CM, ಡಿಸಿಎಂ ಇಂದು ದಿಲ್ಲಿಗೆ: ಡಿಸಿಎಂ ಹೇಳಿಕೆ ಕೊನೆಯಾದೀತೇ?

ವರಿಷ್ಠರ ಜತೆಗೆ ಚರ್ಚೆ ಸಾಧ್ಯತೆ; ಬಹಿರಂಗ ಹೇಳಿಕೆಯ ಮೂಲ ಹುಡುಕುವ ಪ್ರಯತ್ನ

Team Udayavani, Jun 27, 2024, 7:00 AM IST

CM, ಡಿಸಿಎಂ ಇಂದು ದಿಲ್ಲಿಗೆ: ಡಿಸಿಎಂ ಹೇಳಿಕೆ ಕೊನೆಯಾದೀತೇ?CM, ಡಿಸಿಎಂ ಇಂದು ದಿಲ್ಲಿಗೆ: ಡಿಸಿಎಂ ಹೇಳಿಕೆ ಕೊನೆಯಾದೀತೇ?

ಬೆಂಗಳೂರು: ಸಮುದಾಯವಾರು ಡಿಸಿಎಂ ಹುದ್ದೆ ಚರ್ಚೆ “ಕೈ’ ಪಾಳಯದಲ್ಲಿ ಸಂಚಲನ ಉಂಟು ಮಾಡಿರುವ ಸಂದರ್ಭದಲ್ಲೇ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್‌ ಗುರುವಾರ (ಜೂ. 27) ದಿಲ್ಲಿಗೆ ತೆರಳಲಿದ್ದಾರೆ.

ಈ ವೇಳೆ ಪಕ್ಷದ, ಸರಕಾರದ ಆಂತರಿಕ ವಿಷಯಗಳ ಪ್ರಸ್ತಾವವಾಗಲಿದೆ ಎನ್ನಲಾಗಿದೆ. ಈ ಭೇಟಿಯ ಅನಂತರವಾದರೂ ಪಕ್ಷದಲ್ಲಿನ ಬಣಗಳ ಬೇಗುದಿ ಕೊನೆಗೊಳ್ಳಲಿದೆಯೇ? ಹೈಕಮಾಂಡ್‌ನಿಂದ ಈ ಬಗ್ಗೆ ಖಡಕ್‌ ಸಂದೇಶ ರವಾನೆಯಾಗಲಿದೆಯೇ ಎಂಬ ತೀವ್ರ ಕುತೂಹಲ ಮೂಡಿದೆ.

ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆ ಡಿಸಿಎಂ ಗದ್ದಲ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಜತೆಗೆ ಕೆಪಿಸಿಸಿಗೆ ಹೊಸ ಸಾರಥಿ ಬೇಕೆಂಬ ಕೂಗು ಎದ್ದಿದೆ. ಈ ಬಗ್ಗೆ ಸ್ವತಃ ಸಿಎಂ ಮತ್ತು ಡಿಸಿಎಂ ಕೂಡ ಬುಧವಾರ ಮೌನಮುರಿದಿದ್ದು, ಹೈಕಮಾಂಡ್‌ನ‌ತ್ತ ಬೊಟ್ಟು ಮಾಡಿದ್ದಾರೆ. ಇದರ ಜತೆಗೆ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅವ್ಯವಹಾರಕ್ಕೆ ಸಚಿವರ ತಲೆದಂಡ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ, ಸಂಪುಟ ಪುನಾರಚನೆ ಆಗಬೇಕೇ ಅಥವಾ ವಿಸ್ತರಣೆ, ಚನ್ನಪಟ್ಟಣ ಸೇರಿ 3 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ, ನಿಗಮ-ಮಂಡಳಿಗಳಲ್ಲಿ ಸಚಿವರ ಹಸ್ತಕ್ಷೇಪ ಸೇರಿದಂತೆ ಹಲವು ವಿಚಾರಗಳು ಈ ಭೇಟಿಯಲ್ಲಿ ಮುನ್ನೆಲೆಗೆ ಬರಲಿವೆ ಎಂದು ಮೂಲಗಳು ತಿಳಿಸಿವೆ.

ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಕುರಿತ ವಿವಾದದ ಅಲೆ ಎದ್ದಿದೆ. ಇದಕ್ಕೆ ಕಾರಣ ಏನು? ಇದರ ಹಿಂದಿರುವ ಉದ್ದೇಶಗಳೇನು? ಈ ವಿಚಾರದಿಂದ ಮತ್ತಷ್ಟು ಢಾಳಾಗಿರುವ ಬಣ ರಾಜಕೀಯ ಹಾಗೂ ಅದರ ಪರಿಣಾಮಗಳ ಕುರಿತು ಸ್ವತಃ ರಾಜ್ಯದವರೂ ಆಗಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ರಾಷ್ಟ್ರೀಯ ನಾಯಕರು ಜಾಲಾಡಲಿದ್ದಾರೆ ಎನ್ನಲಾಗಿದೆ.

ಬೇಕಾಬಿಟ್ಟಿ ಹೇಳಿಕೆಗೆ
ವರಿಷ್ಠರ “ಕ್ಲಾಸ್‌’?
ಡಿಸಿಎಂ ವಿವಾದದ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆಯೂ ಎರಡೂ ಬಣಗಳು ಹೇಳಿಕೆ ನೀಡುತ್ತಿವೆ. ಕೆಲವು ನಾಯಕರು ತಮ್ಮ ಸಮುದಾಯಗಳಿಗೇ ನೀಡಬೇಕು ಎಂಬ ಒತ್ತಡವನ್ನೂ ತರುತ್ತಿದ್ದಾರೆ. ಇದು ಬೇರೆ ಬೇರೆ ರೀತಿ ತಿರುವು ಪಡೆದುಕೊಳ್ಳುತ್ತಿದೆ. ಉಪ ಚುನಾವಣೆ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇದು ಬೀರಬಹುದಾದ ಪರಿಣಾಮಗಳ ಬಗ್ಗೆಯೂವರಿಷ್ಠರು ರಾಜ್ಯ ನಾಯಕರ ಜತೆ ಚರ್ಚೆ ನಡೆಸಲಿ ದ್ದಾರೆ. ಹೈಕಮಾಂಡ್‌ ಸೂಚನೆ ಬಳಿಕವೂ ಕೆಲವು ನಾಯಕರ ಹೇಳಿಕೆಗಳಿಂದ ಪಕ್ಷಕ್ಕೆ ಮುಜುಗರ ಉಂಟುಮಾಡಿದ್ದೂ ಇದೆ. ಅವರಿಗೆ ವರಿಷ್ಠರು ಕ್ಲಾಸ್‌ ತೆಗೆದುಕೊಳ್ಳುವ ಸಾಧ್ಯತೆ ಇದೆ.

