Priyank Kharge ಗುಜರಾತಿನಲ್ಲೇ ಬಂಡವಾಳ ಹೂಡಲು ಕಂಪನಿಗಳಿಗೆ ಪ್ರಧಾನಿ ಒತ್ತಡ


Team Udayavani, Jun 25, 2024, 8:50 PM IST

Priyank Kharge ಗುಜರಾತಿನಲ್ಲೇ ಬಂಡವಾಳ ಹೂಡಲು ಕಂಪನಿಗಳಿಗೆ ಪ್ರಧಾನಿ ಒತ್ತಡ

ಬೆಂಗಳೂರು: ತಮ್ಮ ತವರು ರಾಜ್ಯ ಗುಜರಾತ್‌ನಲ್ಲೇ ಬಂಡವಾಳ ಹೂಡಿಕೆ ಮಾಡುವಂತೆ ಕಂಪನಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಒತ್ತಡ ಹಾಕುತ್ತಿದ್ದಾರೆ ಎಂದು ಐಟಿ-ಬಿಟಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಆರೋಪಿಸಿದರು.

ವಿಕಾಸಸೌಧದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹೂಡಿಕೆದಾರರನ್ನು ರಾಜ್ಯಕ್ಕೆ ಕರೆತರುವವರು ನಾವು, ಹೂಡಿಕೆ ಮಾಡುವಂತೆ ಅವರ ಮನವೊಲಿಸುವವರು ನಾವು. ಅದಕ್ಕಾಗಿ ಕಷ್ಟಪಡುವವರು ನಾವು. ಅದರ ಫ‌ಲ ತೆಗೆದುಕೊಂಡು ಹೋಗುವವರು ಅವರು (ಪ್ರಧಾನಿಗೆ) ಎಂದರೆ ಹೇಗೆ? ಪ್ರಧಾನಿಯೇ ಫೋನ್‌ ಮಾಡಿ ಹೇಳಿದರೆ, ಉದ್ಯಮಿಗಳಾದರೂ ಏನು ಮಾಡುತ್ತಾರೆ. ನೀವೇ ಹೇಳಿ?’ ಎಂದು ಕೇಳಿದರು.

ಹಾಗಿದ್ದರೆ ಕೈಗಾರಿಕೋದ್ಯಮಿಗಳಿಗೆ ಗುಜರಾತಿನಲ್ಲೇ ಹೂಡಿಕೆ ಮಾಡುವಂತೆ ಪ್ರಧಾನಿ ಬೆದರಿಕೆ ಹಾಕುತ್ತಿದ್ದಾರಾ ಎಂದು ಕೇಳಿದಾಗ, ಬೆದರಿಕೆ ಮಾಡುತ್ತಿದ್ದಾರೋ ಅಥವಾ ಮುದ್ದು ಮಾಡಿ ಕರೆಯುತ್ತಿದ್ದಾರೋ ಗೊತ್ತಿಲ್ಲ. ಒಟ್ಟಿನಲ್ಲಿ ಐದಾರು ಇಂತಹ ಘಟನೆಗಳು ನಡೆದಿವೆ. ರಾಜ್ಯಕ್ಕೆ ಬಂದವರು ನಂತರ ಅಲ್ಲಿಗೆ ಹೋಗಿದ್ದಾರೆ.

ಒಂದು ಕಂಪನಿ ರಾಜ್ಯಕ್ಕೆ ಬಂದಿತ್ತು. ನಂತರ ಆಂಧ್ರಪ್ರದೇಶಕ್ಕೆ ಹೋಯ್ತು. ಅಲ್ಲಿಂದ ಗುಜರಾತ್‌ಗೆ ಶಿಫ್ಟ್ ಆಯ್ತು. ಇದಾದ ಬಳಿಕ ಮತ್ತೂಂದು ಕಂಪನಿ ಇಲ್ಲಿ ಹೂಡಿಕೆಗೆ ಆಸಕ್ತಿ ತೋರಿಸಿತ್ತು. ನಂತರದಲ್ಲಿ ಗುಜರಾತ್‌ಗೆ ಹೋಯಿತು ಎಂದು ಕಂಪನಿಗಳ ಹೆಸರು ಪ್ರಸ್ತಾಪಿಸದೆ ಸೂಚ್ಯವಾಗಿ ಹೇಳಿದರು.

