Bantwal: ಮೇಲ್ಪತ್ತರ ಶಾಲಾ ಬಾವಿ ಕುಸಿತ


Team Udayavani, Jun 26, 2024, 11:44 PM IST

Bantwal: ಮೇಲ್ಪತ್ತರ ಶಾಲಾ ಬಾವಿ ಕುಸಿತ

ಪುಂಜಾಲಕಟ್ಟೆ: ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಗೆ ಸುಮಾರು 60 ವರ್ಷ ಹಳೆಯ ಬಾವಿಯೊಂದು ಸಂಪೂರ್ಣ ಕುಸಿದ ಘಟನೆ ಬುಧವಾರ ಸಂಭವಿಸಿದೆ.

ಬಂಟ್ವಾಳ ತಾಲೂಕಿನ ಇರ್ವತ್ತೂರು ಗ್ರಾಮದ ಮೇಲ್ಪತ್ತರ ಸ.ಕಿ.ಪ್ರಾ.ಶಾಲೆಯ ಮೈದಾನದಲ್ಲಿದ್ದ ಈ ಬಾವಿ ಮಧ್ಯಾಹ್ನ ಸುಮಾರು 11 ಗಂಟೆಯ ಹೊತ್ತಿಗೆ ದಿಢೀರನೆ ಕುಸಿದಿದೆ.

ಬಾವಿ ಸುಮಾರು 75 ಅಡಿ ಆಳವಿದ್ದು, ಹಿಂದೆ ಊರವರೆಲ್ಲರೂ ಈ ಬಾವಿಯನ್ನು ಆಶ್ರಯಿಸಿದ್ದರು. ಬಾವಿ ಕುಸಿದಿರುವುದರಿಂದ ಶಾಲೆಯ ಅಗತ್ಯಕ್ಕೆ ನೀರಿನ ಆತಂಕ ಎದುರಾಗಿದೆ ಎಂದು ಮುಖ್ಯ ಶಿಕ್ಷಕ ಸೀತಾರಾಮ ಬಿ.ಕೆ. ತಿಳಿಸಿದ್ದಾರೆ.

ಕೆಲವು ದಿನಗಳ ಹಿಂದೆ ಈ ಪ್ರದೇಶದಲ್ಲಿ ಬಿರುಗಾಳಿ ಸಹಿತ ಸಿಡಿಲು ಬಂದಿದ್ದು, ಹತ್ತಿರದ ತೋಟಕ್ಕೆ ಸಿಡಿಲು ಬಡಿದಿತ್ತು. ಇದರಿಂದ ಬಾವಿಯ ಅಡಿ ಭಾಗದ ಕಲ್ಲು ಸಡಿಲಗೊಂಡಿದ್ದು, ಕಲ್ಲುಗಳು ಕದಲಿದಂತೆ ಕಾಣುತ್ತಿತ್ತು. ಘಟನೆ ಬಗ್ಗೆ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಕಂದಾಯ ಇಲಾಖೆಗೆ ಮಾಹಿತಿ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ನರಿಕೊಂಬು: ಮನೆಗೆ ನುಗ್ಗಿದ ನೀರು
ಬಂಟ್ವಾಳ: ನರಿಕೊಂಬು ಗ್ರಾಮದ ಮೊಗರ್ನಾಡು ರಥಬೀದಿ ಪರಿಸರದಲ್ಲಿ ಬುಧವಾರ ರಾತ್ರಿ ಸುರಿದ ಮಳೆಯ ಪರಿಣಾಮ ಗುಡ್ಡದ ನೀರು ಮನೆ ಹಾಗೂ ಇತರ ಅಂಗಡಿ ಮುಂಗಟ್ಟುಗಳಿಗೆ ನುಗ್ಗಿದೆ.

