Udupi: ಧಾರಾಕಾರ ಮಳೆ; ಹಲವೆಡೆ ಹಾನಿ: ಶಾಲಾ, ಕಾಲೇಜಿಗೆ ರಜೆ ಇಲ್ಲ
Team Udayavani, Jun 26, 2024, 11:56 PM IST
ಉಡುಪಿ: ಜಿಲ್ಲೆಯಲ್ಲಿ ಬುಧವಾರ ಧಾರಾಕಾರ ಮಳೆಯಾಗಿದ್ದು, ಕುಂದಾಪುರ, ಕಾರ್ಕಳ, ಬ್ರಹ್ಮಾವರ ಭಾಗದಲ್ಲಿ ಅತ್ಯಧಿಕ ಮಳೆಯಾಗಿದೆ. ಹಲವೆಡೆ ಹಾನಿ, ಕೃತಕ ನೆರೆಯಿಂದಾಗಿ ಜನರು ತೊಂದರೆಗೊಳಪಟ್ಟರು.
ಉಡುಪಿ, ಬ್ರಹ್ಮಾವರ ತಾಲೂಕಿನಲ್ಲಿ 11ಕ್ಕೂ ಅಧಿಕ ಮನೆಗಳಿಗೆ ಹಾನಿ ಸಂಭವಿಸಿದ್ದು, ಮಂಗಳವಾರ ತಡರಾತ್ರಿ, ಗುರುವಾರ ಇಡೀ ದಿನ ನಿರಂತರ ಮಳೆ ಸುರಿದಿದೆ. ಗಾಳಿ-ಮಳೆಗೆ ಹಲವೆಡೆ ವಿದ್ಯುತ್ ಕಂಬಗಳು ನೆಲಕ್ಕುರುಳಿದ್ದು, ಮಣಿಪಾಲ, ಉಡುಪಿ ಮೊದಲಾದ ಕಡೆ ಗಂಟೆಗಟ್ಟಲೆ ವಿದ್ಯುತ್ ಇರಲಿಲ್ಲ.
ಅವೈಜ್ಞಾನಿಕ ರಸ್ತೆ ಕಾಮಗಾರಿಯಿಂದಾಗಿ ಮಳೆ ನೀರು ಸರಾಗವಾಗಿ ಸಾಗದ ಪರಿಣಾಮ ಕರಾವಳಿ ಬೈಪಾಸ್, ಕುಂಜಿಬೆಟ್ಟು, ಎಂಜಿಎಂ, ಬ್ರಹ್ಮಾವರ, ಸಂತೆಕಟ್ಟೆ, ಮಲ್ಪೆ ಭಾಗದಲ್ಲಿ ವಾಹನ ಸವಾರರು ಪರದಾಡುವಂತಾಗಿದೆ. ಜಿಲ್ಲೆಯ ಕಡೆಕಾರು, ಶಿವಳ್ಳಿ, ಅಲೆವೂರು, ಪಡುತೋನ್ಸೆ, ಮಾಳ, 52 ಹೇರೂರು, ವಂಡಾರು, ಹಾವಂಜೆ, ನಂಚಾರು, ಹೆಗ್ಗುಂಜೆ, ಕಳೂ¤ರು ಭಾಗದಲ್ಲಿ 11 ಮನೆಗಳಿಗೆ ಹಾನಿಯಾಗಿದೆ. ಹಿಲಿಯಾಣದಲ್ಲಿ ವನಜಾ ಅವರ ಜಾನುವಾರು ಕೊಟ್ಟಿಗೆಗೆ ಹಾನಿಯಾಗಿದೆ.
ವಿದ್ಯುತ್ ವ್ಯತ್ಯಯ
ಎರಡು ದಿನಗಳಿಂದ ಉಡುಪಿ, ಮಣಿಪಾಲ ಭಾಗದಲ್ಲಿ ಗಂಟೆಗಟ್ಟಲೆ ವಿದ್ಯುತ್ ಕೈಕೊಟ್ಟಿದ್ದು, ಜನರು ಸಾಕಷ್ಟು ತೊಂದರೆ ಅನುಭವಿಸುವಂತಾಯಿತು. ಮಣಿಪಾಲದಲ್ಲಿ ಬುಧವಾರ ಬೆಳಗ್ಗೆ 9.30ರಿಂದ ಬೆಳಗ್ಗೆ 11 ಗಂಟೆ ವರೆಗೆ ವಿದ್ಯುತ್ ಪೂರೈಕೆ ಇರಲಿಲ್ಲ.
ಮಂಗಳವಾರ ಬೆಳಗ್ಗೆ 10ರಿಂದ ಸಂಜೆ 5ರ ವರೆಗೂ ದಿನಪೂರ್ತಿ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿತ್ತು. ಜಿಲ್ಲೆಯ ಇತರ ಭಾಗಗಳಲ್ಲೂ ವಿದ್ಯುತ್ ಸಮಸ್ಯೆ ಬಗ್ಗೆ ಸಾರ್ವಜನಿಕರಿಂದ ದೂರು ಬಂದಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಮೆಸ್ಕಾಂ ಅಧೀಕ್ಷಕ ಎಂಜಿನಿಯರ್ ದಿನೇಶ್ ಉಪಾಧ್ಯ ಅವರು, ಮೂರ್ನಾಲ್ಕು ದಿನಗಳಿಂದ ಗಾಳಿ ಮಳೆಗೆ ಹಲವೆಡೆ ಹೆಚ್ಚಿನ ಹಾನಿ ಸಂಭವಿಸಿದ್ದು, 102 ವಿದ್ಯುತ್ ಕಂಬಗಳು ಹಾನಿಗೊಳಗಾಗಿದೆ. 8 ವಿದ್ಯುತ್ ಪರಿವರ್ತಕ, 1.6 ಕಿ. ಮೀ. ವಿದ್ಯುತ್ ಲೈನ್ಗೆ ಹಾನಿಯಾಗಿದ್ದು, 17.8 ಲಕ್ಷ ರೂ. ನಷ್ಟ ಸಂಭವಿಸಿದೆ. ರಿಪೇರಿ ಕಾರ್ಯ ತುರ್ತಾಗಿ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಉಡುಪಿ: ಶಾಲಾ, ಕಾಲೇಜಿಗೆ ರಜೆ ಇಲ್ಲ
ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿಲ್ಲ. ಸದ್ಯದ ಮಟ್ಟಿಗೆ ಪ್ರವಾಹ ಭೀತಿ ಅಥವಾ ಪ್ರಕೃತಿ ವಿಕೋಪದಂತಹ ಪರಿಸ್ಥಿತಿ ಇಲ್ಲ. ಅದಾಗ್ಯೂ ಸ್ಥಳೀಯವಾಗಿ ರಜೆ ಘೋಷಣೆ ಮಾಡಬೇಕಾಗಿ ಬಂದಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳು ಮತ್ತು ತಹಶೀಲ್ದಾರರು ಈ ಸಂಬಂಧ ಕ್ರಮ ವಹಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ| ಕೆ.ವಿದ್ಯಾಕುಮಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ
Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ
leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ
Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ
KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.