Koratagere: ಹೇಮಾವತಿ ನೀರು ರಾಮನಗರಕ್ಕೆ ಹರಿಸುವ ಕನಸನ್ನು ಶೀಘ್ರವೇ ಕೈಬಿಡಬೇಕು

ತುಮಕೂರು ಬಂದ್‌ಗೆ ಕೊರಟಗೆರೆ ನೀರಾವರಿ ಹೋರಾಟ ಸಮಿತಿ, ಕನ್ನಡಪರ ಸಂಘನೆಗಳ ಬೆಂಬಲ, ಯಶಸ್ವಿ ಕಂಡ ಪ್ರತಿಭಟನೆ

Team Udayavani, Jun 25, 2024, 7:47 PM IST

10-koratagere

ಕೊರಟಗೆರೆ: ಹೇಮಾವತಿ ನೀರು ಜಿಲ್ಲೆಯ ರೈತರಿಗೆ ಅತ್ಯವಶ್ಯಕವಾಗಿದೆ. ರೈತರಿದ್ದರೆ ದೇಶ ಮತ್ತು ನಾಡು. ಹಾಗಾಗಿ ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ಮುಖಾಂತರ ಇನ್ನೂ ಮುಂದೆ ರಾಮನಗರಕ್ಕೆ ಒಂದು ಹನಿಯು ಸಹ ಬಿಡುವುದಿಲ್ಲ. ಇಂದೇ ಈ ಕಾಮಗಾರಿಯ ಕನಸು ಕೈ ಬಿಡದಿದ್ದರೆ ಜಿಲ್ಲಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ಮಾಜಿ ಶಾಸಕ ಪಿಆರ್ ಸುಧಾಕರ್‌ಲಾಲ್ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ತುಮಕೂರು ಜಿಲ್ಲೆಯಲ್ಲಿ ಕಾವೇರಿ ನೀರಾವರಿ ನಿಗಮದಿಂದ ನಡೆಯುತ್ತಿರುವ ಹೇಮಾವತಿ ಲಿಂಕ್ ಕಾಮಗಾರಿ ವಿರೋಧಿಸಿ ಬಂದ್‌ಗೆ ರೈತ ಸಂಘಟನೆಗಳು, ಹೋರಾಟ ಸಮಿತಿ, ವಿವಿಧ ಕನ್ನಡಪರ ಸಂಘಟನೆಗಳು ತುಮಕೂರು ಬಂದ್‌ಗೆ ಕರೆ ನೀಡಿದ ಹಿನ್ನೆಲೆ ಮಂಗಳವಾರ ಕೊರಟಗೆರೆಯಲ್ಲೂ ಸಹ ಬಂದ್‌ಗೆ ಕರೆ ನೀಡಿ ಪಟ್ಟಣದ  ಕೆಎಸ್‌ಆರ್‌ಟಿಸಿ ಬಸ್‌ನಿಲ್ದಾಣದಿಂದ ತಾಲೂಕು ಕಚೇರಿಯವರೆಗೆ ಬೃಹತ್ ಪ್ರತಿಭಟನೆ ನಡೆಸಿ ಮಾತನಾಡಿದರು.

ಬಿಜೆಪಿ ಮಾಜಿ ಅಧ್ಯಕ್ಷ ಪವನ್‌ಕುಮಾರ್ ಮಾತನಾಡಿ, ರೈತರ ವಿರೋಧಿಯಾಗಿ ರಾಜ್ಯ ಸರ್ಕಾರ ನಡೆಯುತ್ತಿದೆ. ಹೇಮಾವತಿ ಎಕ್ಸೆಪ್ರೆಸ್ ಚಾನಲ್ ಮುಖಾಂತರ ಇಲ್ಲಿನ ಹೇಮಾವತಿ ನೀರನ್ನು ರಾಮನಗರ, ಮಾಗಡಿಗೆ ಹರಿಸಲು ಡಿಸಿಎಂ ಡಿ.ಕೆ ಶಿವಕುಮಾರ್ ಯೋಜನೆ ರೂಪಿಸಿಕೊಂಡಿದ್ದಾರೆ. ಅದರಿಂದ ಇದನ್ನು ಖಂಡಿಸಿ ತುಮಕೂರು ಜಿಲ್ಲಾದ್ಯಂತ ಪ್ರತಿಭಟನೆ ನಡೆಸಲಾಗುತ್ತಿದೆ. ನೀರಾವರಿ ವಿಚಾರಕ್ಕೆ ಮತ್ತೊಂದು ರಾಜ್ಯದ ಮೇಲೆ ಹೋರಾಟ ನಡೆಸಬೇಕಿತ್ತು. ಈಗ ರಾಜ್ಯದಲ್ಲಿಯೇ ನೀರಿಗಾಗಿ ಮತ್ತೊಂದು ಜಿಲ್ಲೆಯ ಜೊತೆ ಕಿತ್ತಾಡುವಂತೆ ಮಾಡಿದೆ ಈ ಸರ್ಕಾರ ಎಂದು ಆರೋಪ ಮಾಡಿದರು.

