BJP ರಾಜ್ಯ ಪ್ರವಾಸ ಮೂರೇ ದಿನಕ್ಕೆ ಸೀಮಿತ

ರಾಜ್ಯ ಸರ್ಕಾರದ ವಿರುದ್ಧ ಸದನದ ಒಳಗೆ, ಹೊರಗೆ ಹೋರಾಟ ಕಮಲಪಡೆ ಸಿದ್ಧ

Team Udayavani, Jun 26, 2024, 6:55 AM IST

BJP ರಾಜ್ಯ ಪ್ರವಾಸ ಮೂರೇ ದಿನಕ್ಕೆ ಸೀಮಿತ

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಸದನದ ಒಳಗೆ ಹಾಗೂ ಹೊರಗೆ ಹೋರಾಟ ನಡೆಸುವುದಕ್ಕೆ ಅಧ್ಯಯನ ಹಾಗೂ ಜನಾಭಿಪ್ರಾಯ ಸಂಗ್ರಹಿಸಲು ಬಿಜೆಪಿ ನಡೆಸಲಿರುವ ರಾಜ್ಯ ಪ್ರವಾಸವನ್ನು ಕೇವಲ ಮೂರೇ ದಿನಕ್ಕೆ ಸೀಮಿತಗೊಳಿಸಲಾಗಿದೆ.

ಈ ಪ್ರವಾಸದ ಬಗ್ಗೆ ರೂಪು-ರೇಷೆ ರೂಪಿಸಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಜೂ.27ರಂದು ಸಭೆ ಕರೆಯಲಾಗಿದೆ. ಈ ಸಭೆಯಲ್ಲಿ ಯಾರ್ಯಾರ ನೇತೃತ್ವದಲ್ಲಿ ತಂಡ ರಚಿಸಬೇಕೆಂಬುದು ಇತ್ಯರ್ಥವಾಗಲಿದೆ.

ಆದರೆ ದೀರ್ಘ‌ ಪ್ರವಾಸ ಬೇಡ ಎಂದು ಶಾಸಕರು ಅಭಿಪ್ರಾಯ ತಿಳಿಸಿರುವ ಹಿನ್ನೆಲೆಯಲ್ಲಿ ಮೂರೇ ದಿನಕ್ಕೆ ಪ್ರವಾವನ್ನು ಸೀಮಿತಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.

ಸರ್ಕಾರದ ವಿರುದ್ಧ ಜನರಿಂದ ನೇರವಾಗಿ ಅಭಿಪ್ರಾಯ ಸಂಗ್ರಹಿಸಿ ಅದರ ಆಧಾರದ ಮೇಲೆ ಸರ್ಕಾರದ ವಿರುದ್ಧ ವಿಧಾನಮಂಡಲದ ಉಭಯ ಸದನಗಳಲ್ಲಿ ಹೋರಾಟ ನಡೆಸುವುದು ಬಿಜೆಪಿಯ ಉದ್ದೇಶವಾಗಿದೆ.

ಸದನಕ್ಕೂ ತಂಡ :
ಬಿಜೆಪಿ ಮೂಲಗಳ ಪ್ರಕಾರ ಉಭಯ ಸದನಗಳಲ್ಲಿ ಸರ್ಕಾರದ ವಿರುದ್ಧ ಯೋಜಿತ ಹೋರಾಟ ನಡೆಸಲು ತೀರ್ಮಾನಿಸಲಾಗಿದೆ. ಹಿರಿತನ ಹಾಗೂ ವಿಷಯವಾರು ಪರಿಣತಿ ಆಧಾರದ ಮೇಲೆ ಯಾರು, ಯಾವ ಚರ್ಚೆಯಲ್ಲಿ ಭಾಗವಹಿಸಬೇಕೆಂಬ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ.

ವಿಧಾನಸಭೆಯಲ್ಲಿ ವಿಪಕ್ಷ ನಾಯಕ ಆರ್‌..ಅಶೋಕ, ಅರವಿಂದ ಬೆಲ್ಲದ್‌, ವಿ.ಸುನೀಲ್‌ ಕುಮಾರ್‌, ಬಸನಗೌಡ ಪಾಟೀಲ್‌ ಯತ್ನಾಳ್‌, ಅಭಯ್‌ ಪಾಟೀಲ್ , ಬಿ.ವೈ.ವಿಜಯೇಂದ್ರ, ಡಾ. ಭರತ್‌ ಶೆಟ್ಟಿ, ಎಸ್‌.ಆರ್‌. ವಿಶ್ವನಾಥ್‌, ಡಾ. ಸಿ.ಎನ್‌. ಅಶ್ವತ್ಥನಾರಾಯಣ ಮೊದಲಾದವರಿಗೆ ಜವಾಬ್ದಾರಿ ನೀಡಲು ನಿರ್ಧರಿಸಲಾಗಿದೆ.

