![1-vijayendra](https://www.udayavani.com/wp-content/uploads/2024/07/1-vijayendra-415x277.jpg)
Udayavani Report; ತಾಯಿ-ಮಗಳ ಛಲಕ್ಕೆ ಫಲ: ಹಾಸ್ಟೆಲ್ ಪ್ರವೇಶಕ್ಕೆ ಆಹ್ವಾನ
ಉದಯವಾಣಿಯಲ್ಲಿ ವರದಿಗೆ ಸಹೃದಯರಿಂದಲೂ ಸ್ಪಂದನೆ
Team Udayavani, Jun 26, 2024, 6:40 AM IST
![Udayavani Report; ತಾಯಿ-ಮಗಳ ಛಲಕ್ಕೆ ಫಲ: ಹಾಸ್ಟೆಲ್ ಪ್ರವೇಶಕ್ಕೆ ಆಹ್ವಾನ](https://www.udayavani.com/wp-content/uploads/2024/06/HOSTEL-5-620x362.jpg)
ಮಂಗಳೂರು: ಹಾಸ್ಟೆಲ್ಗಾಗಿ ಕೆಲವು ದಿನಗಳಿಂದ ಪ್ರಯತ್ನಿಸುತ್ತಿದ್ದ ಕಡಬದ ವಿದ್ಯಾರ್ಥಿನಿ ಮತ್ತು ಆಕೆಯ ತಾಯಿಯ ಪ್ರಯತ್ನಕ್ಕೆ ಫಲ ಸಿಕ್ಕಿದ್ದು ಮಂಗಳವಾರ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಕರೆ ಮಾಡಿ ಬುಧವಾರದಂದೇ ಹಾಸ್ಟೆಲ್ಗೆ ಸೇರ್ಪಡೆಯಾಗಬಹುದು ಎಂದು ತಿಳಿಸಿದ್ದಾರೆ.
ಪಿಯುಸಿ ವಿದ್ಯಾಭ್ಯಾಸಕ್ಕಾಗಿ ನಗರದ ಕಾಲೇಜಿಗೆ ಸೇರ್ಪಡೆಯಾಗಿದ್ದ ಕಡಬದ ವಿದ್ಯಾರ್ಥಿನಿಗೆ ಹಾಸ್ಟೆಲ್ ಸಿಗದ ಕಾರಣ ಅನಾರೋಗ್ಯಕ್ಕೀಡಾದ ಆಕೆಯ ತಾಯಿ ಕೂಡ ದೂರದ ಕಡಬದಿಂದ ಪ್ರತಿದಿನ ವಿದ್ಯಾರ್ಥಿನಿ ಜತೆಗೆ ಮಂಗಳೂರು ನಗರಕ್ಕೆ ಬಂದು ಸರಕಾರಿ ಕಚೇರಿಗಳ ಬಳಿ ಸಮಯ ಕಳೆದು ವಾಪಸಾಗುತ್ತಿದ್ದರು.
ಸಮಾಜ ಕಲ್ಯಾಣ ಇಲಾಖೆಯಲ್ಲಿ ವಿಚಾರಿಸಿದಾಗ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಸ್ವೀಕರಿಸಲು ಸರ್ವರ್ ಸಮಸ್ಯೆ ಇರುವುದಾಗಿ ತಿಳಿಸಿದ್ದರು. ಸೋಮವಾರ ಸಂಜೆ ವಿಚಾರಿಸಿದಾಗ ಅರ್ಜಿ ಸ್ವೀಕರಿಸಿ ಹಾಸ್ಟೆಲ್ ಒದಗಿಸುವ ಭರವಸೆ ನೀಡಿದ್ದರು. ಆದಾಗ್ಯೂ ತಾಯಿ ಮತ್ತು ಮಗಳಿಗೆ ಹಾಸ್ಟೆಲ್ ಚಿಂತೆ ಕಾಡುತ್ತಿತ್ತು. ಈ ಬಗ್ಗೆ ಮಂಗಳವಾರ”ಉದಯವಾಣಿ’ಯಲ್ಲಿ ವರದಿ ಪ್ರಕಟವಾಗಿತ್ತು.
