MLA ಹರೀಶ್‌ ಗೌಡ ಆಪ್ತರ ಹನಿಟ್ರ್ಯಾಪ್‌ ಯತ್ನ: ಇಬ್ಬರ ಸೆರೆ

ಮೈಸೂರು ಮೂಲದ ಇಬ್ಬರು ಸಿಸಿಬಿ ಬಲೆಗೆ; ತಿರುಚಿದ ಫೋಟೋ, ವೀಡಿಯೋ ಮುಂದಿಟ್ಟು ಅಕ್ರಮ

Team Udayavani, Jun 27, 2024, 12:33 AM IST

hಶಾಸಕ ಹರೀಶ್‌ ಗೌಡ ಆಪ್ತರ ಹನಿಟ್ರ್ಯಾಪ್‌ ಯತ್ನ: ಇಬ್ಬರ ಸೆರೆ

ಬೆಂಗಳೂರು: ಮೈಸೂರು ಜಿಲ್ಲೆಯ ಚಾಮರಾಜ ಕ್ಷೇತ್ರದ ಶಾಸಕ ಕೆ. ಹರೀಶ್‌ ಗೌಡ ಅವರ ಆಪ್ತರನ್ನು ಹನಿಟ್ರ್ಯಾಪ್‌ ಬಲೆಗೆ ಬೀಳಿಸಲು ಯತ್ನಿಸಿದ ಇಬ್ಬರು ಬೆಂಗಳೂರಿನ ಸಿಸಿಬಿ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಮೈಸೂರು ಮೂಲದ ಸಂತೋಷ್‌, ಪುಟ್ಟರಾಜು ಬಂಧಿತರು. ತಲೆಮರೆಸಿಕೊಂಡಿರುವ ಮತ್ತೋರ್ವ ಆರೋಪಿಗೆ ಶೋಧ ನಡೆಸಲಾಗುತ್ತಿದೆ.

ಆರೋಪಿಗಳಿಂದ ಪೆನ್‌ಡ್ರೈವ್‌ ಹಾಗೂ ಮೊಬೈಲ್‌ ಜಪ್ತಿ ಮಾಡಲಾಗಿದೆ.

ಆರೋಪಿಗಳು ಉದ್ಯಮಿಗಳು, ಶ್ರೀಮಂತ ರನ್ನೇ ಗುರಿ ಮಾಡಿ ಬ್ಲ್ಯಾಕ್‌ಮೇಲ್ ಗೆ ಯತ್ನಿಸಿರುವ ಸಂಗತಿ ತನಿಖೆಯಲ್ಲಿ ಹೊರ ಬಿದ್ದಿದೆ.ಆರೋಪಿಗಳ ಗ್ಯಾಂಗ್‌ ಹರೀಶ್‌ ಅವರ ಸ್ನೇಹಿತರ ವಿರುದ್ಧ ಸುಳ್ಳು ಹನಿಟ್ರ್ಯಾಪ್‌ ಮಾದರಿ ವೀಡಿಯೋ ಸೃಷ್ಟಿಸಿ ಬೆದರಿಕೆ ಹಾಕಲು ಮುಂದಾಗಿತ್ತು. ಕೋಟ್ಯಂತರ ರೂ.ಗೆ ಬೇಡಿಕೆಯಿಟ್ಟು ಬ್ಲ್ಯಾಕ್‌ವೆುàಲ್‌ ಮಾಡಿತ್ತು. ಬಳಿಕ ಶಾಸಕ ಹರೀಶ್‌ ಗೌಡ ಸಿಸಿಬಿ ಪೊಲೀಸರಿಗೆ ಈ ಬಗ್ಗೆ ದೂರು ನೀಡಿದ್ದರು.

