Marathi Teacher Issue; ಜತ್, ಸೊಲ್ಲಾಪುರ ಕನ್ನಡ ಶಾಲೆಗಳಿಗೆ ಅಧಿಕಾರಿಗಳ ಭೇಟಿ


Team Udayavani, Jun 25, 2024, 9:49 PM IST

ಜತ್, ಸೊಲ್ಲಾಪುರ ಕನ್ನಡ ಶಾಲೆಗಳಿಗೆ ಅಧಿಕಾರಿಗಳ ಭೇಟಿ

ಬೆಳಗಾವಿ: ಮಹಾರಾಷ್ಟ್ರದ ಜತ್ ಮತ್ತು ಸೊಲ್ಲಾಪುರ ಜಿಲ್ಲೆಯ ಅಕ್ಕಲಕೋಟದ ಕನ್ನಡ ಮಾಧ್ಯಮ ಶಾಲೆಗಳಿಗೆ ಗಡಿ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳು ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಜತ್ತ ತಾಲ್ಲೂಕಿನ ಬೋರಗಿ, ಕರಜಗಿ, ಭೇವರ್ಗಿ, ಬಾಲಗಾಂವ, ಅಂಕಲಗಿ, ಸಂಖ, ರಾವಳಗುಂಡವಾಡಿ, ಮೇಂಡಿಗೇರಿ ಗ್ರಾಮಗಳಲ್ಲಿನ ವಿವಿಧ ಕನ್ನಡ ಮಾಧ್ಯಮ ಶಾಲೆಗಳಿಗೆ ಕರ್ನಾಟಕದ ಮುಖ್ಯಮಂತ್ರಿಗಳ ಸೂಚನೆಯಂತೆ ಭೇಟಿ ನೀಡಿದರು.

ಈ ಪ್ರದೇಶಗಳಲ್ಲಿನ ಕೆಲವು ಕನ್ನಡ ಶಾಲೆಗಳಲ್ಲಿ ಕನ್ನಡ ಬಾರದ ಮರಾಠಿ ಶಿಕ್ಷಕರನ್ನು ಕನ್ನಡ ಮಾಧ್ಯಮ ಶಾಲೆಗಳಿಗೆ ನೇಮಕಾತಿ ಮಾಡಿ, ಮಹಾರಾಷ್ಟ್ರ ಸರ್ಕಾರ ಆದೇಶ ಹೊರಡಿಸಿತ್ತು.

ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಅಧ್ಯಕ್ಷ ಸೋಮಣ್ಣ ಬೇವಿನಮರದ ಹಾಗೂ ಕಾರ್ಯದರ್ಶಿ ಪ್ರಕಾಶ ಮತ್ತಿಹಳ್ಳಿ ಜತ್ ಶಾಸಕರಾದ ವಿಕ್ರಮಸಿಂಹ ಸಾವಂತ ಹಾಗೂ ಜತ್ತ ತಾಲ್ಲೂಕಿನ ಕನ್ನಡ ಪರ ಹೋರಾಟಗಾರರಾದ ಆರ್ ಜಿ ಬಿರಾದಾರ್, ಮಲಿಕ್ ಜಾನ್ ಶೇಖ್ ಶಿಕ್ಷಕರ ಪ್ರತಿನಿಧಿಗಳು ಕನ್ನಡ ಶಾಲೆಗೆ ನೇಮಕವಾದ ಮರಾಠಿ ಶಿಕ್ಷಕರರಿಂದ ಉಂಟಾಗಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಿದರು.

ಈ ಸಂದರ್ಭದಲ್ಲಿ ಒಬ್ಬ ಶಿಕ್ಷಕರು ಈಗಾಗಲೇ ತಮಗೆ ಕನ್ನಡ ಬರುವುದಿಲ್ಲವೆಂದು ಲಿಖಿತವಾಗಿ ಸಂಬಂಧಪಟ್ಟ ಶಿಕ್ಷಣಾಧಿಕಾರಿಗಳಿಗೆ ಸಲ್ಲಿಸಿರುವ ಪತ್ರವನ್ನು ತೋರಿಸಿದರು.