ಮಂಗಳವಾರ ವಿದ್ಯಾರ್ಥಿನಿಯ ತಾಯಿಗೆ ಕರೆ ಮಾಡಿದ ಅಧಿಕಾರಿಗಳು ಹಾಸ್ಟೆಲ್ಗೆ ಸೇರ್ಪಡೆಯಾಗುವಂತೆ ಹೇಳಿದ್ದಾರೆ. ಇದರಿಂದ ತಾಯಿ ಮತ್ತು ಮಗಳು ಖುಷಿಪಟ್ಟಿದ್ದಾರೆ. ಶೀಘ್ರ ಹಾಸ್ಟೆಲ್ಗೆ ಸೇರುವುದಾಗಿಯೂ ವಿದ್ಯಾರ್ಥಿನಿ ಹರ್ಷ ವ್ಯಕ್ತಪಡಿಸಿದ್ದಾಳೆ. “ಹಾಸ್ಟೆಲ್ನವರು ಕರೆ ಮಾಡಿದ್ದಾರೆ. ನಾಳೆಯೇ ಬಂದು ಸೇರಿಕೊಳ್ಳಬಹುದು ಎಂದಿದ್ದಾರೆ’ ಎಂದು ವಿದ್ಯಾರ್ಥಿನಿಯ ತಾಯಿ ಪ್ರತಿಕ್ರಿಯಿಸಿದ್ದಾರೆ.
ಸ್ಪಂದನೆ
ಹಾಸ್ಟೆಲ್ ಸಿಗದೆ ತೊಂದರೆಯಾಗಿರುವ ಕುರಿತಾದ ವರದಿ ಗಮನಿಸಿದ ಹಲವರು ವಿದ್ಯಾರ್ಥಿನಿಯ ನೆರವಿಗೆ ಮುಂದಾಗಿದ್ದಾರೆ. ಹಾಸ್ಟೆಲ್ ಸಿಗುವವರೆಗೆ ತಾಯಿ, ವಿದ್ಯಾರ್ಥಿನಿಗೆ ತಂಗಲು ನಗರದಲ್ಲಿ ವ್ಯವಸ್ಥೆ ಮಾಡಿಸಿಕೊಡುವುದಾಗಿ ಕೆಲವರು ಹೇಳಿದ್ದಾರೆ. ಕೆಲವು ಮಂದಿ ಪಿಜಿ ಮಾಲಕರು ವಿದ್ಯಾರ್ಥಿನಿಗೆ ಹಾಸ್ಟೆಲ್ ಸಿಗುವವರೆಗೆ ಉಚಿತವಾಗಿ ಉಳಿದುಕೊಳ್ಳಲು ಅವಕಾಶ ನೀಡುವುದಾಗಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
![1-vijayendra](https://www.udayavani.com/wp-content/uploads/2024/07/1-vijayendra-415x277.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Court-Symbol](https://www.udayavani.com/wp-content/uploads/2024/07/Court-Symbol-1-150x90.jpg)
Dakshina Kannada: ಅಕ್ರಮ ಆಸ್ತಿ ಗಳಿಕೆ ಪ್ರಕರಣ; ನಿವೃತ್ತ ಕಮಾಂಡೆಂಟ್ ದೋಷಮುಕ್ತ
![Court-Symbol](https://www.udayavani.com/wp-content/uploads/2024/07/Court-Symbol-2-150x90.jpg)
Mangaluru: ಪತಿಯ ಹತ್ಯೆ ಪ್ರಕರಣ; ಮಹಿಳೆ ಸಹಿತ ಐವರಿಗೆ ಜೀವಾವಧಿ ಶಿಕ್ಷೆ
![Mangaluru ಸಮವಸ್ತ್ರದಲ್ಲೇ ಹಾರೆ ಹಿಡಿದು ಗುಂಡಿ ಮುಚ್ಚಿದ ಪೊಲೀಸ್ ಸಬ್ ಇನ್ಸ್ಪೆಕ್ಟರ್](https://www.udayavani.com/wp-content/uploads/2024/07/ROAD-AA-150x113.jpg)