ರಥಬೀದಿಯಲ್ಲಿ ಬಾಡಿಗೆ ಮನೆ ಯೊಂದರಲ್ಲಿ ವಾಸವಾಗಿದ್ದ ಶ್ರೀಕಾಂತ್‌ ಅವರ ಮನೆಗೆ ನೀರು ನುಗ್ಗಿದ್ದು, ಮನೆಯಲ್ಲಿ ಶ್ರೀಕಾಂತ್‌ ದಂಪತಿ, ಇಬ್ಬರು ಮಕ್ಕಳು ಹಾಗೂ ತಂದೆ- ತಾಯಿ ಸಹಿತ ಹಲವರಿದ್ದರು. ಅವರೆಲ್ಲರೂ ಸಂಬಂಧಿಕರ ಮನೆಗೆ ಸ್ಥಳಾಂತರಗೊಂಡಿದ್ದಾರೆ. ಅಲ್ಲೇ ಪಕ್ಕದ ಆಹಾರ ಉತ್ಪನ್ನ ಗೋದಾಮು ಹಾಗೂ ಹಲವು ಅಂಗಡಿಗಳಿಗೂ ನೀರು ನುಗ್ಗಿದೆ. ದಿವಾಕರ ಭಂಡಾರಿ ಅವರ ಮನೆಯ ಆವರಣಕ್ಕೂ ನೀರು ನುಗ್ಗಿದೆ.

ಮಣಿನಾಲ್ಕೂರು ಗ್ರಾಮದ ಅಜಿಲಮೊಗರು ಕುಟ್ಟಿಕಳ ಸರಕಾರಿ ಶಾಲೆಯ ಹಿಂಬದಿಯ ಬರೆ ಹಾಗೂ ಆವರಣ ಗೋಡೆ ಕುಸಿದು ಹಾನಿಯಾಗಿದ್ದು, ಶಾಲಾ ಕಟ್ಟಡಕ್ಕೆ ಆತಂಕ ಎದುರಾಗಿದೆ.

ನೇತ್ರಾವತಿ: ಹೆಚ್ಚಿದ ನೀರಿನ ಹರಿವು
ಉಪ್ಪಿನಂಗಡಿ: ಬುಧವಾರದ ಭಾರೀ ಮಳೆಗೆ ಉಪ್ಪಿನಂಗಡಿಯಲ್ಲಿ ನೇತ್ರಾವತಿ ನದಿಯು ಮೈ ತುಂಬಿ ಹರಿಯುತ್ತಿದೆ.

ಪಶ್ಚಿಮಘಟ್ಟ ಪ್ರದೇಶದಲ್ಲೂ ತೀವ್ರ ಭಾರೀ ಮಳೆ ಆಗುತ್ತಿರುವುದರಿಂದ ನದಿಯ ನೀರಿನ ಮಟ್ಟದಲ್ಲಿ ಭಾರೀ ಹೆಚ್ಚಳ ಕಂಡು ಬಂದಿದೆ. ಸಮುದ್ರ ಮಟ್ಟಕ್ಕಿಂತ 26.1 ಮೀಟರ್‌ ಎತ್ತರದಲ್ಲಿ ನದಿಯ ನೀರಿನ ಹರಿವು ದಾಖಲಾಗಿದ್ದು, ಒಂದೇ ದಿನದಲ್ಲಿ 2 ಮೀಟರ್‌ನಷ್ಟು ನೀರು ಹೆಚ್ಚಳ ಕಂಡಿದೆ.

ಟಾಪ್ ನ್ಯೂಸ್

1-csaddasd

Hosanagara: ಅಪಘಾತವಾಗಿ ಪಲ್ಟಿಯಾದ 50ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಸರಕಾರಿ ಬಸ್

