![1-mangaluru](https://www.udayavani.com/wp-content/uploads/2024/07/1-mangaluru-415x268.jpg)
Loksabha; ಡೆಪ್ಯುಟಿ ಸ್ಪೀಕರ್ ಸ್ಥಾನಕ್ಕೂ “ಐಎನ್ಡಿಐಎ’ ಅಭ್ಯರ್ಥಿ?
Team Udayavani, Jun 26, 2024, 6:24 AM IST
![Lok Sabha; “INDIA” candidate for the post of Deputy Speaker?](https://www.udayavani.com/wp-content/uploads/2024/06/deup-620x342.jpg)
ಹೊಸದಿಲ್ಲಿ: ಲೋಕಸಭಾ ಸ್ಪೀಕರ್ ಸ್ಥಾನಕ್ಕೆ ಅಭ್ಯರ್ಥಿಯನ್ನು ಕಣಕ್ಕಿಳಿಸಿದ ಬೆನ್ನಲ್ಲೇ ಡೆಪ್ಯುಟಿ ಸ್ಪೀಕರ್ ಸ್ಥಾನಕ್ಕೂ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಸಂಬಂಧ ವಿಪಕ್ಷ ಕೂಟದ ನಾಯಕರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ದಿಲ್ಲಿ ನಿವಾಸದಲ್ಲಿ ಸಭೆ ನಡೆಸಿ ಚರ್ಚಿಸಿದ್ದಾರೆ ಎನ್ನಲಾಗಿದೆ.
ಬುಧವಾರ ನಡೆಯಲಿರುವ ಸ್ಪೀಕರ್ ಚುನಾವಣೆ ವೇಳೆ ಯಾವ ಕಾರ್ಯತಂತ್ರ ಅನುಸರಿಸಬೇಕು ಎಂಬು ದು ಸೇರಿ, ಡೆಪ್ಯುಟಿ ಸ್ಪೀಕರ್ ಸ್ಥಾನಕ್ಕೆ ಅಭ್ಯರ್ಥಿ ಆಯ್ಕೆಯ ಬಗ್ಗೆ ಚರ್ಚಿಸುವುದೂ ಈ ಸಭೆಯ ಉದ್ದೇಶ ವಾಗಿತ್ತು. ಐಎನ್ಡಿಐಎ ಕೂಟದ ಬಹುತೇಕ ನಾಯ ಕರು ಈ ಸಭೆ ಯಲ್ಲಿ ಪಾಲ್ಗೊಂಡಿ ದ್ದರು ಎನ್ನಲಾಗಿದೆ.
ಎನ್ಡಿಎ ಕೂಟದ ಸಭೆ: ಮತ್ತೂಂದೆಡೆ ಬಿಜೆಪಿ ನಾಯಕ ಅಮಿತ್ ಶಾ ಅವರು ದಿಲ್ಲಿಯಲ್ಲಿ ಮಂಗಳವಾರ ರಾತ್ರಿ ಸಂಸದರ ಸಭೆ ನಡೆಸಿದರು. ಸ್ಪೀಕರ್ ಚುನಾವಣೆಯಲ್ಲಿ ಸ್ಪಷ್ಟ ಗೆಲುವು ಸಾಧ್ಯವಿ ದ್ದರೂ, ಯಾವುದೇ ರಿಸ್ಕ್ ತೆಗೆದುಕೊಳ್ಳಲು ಮುಂದಾ ಗದ ಅಮಿತ್ ಶಾ, ಬುಧವಾರ ಎಲ್ಲ ಸಂಸದರಿಗೆ ಸಂಸತ್ತಿನಲ್ಲಿ ಬೆಳಗ್ಗೆ 10.30ಕ್ಕೆ ಹಾಜರಿರುವಂತೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.
ವಿಪ್ ನೀಡಿದ ಕಾಂಗ್ರೆಸ್: ಸ್ಪೀಕರ್ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷವು ತನ್ನ ಸಂಸದರಿಗೆ ವಿಪ್ ಜಾರಿ ಮಾಡಿದೆ. ಬುಧವಾರ ಬೆಳಗ್ಗೆ 11 ಗಂಟೆಗೆ ಲೋಕಸಭೆಯಲ್ಲಿ ಹಾಜರಿರುವಂತೆ ವಿಪ್ನಲ್ಲಿ ತಿಳಿಸಿದೆ. ಮುಖ್ಯ ಸಚೇತಕವಾಗಿರುವ ಕೆ.ಸುರೇಶ್ ಅವರೂ ಐಎನ್ಡಿಐಎ ಕೂಟದ ಸ್ಪೀಕರ್ ಅಭ್ಯರ್ಥಿಯೂ ಆಗಿದ್ದಾರೆ.
