![police crime](https://www.udayavani.com/wp-content/uploads/2024/07/police-crime-2-415x256.jpg)
Dengue Cases ರಾಜ್ಯದಲ್ಲಿ 5374 ಡೆಂಗ್ಯೂ ಕೇಸ್, 5 ಸಾವು
ಅಗತ್ಯ ಲಸಿಕೆ, ಪ್ಲೇಟ್ಲೆಟ್ಸ್ ಸಂಗ್ರಹಿಸಿಡಲು ಸೂಚನೆ
Team Udayavani, Jun 26, 2024, 7:20 AM IST
![Dengue](https://www.udayavani.com/wp-content/uploads/2024/06/Dengue-1-620x398.jpg)
ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣ ಏರಿಕೆಯಾಗುತ್ತಿದ್ದು ಚಿಕಿತ್ಸೆಗೆ ಅಗತ್ಯವಿರುವ ಲಸಿಕೆ, ಪ್ಲೇಟ್ಲೆಟ್ಸ್ಗಳನ್ನು ಸಂಗ್ರಹಿಸಿಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಮಂಗಳವಾರ ರಾಜ್ಯದಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹಾಗೂ ಆರೋಗ್ಯಾಧಿಕಾರಿಗಳ ಜತೆ ಸಭೆ ನಡೆಸಿ ಚರ್ಚಿಸಿ ಮಾತನಾಡಿದ ಅವರು, ಜೂ. 24ರ ವರೆಗೆ 5,374 ಪ್ರಕರಣ ವರದಿಯಾಗಿದ್ದು, 5 ಮರಣಗಳು ಸಂಭವಿಸಿವೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 1,230 ಪ್ರಕರಣಗಳಿವೆ. ಇದನ್ನು ಗಂಭೀರವಾಗಿ ಪರಿಗಣಿಸಿ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆದೇಶಿಸಿದರು.
ಮರಣ ಪ್ರಮಾಣ ಶೇ.0.09
ಕೇಂದ್ರ ಆರೋಗ್ಯ ಇಲಾಖೆಯು ಡೆಂಗ್ಯೂ ಪ್ರಕರಣಗಳ ಮರಣ ಪ್ರಮಾಣ ಶೇ. 0.5ನ್ನು ಮೀರುವಂತಿಲ್ಲ ಎಂದಿದೆ. ಆದರೆ ರಾಜ್ಯದಲ್ಲಿ ಮರಣ ಪ್ರಮಾಣ ಶೇ. 0.09ರಷ್ಟಿದೆ. ಇದು ಏರಿಕೆಯಾಗದಂತೆ ನೋಡಿಕೊಳ್ಳಬೇಕಿದೆ. ಬೆಂಗಳೂರು, ಚಿಕ್ಕಮಗಳೂರು, ಮೈಸೂರು, ಹಾವೇರಿ, ಶಿವಮೊಗ್ಗ, ಚಿತ್ರದುರ್ಗ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಕರಣಗಳು ಕಾಣಿಸಿಕೊಂಡಿವೆ ಎಂದರು.
ರಾಜ್ಯದಲ್ಲಿ ಪ್ರತೀ ಶುಕ್ರವಾರ ರೋಗ ಹರಡುವ ಮೂಲ ಪತ್ತೆ ಮತ್ತು ನಾಶ ವಿಶೇಷ ಅಭಿಯಾನವನ್ನು ಹೆಚ್ಚು ಪರಿಣಾಮಕಾರಿಯಾಗಿ ಮಾಡಲು ಸಭೆಯಲ್ಲಿ ನಿರ್ಧರಿಸಲಾಯಿತು.