ಶಾಲೆಗಳ ಭೇಟಿಯ ನಂತರ ಸಾಂಗ್ಲಿ ಜಿಲ್ಲಾ ಶಿಕ್ಷಣಾಧಿಕಾರಿ (ಪ್ರಾಥಮಿಕ) ಮೋಹನ ಗಾಯಕವಾಡ, ಕ್ಷೇತ್ರ ಶಿಕ್ಷಣಾಧಿಕಾರಿ ರಾಮ ಫರಕಾಂಡೆ ಹಾಗೂ ಜತ್ತ ತಾಲ್ಲೂಕಿನ ವಿವಿಧ ಇಲಾಖಾ ಅಧಿಕಾರಿಗಳ ಸಭೆ ನಡೆಸಲಾಯಿತು.

ಸಭೆಯಲ್ಲಿ ಕನ್ನಡ ಶಾಲೆಗೆ ಮರಾಠಿ ಶಿಕ್ಷಕರನ್ನು ಕಾನೂನು ಬಾಹಿರವಾಗಿ ನೇಮಕಾತಿ ಮಾಡಿ ಭಾರತ ಸಂವಿಧಾನ ಅನುಚ್ಚೇದ 350ಎ ಉಲ್ಲಂಘನೆ ಮಾಡಿರುವುದರ ಬಗ್ಗೆ ಎಲ್ಲಾ ಅಧಿಕಾರಿಗಳ ಗಮನಕ್ಕೆ ತರಲಾಯಿತು. ಇದಲ್ಲದೆ ನಾಗಪುರ ಮತ್ತು ಕೇರಳ ಹೈಕೋರ್ಟ್ ನೀಡಿದ ಆದೇಶಗಳ ಮತ್ತು ಕೇಂದ್ರ ಅಲ್ಪ ಸಂಖ್ಯಾತರ ಇಲಾಖೆ ಮಹಾರಾಷ್ಟ್ರ ಸರ್ಕಾರಕ್ಕೆ ನೀಡಿದ ಪತ್ರಗಳನ್ನು ಸಭೆಗೆ ಒದಗಿಸಲಾಯಿತು.

ಜತ್ ಶಾಸಕ ವಿಕ್ರಮ ಸಾವಂತ ಮಾತನಾಡಿ, ಈ ಸಮಸ್ಯೆಯನ್ನು ಕೂಡಲೇ ಬಗೆಹರಿಸುವಂತೆ ಎಲ್ಲಾ ಅಧಿಕಾರಿಗಳಿಗೆ ತಾಕಿತು ಮಾಡಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಸಾಂಗ್ಲಿ ಜಿಲ್ಲಾ ಶಿಕ್ಷಣಾಧಿಕಾರಿಗಳು, ಈ ವಿಷಯದ ಬಗ್ಗೆ ತಕ್ಷಣ ಮೇಲಾಧಿಕಾರಿಗಳ ಗಮನಕ್ಕೆ ತಂದು ಈ ಶಿಕ್ಷಕರ ಬದಲಾಗಿ ನಿವೃತ್ತ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ಸೂಕ್ತ ಕ್ರಮವಹಿಸುವ ಭರವಸೆ ನೀಡಿದರು.

ಟಾಪ್ ನ್ಯೂಸ್

Rain-M

Heavy Rain: ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ, ಕಾಲೇಜಿಗೆ ಜು.6 ರಂದು ರಜೆ

