Andhra Pradesh: ಡಿಸಿಎಂ ಪವನ್ ಕಲ್ಯಾಣ್ ವಾರಾಹಿ ದೀಕ್ಷೆ ಪಡೆದಿದ್ದೇಕೆ?
ಇಂದಿನಿಂದ 11 ದಿನಗಳ ಕಾಲ ಹಣ್ಣು, ದ್ರವ ಆಹಾರ ಮಾತ್ರ ಸೇವನೆ
Team Udayavani, Jun 26, 2024, 4:10 PM IST
ಅಮರಾವತಿ (ಆಂಧ್ರ ಪ್ರದೇಶ): ರಾಜ್ಯದಲ್ಲಿಈಗ ವಾರಾಹಿ ಮಾತೆಯ ಮಾತು ಕೇಳಿ ಬರುತ್ತಿದೆ. ಅದಕ್ಕೆ ಕಾರಣ ನೂತನ ಉಪ ಮುಖ್ಯಮಂತ್ರಿ, ನಟ ಪವನ್ ಕಲ್ಯಾಣ್ (Pawan Kalyan) ಕೈಗೊಳ್ಳುತ್ತಿರುವ ವಾರಾಹಿ ವಿಜಯ ದೀಕ್ಷೆ ಆಗಿದೆ. ಬುಧವಾರದಿಂದ (ಜೂ.26) 11 ದಿನಗಳ ಕಾಲ ಪವನ್ ವಾರಾಹಿ ಮಾತಾ ದೀಕ್ಷೆಯಲ್ಲಿ ಇರಲಿದ್ದಾರೆ ಎಂದು ಜನಸೇನಾ ಪಕ್ಷ ತಿಳಿಸಿದೆ.
ಈ ದೀಕ್ಷೆಯ ಭಾಗವಾಗಿ, ಪವನ್ ಕಲ್ಯಾಣ್ 11 ದಿನಗಳವರೆಗೆ ಕೇವಲ ಹಾಲು, ಹಣ್ಣುಗಳು ಮತ್ತು ಇತರ ದ್ರವ ಆಹಾರಗಳ ಮಾತ್ರವೇ ಸೇವಿಸುತ್ತಾರೆ. ಗಮನಾರ್ಹವೆಂದರೆ ಕಳೆದ ವರ್ಷ ಜೂನ್ ನಲ್ಲಿ ಪವನ್ ವಾರಾಹಿ ವಿಜಯ ಯಾತ್ರೆ ಕೈಗೊಂಡು ಅಮ್ಮನವರಿಗೆ ಪೂಜೆ ಸಲ್ಲಿಸಿದ್ದು ಸುದ್ದಿಯಾಗಿತ್ತು. ಈ ಬಾರಿ ಪವನ್ ಡಿಸಿಎಂ ಆಗಿ ದೀಕ್ಷೆ ಪಡೆಯುತ್ತಿರುವುದು ವಿಶೇಷವಾಗಿದೆ.
ನಟ ಪವನ್ ಈ ಹಿಂದೆಯೂ ಹಲವು ದೀಕ್ಷೆಗಳನ್ನು ತೆಗೆದುಕೊಂಡಿದ್ದಾರೆ. ಚಾತುರ್ಮಾಸ ಆಚರಣೆ ಕೈಗೊಂಡಿದ್ದರು. ಪವನ್ ಕಲ್ಯಾಣ್ ನಾಲ್ಕು ತಿಂಗಳ ಕಾಲ ಈ ದೀಕ್ಷೆ ಮುಂದುವರಿಸಿದ್ದರು. ಆ ದೀಕ್ಷೆ ವೇಳೆಯೂ ಸಾತ್ವಿಕ ಆಹಾರದ ನಿಯಮಗಳ ಕಟ್ಟುನಿಟ್ಟಾಗಿ ಪಾಲಿಸಿದ್ದರು.
ವಾರಾಹಿ ಮಾತೆಯ ದೀಕ್ಷೆ ಪಡೆದವರು ಮದ್ಯ, ಮಾಂಸಾಹಾರ ತ್ಯಜಿಸಿ ಬ್ರಹ್ಮಚರ್ಯ ಪಾಲಿಸಬೇಕಿದೆ. ಆಂಧ್ರದ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಈಗ ಇಂತಹ ಕಠಿಣ ದೀಕ್ಷೆ ಮಾಡುತ್ತಿದ್ದಾರೆ.
వారాహి అమ్మవారి ఆరాధనతో దీక్షకు శ్రీకారం pic.twitter.com/tA2ycTlDRl
— JanaSena Party (@JanaSenaParty) June 25, 2024
ಈಗ ದೀಕ್ಷೆ ಉದ್ದೇಶವೇನು?
