![1-qe](https://www.udayavani.com/wp-content/uploads/2024/07/1-qe-415x241.jpg)
ರಾಜ್ಯದಲ್ಲಿ 52 ಸಾವಿರ ಕೋಟಿ ರೂ. ಹೂಡಿಕೆ ನಿರೀಕ್ಷೆ: ಪ್ರಿಯಾಂಕ್ ಖರ್ಗೆ
ಏರೋಸ್ಪೇಸ್, ಚಿಪ್ ತಯಾರಿಕೆ, ಆಟೋ ಸಿಸ್ಟಮ್ಸ್, ಸೆಮಿಕಂಡಕ್ಟರ್ ಕ್ಷೇತ್ರದಲ್ಲಿ ಹೂಡಿಕೆಗೆ ಕಂಪನಿಗಳು ಆಸಕ್ತಿ
Team Udayavani, Jun 26, 2024, 6:15 AM IST
![ರಾಜ್ಯದಲ್ಲಿ 52 ಸಾವಿರ ಕೋಟಿ ರೂ. ಹೂಡಿಕೆ ನಿರೀಕ್ಷೆ: ಪ್ರಿಯಾಂಕ್ ಖರ್ಗೆ](https://www.udayavani.com/wp-content/uploads/2024/06/Kharge-14-620x355.jpg)
ಬೆಂಗಳೂರು: ಐಟಿ-ಬಿಟಿ ಇಲಾಖೆ ನಿಯೋಗದ ವಿದೇಶ ಭೇಟಿಯಿಂದ ನಿರೀಕ್ಷೆ ಮೀರಿ ಸ್ಪಂದನೆ ದೊರಕಿದ್ದು ಸುಮಾರು 52 ಸಾವಿರ ಕೋಟಿ ರೂ. (6.2 ಬಿಲಿಯನ್ ಡಾಲರ್) ಬಂಡವಾಳ ರಾಜ್ಯಕ್ಕೆ ಹರಿದುಬರುವ ನಿರೀಕ್ಷೆ ಇದೆ ಎಂದು ಐಟಿ-ಬಿಟಿ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.
ಜೂನ್ 4ರಿಂದ 7ರವರೆಗೆ ಅಮೆರಿಕದ ಕ್ಯಾಲಿಫೋರ್ನಿಯಾ, ಮೆಸಚೂಸೆಟ್ಸ್ ಸೇರಿ ವಿವಿಧೆಡೆ ಬಂಡವಾಳ ಹೂಡಿಕೆ ಆಕರ್ಷಿಸುವ ಸಂಬಂಧ ಅಂತಾರಾಷ್ಟ್ರೀಯ ರೋಡ್ ಶೋಗಳು ನಡೆದವು. ಅದರಲ್ಲಿ ರಾಜ್ಯ ಸರ್ಕಾರದ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ ನಿಯೋಗ ಕೂಡ ಭಾಗವಹಿಸಿತ್ತು. ಈ ವೇಳೆ ಹಲವು ಕಂಪನಿಗಳು ಹೂಡಿಕೆಗೆ ಆಸಕ್ತಿ ತೋರಿಸಿದ್ದಲ್ಲದೆ, ಕೆಲವರು ಒಡಂಬಡಿಕೆ ಕೂಡ ಮಾಡಿಕೊಂಡಿದ್ದಾರೆ. ಇದರಿಂದ ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿ 52 ಸಾವಿರ ಕೋಟಿ ಹೂಡಿಕೆ ಜತೆಗೆ ಸಾವಿರಾರು ಉದ್ಯೋಗಾವಕಾಶ ನಿರೀಕ್ಷಿಸಲಾಗಿದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ನಾಲ್ಕು ದಿನಗಳ ಭೇಟಿಯಲ್ಲಿ ಲಂಡನ್, ಫ್ರಾನ್ಸ್, ಅಮೆರಿಕ ಸೇರಿದಂತೆ ಹತ್ತುಹಲವು ದೇಶಗಳ ಕಂಪನಿಗಳೊಂದಿಗೆ ಸಭೆ ನಡೆಸಲಾಯಿತು. ಈ ವೇಳೆ ಪ್ರಮುಖವಾಗಿ ಏರೋಸ್ಪೇಸ್, ಚಿಪ್ ತಯಾರಿಕೆ, ಆಟೋ ಸಿಸ್ಟಮ್ಸ್, ಸೆಮಿಕಂಡಕ್ಟರ್ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಹೂಡಿಕೆಗೆ ಕಂಪನಿಗಳು ಆಸಕ್ತಿ ತೋರಿಸಿವೆ. ಕೆಲವು ಒಡಂಬಡಿಕೆಗಳಾಗಿ ಮಾರ್ಪಟ್ಟಿದ್ದರೆ, ಕೆಲವು ಮಾತುಕತೆ ಹಂತದಲ್ಲಿವೆ ಎಂದು ಮಾಹಿತಿ ನೀಡಿದರು.
