Mangaluru ಪೊಲೀಸರಿಗೆ ಸವಾಲಾದ ದರೋಡೆ ಪ್ರಕರಣ
Team Udayavani, Jun 26, 2024, 11:10 PM IST
ಮಂಗಳೂರು: ಕಳೆದ ಶುಕ್ರವಾರ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಉಳಾಯಿಬೆಟ್ಟು ಪೆರ್ಮಂಕಿಯಲ್ಲಿ ಉದ್ಯಮಿ ಪದ್ಮನಾಭ ಕೋಟ್ಯಾನ್ ಅವರ ಮನೆಯಲ್ಲಿ ನಡೆದ ದರೋಡೆ ಪ್ರಕರಣ ಭೇದಿಸುವುದು ಮಂಗಳೂರು ಪೊಲೀಸರಿಗೆ ಸವಾಲಾಗುತ್ತಿದೆ.
ನಗರ ಅಪರಾಧ ಪತ್ತೆದಳದ ನೇತೃತ್ವದಲ್ಲಿ ಪೊಲೀಸ್ ತಂಡಗಳು ತನಿಖೆ ತೀವ್ರಗೊಳಿಸಿವೆ. ಆದರೆ ದರೋಡೆಕೋರರ ಜಾಡು ಹಿಡಿಯುವುದು ಸಾಧ್ಯವಾಗಿಲ್ಲ. ದರೋಡೆಗೆ ಬಳಸಿರುವ ಕಾರಿನ ಪತ್ತೆಗೆ ಕಾರ್ಯಾಚರಣೆ ಕೇಂದ್ರೀಕರಿಸಲಾಗಿದ್ದು ನಗರ ಹಾಗೂ ಹೊರವಲಯದ ಎಲ್ಲ ಆಯಕಟ್ಟಿನ ಸಿಸಿ ಕೆಮರಾಗಳ ದೃಶ್ಯ ಪರಿಶೀಲನೆ ನಡೆಸಲಾಗುತ್ತಿದೆ.
ದರೋಡೆಕೋರರು ಸಾಕಷ್ಟು ಯೋಜನಾಬದ್ದವಾಗಿಯೇ ಕೃತ್ಯ ಎಸಗಿದ್ದಾರೆ. ಬಾಡಿಗೆ ಕಾರು ಬಳಸಿರುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ ಎಂದು ಮೂಲಗಳು ತಿಳಿಸಿವೆ.
ಶೀಘ್ರ ಸೆರೆ ವಿಶ್ವಾಸ
ಇದುವರೆಗೆ ಲಭ್ಯವಾಗಿರುವ ಸುಳಿವಿನ ಬೆನ್ನು ಹತ್ತಿರುವ ಪೊಲೀಸರು ಪ್ರಕರಣವನ್ನು ಶೀಘ್ರ ಭೇದಿಸುವ ಪೂರ್ಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಾಲ್ಕು ದಿನಗಳಲ್ಲಿ ಸ್ಪಷ್ಟ ಚಿತ್ರಣ ಸಿಗುವ ವಿಶ್ವಾಸ ಪೊಲೀಸರಲ್ಲಿದೆ.
ಒತ್ತಡ
ದರೋಡೆ ನಡೆದು ವಾರ ಸಮೀಪಿಸುತ್ತಿದ್ದರೂ ಪ್ರಕರಣ ಭೇದಿಸದಿರುವುದರಿಂದ ಪೊಲೀಸರ ಮೇಲೆ ವಿವಿಧ ಕೋನಗಳಲ್ಲಿ ಒತ್ತಡಗಳು ಕೂಡ ಬರುತ್ತಿವೆ ಎಂದು ತಿಳಿದುಬಂದಿದೆ.
9 ಲ.ರೂ ಮೌಲ್ಯದ ಸೊತ್ತು
ದರೋಡೆಕೋರರು ಪದ್ಮನಾಭ ಕೋಟ್ಯಾನ್ ಅವರಿಗೆ ಚೂರಿಯಿಂದ ಇರಿದು ಅವರನ್ನು, ಪತ್ನಿ ಪುತ್ರನನ್ನು ಕಟ್ಟಿ ಹಾಕಿ 1.50 ಲ.ರೂ ನಗದು, ಚಿನ್ನಾಭರಣ ಸಹಿತ ಸುಮಾರು 9 ಲ.ರೂ. ಮೌಲ್ಯದ ಸೊತ್ತುಗಳನ್ನು ದರೋಡೆ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಸೈಬರ್ ಕ್ರೈಂ ಅಧಿಕಾರಿ ಹೆಸರಿನಲ್ಲಿ ಬೆದರಿಸಿ 35 ಲ.ರೂ. ವಂಚನೆ
Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ
Leopard: ಮೂಲ್ಕಿ ಕೊಯ್ಯಾರಿನಲ್ಲಿ ಚಿರತೆ?
Ullal;ಜನಪ್ರತಿನಿಧಿಗಳು ಸೇರಿ ಹಲವರಿಂದ ಅರ್ಜುನ್ ಅಂತಿಮ ದರ್ಶನ
Mangaluru: ರಾಷ್ಟ್ರೀಯ ಹೆದ್ದಾರಿಯಲ್ಲೇ ಹೊತ್ತಿ ಉರಿದ BMW ಕಾರು… ಪ್ರಯಾಣಿಕರು ಪಾರು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ
Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ
leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ
Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ
KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.