Belthangady; ವಿದ್ಯುತ್ ಪ್ರವಹಿಸಿ ರಸ್ತೆಯಲ್ಲಿ ಸಾಗುತ್ತಿದ್ದ ವಿದ್ಯಾರ್ಥಿನಿ ಸಾವು
ರಕ್ಷಿಸಲು ಪ್ರಯತ್ನಿಸಿದಾಗ ತಂದೆಗೂ ವಿದ್ಯುತ್ ಆಘಾತ...
Team Udayavani, Jun 27, 2024, 6:33 PM IST
ಬೆಳ್ತಂಗಡಿ: ಸ್ಟೇ ವೈಯರ್ ಗೆ ವಿದ್ಯುತ್ ತಂತಿ ಸ್ವರ್ಶಿಸಿದ ಪರಿಣಾಮ ಯುವತಿಗೆ ವಿದ್ಯುತ್ ಶಾಕ್ ತಗಲಿ ಸಾವನ್ನಪ್ಪಿದ ಘಟನೆ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಶಿಬಾಜೆ ಗ್ರಾಮದಲ್ಲಿ ಜೂ.27 ರಂದು ಸಂಜೆ ಸಂಭವಿಸಿದೆ. ಶಿಬಾಜೆ ಗ್ರಾಮದ ಬರ್ಗುಳ ನಿವಾಸಿ ಗಣೇಶ್ ಶೆಟ್ಟಿ ಮತ್ತು ರೋಹಿಣಿ ದಂಪತಿ ಪುತ್ರಿ ಪ್ರತೀಕ್ಷಾ ಶೆಟ್ಟಿ (21) ಮೃತ ದುರ್ದೈವಿ.
ಪ್ರತೀಕ್ಷಾ ಅವರು ಸಂಜೆ ಮನೆಯ ರಸ್ತೆ ಸಮೀಪ ಪಾರ್ಸೆಲ್ ಬಂದಿದ್ದರಿಂದ ರಸ್ತೆಗೆ ಬಂದಿದ್ದಾರೆ. ಈ ವೇಳೆ ರಸ್ತೆಯಲ್ಲಿ ಹರಿದಾಡುತ್ತಿದ್ದ ನೀರಿನಲ್ಲಿ ವಿದ್ಯುತ್ ಪ್ರವಹಿಸಿದ ಪರಿಣಾಮ ಅದನ್ನು ಸ್ಪರ್ಶಿಸಿದ ಅವರಿಗೆ ವಿದ್ಯುತ್ ಆಘಾತವಾಗಿದೆ. ಸ್ಥಳದಲ್ಲಿದ್ದ ತಂದೆ ಅವರನ್ನು ರಕ್ಷಿಸಲು ಪ್ರಯತ್ನಿಸಿದಾಗ ತಂದೆಗೂ ವಿದ್ಯುತ್ ಆಘಾತವಾಗಿದ್ದು, ಆದರೆ ಪುತ್ರಿಯನ್ನು ರಕ್ಷಿಸಲು ಸಾಧ್ಯವಾಗಿಲ್ಲ.
ಸ್ಟೇ ವೈಯರ್ ಗೆ ವಿದ್ಯುತ್ ತಂತಿ ಸ್ಪರ್ಶಿಸಿದ ಪರಿಣಾಮ ಅದು ನೀರಿಗೆ ಪ್ರವಾಹಿಸಿದೆ. ಪರಿಣಾಮ ವಿದ್ಯುತ್ ಶಾಕ್ ಹೊಡೆದಿದೆ. ಬಳಿಕ ಅವರನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆತಂದರೂ ಪ್ರತೀಕ್ಷಾ ಶೆಟ್ಟಿ ಅದಾಗಲೆ ಮೃತಪಟ್ಟಿರುವ ಸಾಧ್ಯತೆ ಬಗ್ಗೆ ವೈದ್ಯರು ತಿಳಿಸಿದ್ದಾರೆ ಎಂದು ತಿಳಿದುಬಂದಿದೆ. ಯುವತಿಯ ಮೃತದೇಹ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Shivamogga: ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ; 8ಕ್ಕೂ ಅಧಿಕ ಅಂಗಡಿಗಳು ಸುಟ್ಟು ಕರಕಲು
Horoscope: ಅಕಸ್ಮಾತ್ ಧನಾಗಮ ಯೋಗ ನಿಮ್ಮದಾಗಲಿದೆ
Government ಹೊಸ ಅಪರಾಧ ಸಂಹಿತೆಗೆ ರಾಜ್ಯದಲ್ಲಿ ತಿದ್ದುಪಡಿ
CM DCM ಹೇಳಿಕೆ ನಿಲ್ಲಿಸದಿದ್ದರೆ ಶೋಕಾಸ್ ನೋಟಿಸ್: ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಎಚ್ಚರಿಕೆ
Australia;ಇನ್ನು ವಿದ್ಯಾರ್ಥಿ ಶುಲ್ಕ ದುಪ್ಪಟ್ಟು: ಭಾರತೀಯರಿಗೂ ಸಂಕಷ್ಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.