ಡಿಸಿಎಂ ಪವನ್ ಕಲ್ಯಾಣ್ ಈ ಬಾರಿ ದೀಕ್ಷೆಯ ಪಡೆದಿರುವುದು ವಾರಾಹಿ ಮಾತೆ ಆಶೀರ್ವಾದ ಹಾಗೂ ಆಂಧ್ರದ ಜನರ ಕಲ್ಯಾಣ, ಸಮೃದ್ಧಿ, ಅಭಿವೃದ್ಧಿಗಾಗಿ ಈ ದೀಕ್ಷೆ ಕೈಗೊಂಡಿದ್ದಾರೆ.
ವಾರಾಹಿ ಮಾತೆ ವಿಶೇಷತೆ ಏನು?
ವಾರಾಹಿ ಮಾತೆ ಸಪ್ತಮಾತೃಕೆಯರಲ್ಲಿ ಒಬ್ಬರು. ಈಕೆ ಲಲಿತಾ ಪರಮೇಶ್ವರಿ, ಸರ್ವ ಸೈನ್ಯಾಧಕ್ಷೆ. ಮಹಾಲಕ್ಷ್ಮಿ ಪ್ರತಿರೂಪ, ದೇವಿಯು ದುಷ್ಟ ಶಿಕ್ಷಣ ಮತ್ತು ಶಿಷ್ಟ ರಕ್ಷಣೆಗಾಗಿ ಮತ್ತು ಸದ್ಗುಣ ರಕ್ಷಣೆಗಾಗಿ ಸದಾ ಶಸ್ತ್ರಸಜ್ಜಿತಳಾಗಿರುತ್ತಾಳೆ. ದೇವಿಯು ಉಗ್ರವಾಗಿ ಕಂಡರೂ, ತುಂಬಾ ಕರುಣಾಮಯಿ. ವಾರಾಹಿ ಮಾತಾ ಭೂದೇವಿಯು ನೇಗಿಲು ಧರಿಸಿರುವ ಧಾನ್ಯ ದೇವತೆಯೂ ಹೌದು. ಉತ್ತಮ ಫಸಲು ಮತ್ತು ಉತ್ತಮ ಕೃಷಿಗಾಗಿ ಎಲ್ಲ ರೈತರು ವಾರಾಹಿ ಮಾತೆಯ ಪೂಜಿಸುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Constitution ನಲ್ಲಿ ಎಷ್ಟು ಪುಟಗಳಿವೆ?: ವಿಪಕ್ಷಗಳಿಗೆ ಅನುರಾಗ್ ಠಾಕೂರ್ ಪ್ರಶ್ನೆ ವೈರಲ್
Hathras stampede;‘ಸತ್ಸಂಗ’ದ ವೇಳೆ ಕಾಲ್ತುಳಿತ : ಮೃತರ ಸಂಖ್ಯೆ 116ಕ್ಕೆ
Mumbai; 31 ವರ್ಷ ಬಳಿಕ ಸೆರೆಸಿಕ್ಕ 1993 ಮುಂಬೈ ಗಲಭೆ ಆರೋಪಿ
Annamalai; ತಮಿಳುನಾಡು ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಅಣ್ಣಾಮಲೈ ರಾಜೀನಾಮೆ?
Lok Sabha; ರಾಹುಲ್ ರೀತಿ ವರ್ತಿಸಬೇಡಿ, ಸತ್ಯ ಸಂಗತಿ ಮೂಲಕ ಉತ್ತರಿಸಿ: ಮೋದಿ
MUST WATCH
ಹೊಸ ಸೇರ್ಪಡೆ
Constitution ನಲ್ಲಿ ಎಷ್ಟು ಪುಟಗಳಿವೆ?: ವಿಪಕ್ಷಗಳಿಗೆ ಅನುರಾಗ್ ಠಾಕೂರ್ ಪ್ರಶ್ನೆ ವೈರಲ್
Hathras stampede; ಸ್ವಯಂ ಘೋಷಿತ ದೇವಮಾನವ ‘ಭೋಲೆ ಬಾಬಾ’ ಯಾರು?
Hathras stampede;‘ಸತ್ಸಂಗ’ದ ವೇಳೆ ಕಾಲ್ತುಳಿತ : ಮೃತರ ಸಂಖ್ಯೆ 116ಕ್ಕೆ
Barbados; ಮತ್ತೊಂದು ಚಂಡಮಾರುತದ ಸೂಚನೆ; ಭಾರತ ತಂಡ ಇಂದು ರಾತ್ರಿ ಆಗಮನ?
Dakshina Kannada: ಅಕ್ರಮ ಆಸ್ತಿ ಗಳಿಕೆ ಪ್ರಕರಣ; ನಿವೃತ್ತ ಕಮಾಂಡೆಂಟ್ ದೋಷಮುಕ್ತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.