ಎಷ್ಟು ಉದ್ಯೋಗ ಸೃಷ್ಟಿಯಾಗಬಹುದು ಎಂದು ನಿಖರವಾಗಿ ಈಗಲೇ ಹೇಳುವುದು ಕಷ್ಟ. ಜಿಸಿಸಿ (ಗ್ಲೋಬಲ್ ಕ್ಲೀನ್ಟೆಕ್ ಕ್ಯಾಪಿಟಲ್) ದೃಷ್ಟಿಯಿಂದ ಹೇಳುವುದಾದರೆ, 35ರಿಂದ 40 ಸಾವಿರ ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಇದೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ಟಾಪ್ ನ್ಯೂಸ್
![1-qe](https://www.udayavani.com/wp-content/uploads/2024/07/1-qe-415x241.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Pen Drive Case 4 ತಿಂಗಳಿಗೊಮ್ಮೆ ಎಚ್ಐವಿ ಟೆಸ್ಟ್ ಮಾಡಿಸುತ್ತಿದ್ದ ಪ್ರಜ್ವಲ್?](https://www.udayavani.com/wp-content/uploads/2024/07/HIV-150x90.jpg)
Pen Drive Case 4 ತಿಂಗಳಿಗೊಮ್ಮೆ ಎಚ್ಐವಿ ಟೆಸ್ಟ್ ಮಾಡಿಸುತ್ತಿದ್ದ ಪ್ರಜ್ವಲ್?
![Private Hospital ಡೆಂಗ್ಯೂ ಪರೀಕ್ಷೆಗೆ ಶುಲ್ಕ ನಿಗದಿ: ಸಚಿವ ದಿನೇಶ್](https://www.udayavani.com/wp-content/uploads/2024/07/dinesh-gundu-rao-150x87.jpg)
Private Hospital ಡೆಂಗ್ಯೂ ಪರೀಕ್ಷೆಗೆ ಶುಲ್ಕ ನಿಗದಿ: ಸಚಿವ ದಿನೇಶ್
![Udayavani exclusive interview of KN Rajanna](https://www.udayavani.com/wp-content/uploads/2024/07/N-Rajanna-150x83.jpg)
ಡಿಕೆಶಿ ಕಾಂಗ್ರೆಸ್ಗೆ ಕಾಲಿಡುವ ಮೊದಲೇ ನೋಟಿಸ್, ಉಚ್ಚಾಟನೆ ಎಲ್ಲಾ ನೋಡಿದ್ದೀನಿ…; ರಾಜಣ್ಣ
![CM Siddaramaiah ರೈತರಿಗೆ ನಿತ್ಯ 5 ಕೋಟಿ ರೂ. ಪ್ರೋತ್ಸಾಹ ಧನ](https://www.udayavani.com/wp-content/uploads/2024/07/SIDDA-150x84.jpg)
CM Siddaramaiah ರೈತರಿಗೆ ನಿತ್ಯ 5 ಕೋಟಿ ರೂ. ಪ್ರೋತ್ಸಾಹ ಧನ
![KMF ಹಾಲಿನ ಹೊಳೆ: ನಿತ್ಯ 1 ಕೋಟಿ ಲೀಟರ್!-ಕೆಎಂಎಫ್ ಇತಿಹಾಸದಲ್ಲೇ ದಾಖಲೆ ಕ್ಷೀರ ಸರಬರಾಜು](https://www.udayavani.com/wp-content/uploads/2024/07/kmf-6-copy-150x94.jpg)
KMF ಹಾಲಿನ ಹೊಳೆ: ನಿತ್ಯ 1 ಕೋಟಿ ಲೀಟರ್!-ಕೆಎಂಎಫ್ ಇತಿಹಾಸದಲ್ಲೇ ದಾಖಲೆ ಕ್ಷೀರ ಸರಬರಾಜು
MUST WATCH
ಹೊಸ ಸೇರ್ಪಡೆ
![1-qe](https://www.udayavani.com/wp-content/uploads/2024/07/1-qe-150x87.jpg)
Hathras stampede; ಸ್ವಯಂ ಘೋಷಿತ ದೇವಮಾನವ ‘ಭೋಲೆ ಬಾಬಾ’ ಯಾರು?
![1-a-baaba](https://www.udayavani.com/wp-content/uploads/2024/07/1-a-baaba-150x84.jpg)
Hathras stampede;‘ಸತ್ಸಂಗ’ದ ವೇಳೆ ಕಾಲ್ತುಳಿತ : ಮೃತರ ಸಂಖ್ಯೆ 116ಕ್ಕೆ
![Barbados](https://www.udayavani.com/wp-content/uploads/2024/07/huricanbe-150x83.jpg)
Barbados; ಮತ್ತೊಂದು ಚಂಡಮಾರುತದ ಸೂಚನೆ; ಭಾರತ ತಂಡ ಇಂದು ರಾತ್ರಿ ಆಗಮನ?
![Court-Symbol](https://www.udayavani.com/wp-content/uploads/2024/07/Court-Symbol-1-150x90.jpg)
Dakshina Kannada: ಅಕ್ರಮ ಆಸ್ತಿ ಗಳಿಕೆ ಪ್ರಕರಣ; ನಿವೃತ್ತ ಕಮಾಂಡೆಂಟ್ ದೋಷಮುಕ್ತ
![Agriculture-Tracator](https://www.udayavani.com/wp-content/uploads/2024/07/Agriculture-Tracator-150x90.jpg)
Agriculture: ಭತ್ತದ ಕೃಷಿಗೆ ಯಂತ್ರವೂ ಸಿಗುತ್ತಿಲ್ಲ, ಕಾರ್ಮಿಕರೂ ಬರುತ್ತಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.