![Vijayapura ತೆಪ್ಪ ದುರಂತ ಪ್ರಕರಣ: ರಕ್ಷಕರ ಮೊಬೈಲ್ ಸಮೇತ ಪರಾರಿಯಾದರೆ ಪೊಲೀಸರು ?](https://www.udayavani.com/wp-content/uploads/2024/07/vijayapura-3-415x249.jpg)
Rain: ಅರಂತೋಡು: ಮಾಣಿ ಮೈಸೂರು ರಸ್ತೆಗೆ ಮರ ಬಿದ್ದು ರಸ್ತೆ ತಡೆ
Team Udayavani, Jun 26, 2024, 10:24 AM IST
![2-aranthodu](https://www.udayavani.com/wp-content/uploads/2024/06/2-aranthodu-2-620x372.jpg)
ಅರಂತೋಡು: ಗ್ರಾಮದ ಎಲ್ಪಕಜೆ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿಗೆ ಅಡ್ಡಲಾಗಿ ಬೃಹತ್ ಗಾತ್ರದ ಮರ ಬಿದ್ದು ಸಂಚಾರಕ್ಕೆ ಅಡಚಣೆಯಾದ ಘಟನೆ ಅರಂತೋಡಿನಲ್ಲಿ ನಡೆದ ಬಗ್ಗೆ ವರದಿಯಾಗಿದೆ.
ಸುಮಾರು ಮೂರು ಗಂಟೆ ಹೊತ್ತಿಗೆ ಮರ ಬಿದ್ದಿದೆ. ಸಮೀಪವಿರುವ ಜನಾರ್ಧನ ಎಂಬವರ ಮನೆಯವರು ಮರ ಬೀಳುವ ಶಬ್ದದಿಂದ ಎಚ್ಚರಗೊಂಡರು. ವಿನಯ್ ಅರಂತೋಡಿನ ತಾಜುದ್ದೀನ್ ಅರಂತೋಡು ಅವರಿಗೆ ಫೋನ್ ಮಾಡಿ ತಿಳಿಸಿದರು.
ಅವರು ಘಟನಾ ಸ್ಥಳಕ್ಕೆ ಆಗಮಿಸಿ ಪ್ರಕೃತಿ ವಿಕೋಪ ಸಹಾಯವಾಣಿಗೆ ಕರೆ ಮಾಡಿದರು. ತದನಂತರ ಅರಂತೋಡಿನ ಸೋಮಶೇಖರ ಪೈಕಿ ಅವರು ಕ್ರೇನ್ ತಂದು ಮರವನ್ನು ಬದಿಗೆ ಸರಿಸಲಾಯಿತು.
ಅದರ ಮುಂಚಿತವಾಗಿ ವಾಹನ ಚಾಲಕರು ಹಗ್ಗವನ್ನು ಮರಕ್ಕೆ ಕಟ್ಟಿ ಪಿಕಪ್ ವಾಹನದ ಮೂಲಕ ಮರವನ್ನು ಬದಿಗೆ ಸರಿಸಲು ಪ್ರಯತ್ನಿಸಿದರು. ರಸ್ತೆಯುದ್ದಕ್ಕೂ ಎರಡು ಬದಿಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿತು.
ಮಳೆ ವಿಪರೀತವಾಗಿ ಸುರಿಯುತ್ತಿದ್ದರೂ ಮರವನ್ನು ಬದಿಗೆ ಸರಿಸಲು ಪ್ರಯತ್ನಿಸಲಾಯಿತು. ಕ್ರೇನ್ ಬಂದ ಮೇಲೆ ಮರವನ್ನು ತೆರೆವುಗೊಳಿಸಿ ಸುಗಮ ಸಂಚಾರ ಮಾಡಲಾಯಿತು.