Mangaluru ಸಮವಸ್ತ್ರದಲ್ಲೇ ಹಾರೆ ಹಿಡಿದು ಗುಂಡಿ ಮುಚ್ಚಿದ ಪೊಲೀಸ್ ಸಬ್ ಇನ್ಸ್ಪೆಕ್ಟರ್
![Mangaluru ಅಡಿಕೆಯ ಮೇಲಿನ ಜಿಎಸ್ಟಿ ಇಳಿಸಲು ಕ್ಯಾಂಪ್ಕೊ ಆಗ್ರಹ](https://www.udayavani.com/wp-content/uploads/2024/07/adike-1-150x90.jpg)
Mangaluru ಅಡಿಕೆಯ ಮೇಲಿನ ಜಿಎಸ್ಟಿ ಇಳಿಸಲು ಕ್ಯಾಂಪ್ಕೊ ಆಗ್ರಹ
![Fraud Case ಬಿಟ್ ಕಾಯಿನ್ ಹೂಡಿಕೆ ಮಾಡಿಸಿ ಲಕ್ಷಾಂತರ ವಂಚನೆ; ದೂರು](https://www.udayavani.com/wp-content/uploads/2024/07/FRAUD-1-150x96.jpg)
Fraud Case ಬಿಟ್ ಕಾಯಿನ್ ಹೂಡಿಕೆ ಮಾಡಿಸಿ ಲಕ್ಷಾಂತರ ವಂಚನೆ; ದೂರು
MUST WATCH
ಹೊಸ ಸೇರ್ಪಡೆ
![1-honnavara](https://www.udayavani.com/wp-content/uploads/2024/07/1-honnavara-150x90.jpg)
Honnavara: ಪಟ್ಟಣ ಪಂಚಾಯತ್ ನಲ್ಲಿ ಲೋಕಾಯುಕ್ತ ದಾಳಿ
![1-vijayendra](https://www.udayavani.com/wp-content/uploads/2024/07/1-vijayendra-150x100.jpg)
CM ಸಿದ್ದರಾಮಯ್ಯ ಮನೆ ಮುತ್ತಿಗೆಗೆ ಯತ್ನ; ಬಿಜೆಪಿ ಪ್ರಮುಖ ನಾಯಕರು ವಶಕ್ಕೆ
![vijayapura](https://www.udayavani.com/wp-content/uploads/2024/07/vijayapura-2-150x90.jpg)
Vijayapura; ಕೃಷ್ಣಾ ನದಿ ತೆಪ್ಪ ದುರಂತ: ಮೂವರ ಶವಪತ್ತೆ, ಇಬ್ಬರಿಗಾಗಿ ಶೋಧ
![1-raju](https://www.udayavani.com/wp-content/uploads/2024/07/1-raju-150x85.jpg)
Vijayapura: ವೀರಯೋಧ ಹವಾಲ್ದಾರ್ ರಾಜು ಕರ್ಜಗಿ ಪಾರ್ಥಿವ ಶರೀರ ತವರಿಗೆ ಆಗಮನ
![1-PTI](https://www.udayavani.com/wp-content/uploads/2024/07/1-PTI-150x91.jpg)
Mumbai ಬೀದಿಗಳನ್ನು ವ್ಯಾಪಾರಿಗಳು ವಶಪಡಿಸಿಕೊಂಡಿದ್ದು ಪಾದಚಾರಿಗಳಿಗೆ ಸ್ಥಳವಿಲ್ಲ: ಹೈಕೋರ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.