ಪರೀಕ್ಷೆ ಕಡಿಮೆ ಮಾಡಬೇಡಿ
ಡೆಂಗ್ಯೂ ಪರೀಕ್ಷೆಯ ಪ್ರಮಾಣ ಕಡಿಮೆ ಮಾಡುವುದು ಬೇಡ. ಹೆಚ್ಚು ಮಾಡಿದಂತೆ ಪ್ರಕರಣಗಳನ್ನು ಪ್ರಾರಂಭಿಕ ಹಂತದಲ್ಲಿ ಪತ್ತೆ ಹಚ್ಚಿ ಚಿಕಿತ್ಸೆ ನೀಡಬಹುದು. ಡೆಂಗ್ಯೂಗೆ ಕಾರಣವಾಗುವ ಲಾರ್ವಾ ಮತ್ತು ಮೊಟ್ಟೆಗಳನ್ನು ಮೂಲದಲ್ಲಿಯೇ ನಾಶ ಮಾಡಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ಆಶಾ ಕಾರ್ಯಕರ್ತೆಯರು, ನರ್ಸಿಂಗ್ ವಿದ್ಯಾರ್ಥಿಗಳು, ಎನ್ನೆಸೆಸ್ ವಿದ್ಯಾರ್ಥಿಗಳು ಮತ್ತಿತರ ಸ್ವಯಂ ಸೇವಕರ ನೆರವಿನೊಂದಿಗೆ ಮನೆ ಮನೆ ಸಮೀಕ್ಷೆ ನಡೆಸಿ ಡೆಂಗ್ಯೂ ಬಗ್ಗೆ ಅರಿವು ಮೂಡಿಸಲು ನಿರ್ಧರಿಸಲಾಯಿತು ಎಂದರು.
ಟಾಪ್ ನ್ಯೂಸ್
![police crime](https://www.udayavani.com/wp-content/uploads/2024/07/police-crime-2-415x256.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![1-sa-dsadsa](https://www.udayavani.com/wp-content/uploads/2024/07/1-sa-dsadsa-150x84.jpg)
Mangaluru; ಮಣ್ಣುಕುಸಿತದಿಂದ ಸಾವನ್ನಪ್ಪಿದ ಕಾರ್ಮಿಕನ ಕುಟುಂಬಕ್ಕೆ 4 ಲಕ್ಷ ರೂ. ಪರಿಹಾರ
![1-asdsad](https://www.udayavani.com/wp-content/uploads/2024/07/1-asdsad-150x100.jpg)
Police ಭ್ರಷ್ಟಾಚಾರದಿಂದ ಬೇಸತ್ತಿದ್ದೇನೆ: ಶಾಸಕ ಕಂದಕೂರ ರಾಜೀನಾಮೆ ಎಚ್ಚರಿಕೆ
![pejawar swamiji reacts to Rahul Gandhi’s Hindu remark on parliament](https://www.udayavani.com/wp-content/uploads/2024/07/pejara-150x83.jpg)
Hindu remark; ಅಂತವರನ್ನು ದೂರ ಇಡಬೇಕು..: ರಾಹುಲ್ ಹೇಳಿಕೆಗೆ ಪೇಜಾವರಶ್ರೀ ಕಿಡಿ
![“ದರ್ಶನ್ ನಿರಪರಾಧಿ ಎಂದು ಸಾಬೀತುಪಡಿಸಿ ಹೊರಬರುತ್ತಾರೆ..” ಸುಮಲತಾ ಸುದೀರ್ಘ ಪೋಸ್ಟ್](https://www.udayavani.com/wp-content/uploads/2024/07/13-2-150x90.jpg)
“ದರ್ಶನ್ ನಿರಪರಾಧಿ ಎಂದು ಸಾಬೀತುಪಡಿಸಿ ಹೊರಬರುತ್ತಾರೆ..” ಸುಮಲತಾ ಸುದೀರ್ಘ ಪೋಸ್ಟ್
![Renukaswamy Case: ದರ್ಶನ್, ಪವಿತ್ರಾ ಗೌಡ ಸೇರಿ ಇತರೆ ಆರೋಪಿಗಳಿಗೆ ಮತ್ತೆ ಜೈಲೇ ಗತಿ](https://www.udayavani.com/wp-content/uploads/2024/07/12-3-150x90.jpg)
Renukaswamy Case: ದರ್ಶನ್, ಪವಿತ್ರಾ ಗೌಡ ಸೇರಿ ಇತರೆ ಆರೋಪಿಗಳಿಗೆ ಮತ್ತೆ ಜೈಲೇ ಗತಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.