Kunigal ನಾನು ಸೋತಿದ್ದೇನೆ, ಸತ್ತಿಲ್ಲ: ಡಿ.ಕೆ. ಸುರೇಶ್ ಗುಡುಗು
Team Udayavani, Jun 25, 2024, 8:42 PM IST
ಕುಣಿಗಲ್: ನಾನು ಸೋತಿದ್ದೇನೆ, ಸತ್ತಿಲ್ಲ ಎಂದು ತಮ್ಮ ವಿರೋಧಿಗಳಿಗೆ ಎಚ್ಚರಿಕೆ ನೀಡಿದ ಮಾಜಿ ಸಂಸದ ಡಿ.ಕೆ. ಸುರೇಶ್, ಕುಣಿಗಲ್ ತಾಲೂಕಿನ ಹೇಮಾವತಿಯ ಲಿಂಕ್ ಕೆನಾಲ್ ಯೋಜನೆಗಾಗಿ ಹೋರಾಟ ಬಿಡುವುದಿಲ್ಲ ಎಂದು ಪತ್ರಿಕಾಗೋಷ್ಠಿಯಲ್ಲಿ ಘೋಷಿಸಿದರು.
ಹೇಮಾವತಿ ನೀರಿನ ವಿಚಾರದಲ್ಲಿ ಕುಣಿಗಲ್ ತಾಲೂಕಿಗೆ ಅನ್ಯಾಯವಾಗಿದೆ. ತುಮಕೂರು ಜಿಲ್ಲೆಗೆ ನಿಗದಿಯಾಗಿರುವ 24 ಟಿಎಂಸಿ ನೀರಿನ ಪೈಕಿ ಕುಣಿಗಲ್ ತಾಲೂಕಿಗೆ 3 ಟಿಎಂಸಿ ನಿಗದಿಯಾಗಿದೆ.
ಆದರೆ ಕಳೆದ 25 ವರ್ಷಗಳಿಂದ ನೀರು ಹರಿದಿಲ್ಲ, ಸುಮಾರು 15 ಬಾರಿ 24 ಟಿಎಂಸಿ ನೀರು ತುಮಕೂರು ಬ್ರಾಂಚ್ ಕೆನಾಲ್ಗೆ ಹರಿದಿದೆ. ಆದರೆ ಕಳೆದ ಎರಡು ಬಾರಿ ಕುಣಿಗಲ್ಗೆ ಬಂದಂತಹ ನೀರಿನ ಪ್ರಮಾಣವೆಂದರೆ ಅದು 500 ಎಂಸಿಎಫ್ಟಿ. ಇದನ್ನು ಹೊರತು ಪಡಿಸಿದರೆ ಇನ್ನು 13 ಬಾರಿ 50 ಎಂಸಿಎಫ್ಟಿ ನೀರನ್ನು ಮಾತ್ರ ಕುಣಿಗಲ್ ದೊಡ್ಡಕೆರೆಗೆ ಕುಡಿಯಲು ಕೊಡಲು ಸಾಧ್ಯವಾಗಿದೆ.
ಈ ಹಿಂದೆ ನೀರಾವರಿ ಸಚಿವರಾಗಿದ್ದ ಡಿ.ಕೆ. ಶಿವಕುಮಾರ್ ಕುಣಿಗಲ್ ದೊಡ್ಡಕೆರೆಗೆ 500 ಎಂಸಿಎಫ್ಟಿ ನೀರನ್ನು ನಿಗದಿಪಡಿಸಿ ಆದೇಶಿಸಿದ್ದರು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koratagere: ಎರಡು ವಿದ್ಯುತ್ ಉಪಸ್ಥಾವರ ಘಟಕಗಳ ಉದ್ಘಾಟನೆ
Tumakuru ಮಕ್ಕಳ ಮಾರಾಟ ಜಾಲ ಪತ್ತೆ: 5 ಮಕ್ಕಳ ರಕ್ಷಣೆ, 7 ಮಂದಿ ಸೆರೆ
Kunigal: ವಿದ್ಯುತ್ ಶಾರ್ಟ್ ಸರ್ಕ್ಯೂಟ್; ಮನೆಯ ಗೃಹಪಯೋಗಿ ವಸ್ತುಗಳು ಬೆಂಕಿಗಾಹುತಿ
Koratagere: ರೋಗಿಗಳ ಜೊತೆ ವೈದ್ಯ ಗಲಾಟೆ; ವೈದ್ಯ ಡಾ.ನವೀನ್ ಅಮಾನತಿಗೆ ಸ್ಥಳೀಯರಿಂದ ಆಗ್ರಹ
Koratagere: ಹೇಮಾವತಿ ನೀರು ರಾಮನಗರಕ್ಕೆ ಹರಿಸುವ ಕನಸನ್ನು ಶೀಘ್ರವೇ ಕೈಬಿಡಬೇಕು
MUST WATCH
ಹೊಸ ಸೇರ್ಪಡೆ
Shivamogga: ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ; 8ಕ್ಕೂ ಅಧಿಕ ಅಂಗಡಿಗಳು ಸುಟ್ಟು ಕರಕಲು
Horoscope: ಅಕಸ್ಮಾತ್ ಧನಾಗಮ ಯೋಗ ನಿಮ್ಮದಾಗಲಿದೆ
Government ಹೊಸ ಅಪರಾಧ ಸಂಹಿತೆಗೆ ರಾಜ್ಯದಲ್ಲಿ ತಿದ್ದುಪಡಿ
CM DCM ಹೇಳಿಕೆ ನಿಲ್ಲಿಸದಿದ್ದರೆ ಶೋಕಾಸ್ ನೋಟಿಸ್: ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಎಚ್ಚರಿಕೆ
Australia;ಇನ್ನು ವಿದ್ಯಾರ್ಥಿ ಶುಲ್ಕ ದುಪ್ಪಟ್ಟು: ಭಾರತೀಯರಿಗೂ ಸಂಕಷ್ಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.