1—dsdsadas

Doctors ಭೇಟಿ ಬಿಟ್ಟು ವಾಂಖೇಡೆಗೆ ಬಂದ ರೋಹಿತ್‌ ತಾಯಿ; Video Viral

TN-BSP-Armstrong

Tamil Nadu: ಬಿಎಸ್‌ಪಿ ಮುಖ್ಯಸ್ಥ ಆರ್ಮ್‌ಸ್ಟ್ರಾಂಗ್ ಹತ್ಯೆ

iOS 18 ನಲ್ಲಿ ಕನ್ನಡ ಸೇರಿ, ಭಾರತೀಯ ಭಾಷೆಗಳ ಬೆಂಬಲಕ್ಕೆ ಆದ್ಯತೆ

iOS 18 ನಲ್ಲಿ ಕನ್ನಡ ಸೇರಿ, ಭಾರತೀಯ ಭಾಷೆಗಳ ಬೆಂಬಲಕ್ಕೆ ಆದ್ಯತೆ

Hunasuru

Dengue: ಹುಣಸೂರು ಆಸ್ಪತ್ರೆಯಲ್ಲಿ 10 ಹಾಸಿಗೆಯ ಪ್ರತ್ಯೇಕ ವಾರ್ಡ್ ಮೀಸಲು

Kinnigoli ಬಳ್ಕುಂಜೆ ಮನೆಯಲ್ಲಿ ಚಿನ್ನಾಭರಣ ಕಳವು

Kinnigoli ಬಳ್ಕುಂಜೆ ಮನೆಯಲ್ಲಿ ಚಿನ್ನಾಭರಣ ಕಳವು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sedam: ಮಹಿಳೆಯರ ರಕ್ಷಣೆ ಮರೆತ ಪಶ್ಚಿಮ ಬಂಗಾಳ: ಸದಾಶಿವ ಶ್ರೀ ಬೇಸರ

Sedam: ಮಹಿಳೆಯರ ರಕ್ಷಣೆ ಮರೆತ ಪಶ್ಚಿಮ ಬಂಗಾಳ: ಸದಾಶಿವ ಶ್ರೀ ಬೇಸರ

Heavy rain in Amboli; Five feet water rise in Hidkal reservoir in one day

Belagavi: ಅಂಬೋಲಿ ಭಾಗದಲ್ಲಿ ಭಾರಿ ಮಳೆ; ಹಿಡಕಲ್ ಜಲಾಶಯದಲ್ಲಿ ಒಂದೇ ದಿನ ಐದಡಿ ನೀರು ಏರಿಕೆ

belagBelagavi; ನೂತನ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಧಿಕಾರ ಸ್ವೀಕಾರ

Belagavi; ನೂತನ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಧಿಕಾರ ಸ್ವೀಕಾರ

laxmi-hebbalkar

Belagavi; ಅಭಯ್ ಪಾಟೀಲ್ ‘ಕೇಂದ್ರದ ಮೊಬೈಲ್’ ಹೇಳಿಕೆಗೆ ಸಚಿವೆ ಹೆಬ್ಬಾಳ್ಕರ್ ಗರಂ

vijaya-sankeshwar1

ಮಾಟಮಂತ್ರದ ಕಾಟ: ಕುಟುಂಬದ ವಿರುದ್ಧವೇ ದೂರು ನೀಡಲು ಮುಂದಾದ ಉದ್ಯಮಿ ವಿಜಯ ಸಂಕೇಶ್ವರ ಪುತ್ರಿ

MUST WATCH

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

udayavani youtube

ಅಬ್ಬಬ್ಬಾ ನೀವೆಂದೂ ಕಂಡಿರದ Coin Collection ನೋಡಿ

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

ಹೊಸ ಸೇರ್ಪಡೆ

Rain-M

Heavy Rain: ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ, ಕಾಲೇಜಿಗೆ ಜು.6 ರಂದು ರಜೆ

1—dsdsadas

Doctors ಭೇಟಿ ಬಿಟ್ಟು ವಾಂಖೇಡೆಗೆ ಬಂದ ರೋಹಿತ್‌ ತಾಯಿ; Video Viral

TN-BSP-Armstrong

Tamil Nadu: ಬಿಎಸ್‌ಪಿ ಮುಖ್ಯಸ್ಥ ಆರ್ಮ್‌ಸ್ಟ್ರಾಂಗ್ ಹತ್ಯೆ

iOS 18 ನಲ್ಲಿ ಕನ್ನಡ ಸೇರಿ, ಭಾರತೀಯ ಭಾಷೆಗಳ ಬೆಂಬಲಕ್ಕೆ ಆದ್ಯತೆ

iOS 18 ನಲ್ಲಿ ಕನ್ನಡ ಸೇರಿ, ಭಾರತೀಯ ಭಾಷೆಗಳ ಬೆಂಬಲಕ್ಕೆ ಆದ್ಯತೆ

Hunasuru

Dengue: ಹುಣಸೂರು ಆಸ್ಪತ್ರೆಯಲ್ಲಿ 10 ಹಾಸಿಗೆಯ ಪ್ರತ್ಯೇಕ ವಾರ್ಡ್ ಮೀಸಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.