ವೇಶ್ಯಾವಾಟಿಕೆ ವೇಳೆ ಸೆರೆ ಹಿಡಿದ ವೀಡಿಯೋ ತೋರಿಸಿ ಬ್ಲ್ಯಾಕ್‌ಮೇಲ್ಆರೋಪಿಗಳ ಪೈಕಿ ಒಬ್ಬ ಈ ಹಿಂದೆ ಮೈಸೂರಿನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದು, ಆಗ ಮಹಿಳೆಯರನ್ನು ಬಳಸಿಕೊಂಡು ಗಿರಾಕಿಗಳ ಗುರುತು ಸಿಗದಂತಹ, ಮುಖಚಹರೆ ಮರೆಮಾಡಿದ ವೀಡಿಯೋ ಚಿತ್ರೀಕರಣ ಮಾಡಿಕೊಂಡು ಇಟ್ಟುಕೊಂಡಿದ್ದ. ಅನಂತರ ಇಬ್ಬರು ಸೇರಿ ಈ ವೀಡಿಯೋಗಳನ್ನು ತಿರುಚಿ ಉದ್ಯಮಿಗಳಿಗೆ ಕಳಿಸಿ ಇದು ನಿಮಗೆ ಸೇರಿದ ವೀಡಿಯೋ ತುಣುಕುಗಳು ಎಂದು ಹೇಳಿ ದುಡ್ಡು ಕೊಡುವಂತೆಯೂ ಇಲ್ಲದಿದ್ದರೆ ಜಾಲತಾಣಗಳಲ್ಲಿ ಹಾಕಿ ಮಾನಹರಣ ಮಾಡುವುದಾಗಿ ಬೆದರಿಸುತ್ತಿದ್ದರು.ವಿಶ್ವವಿದ್ಯಾಲಯದ ಕುಲಪತಿಗಳು ಸೇರಿ ಹಲವು ಗಣ್ಯರನ್ನು ಹನಿಟ್ರ್ಯಾಪ್‌ ಜಾಲದಲ್ಲಿ ಸಿಲುಕಿಸಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ.

ನನ್ನ ವಿರುದ್ಧ ನಡೆದಿಲ್ಲ: ಹರೀಶ್‌ ಗೌಡ
ಬುಧವಾರ ವಿಧಾನಸೌಧದಲ್ಲಿ ಮಾತನಾಡಿದ ಶಾಸಕ ಹರೀಶ್‌ಗೌಡ, “ನನ್ನ ವಿರುದ್ಧ ಹನಿಟ್ರ್ಯಾಪ್‌ ನಡೆದಿಲ್ಲ. ನನ್ನ ಪರಿಚಿತರನ್ನು ಹನಿಟ್ರ್ಯಾಪ್‌ ಮಾಡಿ ಬ್ಲ್ಯಾಕ್‌ ಮೇಲ್ ಮಾಡಲಾಗುತ್ತಿತ್ತು. ನನ್ನ ಕ್ಷೇತ್ರದಲ್ಲಿ ಇಂತಹ ಚಟುವಟಿಕೆಗಳು ನಡೆಯುವುದನ್ನು ತಡೆಯುವ ಸಲುವಾಗಿ ಪೊಲೀಸರಿಗೆ ದೂರು ಕೊಡಿಸಿದ್ದೇನೆ’ ಎಂದು ಸ್ಪಷ್ಟನೆ ನೀಡಿದ್ದಾರೆ.

ವಿಐಪಿಗಳ ಹೊಟೇಲ್‌
ರೂಂ ಪಡೆದು ಟ್ರ್ಯಾಪ್‌
ಆರೋಪಿಗಳು ಮೈಸೂರು, ಬೆಂಗಳೂರು ಸೇರಿ ವಿವಿಧೆಡೆ ರಾಜಕಾರಣಿಗಳು, ಉದ್ಯಮಿಗಳು, ವಿ.ವಿ.ಗಳ ಕುಲಪತಿಗಳು ಉಳಿದುಕೊಳ್ಳುತ್ತಿದ್ದ ಪಂಚಾತಾರ ಹೊಟೇಲ್‌ಗ‌ಳ ಮಾಹಿತಿ ಪಡೆದುಕೊಳ್ಳುತ್ತಿದ್ದರು. ಅವರು ಹೋದ ಬಳಿಕ ಅದೇ ಕೊಠಡಿ ಬಾಡಿಗೆ ಪಡೆದು ಅಲ್ಲಿ ಯುವತಿಯನ್ನು ಬಳಸಿಕೊಂಡು ಹಿಡನ್‌ ಕೆಮರಾ ಇಟ್ಟಿರುವ ರೀತಿಯಲ್ಲಿ ವೀಡಿಯೋ ಮಾಡಿಕೊಳ್ಳುತ್ತಿದ್ದರು. ಬಳಿಕ ಆ ರೂಮಿನಲ್ಲಿ ಉಳಿದುಕೊಂಡಿದ್ದ ವಿಐಪಿ ಈ ಯುವತಿ ಜತೆ ಆತ್ಮೀಯತೆಯಿಂದಿರುವಂತೆ ವೀಡಿಯೋ ಸೃಷ್ಟಿಸಿ ಬ್ಲ್ಯಾಕ್‌ವೆುàಲ್‌ ಮಾಡುತ್ತಿದ್ದರು.

