Kunigal: ಗಮನ ಬೇರೆಡೆಗೆ ಸೆಳೆದು 3.30 ಲಕ್ಷ ರೂ. ಹಣ ದೋಚಿ ಪರಾರಿಯಾದ ದುಷ್ಕರ್ಮಿಗಳು


Team Udayavani, Jun 25, 2024, 5:53 PM IST

5-Kunigal

ಕುಣಿಗಲ್: ಬಾರ್ ಕ್ಯಾಶಿಯರ್‌ನ ಗಮನ ಬೇರೆಡೆಗೆ ಸೆಳೆದು ಲಕ್ಷಾಂತ ರೂ. ನಗದು ಹಣ ಕಳವು ಮಾಡಿ ಹೋಗಿರುವ ಘಟನೆ ಜೂ.25ರ ಮಂಗಳವಾರ ಹಾಡುಹಗಲೇ ಪಟ್ಟಣ ಕೆಆರ್‌ಎಸ್ ಅಗ್ರಹಾರದ ಎಸ್‌ಬಿಐ ಬ್ಯಾಂಕ್ ಮುಂಭಾಗ ನಡೆದಿದೆ.

ಪಟ್ಟಣದ ಜೆ.ಕೆ.ಬಾರ್ ಸಹಾಯಕ ಕ್ಯಾಶಿಯರ್ ವೆಂಕಟೇಶ್ ದುಷ್ಕರ್ಮಿಗಳ ಮೋಸಕ್ಕೆ ಒಳಗಾದ ವ್ಯಕ್ತಿಯಾಗಿದ್ದಾನೆ.

ಘಟನೆ ವಿವರ: ಮಂಗಳವಾರ ಬಾರ್ ಸಹಾಯಕ ಕ್ಯಾಶಿಯರ್ ವೆಂಕಟೇಶ್ ಎಸ್‌ಬಿಐ ಬ್ಯಾಂಕ್‌ಗೆ 5 ಲಕ್ಷ ರೂ. ಹಣ ಕಟ್ಟಲೆಂದು ಹಣವನ್ನು ಪ್ಲಾಸ್ಟಿಕ್ ಕವರ್‌ನಲ್ಲಿ ಇಟ್ಟು ಬೈಕ್‌ನಲ್ಲಿ ಇಲ್ಲಿನ ಕೆ.ಆರ್.ಎಸ್ ಅಗ್ರಹಾರದ ಎಸ್‌ಬಿಐ ಬ್ಯಾಂಕ್‌ಗೆ ಬಂದರು. ಬೈಕ್ ಬ್ಯಾಂಕ್ ಮುಂಭಾಗ ನಿಲ್ಲಿಸಿ 1.70 ಲಕ್ಷ ರೂ.ಗಳನ್ನು ಬ್ಯಾಂಕ್‌ನಲ್ಲಿ ಕಟ್ಟಿ, ಉಳಿದ 3.30 ಲಕ್ಷ ರೂ. ಗಳನ್ನು ಪಟ್ಟಣದ ಪುರಸಭೆ ಬಳಿಯಿರುವ ಎಸ್‌ಬಿಐ ಬ್ಯಾಂಕ್‌ಗೆ ಕಟ್ಟಲೆಂದು, ಹಣದ ಕವರ್ ಹಿಡಿದುಕೊಂಡು ಬೈಕ್ ಹತ್ತಿ ಕುಳಿತುಕೊಂಡು ಮೊಬೈಲ್‌ನಲ್ಲಿ ಮಾತನಾಡುತ್ತಿದ್ದ ವೇಳೆ2 ಬೈಕ್‌ನಲ್ಲಿ ಬಂದ ನಾಲ್ವರು ಅವರ ಜೇಬಿನಿಂದ 50 ರೂ.ಗಳ 10 ನೋಟುಗಳನ್ನು ವೆಂಕಟೇಶ್ ಕುಳಿತಿದ್ದ ಬೈಕ್ ಬಳಿ ಎಸೆದಿದ್ದಾರೆ.

ಬಳಿಕ ನಿಮ್ಮ ಹಣ ಬಿದ್ದಿದೆ ಎಂದು ವೆಂಕಟೇಶ್‌ಗೆ ಹೇಳಿ, ವೆಂಕಟೇಶ್ ಗಮನವನ್ನು ಬೇರೆಡೆಗೆ ಸೆಳೆದರು. ಆ ಸಂದರ್ಭದಲ್ಲಿ ವೆಂಕಟೇಶ್ ಬೈಕ್ ಬಳಿ ಬಿದ್ದಿದ ಹಣ ಹೆಕ್ಕಿಕೊಳ್ಳಲು ಅವರ ಬಳಿಯಿದ್ದ 3.30 ಲಕ್ಷ ರೂ.ಗಳ ಹಣದ ಕವರನ್ನು ಬೈಕ್ ಮೇಲೆ ಇಟ್ಟು ನೆಲಕ್ಕೆ ಬಗ್ಗಿ ಎತ್ತುಕೊಳ್ಳಲು ಮುಂದಾಗಿದ್ದರು.

ಈ ವೇಳೆ ಪ್ಲಾಸ್ಟಿಕ್ ಕವರ್‌ನಲ್ಲಿದ್ದ ಹಣವನ್ನು ಕಳ್ಳರು ಕ್ಷಣಾರ್ಥದಲ್ಲಿ ತೆಗೆದುಕೊಂಡು ಪರಾರಿಯಾಗಿದ್ದಾರೆ.  ಬೈಕ್ ಮೇಲೆ ಇಟ್ಟಿದ್ದ ಹಣದ ಕವರ್ ಇಲ್ಲದನ್ನು ನೋಡಿ ಗಾಬರಿಗೊಂಡ ವೆಂಕಟೇಶ್ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.

ಸಿಪಿಐ ನವೀನ್‌ಗೌಡ, ಪಿಎಸ್‌ಐ ಕೃಷ್ಣಕುಮಾರ್ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KN-Rajaanna

Congress: ಹೈಕಮಾಂಡ್‌ ಒಪ್ಪಿಗೆ ಮೇರೆಗೆ ಶೋಷಿತರ ಸಮಾವೇಶ: ಕೆ.ಎನ್‌.ರಾಜಣ್ಣ

14-madhugiri

Madhugiri: 90 ಲಕ್ಷದ ಬೆಳೆ ವಿಮೆ ಹಣ ಅಕ್ರಮ ತನಿಖೆಗೆ ಆಗ್ರಹ

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

9

Koratagere: ಗುಡಿಸಲಿಗೆ ಆಕಸ್ಮಿಕ ಬೆಂ*ಕಿ; 4 ಮೇಕೆಗಳು ಸಜೀವ ದಹನ; ಇಬ್ಬರಿಗೆ ಗಾಯ

10

Koratagere: ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಫಿ‌ಲ್ಲಿಂಗ್; ಓರ್ವ ಆರೋಪಿ ಬಂಧನ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.