ಬಿಜೆಪಿ ಅಧ್ಯಕ್ಷ ದರ್ಶನ್ ಮಾತನಾಡಿ, ಹೇಮಾವತಿ ನೀರು ಈವರೆಗೂ ಜಿಲ್ಲೆಯಲ್ಲಿ ಪೂರ್ಣ ಪ್ರಮಾಣದಲ್ಲಿ ಹಂಚಿಕೆಯಾಗಿಲ್ಲ. ಹೇಮಾವತಿ ತುಮಕೂರು ಜಿಲ್ಲೆಗೆ 24 ಟಿಎಂಸಿ ಮಾತ್ರ ಬಂದಿದೆ. ಇದರಲ್ಲಿ 7 ಟಿಎಂಸಿ ನೀರನ್ನು ರಾಮನಗರಕ್ಕೆ ಕೊಡುತ್ತಾ ಇದ್ದಾರೆ. ತುಮಕೂರು ಗ್ರಾಮಾಂತರಕ್ಕೆ 1.5 ಟಿಎಂಸಿ, ತುಮಕೂರು ನಗರಕ್ಕೆ 1 ಟಿಎಂಸಿ ನೀರು ಮಾತ್ರ ಬಂದಿದೆ. ರೈತರಿಗೆ ಮೀಸಲಿರುವಂತಹ ನೀರನ್ನು ಕೇಳಿದರೆ ಈ ಭಾಗದ ರೈತರು ಏನು ಮಾಡಬೇಕು? ಅದ್ದರಿಂದ ಈ ಸಮಸ್ಯೆ ಬಗೆಹರಿಯದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದರು.

ರೈತ ಸಂಘದ ಅಧ್ಯಕ್ಷ ಸಿದ್ದರಾಜು ಮಾತನಾಡಿ, ಹೇಮಾವತಿ ನೀರು ರೈತರ ಜೀವನಾಡಿ. ಹೇಮಾವತಿ ಲಿಂಕ್ ಕೆನಾಲ್ ಯೋಜನೆ ಅವೈಜ್ಞಾನಿಕವಾಗಿದೆ. ಇದರಿಂದ ರಾಜ್ಯಕ್ಕೆ ನಷ್ಟ ಉಂಟಾಗುತ್ತಿದ್ದರು ಅನುದಾನ ಬಿಡುಗಡೆಗೊಳಿಸಿ ರಾಮನಗರ ಜಿಲ್ಲೆಗೆ ಹರಿಸಲು ಸಿದ್ದತೆ ಮಾಡಿಕೊಳ್ಳುತ್ತಿದೆ. ರಾಜ್ಯ ನಾಯಕರೇ ಬೆಂಬಲವನ್ನು ವ್ಯಕ್ತಪಡಿಸಿರುವುದನ್ನು ಗಮನಿಸಿದರೆ ದೊಡ್ಡ ಮಟ್ಟದ ಹಣಕಾಸಿನ ವ್ಯವಹಾರವನ್ನು ನಡೆಸಿದ್ದಾರೆಂದು ತಿಳಿಯುತ್ತದೆ. ಈ ಯೋಜನೆ ಇಲ್ಲಿಗೆ ಕೈ ಬಿಡದಿದ್ದರೆ ಮುಂದೆ ಆಗುವಂತಹ ಅನಾಹುತಕ್ಕೆ ಸರ್ಕಾರಕ್ಕೆ ನೆರಹೊಣೆಯಾಗಲಿದೆ ಎಂದು ಸರ್ಕಾರಕ್ಕೆ ಎಚ್ಚರಿಕೆಯ ಸಂದೇಶವನ್ನು ನೀಡಿದರು.

ಈ ಪ್ರತಿಭಟನೆಯಲ್ಲಿ ತೆಂಗು ನಾರು ನಿಗಮದ ಮಾಜಿ ಅಧ್ಯಕ್ಷ ವೆಂಕಟಾಚಲಯ್ಯ, ರೈತ ಸಂಘದ ಅಧ್ಯಕ್ಷ ರಂಗಹನುಮಯ್ಯ, ಶಬ್ಬೀರ್‌ಬಾಷಾ, ಮಾರುತಿ, ಕರವೇ ಅಧ್ಯಕ್ಷ ನಟರಾಜ್, ಪ್ರಸನ್ನಕುಮಾರ್, ಮುಖಂಡರಾದ ನರಸಿಂಹರಾಜು, ದಾಡಿವೆಂಕಟೇಶ್, ರವಿಕುಮಾರ್(ಕೆಂಗ), ಅಶ್ವತ್ಥ್ ನಾರಾಯಣ ರಾಜು (ಲಂಬುರಾಜು), ತುಂಬಾಡಿ ಲಕ್ಷ್ಮೀಶ್‌, ಕಾಮರಾಜು, ಗುರುದತ್ತ ಸೇರಿದಂತೆ ಇತರರು ಇದ್ದರು.