ಟಾಪ್ ನ್ಯೂಸ್

Bharamasagara: ಡೆಂಗ್ಯೂ ಜ್ವರಕ್ಕೆ ಯುವಕ ಬಲಿ

Bharamasagara: ಡೆಂಗ್ಯೂ ಜ್ವರಕ್ಕೆ ಯುವಕ ಬಲಿ

Wadi ಬಿಸಿಯೂಟ ಸೇವಿಸಿ 33 ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Wadi ಬಿಸಿಯೂಟ ಸೇವಿಸಿ 33 ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

police crime

Mangalore ಕಾರಾಗೃಹದಲ್ಲಿ ಖೈದಿಗಳ ಮಾರಾಮಾರಿ: ಇಬ್ಬರು ಆಸ್ಪತ್ರೆಗೆ

Kalammawadi Dam ಹಿನ್ನೀರಿನಲ್ಲಿ ಈಜಲು ತೆರಳಿದ್ದ ಯುವಕರಿಬ್ಬರು ನೀರು ಪಾಲು

Kalammawadi Dam ಹಿನ್ನೀರಿನಲ್ಲಿ ಈಜಲು ತೆರಳಿದ್ದ ಯುವಕರಿಬ್ಬರು ನೀರು ಪಾಲು

koratagere

Koratagere: ಎರಡು ವಿದ್ಯುತ್‌ ಉಪಸ್ಥಾವರ ಘಟಕಗಳ ಉದ್ಘಾಟನೆ

Amit Shah

3 new criminal laws; ತಮಿಳು ಸೇರಿ ಪ್ರಾದೇಶಿಕ ಭಾಷೆಗಳಲ್ಲಿ ಲಭ್ಯ: ಶಾ

Shirva: ಅಪರಿಚಿತ ವ್ಯಕ್ತಿ ಆತ್ಮಹತ್ಯೆ

Shirva: ಅಪರಿಚಿತ ವ್ಯಕ್ತಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM Siddu

Leadership change; ಹೈಕಮಾಂಡ್ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ: ಸಿಎಂ ಸಿದ್ದರಾಮಯ್ಯ

rape

Bidar; 9 ನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಶಿಕ್ಷಕನ ಬಂಧನ

1-csaddasd

Hosanagara: ಅಪಘಾತವಾಗಿ ಪಲ್ಟಿಯಾದ 50ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಸರಕಾರಿ ಬಸ್

Sagara: ತಮ್ಮ ವ್ಯಾಪ್ತಿಯಲ್ಲೇ ಕೆಲಸ ಮಾಡಲು ವಿಎಗಳಿಗೆ ಸೂಚನೆ; ಕಾಗೋಡು ಆಗ್ರಹ

Sagara: ತಮ್ಮ ವ್ಯಾಪ್ತಿಯಲ್ಲೇ ಕೆಲಸ ಮಾಡಲು ವಿಎಗಳಿಗೆ ಸೂಚನೆ; ಕಾಗೋಡು ಆಗ್ರಹ

15 ದಿನದಲ್ಲಿ‌ ಸಮಸ್ಯೆಗೆ ಸ್ಪಂದಿಸಿ.. ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಶಾಸಕ ಭೀಮಣ್ಣ‌ ನಾಯ್ಕ

15 ದಿನದಲ್ಲಿ‌ ಸಮಸ್ಯೆಗೆ ಸ್ಪಂದಿಸಿ.. ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಶಾಸಕ ಭೀಮಣ್ಣ‌ ನಾಯ್ಕ

MUST WATCH

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

ಹೊಸ ಸೇರ್ಪಡೆ

Bharamasagara: ಡೆಂಗ್ಯೂ ಜ್ವರಕ್ಕೆ ಯುವಕ ಬಲಿ

Bharamasagara: ಡೆಂಗ್ಯೂ ಜ್ವರಕ್ಕೆ ಯುವಕ ಬಲಿ

Wadi ಬಿಸಿಯೂಟ ಸೇವಿಸಿ 33 ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Wadi ಬಿಸಿಯೂಟ ಸೇವಿಸಿ 33 ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

police crime

Mangalore ಕಾರಾಗೃಹದಲ್ಲಿ ಖೈದಿಗಳ ಮಾರಾಮಾರಿ: ಇಬ್ಬರು ಆಸ್ಪತ್ರೆಗೆ

Kalammawadi Dam ಹಿನ್ನೀರಿನಲ್ಲಿ ಈಜಲು ತೆರಳಿದ್ದ ಯುವಕರಿಬ್ಬರು ನೀರು ಪಾಲು

Kalammawadi Dam ಹಿನ್ನೀರಿನಲ್ಲಿ ಈಜಲು ತೆರಳಿದ್ದ ಯುವಕರಿಬ್ಬರು ನೀರು ಪಾಲು

koratagere

Koratagere: ಎರಡು ವಿದ್ಯುತ್‌ ಉಪಸ್ಥಾವರ ಘಟಕಗಳ ಉದ್ಘಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.