ಪರಿಷತ್ತಿನಲ್ಲಿ ಸಿ.ಟಿ.ರವಿ, ರವಿಕುಮಾರ್‌, ಛಲವಾದಿ ನಾರಾಯಣಸ್ವಾಮಿಗೆ ಹೊಣೆ ನೀಡಲಾಗುತ್ತಿದೆ. ಒಟ್ಟಾರೆಯಾಗಿ ಈ ಬಾರಿ ಸದನದಲ್ಲಿ ಸಂಘಟಿತ ಹೋರಾಟ ನಡೆಸುವುದಕ್ಕೆ ಬಿಜೆಪಿ ಸಿದ್ಧತೆ ನಡೆಸಿದೆ.

ಜುಲೈ 4ರಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ
ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ಜು.4ರಂದು ಬಿಜೆಪಿ ಶಾಸಕರ ಸಭೆ ಕರೆಯಲಾಗಿದ್ದು, ಈ ತುರ್ತು ಕರೆಯ ಉದ್ದೇಶವನ್ನು ಗೌಪ್ಯವಾಗಿ ಇಡಲಾಗಿದೆ. ಬೆಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ಈ ಸಭೆ ಆಯೋಜಿಸಲಾಗಿದ್ದು, ಬಿಜೆಪಿ ಮುಖ್ಯ ಸಚೇತಕರ ಕಚೇರಿಯಿಂದ ಎಲ್ಲ ಶಾಸಕರಿಗೆ ಸಂದೇಶ ರವಾನೆ ಮಾಡಲಾಗಿದೆ.

ಮಹತ್ವದ ವಿಚಾರದ ಬಗ್ಗೆ ಚರ್ಚಿಸುವುದಕ್ಕೆ ಶಾಸಕಾಂಗ ಪಕ್ಷದ ಸಭೆ ಆಯೋಜಿಸಲಾಗಿದೆ ಎಂದು ಈ ಮೊದಲು ಸೂಚಿಸಲಾಗಿತ್ತು. ಆದರೆ ಈಗ ಬ್ರೇಕ್‌ ಪಾಸ್ಟ್‌ ಮೀಟಿಂಗ್‌ ಎಂದು ಹೇಳಲಾಗುತ್ತಿದೆ. ಸಾಮಾನ್ಯವಾಗಿ ಅಧಿವೇಶನ ಸಂದರ್ಭದಲ್ಲಿ ಈ ಸಭೆ ಕರೆಯಲಾಗುತ್ತದೆ. ಆದರೆ ಅಧಿವೇಶನಕ್ಕೆ ದಿನಾಂಕ ನಿಗದಿಯಾಗುವುದಕ್ಕೆ ಮುನ್ನವೇ ಸಭೆ ಕರೆದಿರುವುದು ಕುತೂಹಲ ಸೃಷ್ಟಿಸಿದೆ.

ಟಾಪ್ ನ್ಯೂಸ್

police crime

Jammu; ಶಿವನ ದೇವಾಲಯ ಧ್ವಂಸ: 43 ಆರೋಪಿಗಳ ಬಂಧನ

1-dssd

Heavy Rain; ಜುಲೈ 5 ರಂದು ಉಡುಪಿಯ 3 ತಾಲೂಕುಗಳಲ್ಲಿ ಪಿಯುಸಿವರೆಗೆ ರಜೆ

1-wewqewqe

Rajasthan; ಮೋದಿಗೆ ಕೊಟ್ಟ ಭರವಸೆ ಈಡೇರದ್ದಕ್ಕೆ ಪ್ರಭಾವಿ ಸಚಿವ ರಾಜೀನಾಮೆ

Kollur: ಸೊಸೈಟಿ ಗುಡ್ಡೆ ಬಳಿ ಧರೆ ಕುಸಿದು ಮಣ್ಣಿನಡಿ ಸಿಲುಕಿ ಮಹಿಳೆ ಸಾವು

Kollur: ಸೊಸೈಟಿಗುಡ್ಡೆ ಬಳಿ ಧರೆ ಕುಸಿದು ಮಣ್ಣಿನಡಿ ಸಿಲುಕಿ ಮಹಿಳೆ ಸಾವು

Dengue-nagendra

Hunasuru: ಡೆಂಗ್ಯೂಗೆ ಆರೋಗ್ಯಾಧಿಕಾರಿಯೇ ಮೃತ್ಯು!