Rabakavi

Irrigation: ರೈತರ ವಿಚಾರದಲ್ಲಿ ರಾಜಕಾರಣ ಮಾಡದಿರಿ: ಸಚಿವ ತಿಮ್ಮಾಪುರ

Congress ಸಿಎಂ, ಡಿಸಿಎಂ ಆಯ್ಕೆ ಹೈಕಮಾಂಡ್‌ಗೆ ಬಿಟ್ಟ ವಿಚಾರ: ಸಚಿವ ತಿಮ್ಮಾಪುರ

Congress Govt ಸಿಎಂ, ಡಿಸಿಎಂ ಆಯ್ಕೆ ಹೈಕಮಾಂಡ್‌ಗೆ ಬಿಟ್ಟ ವಿಚಾರ: ಸಚಿವ ತಿಮ್ಮಾಪುರ

police crime

New criminal law ಅಡಿಯಲ್ಲಿ ಕನ್ನಡಿಗನ ವಿರುದ್ಧ ಮೊದಲ ಕೇಸ್ ದಾಖಲಿಸಿದ ಕೇರಳ ಪೊಲೀಸ್

1-INDI-M

Stop ‘misusing’; ಸಂಸತ್ ಆವರಣದಲ್ಲಿ ವಿಪಕ್ಷ ಸಂಸದರಿಂದ ಪ್ರತಿಭಟನೆ

1-patla

Yakshagana;ಯಕ್ಷಧ್ರುವ ಪಟ್ಲ ಫೌಂಡೇಷನ್ ಟ್ರಸ್ಟ್ ಕಲಾವಿದರಿಂದ ಅಮೆರಿಕದಲ್ಲಿ ಅಭಿಯಾನ

Defamation Case: 24 ವರ್ಷದ ಹಿಂದಿನ ಪ್ರಕರಣ- ಮೇಧಾ ಪಾಟ್ಕರ್‌ ಗೆ 5 ತಿಂಗಳ ಜೈಲುಶಿಕ್ಷೆ

Defamation Case: 24 ವರ್ಷದ ಹಿಂದಿನ ಪ್ರಕರಣ- ಮೇಧಾ ಪಾಟ್ಕರ್‌ ಗೆ 5 ತಿಂಗಳ ಜೈಲುಶಿಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪುತ್ತೂರು: ಅಡಿಕೆ ಪಾಲದ ಮೇಲೆ ಜೀವ ಪಣಕ್ಕಿಟ್ಟು ನಡಿಗೆ!

ಪುತ್ತೂರು: ಅಡಿಕೆ ಪಾಲದ ಮೇಲೆ ಜೀವ ಪಣಕ್ಕಿಟ್ಟು ನಡಿಗೆ!

Leopard ಮೊಸಳೆ ಹಿಡಿಯುವ ದೃಶ್ಯ ಎಂಬ ಸುಳ್ಳು ಸುದ್ದಿ ವೈರಲ್‌

Leopard ಮೊಸಳೆ ಹಿಡಿಯುವ ದೃಶ್ಯ ಎಂಬ ಸುಳ್ಳು ಸುದ್ದಿ ವೈರಲ್‌

Punjalkatte ಸೋರುತಿಹುದು ಪಾಂಡವರಕಲ್ಲು ಅಂಗನವಾಡಿ ಕೇಂದ್ರ

Punjalkatte ಸೋರುತಿಹುದು ಪಾಂಡವರಕಲ್ಲು ಅಂಗನವಾಡಿ ಕೇಂದ್ರ

Bantwal ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು

Bantwal ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು

Kadaba ಕೆಮ್ಮಾರ: ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ

Kadaba ಕೆಮ್ಮಾರ: ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ

MUST WATCH

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

ಹೊಸ ಸೇರ್ಪಡೆ

1-csaddasd

Hosanagara: ಅಪಘಾತವಾಗಿ ಪಲ್ಟಿಯಾದ 50ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಸರಕಾರಿ ಬಸ್

1-sagara

Sagara; ಮರ ಕತ್ತರಿಸುತ್ತಿದ್ದಾಗ ಕೊಂಬೆ ಬಿದ್ದು ವ್ಯಕ್ತಿ ಸಾವು

Rabakavi

Irrigation: ರೈತರ ವಿಚಾರದಲ್ಲಿ ರಾಜಕಾರಣ ಮಾಡದಿರಿ: ಸಚಿವ ತಿಮ್ಮಾಪುರ

Congress ಸಿಎಂ, ಡಿಸಿಎಂ ಆಯ್ಕೆ ಹೈಕಮಾಂಡ್‌ಗೆ ಬಿಟ್ಟ ವಿಚಾರ: ಸಚಿವ ತಿಮ್ಮಾಪುರ

Congress Govt ಸಿಎಂ, ಡಿಸಿಎಂ ಆಯ್ಕೆ ಹೈಕಮಾಂಡ್‌ಗೆ ಬಿಟ್ಟ ವಿಚಾರ: ಸಚಿವ ತಿಮ್ಮಾಪುರ

police crime

New criminal law ಅಡಿಯಲ್ಲಿ ಕನ್ನಡಿಗನ ವಿರುದ್ಧ ಮೊದಲ ಕೇಸ್ ದಾಖಲಿಸಿದ ಕೇರಳ ಪೊಲೀಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.