Sirsi: ಫಂಡರಾಪುರಕ್ಕೆ ವಿಶೇಷ ರೈಲ್ವೆ: ಕಾಗೇರಿ ಮನವಿಗೆ ಕೇಂದ್ರ ಸಚಿವರ ತಕ್ಷಣ ಸ್ಪಂದನೆ
Team Udayavani, Jun 25, 2024, 5:27 PM IST
ಶಿರಸಿ: ವಾರಕರಿ ಸಂಪ್ರದಾಯದವರು ಫಂದರಾಪುರ ವಾರಿ ಆಚರಣೆ ಹಿನ್ನೆಲೆ ಫಂಡರಾಪುರಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಹಿನ್ನೆಲೆ ಯಶವಂತಪುರ -ಫಂಡರಾಪುರ ಎಕ್ಸ್ಪ್ರೆಸ್ ರೈಲನ್ನು (ಸಂಖ್ಯೆ-16541) ವಾರಕ್ಕೊಮ್ಮೆ ಬದಲಾಗಿ ಜೂನ್ 25 ರಿಂದ ಜುಲೈ 30ರ ವರೆಗೆ ಪ್ರತಿ ತ್ಯ ಸಂಚರಿಸುವಂತೆ ಮಾಡಬೇಕು ಎನ್ನುವ ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾಡಿದ ಮನವಿಗೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಕ್ಷಣ ಸ್ಪಂದಿಸಿದ್ದಾರೆ.
ನವದೆಹಲಿಯಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಸಚಿವರನ್ನು ಭೇಟಿ ಮಾಡಿ ಈ ಕುರಿತು ಮನವಿ ಸಲ್ಲಿಸಿದರು. ಜೂನ್ 25 ರಿಂದ ಜುಲೈ 30ರವರೆಗೆ ರೈಲು ಪ್ರತಿದಿನ ಚಲಿಸಿದರೆ ಅಪಾರ ಸಂಖ್ಯೆಯ ಯಾತ್ರಾರ್ಥಿಗಳಿಗೆ ಹೆಚ್ಚಿನ ಪ್ರಯೋಜನವಾಗುತ್ತದೆ. ಆದ್ದರಿಂದ ಈ ಮನವಿಯನ್ನು ಪರಿಗಣಿಸಿ ಯಶವಂತಪುರ ಎಕ್ಸ್ಪ್ರೆಸ್ ರೈಲು ಸೇವೆಯನ್ನು ನಿತ್ಯ ನೀಡಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ವಿನಂತಿಸಿದರು.
ತಕ್ಷಣ ಸ್ಪಂದಿಸಿದ ಸಚಿವ ಅಶ್ವಿನಿ ವೈಷ್ಣವ್, ಈ ಬಗ್ಗೆ ಕೂಡಲೆ ಅಧಿಕಾರಿಗಳ ಜೊತೆ ಮಾತನಾಡಿ, ಹುಬ್ಬಳ್ಳಿಯಿಂದ ಪಂಡರಾಪುರಕ್ಕೆ ಜೂನ್ 28 ಹಾಗೂ 29 ರಂದು ವಿಶೇಷ ರೈಲು ಪ್ರಯಾಣಿಸಲಿದೆ ಎಂಬ ಭರವಸೆ ನೀಡಿ, ಅಧಿಕೃತ ಪ್ರಕಟನೆ ಹೊರಡಿಸಿದರು.
ಈ ಮೊದಲು ನಿಟ್ಟೂರಿನ ರಮೇಶ್ ಎಸ್. ನಾರ್ವೇಕರ್ ಮತ್ತು ಖಾನಾಪುರದ ಶಾಂತಾರಾಮ ಗಂಗಾರಾಮ ಹೆಬ್ಬಾಳ್ಕರ್ ಅವರು ಹುಬ್ಬಳ್ಳಿಯಿಂದ ಫಂಡರಾಪುರಕ್ಕೆ ರೈಲು ಸೇವೆಯ ಸಮಸ್ಯೆಯ ಕುರಿತು ವಾರಕರಿಯ ಸಂಪ್ರದಾಯದ ಜನರ ಪರವಾಗಿ ಕಾಗೇರಿಗೆ ಮನವಿ ಸಲ್ಲಿಸಿದ್ದರು.
ಈ ಹಿನ್ನೆಲೆ ಕಾಗೇರಿ ಕೇಂದ್ರ ಸಚಿವರನ್ನು ಭೇಟಿಯಾಗಿ ಈ ಕುರಿತು ಮನವಿ ಮಾಡಿ, ರೈಲಿನ ಅಗತ್ಯತೆಯನ್ನು ಮನದಟ್ಟು ಮಾಡಿದರು. ತಮ್ಮ ಮನವಿಗೆ ಸ್ಪಂದಿಸಿದ ಸಚಿವರಿಗೆ ವಿಶ್ವೇಶ್ವರ ಹೆಗಡೆ ಕಾಗೇರಿ ಧನ್ಯವಾದ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Guarantee Schemes: ಸಿರಿವಂತರು ಉಚಿತ ಯೋಜನೆ ಬಳಸುವುದು ಸೂಕ್ತವಲ್ಲ-ಆರ್.ವಿ.ದೇಶಪಾಂಡೆ
America ಸೌಂದರ್ಯ ಸ್ಪರ್ಧೆ: ಶಿರಸಿ ಮೂಲದ ಡಾ|ಶ್ರುತಿಗೆ ಕಿರೀಟ
15 ದಿನದಲ್ಲಿ ಸಮಸ್ಯೆಗೆ ಸ್ಪಂದಿಸಿ.. ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಶಾಸಕ ಭೀಮಣ್ಣ ನಾಯ್ಕ
ಶಿರಸಿಯ ಅದ್ವೈತನಿಗೆ ಇಂಟರ್ ನ್ಯಾಷನಲ್ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Tata Steel ಅಖಿಲ ಭಾರತ ವಿಶೇಷ ಚೇತನರ ಚೆಸ್ ಟೂರ್ನಿ; ಹೊನ್ನಾವರದ ಸಮರ್ಥ ಚಾಂಪಿಯನ್
MUST WATCH
ಹೊಸ ಸೇರ್ಪಡೆ
Shivamogga: ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ; 8ಕ್ಕೂ ಅಧಿಕ ಅಂಗಡಿಗಳು ಸುಟ್ಟು ಕರಕಲು
Horoscope: ಅಕಸ್ಮಾತ್ ಧನಾಗಮ ಯೋಗ ನಿಮ್ಮದಾಗಲಿದೆ
Government ಹೊಸ ಅಪರಾಧ ಸಂಹಿತೆಗೆ ರಾಜ್ಯದಲ್ಲಿ ತಿದ್ದುಪಡಿ
CM DCM ಹೇಳಿಕೆ ನಿಲ್ಲಿಸದಿದ್ದರೆ ಶೋಕಾಸ್ ನೋಟಿಸ್: ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಎಚ್ಚರಿಕೆ
Australia;ಇನ್ನು ವಿದ್ಯಾರ್ಥಿ ಶುಲ್ಕ ದುಪ್ಪಟ್ಟು: ಭಾರತೀಯರಿಗೂ ಸಂಕಷ್ಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.