ಈ ಸಂದರ್ಭದಲ್ಲಿ ಲಾರಿಯೊಂದು ಅವಸರದಿಂದ ಬಂದು ರಸ್ತೆಯ ಬದಿಗೆ ಸರಿದು ನಿಂತಿದೆ. ಲಾರಿಯ ಚಕ್ರ ಮಣ್ಣಿನಲ್ಲಿ ಹೂತು ಹೋಗಿದ್ದು ಮುಂದೆ ಬರದೆ ಬಾಕಿಯಾದ ಘಟನೆಯೂ ನಡೆಯಿತು. ವಿನಯ್ ಎಲ್ಪಕಜೆ, ಸೋಮಶೇಖರ ಪೈಕ, ಶಿವಪ್ರಸಾದ್ ಎಲ್ಪಕಜೆ, ದೀಪಕ್ ಪೈಕ, ತಾಜುದ್ದೀನ್ ಅರಂತೋಡು ಹಾಗೂ ವಾಹನ ಚಾಲಕರು ಸಹಕರಿಸಿದರು.
ಟಾಪ್ ನ್ಯೂಸ್
![Vijayapura ತೆಪ್ಪ ದುರಂತ ಪ್ರಕರಣ: ರಕ್ಷಕರ ಮೊಬೈಲ್ ಸಮೇತ ಪರಾರಿಯಾದರೆ ಪೊಲೀಸರು ?](https://www.udayavani.com/wp-content/uploads/2024/07/vijayapura-3-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Vijayapura ತೆಪ್ಪ ದುರಂತ ಪ್ರಕರಣ: ರಕ್ಷಕರ ಮೊಬೈಲ್ ಸಮೇತ ಪರಾರಿಯಾದರೆ ಪೊಲೀಸರು ?](https://www.udayavani.com/wp-content/uploads/2024/07/vijayapura-3-150x90.jpg)
Vijayapura ತೆಪ್ಪ ದುರಂತ ಪ್ರಕರಣ: ರಕ್ಷಕರ ಮೊಬೈಲ್ ಸಮೇತ ಪರಾರಿಯಾದರೆ ಪೊಲೀಸರು ?
![Jharkhand: ಚಂಪೈ ಸೊರೇನ್ ರಾಜೀನಾಮೆ…ಹೇಮಂತ್ ಸೊರೇನ್ ಮತ್ತೆ ಜಾರ್ಖಂಡ್ ಸಿಎಂ?](https://www.udayavani.com/wp-content/uploads/2024/07/Hemanth-150x86.jpg)
Jharkhand: ಚಂಪೈ ಸೊರೇನ್ ರಾಜೀನಾಮೆ…ಹೇಮಂತ್ ಸೊರೇನ್ ಮತ್ತೆ ಜಾರ್ಖಂಡ್ ಸಿಎಂ?
![ಕಂಗನಾಗೆ ಕಪಾಳಮೋಕ್ಷ ಮಾಡಿದ್ದ CISF ಮಹಿಳಾ ಕಾನ್ಸ್ ಸ್ಟೇಬಲ್ ಬೆಂಗಳೂರಿಗೆ ವರ್ಗಾವಣೆ?](https://www.udayavani.com/wp-content/uploads/2024/07/16-1-150x90.jpg)
ಕಂಗನಾಗೆ ಕಪಾಳಮೋಕ್ಷ ಮಾಡಿದ್ದ CISF ಮಹಿಳಾ ಕಾನ್ಸ್ ಸ್ಟೇಬಲ್ ಬೆಂಗಳೂರಿಗೆ ವರ್ಗಾವಣೆ?
![5-tavaragera](https://www.udayavani.com/wp-content/uploads/2024/07/5-tavaragera-150x90.jpg)
Tavaragera: ಕಾರು ಅಡ್ಡಗಟ್ಟಿ ಹಾಡಹಗಲೇ 5 ಲಕ್ಷ ರೂ. ದರೋಡೆ !
![4-panaji](https://www.udayavani.com/wp-content/uploads/2024/07/4-panaji-150x90.jpg)
ಯುವಪೀಳಿಗೆ ಪತ್ರಿಕೆ ಓದುವ ಆಸಕ್ತಿ ಬೆಳೆಸುವ ರೀತಿ ಬರವಣಿಗೆ ಪತ್ರಕರ್ತರಲ್ಲಿರಬೇಕು : ಸಾವಂತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.