ರೈತರ ಹಿತ ಕಾಯುವುದು ಸರ್ಕಾರದ ಕೆಲಸ. ಆದರೆ ಒಂದು ಜಿಲ್ಲೆಯ ರೈತರಿಗಾಗಿ ಮತ್ತೊಂದು ಜಿಲ್ಲೆಯ ರೈತರಿಗೆ ಅನ್ಯಾಯ ಮಾಡಲು ಹೊರಟಿರುವುದು ಯಾವ ನ್ಯಾಯ. ಸರ್ಕಾರ ಕೂಡಲೇ ಈ ಹೇಮಾವತಿ ಕೆನಾಲ್ ಕಾಮಗಾರಿಯನ್ನು ನಿಲ್ಲಿಸಿ ರೈತರಿಗೆ ಶಕ್ತಿಯಾಗಿ ನಿಲ್ಲದೇ ರೈತರ ವಿರೋಧಿಯಾದರೆ, ಇದರಿಂದ ಯಾವುದೇ ಘಟನೆ ನಡೆದರೂ ಸರ್ಕಾರವೇ ಜವಬ್ದಾರಿಯಾಗಿರುತ್ತದೆ. –ದೇವರಾಜ್ ಕೆ.ಎನ್, ತಾ. ಅಧ್ಯಕ್ಷ, ನಮ್ಮ ಕರ್ನಾಟಕ ರಕ್ಷಣಾ ವೇದಿಕೆ

ರೈತರಿಗೆ ವಿಷವುಣಿಸುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಕೆನಾಲ್ ಯೋಜನೆ ಬೇಡವೆಂದು ರೈತರು ಗೋಗರೆದರೂ ಅವರ ಅಳಲನ್ನು ತಿರಸ್ಕರಿಸಲಾಗಿದೆ. ಈ ಸರ್ಕಾರಕ್ಕೆ ಕಣ್ಣು ಮತ್ತು ಕಿವಿ ಎರಡು ಇಲ್ಲಾ, ಅವರೆಡನ್ನು ತೆರೆಸುವ ಪ್ರಯತ್ನವನ್ನು ಇವತ್ತಿನ ಪ್ರತಿಭಟನೆಯ ಮೂಲಕ ಮಾಡುತ್ತಿದ್ದೇವೆ. – ಅಶ್ವತ್ಥ್ ನಾರಾಯಣ, ಮಾಜಿ ಪ.ಪಂ ಸದಸ್ಯ. ಕೊರಟಗೆರೆ

ಕೊರಟಗೆರೆ ಬಂದ್ ಯಶಸ್ವಿ: ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ವಿರೋಧಿಸಿ ನೀರಾವರಿ ಹೋರಾಟ ಸಮಿತಿ, ರೈತಪರ ಸಂಘಟನೆಗಳು, ಕನ್ನಡಪರ ಸಂಘಟನೆಗಳು ತುಮಕೂರು ಜಿಲ್ಲೆ ಬಂದ್‌ಗೆ ಕರೆ ನೀಡಿದ ಹಿನ್ನೆಲೆ, ಕೊರಟಗೆರೆಯ ನೀರಾವರಿ ಹೋರಾಟ ಸಮಿತಿ ಸೇರಿದಂತೆ ಇತರೆ ಸಂಘಟನೆಗಳು ಬೆಂಬಲ ಸೂಚಿಸಿ ಬಂದ್‌ಗೆ ಕರೆ ನೀಡಲಾಗಿತ್ತು. ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದ ತಾಲೂಕು ಕಚೇರಿಯವರೆಗೆ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಮುಖಾಂತರ ರಾಜ್ಯಪಾಲರಿಗೆ ಮನವಿಯನ್ನು ಸಲ್ಲಿಸಿದ್ದು, ಅಂಗಡಿ-ಮುಗ್ಗಟ್ಟುಗಳು ಸ್ವಯಂಪ್ರೇರಿತರಾಗಿ ಬಾಗಿಲು ಮುಚ್ಚಿ ಬೆಂಬಲ ಸೂಚಿಸಿದ್ದು, ಬಂದ್ ಯಶಸ್ವಿಯನ್ನು ಕಂಡಿದೆ.

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KN-Rajaanna

Congress: ಹೈಕಮಾಂಡ್‌ ಒಪ್ಪಿಗೆ ಮೇರೆಗೆ ಶೋಷಿತರ ಸಮಾವೇಶ: ಕೆ.ಎನ್‌.ರಾಜಣ್ಣ

14-madhugiri

Madhugiri: 90 ಲಕ್ಷದ ಬೆಳೆ ವಿಮೆ ಹಣ ಅಕ್ರಮ ತನಿಖೆಗೆ ಆಗ್ರಹ

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

9

Koratagere: ಗುಡಿಸಲಿಗೆ ಆಕಸ್ಮಿಕ ಬೆಂ*ಕಿ; 4 ಮೇಕೆಗಳು ಸಜೀವ ದಹನ; ಇಬ್ಬರಿಗೆ ಗಾಯ

10

Koratagere: ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಫಿ‌ಲ್ಲಿಂಗ್; ಓರ್ವ ಆರೋಪಿ ಬಂಧನ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.