ಟಾಪ್ ನ್ಯೂಸ್

yogi

Hathras Stampede:  ಹಾಥರಸ್‌ ಕಾಲ್ತುಳಿತ ನ್ಯಾಯಾಂಗ ತನಿಖೆಗೆ: ಯೋಗಿ

UK Election 2024: ಇಂದು ಬ್ರಿಟನ್‌ನಲ್ಲಿ ಸಂಸತ್‌ ಚುನಾವಣೆ… ನಾಳೆ ಫ‌ಲಿತಾಂಶ

UK Election 2024: ಇಂದು ಬ್ರಿಟನ್‌ನಲ್ಲಿ ಸಂಸತ್‌ ಚುನಾವಣೆ… ನಾಳೆ ಫ‌ಲಿತಾಂಶ

CISF Constable: ಕಂಗನಾ ಮೇಲೆ ಹಲ್ಲೆ ನಡೆಸಿದ್ದ ಸಿಬಂದಿ ಬೆಂಗಳೂರಿಗೆ ವರ್ಗ

CISF Constable: ಕಂಗನಾ ಮೇಲೆ ಹಲ್ಲೆ ನಡೆಸಿದ್ದ ಸಿಬಂದಿ ಬೆಂಗಳೂರಿಗೆ ವರ್ಗ

LK Advani: ಬಿಜೆಪಿ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು

LK Advani: ಬಿಜೆಪಿ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು

5-byndoor

Heavy Rain: ಬೈಂದೂರು ವಲಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ

Vijayapura: ಕೃಷ್ಣಾ ನದಿ ತೆಪ್ಪ ದುರಂತ… ರಫೀಕ್ ಶವ ಪತ್ತೆ, ರಕ್ಷಣಾ ಕಾರ್ಯಾಚರಣೆ ಮುಕ್ತಾಯ

Vijayapura: ಕೃಷ್ಣಾ ನದಿ ತೆಪ್ಪ ದುರಂತ… ರಫೀಕ್ ಶವ ಪತ್ತೆ, ರಕ್ಷಣಾ ಕಾರ್ಯಾಚರಣೆ ಮುಕ್ತಾಯ

T20 World Cup ಗೆದ್ದು ತಾಯ್ನಾಡಿಗೆ ಮರಳಿದ ಟೀಮ್ ಇಂಡಿಯಾ… ಅದ್ಧೂರಿ ಸ್ವಾಗತ

T20 World Cup ಗೆದ್ದು ತಾಯ್ನಾಡಿಗೆ ಮರಳಿದ ಟೀಮ್ ಇಂಡಿಯಾ… ಅದ್ಧೂರಿ ಸ್ವಾಗತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಕೃಷ್ಣಾ ನದಿ ತೆಪ್ಪ ದುರಂತ… ರಫೀಕ್ ಶವ ಪತ್ತೆ, ರಕ್ಷಣಾ ಕಾರ್ಯಾಚರಣೆ ಮುಕ್ತಾಯ

Vijayapura: ಕೃಷ್ಣಾ ನದಿ ತೆಪ್ಪ ದುರಂತ… ರಫೀಕ್ ಶವ ಪತ್ತೆ, ರಕ್ಷಣಾ ಕಾರ್ಯಾಚರಣೆ ಮುಕ್ತಾಯ

Dinesh-gundurao

Private Hospital: ಡೆಂಗ್ಯೂ ಪರೀಕ್ಷೆಗೆ ಏಕರೂಪ ದರ

CM-Siddaramaiah

Valmiki Nigama ಅಕ್ರಮದ ತನಿಖೆ ನಡೆಯುತ್ತಿದೆ: ಸಿಎಂ ಸಿದ್ದರಾಮಯ್ಯ

CM-Meeting

Bumper Gift: ಬಡವರ 1.30 ಲಕ್ಷ ಮನೆಗೆ ರಾಜ್ಯದಿಂದ ತಲಾ 5 ಲಕ್ಷ ರೂಪಾಯಿ

ಇಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ: ಮೋದಿಗೆ ಅಭಿನಂದನೆ

Karnataka ಇಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ: ಮೋದಿಗೆ ಅಭಿನಂದನೆ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

yogi

Hathras Stampede:  ಹಾಥರಸ್‌ ಕಾಲ್ತುಳಿತ ನ್ಯಾಯಾಂಗ ತನಿಖೆಗೆ: ಯೋಗಿ

UK Election 2024: ಇಂದು ಬ್ರಿಟನ್‌ನಲ್ಲಿ ಸಂಸತ್‌ ಚುನಾವಣೆ… ನಾಳೆ ಫ‌ಲಿತಾಂಶ

UK Election 2024: ಇಂದು ಬ್ರಿಟನ್‌ನಲ್ಲಿ ಸಂಸತ್‌ ಚುನಾವಣೆ… ನಾಳೆ ಫ‌ಲಿತಾಂಶ

CISF Constable: ಕಂಗನಾ ಮೇಲೆ ಹಲ್ಲೆ ನಡೆಸಿದ್ದ ಸಿಬಂದಿ ಬೆಂಗಳೂರಿಗೆ ವರ್ಗ

CISF Constable: ಕಂಗನಾ ಮೇಲೆ ಹಲ್ಲೆ ನಡೆಸಿದ್ದ ಸಿಬಂದಿ ಬೆಂಗಳೂರಿಗೆ ವರ್ಗ

LK Advani: ಬಿಜೆಪಿ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು

LK Advani: ಬಿಜೆಪಿ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು

5-byndoor

Heavy Rain: ಬೈಂದೂರು ವಲಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.