ಗುಜರಾತ್‌ ಮಾದರಿಗೆ ಒತ್ತಾಯ:
ಈ ಮಧ್ಯೆ ಬಂಡವಾಳ ಹೂಡಿಕೆ ಆಕರ್ಷಣೆ ವಿಚಾರದಲ್ಲಿ ಗುಜರಾತ್‌ ಮಾದರಿಯ ಸಬ್ಸಿಡಿ ಸೇರಿದಂತೆ ಮತ್ತಿತರ ಉತ್ತೇಜನಕರ ಸೌಲಭ್ಯಗಳನ್ನು ನೀಡಬೇಕು ಎಂಬ ಕೂಗು ದಿನದಿಂದ ದಿನಕ್ಕೆ ಪ್ರಬಲವಾಗುತ್ತಿದ್ದು, ಈ ಸಂಬಂಧ ಖುದ್ದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿಯಾಗುವುದಾಗಿ ಸಚಿವ ಪ್ರಿಯಾಂಕ ಖರ್ಗೆ ತಿಳಿಸಿದರು.

ಗುಜರಾತ್‌ ಸಬ್ಸಿಡಿ ವಿಚಾರದಲ್ಲಿ ಮೊದಲಿಗೆ ಕುಮಾರಸ್ವಾಮಿ ಅಸಮಾಧಾನ ಹೊರಹಾಕಿದ್ದರು. ನಂತರ ತಮ್ಮ ಹೇಳಿಕೆ ತಿರುಚಲಾಗಿದೆ ಎಂದು ಹೇಳಿದ್ದರು. ಇದರ ಬೆನ್ನಲ್ಲೇ ಈಚೆಗೆ ಬೃಹತ್‌ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್‌, ಹೂಡಿಕೆದಾರರನ್ನು ಆಕರ್ಷಿಸಲು ಪ್ರಧಾನಿ ನರೇಂದ್ರ ಮೋದಿ ಅವರ ತವರು ಗುಜರಾತಿಗೆ ನೀಡುವ ಪ್ರೋತ್ಸಾಹಕ ಸೌಲಭ್ಯಗಳನ್ನು ಕೇಂದ್ರ ಸರ್ಕಾರ ಕರ್ನಾಟಕ್ಕೂ ನೀಡಬೇಕು ಎಂದು ಒತ್ತಾಯಿಸಿದ್ದರು. ಈಗ ಇದಕ್ಕೆ ಪ್ರಿಯಾಂಕ ಖರ್ಗೆ ಕೂಡ ದನಿಗೂಡಿಸಿದ್ದು, ಜೂನ್‌ 27ರಂದು ದೆಹಲಿಗೆ ಹೊರಟಿದ್ದೇನೆ. ಈ ವೇಳೆ ಹಣಕಾಸು ಸಚಿವರಿಗೆ ಈ ಸಂಬಂಧ ಒತ್ತಾಯಿಸಲಾಗುವುದು ಎಂದು ಹೇಳಿದರು.

ಗುಜರಾತಿಗೆ ನೀಡುವ ಸೌಲಭ್ಯಗಳನ್ನು ಇತರ ರಾಜ್ಯಗಳಿಗೂ ನೀಡಬೇಕು ಎಂಬ ಒತ್ತಾಯ ಬಹುತೇಕರದ್ದಾಗಿದೆ. ಈಚೆಗೆ ತೆಲಂಗಾಣ ಮುಖ್ಯಮಂತ್ರಿ ರೇವಂತ್‌ ರೆಡ್ಡಿ ಕೂಡ ಈ ನಿಟ್ಟಿನಲ್ಲಿ ಪ್ರಸ್ತಾಪಿಸಿದ್ದನ್ನು ಸ್ಮರಿಸಬಹುದು ಎಂದೂ ಸಚಿವ ಪ್ರಿಯಾಂಕ ಖರ್ಗೆ ತಿಳಿಸಿದರು.

ಟಾಪ್ ನ್ಯೂಸ್

1-anurag

Constitution ನಲ್ಲಿ ಎಷ್ಟು ಪುಟಗಳಿವೆ?: ವಿಪಕ್ಷಗಳಿಗೆ ಅನುರಾಗ್ ಠಾಕೂರ್ ಪ್ರಶ್ನೆ ವೈರಲ್

1-qe

Hathras stampede; ಸ್ವಯಂ ಘೋಷಿತ ದೇವಮಾನವ ‘ಭೋಲೆ ಬಾಬಾ’ ಯಾರು?

1-a-baaba

Hathras stampede;‘ಸತ್ಸಂಗ’ದ ವೇಳೆ ಕಾಲ್ತುಳಿತ : ಮೃತರ ಸಂಖ್ಯೆ 116ಕ್ಕೆ

Barbados

Barbados; ಮತ್ತೊಂದು ಚಂಡಮಾರುತದ ಸೂಚನೆ; ಭಾರತ ತಂಡ ಇಂದು ರಾತ್ರಿ ಆಗಮನ?