ಸ್ಪೀಕರ್ ಚುನಾವಣೆಗೆ ವಿಪಕ್ಷ ಕೂಟದಲ್ಲೇ ಒಡಕು: ಟಿಎಂಸಿ ಅಪಸ್ವರ
ಸ್ಪೀಕರ್ ಚುನಾವಣೆಗೆ ಜಂಟಿ ಅಭ್ಯರ್ಥಿಯಾಗಿ ಕೆ.ಸುರೇಶ್ ಅವರನ್ನು ಕಣಕ್ಕಿಳಿಸುವ ಬಗ್ಗೆ ಯಾವುದೇ ಚರ್ಚೆ ನಡೆಸಿಲ್ಲ ಎಂದು ಐಎನ್ಡಿಐಎ ಕೂಟದ ಪ್ರಮುಖ ಪಕ್ಷವಾಗಿರುವ ತೃಣಮೂಲ ಕಾಂಗ್ರೆಸ್ ಅಪಸ್ವರ ಎತ್ತಿದೆ. ಸುರೇಶ್ ನಾಮಪತ್ರ ಸಲ್ಲಿಸುವಾಗ ಟಿಎಂಸಿ ನಾಯಕರು ಜತೆಯಲ್ಲಿರಲಿಲ್ಲ. ಈ ಕುರಿತು ಮಾತನಾಡಿದ ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ, ಈ ಕುರಿತೂ ಯಾರೂ ನಮ್ಮೊಂದಿಗೆ ಮಾತನಾಡಿಲ್ಲ. ಯಾರೂ ಸಂಪರ್ಕಿಸಿಲ್ಲ. ದುರದೃಷ್ಟವಶಾತ್ ಇದೊಂದು ಏಕಪಕ್ಷೀಯ ನಿರ್ಧಾರವಾಗಿದೆ. ಈ ಬಗ್ಗೆ ನಮ್ಮ ನಾಯಕಿ ಮಮತಾ ಬ್ಯಾನರ್ಜಿ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಹೇಳಿದರು.
ಟಾಪ್ ನ್ಯೂಸ್
![1-mangaluru](https://www.udayavani.com/wp-content/uploads/2024/07/1-mangaluru-415x268.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ](https://www.udayavani.com/wp-content/uploads/2024/07/Modi-4-150x92.jpg)
Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ
![1-PTI](https://www.udayavani.com/wp-content/uploads/2024/07/1-PTI-150x91.jpg)
Mumbai ಬೀದಿಗಳನ್ನು ವ್ಯಾಪಾರಿಗಳು ವಶಪಡಿಸಿಕೊಂಡಿದ್ದು ಪಾದಚಾರಿಗಳಿಗೆ ಸ್ಥಳವಿಲ್ಲ: ಹೈಕೋರ್ಟ್
![1-anurag](https://www.udayavani.com/wp-content/uploads/2024/07/1-anurag-150x89.jpg)
Constitution ನಲ್ಲಿ ಎಷ್ಟು ಪುಟಗಳಿವೆ?: ವಿಪಕ್ಷಗಳಿಗೆ ಅನುರಾಗ್ ಠಾಕೂರ್ ಪ್ರಶ್ನೆ ವೈರಲ್
![1-a-baaba](https://www.udayavani.com/wp-content/uploads/2024/07/1-a-baaba-150x84.jpg)
Hathras stampede;‘ಸತ್ಸಂಗ’ದ ವೇಳೆ ಕಾಲ್ತುಳಿತ : ಮೃತರ ಸಂಖ್ಯೆ 121ಕ್ಕೆ
![1993 Mumbai riot accused arrested after 31 years](https://www.udayavani.com/wp-content/uploads/2024/07/riot-150x83.jpg)
Mumbai; 31 ವರ್ಷ ಬಳಿಕ ಸೆರೆಸಿಕ್ಕ 1993 ಮುಂಬೈ ಗಲಭೆ ಆರೋಪಿ
MUST WATCH
ಹೊಸ ಸೇರ್ಪಡೆ
![1-mangaluru](https://www.udayavani.com/wp-content/uploads/2024/07/1-mangaluru-150x97.jpg)
Mangaluru; ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ: ಸಿಲುಕಿದ ಕಾರ್ಮಿಕರು
![10](https://www.udayavani.com/wp-content/uploads/2024/07/10-2-150x90.jpg)
ದೇವಮಾನವರ ದರ್ಶನ..ಧಾರ್ಮಿಕ ಕಾರ್ಯಕ್ರಮದ ವೇಳೆ ನಡೆದ ದೇಶದ ಪ್ರಮುಖ ಕಾಲ್ತುಳಿತ ಘಟನೆಗಳಿವು
![Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ](https://www.udayavani.com/wp-content/uploads/2024/07/Modi-4-150x92.jpg)
Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ
![1-honnavara](https://www.udayavani.com/wp-content/uploads/2024/07/1-honnavara-150x90.jpg)
Honnavara: ಪಟ್ಟಣ ಪಂಚಾಯತ್ ನಲ್ಲಿ ಲೋಕಾಯುಕ್ತ ದಾಳಿ
![1-vijayendra](https://www.udayavani.com/wp-content/uploads/2024/07/1-vijayendra-150x100.jpg)
CM ಸಿದ್ದರಾಮಯ್ಯ ಮನೆ ಮುತ್ತಿಗೆಗೆ ಯತ್ನ; ಬಿಜೆಪಿ ಪ್ರಮುಖ ನಾಯಕರು ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.