Mundargi; ನೀರಾವರಿ ಇಲಾಖೆ ಕಚೇರಿ ಒಳಗೇ ಆತ್ಮಹತ್ಯೆಗೆ ಮುಂದಾದ ರೈತ
Team Udayavani, Jun 27, 2024, 7:58 PM IST
ಮುಂಡರಗಿ: ಕಾಲುವೆ ನೀರು ಜಮೀನಿಗೆ ನುಗ್ಗಿ ಭತ್ತದ ಬೆಳೆ ಹಾಳಾದ ಹಿನ್ನಲೆಯಲ್ಲಿ ರೈತನೊಬ್ಬ ನೀರಾವರಿ ಇಲಾಖೆ ಕಚೇರಿಗೆ ತೆರಳಿ ಅಧಿಕಾರಿಗಳ ಎದುರೇ ಫ್ಯಾನಿಗೆ ಹಗ್ಗ ಕಟ್ಟಿ ನೇಣು ಹಾಕಿಕೊಳ್ಳಲು ಮುಂದಾದ ಘಟನೆ ಗುರುವಾರ ನಡೆದಿದೆ.
ಮುಂಡರಗಿ ತಾಲೂಕಿನ ಹಮ್ಮಿಗಿ ಗ್ರಾಮದ ಶಿವರಾಜ್ ಹೊಳಿಯಾಚೆ ಎನ್ನುವ ರೈತ ಆತ್ಮಹತ್ಯೆಗೆ ಯತ್ನಿಸಿದ್ದು,ಕಚೇರಿಯಲ್ಲಿದ್ದವರು ತಡೆದಿದ್ದಾರೆ.
ಜಮೀನಿನಲ್ಲಿ ಹಾದು ಹೋಗಿರುವ ಶಿಂಗಟಾಲೂರು ಏತ ನೀರಾವರಿ ಕಾಲುವೆಯ ನೀರು ಉಕ್ಕಿ ಹರಿದು ಜಮೀನಿಗೆ ನುಗ್ಗಿ ಬೆಳೆಗಳು ಹಾನಿಯಾಗಿದ್ದವು. ಇದರಿಂದ ಬೇಸತ್ತು ನೇರವಾಗಿ ಕಚೇರಿಗೆ ಬಂದು ಆತ್ಮಹತ್ಯೆಗೆ ಮುಂದಾಗಿದ್ದಾನೆ ಎಂದು ತಿಳಿದು ಬಂದಿದೆ.
ಹಲವು ವರ್ಷಗಳಿಂದ ಬೆಳೆಹಾನಿಗೆ ಪರಿಹಾರ ನೀಡುವಂತೆ ಸಾಕಷ್ಟು ಬಾರಿ ಮನವಿ ಮಾಡಿದ್ದರೂ ಪರಿಹಾರ ನೀಡದೇ ಅಧಿಕಾರಿಗಳು ಸತಾಯಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಶಿವರಾಜ್ ಮಾತ್ರವಲ್ಲದೆ ಮಲ್ಲಪ್ಪ ಸುಣಗಾರ ಸೇರಿದಂತೆ ಅಕ್ಕಪಕ್ಕದ ರೈತರ ಜಮೀನುಗಳಿಗೂ ಕಾಲುವೆ ನೀರು ನುಗ್ಗಿ ಹಾನಿಯಾಗಿದೆ. ಕಾಲುವೆ ನೀರು ಸರಾಗವಾಗಿ ಹರಿದು ಹೋಗದ ಹಿನ್ನೆಲೆ ಜಮೀನಿಗೆ ನುಗ್ಗಿ ಹಾನಿಯಾಗುತ್ತಿದೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Shivamogga: ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ; 8ಕ್ಕೂ ಅಧಿಕ ಅಂಗಡಿಗಳು ಸುಟ್ಟು ಕರಕಲು
Horoscope: ಅಕಸ್ಮಾತ್ ಧನಾಗಮ ಯೋಗ ನಿಮ್ಮದಾಗಲಿದೆ
Government ಹೊಸ ಅಪರಾಧ ಸಂಹಿತೆಗೆ ರಾಜ್ಯದಲ್ಲಿ ತಿದ್ದುಪಡಿ
CM DCM ಹೇಳಿಕೆ ನಿಲ್ಲಿಸದಿದ್ದರೆ ಶೋಕಾಸ್ ನೋಟಿಸ್: ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಎಚ್ಚರಿಕೆ
Australia;ಇನ್ನು ವಿದ್ಯಾರ್ಥಿ ಶುಲ್ಕ ದುಪ್ಪಟ್ಟು: ಭಾರತೀಯರಿಗೂ ಸಂಕಷ್ಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.