Court-Symbol

Dakshina Kannada: ಅಕ್ರಮ ಆಸ್ತಿ ಗಳಿಕೆ ಪ್ರಕರಣ; ನಿವೃತ್ತ ಕಮಾಂಡೆಂಟ್‌ ದೋಷಮುಕ್ತ

Agriculture-Tracator

Agriculture: ಭತ್ತದ ಕೃಷಿಗೆ ಯಂತ್ರವೂ ಸಿಗುತ್ತಿಲ್ಲ, ಕಾರ್ಮಿಕರೂ ಬರುತ್ತಿಲ್ಲ

4-manipal

Manipal: ಅನಾಮಧೇಯ ಆ್ಯಪ್‌ ಡೌನ್‌ಲೋಡ್‌ ಮಾಡಿ ವಂಚನೆಗೊಳಗಾದ ಮಹಿಳೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pen Drive Case 4 ತಿಂಗಳಿಗೊಮ್ಮೆ ಎಚ್‌ಐವಿ ಟೆಸ್ಟ್‌ ಮಾಡಿಸುತ್ತಿದ್ದ ಪ್ರಜ್ವಲ್‌?

Pen Drive Case 4 ತಿಂಗಳಿಗೊಮ್ಮೆ ಎಚ್‌ಐವಿ ಟೆಸ್ಟ್‌ ಮಾಡಿಸುತ್ತಿದ್ದ ಪ್ರಜ್ವಲ್‌?

Private Hospital ಡೆಂಗ್ಯೂ ಪರೀಕ್ಷೆಗೆ ಶುಲ್ಕ ನಿಗದಿ: ಸಚಿವ ದಿನೇಶ್‌

Private Hospital ಡೆಂಗ್ಯೂ ಪರೀಕ್ಷೆಗೆ ಶುಲ್ಕ ನಿಗದಿ: ಸಚಿವ ದಿನೇಶ್‌

Udayavani exclusive interview of KN Rajanna

ಡಿಕೆಶಿ ಕಾಂಗ್ರೆಸ್‌ಗೆ ಕಾಲಿಡುವ ಮೊದಲೇ ನೋಟಿಸ್‌, ಉಚ್ಚಾಟನೆ ಎಲ್ಲಾ ನೋಡಿದ್ದೀನಿ…; ರಾಜಣ್ಣ

CM Siddaramaiah ರೈತರಿಗೆ ನಿತ್ಯ 5 ಕೋಟಿ ರೂ. ಪ್ರೋತ್ಸಾಹ ಧನ

CM Siddaramaiah ರೈತರಿಗೆ ನಿತ್ಯ 5 ಕೋಟಿ ರೂ. ಪ್ರೋತ್ಸಾಹ ಧನ

KMF ಹಾಲಿನ ಹೊಳೆ: ನಿತ್ಯ 1 ಕೋಟಿ ಲೀಟರ್‌!-ಕೆಎಂಎಫ್ ಇತಿಹಾಸದಲ್ಲೇ ದಾಖಲೆ ಕ್ಷೀರ ಸರಬರಾಜು

KMF ಹಾಲಿನ ಹೊಳೆ: ನಿತ್ಯ 1 ಕೋಟಿ ಲೀಟರ್‌!-ಕೆಎಂಎಫ್ ಇತಿಹಾಸದಲ್ಲೇ ದಾಖಲೆ ಕ್ಷೀರ ಸರಬರಾಜು

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

1-anurag

Constitution ನಲ್ಲಿ ಎಷ್ಟು ಪುಟಗಳಿವೆ?: ವಿಪಕ್ಷಗಳಿಗೆ ಅನುರಾಗ್ ಠಾಕೂರ್ ಪ್ರಶ್ನೆ ವೈರಲ್

1-qe

Hathras stampede; ಸ್ವಯಂ ಘೋಷಿತ ದೇವಮಾನವ ‘ಭೋಲೆ ಬಾಬಾ’ ಯಾರು?

1-a-baaba

Hathras stampede;‘ಸತ್ಸಂಗ’ದ ವೇಳೆ ಕಾಲ್ತುಳಿತ : ಮೃತರ ಸಂಖ್ಯೆ 116ಕ್ಕೆ

Barbados

Barbados; ಮತ್ತೊಂದು ಚಂಡಮಾರುತದ ಸೂಚನೆ; ಭಾರತ ತಂಡ ಇಂದು ರಾತ್ರಿ ಆಗಮನ?

Court-Symbol

Dakshina Kannada: ಅಕ್ರಮ ಆಸ್ತಿ ಗಳಿಕೆ ಪ್ರಕರಣ; ನಿವೃತ್ತ ಕಮಾಂಡೆಂಟ್‌ ದೋಷಮುಕ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.