1983ರ ಕಥೆ! ಅಂದು ಅವಮಾನದಿಂದ ಬಿಸಿಸಿಐಯನ್ನು ಕಾಪಾಡಿದ್ದು ಲತಾ ಮಂಗೇಶ್ಕರ್

1983ರ ಕಥೆ! ಅಂದು ಅವಮಾನದಿಂದ ಬಿಸಿಸಿಐಯನ್ನು ಕಾಪಾಡಿದ್ದು ಲತಾ ಮಂಗೇಶ್ಕರ್

Sagara ಹಣ ಬಿಡುಗಡೆ ಮಾಡಿಸದೆ ಅವಧಿ ಪೂರೈಸಿದ ಹಾಲಪ್ಪ; ಬೇಳೂರು ವ್ಯಂಗ್ಯ

Sagara ಹಣ ಬಿಡುಗಡೆ ಮಾಡಿಸದೆ ಅವಧಿ ಪೂರೈಸಿದ ಹಾಲಪ್ಪ; ಬೇಳೂರು ವ್ಯಂಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sa-dsadsa

Mangaluru; ಮಣ್ಣುಕುಸಿತದಿಂದ ಸಾವನ್ನಪ್ಪಿದ ಕಾರ್ಮಿಕನ ಕುಟುಂಬಕ್ಕೆ 4 ಲಕ್ಷ ರೂ. ಪರಿಹಾರ

1-asdsad

Police ಭ್ರಷ್ಟಾಚಾರದಿಂದ ಬೇಸತ್ತಿದ್ದೇನೆ: ಶಾಸಕ ಕಂದಕೂರ ರಾಜೀನಾಮೆ ಎಚ್ಚರಿಕೆ

pejawar swamiji reacts to Rahul Gandhi’s Hindu remark on parliament

Hindu remark; ಅಂತವರನ್ನು ದೂರ ಇಡಬೇಕು..: ರಾಹುಲ್ ಹೇಳಿಕೆಗೆ ಪೇಜಾವರಶ್ರೀ ಕಿಡಿ

“ದರ್ಶನ್‌ ನಿರಪರಾಧಿ ಎಂದು ಸಾಬೀತುಪಡಿಸಿ ಹೊರಬರುತ್ತಾರೆ..” ಸುಮಲತಾ ಸುದೀರ್ಘ ಪೋಸ್ಟ್

“ದರ್ಶನ್‌ ನಿರಪರಾಧಿ ಎಂದು ಸಾಬೀತುಪಡಿಸಿ ಹೊರಬರುತ್ತಾರೆ..” ಸುಮಲತಾ ಸುದೀರ್ಘ ಪೋಸ್ಟ್

Renukaswamy Case: ದರ್ಶನ್‌, ಪವಿತ್ರಾ ಗೌಡ ಸೇರಿ ಇತರೆ ಆರೋಪಿಗಳಿಗೆ ಮತ್ತೆ ಜೈಲೇ ಗತಿ

Renukaswamy Case: ದರ್ಶನ್‌, ಪವಿತ್ರಾ ಗೌಡ ಸೇರಿ ಇತರೆ ಆರೋಪಿಗಳಿಗೆ ಮತ್ತೆ ಜೈಲೇ ಗತಿ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

1-asdsdas

Yakshagana; ಖ್ಯಾತ ಪ್ರಸಾಧನ ಕಲಾವಿದ ಬಾಲಕೃಷ್ಣ ನಾಯಕ್‌ ವಿಧಿವಶ

police crime

Jammu; ಶಿವನ ದೇವಾಲಯ ಧ್ವಂಸ: 43 ಆರೋಪಿಗಳ ಬಂಧನ

1-dssd

Heavy Rain; ಜುಲೈ 5 ರಂದು ಉಡುಪಿಯ 3 ತಾಲೂಕುಗಳಲ್ಲಿ ಪಿಯುಸಿವರೆಗೆ ರಜೆ

1-wewqewqe

Rajasthan; ಮೋದಿಗೆ ಕೊಟ್ಟ ಭರವಸೆ ಈಡೇರದ್ದಕ್ಕೆ ಪ್ರಭಾವಿ ಸಚಿವ ರಾಜೀನಾಮೆ

1-sa-dsadsa

Mangaluru; ಮಣ್ಣುಕುಸಿತದಿಂದ ಸಾವನ್ನಪ್ಪಿದ ಕಾರ್ಮಿಕನ ಕುಟುಂಬಕ್ಕೆ 4 ಲಕ್ಷ ರೂ. ಪರಿಹಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.