್ಶನ ಹಾಗೂ ಭಾಗವತಿಕೆಗಳೆರಡರಲ್ಲೂ ಅವರು ತಮ್ಮ ಛಾಪು ತೋರಿಸಿದ್ದರು. ಬಯಲಾಟದ ಪ್ರಸಂಗಗಳಿಗೂ ಭಾಗವತರಾಗಿ ಕಾರ್ಯ ನಿರ್ವಹಿಸುವ ಮೂಲಕ ಅವರು ಗಮನ ಸೆಳೆದಿದ್ದರು.
ಸೋಮವಾರ ಬೈಕ್ನಲ್ಲಿ ತೆರಳುತ್ತಿದ್ದ ವೇಳೆಯಲ್ಲಿ ಅಪಘಾತವಾಗಿ ತಲೆಗೆ ತೀವ್ರ ತರಹದ ಗಾಯಗಳಾಗಿತ್ತು. ಈ ಕಾರಣ ಶಿವಮೊಗ್ಗದ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosanagara: ಅಪಘಾತವಾಗಿ ಪಲ್ಟಿಯಾದ 50ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಸರಕಾರಿ ಬಸ್
Sagara; ಮರ ಕತ್ತರಿಸುತ್ತಿದ್ದಾಗ ಕೊಂಬೆ ಬಿದ್ದು ವ್ಯಕ್ತಿ ಸಾವು
Sagara: ತಮ್ಮ ವ್ಯಾಪ್ತಿಯಲ್ಲೇ ಕೆಲಸ ಮಾಡಲು ವಿಎಗಳಿಗೆ ಸೂಚನೆ; ಕಾಗೋಡು ಆಗ್ರಹ
Shimoga; ಮಠಾಧೀಶರಿಗೆ ದೇವರ ಸ್ಥಾನ ಕೊಟ್ಟಿದ್ದೇವೆ, ಆದರೆ ಕಾಂಗ್ರೆಸ್ ನವರು….: ಈಶ್ವರಪ್ಪ
Shivamogga; ಅಪಘಾತದಲ್ಲಿ ಮಡಿದವರ ಎಮ್ಮೆಹಟ್ಟಿಯ ಮನೆಗಳಿಗೆ ಕೇಂದ್ರ ಸಚಿವ ಎಚ್ ಡಿಕೆ ಭೇಟಿ
MUST WATCH
ಹೊಸ ಸೇರ್ಪಡೆ
Hosanagara: ಅಪಘಾತವಾಗಿ ಪಲ್ಟಿಯಾದ 50ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಸರಕಾರಿ ಬಸ್
Sagara; ಮರ ಕತ್ತರಿಸುತ್ತಿದ್ದಾಗ ಕೊಂಬೆ ಬಿದ್ದು ವ್ಯಕ್ತಿ ಸಾವು
Irrigation: ರೈತರ ವಿಚಾರದಲ್ಲಿ ರಾಜಕಾರಣ ಮಾಡದಿರಿ: ಸಚಿವ ತಿಮ್ಮಾಪುರ
Congress Govt ಸಿಎಂ, ಡಿಸಿಎಂ ಆಯ್ಕೆ ಹೈಕಮಾಂಡ್ಗೆ ಬಿಟ್ಟ ವಿಚಾರ: ಸಚಿವ ತಿಮ್ಮಾಪುರ
New criminal law ಅಡಿಯಲ್ಲಿ ಕನ್ನಡಿಗನ ವಿರುದ್ಧ ಮೊದಲ ಕೇಸ್ ದಾಖಲಿಸಿದ ಕೇರಳ ಪೊಲೀಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.