Employment: ಕನ್ನಡಿಗರಿಗೆ ಉದ್ಯೋಗ; ಜುಲೈ 1ರ ಕರವೇ ಪ್ರತಿಭಟನೆಗೆ ಕಸಾಪ ಬೆಂಬಲ
Team Udayavani, Jun 27, 2024, 9:17 PM IST
ಬೆಂಗಳೂರು: “ಕರ್ನಾಟಕದ ನೆಲದಲ್ಲಿ ಕನ್ನಡಿಗರಿಗೆ ಉದ್ಯೋಗ’ ಎಂಬ ಘೋಷಣೆಯೊಂದಿಗೆ ಜುಲೈ 1ರಂದು ರಾಜ್ಯಾದ್ಯಂತ ನಾರಾಯಣಗೌಡ ನೇತೃತ್ವದ ಕರ್ನಾಟಕ ರಕ್ಷಣಾ ವೇದಿಕೆಯು ಹಮ್ಮಿಕೊಂಡಿರುವ ಹೋರಾಟಕ್ಕೆ ಕನ್ನಡ ಸಾಹಿತ್ಯ ಪರಿಷತ್ತು ಬೆಂಬಲ ನೀಡಲಿದೆ ಎಂದು ಪರಿಷತ್ತಿನ ಅಧ್ಯಕ್ಷ ಮಹೇಶ್ ಜೋಶಿ ತಿಳಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, “ಕನ್ನಡ-ಕರ್ನಾಟಕ-ಕನ್ನಡಿಗ’ಕ್ಕೆ ಸಂಬಂಧಿಸಿದ ಯಾವುದೇ ವಿಷಯವಾದರೂ ಕನ್ನಡ ಸಾಹಿತ್ಯ ಪರಿಷತ್ತು ಸ್ಪಂದಿಸುತ್ತದೆ. ಈ ಹಿಂದೆ ಕರ್ನಾಟಕ ರಕ್ಷಣಾ ವೇದಿಕೆ ಕನ್ನಡದಲ್ಲಿಯೇ ನಾಮಫಲಕದ ವಿಷಯದಲ್ಲಿ ಹೋರಾಟ ನಡೆಸಿದಾಗಲೂ ಕನ್ನಡ ಸಾಹಿತ್ಯ ಪರಿಷತ್ತು ಬೆಂಬಲಿಸಿತ್ತು ಎಂದು ಹೇಳಿದ್ದಾರೆ.
ಕರ್ನಾಟಕದಲ್ಲಿ ಎಲ್ಲ ಬಗೆಯ ಉದ್ಯೋಗದಲ್ಲಿಯೂ ಕನ್ನಡಿಗರಿಗೆ ಸಿಂಹಪಾಲು ಇರಬೇಕು ಎನ್ನುವುದು ನ್ಯಾಯಯುತ ಬೇಡಿಕೆ. ಡಾ.ಸರೋಜಿನಿ ಮಹಿಷಿ ವರದಿ ಕೂಡ ಇದನ್ನೇ ಹೇಳಿತ್ತು. ಇತ್ತೀಚೆಗೆ ಜಾರಿಯಾದ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ-2022ರಲ್ಲಿಯೂ ಕನ್ನಡಿಗರಿಗೆ ಉದ್ಯೋಗವೆಂಬ ಸಂಗತಿಯನ್ನು ಸ್ಪಷ್ಟವಾಗಿ ಹೇಳಲಾಗಿದೆ. ಅಪ್ರಂಟಿಸ್ ನಿಯಮ 1961ರ ವಿಧಿ 20ರ ಪ್ರಕಾರ ಕೂಡ ಸ್ಥಳೀಯರಿಗೆ ಉದ್ಯೋಗಾವಕಾಶ ನೀಡಬೇಕು ಎಂದು ಹೇಳಲಾಗಿದೆ. ಜಾಗತೀಕರಣದ ಹಿನ್ನೆಲೆಯಲ್ಲಿ ಉದ್ಯೋಗಾವಕಾಶಗಳ ಸ್ವರೂಪ ಬದಲಾಗುತ್ತಿದೆ. ಹೊಸ ಮಾದರಿಯ ಶ್ರೇಣಿಕೃತ ವ್ಯವಸ್ಥೆ ರೂಪುಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಸ್ಥಳೀಯರಿಗೆ ಉದ್ಯೋಗಾವಕಾಶ ದೊರಕುವಂತೆ ಮಾಡುವುದು ಅತ್ಯಗತ್ಯ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pen Drive Case 4 ತಿಂಗಳಿಗೊಮ್ಮೆ ಎಚ್ಐವಿ ಟೆಸ್ಟ್ ಮಾಡಿಸುತ್ತಿದ್ದ ಪ್ರಜ್ವಲ್?
Private Hospital ಡೆಂಗ್ಯೂ ಪರೀಕ್ಷೆಗೆ ಶುಲ್ಕ ನಿಗದಿ: ಸಚಿವ ದಿನೇಶ್
ಡಿಕೆಶಿ ಕಾಂಗ್ರೆಸ್ಗೆ ಕಾಲಿಡುವ ಮೊದಲೇ ನೋಟಿಸ್, ಉಚ್ಚಾಟನೆ ಎಲ್ಲಾ ನೋಡಿದ್ದೀನಿ…; ರಾಜಣ್ಣ
CM Siddaramaiah ರೈತರಿಗೆ ನಿತ್ಯ 5 ಕೋಟಿ ರೂ. ಪ್ರೋತ್ಸಾಹ ಧನ
KMF ಹಾಲಿನ ಹೊಳೆ: ನಿತ್ಯ 1 ಕೋಟಿ ಲೀಟರ್!-ಕೆಎಂಎಫ್ ಇತಿಹಾಸದಲ್ಲೇ ದಾಖಲೆ ಕ್ಷೀರ ಸರಬರಾಜು
MUST WATCH
ಹೊಸ ಸೇರ್ಪಡೆ
Daily Horoscope; ಹಿತಶತ್ರುಗಳ ಕಾಟ, ಉದ್ಯೋಗಸ್ಥರಿಗೆ ವೇತನ ಏರಿಕೆಯಲ್ಲಿ ವಿಳಂಬ
Train ಶಿವಮೊಗ್ಗ-ಶೃಂಗೇರಿ-ಮಂಗಳೂರು ಹೊಸ ರೈಲು ಮಾರ್ಗ ಮಂಜೂರಾತಿಗೆ ಮನವಿ
Mumbai; 31 ವರ್ಷ ಬಳಿಕ ಸೆರೆಸಿಕ್ಕ 1993 ಮುಂಬೈ ಗಲಭೆ ಆರೋಪಿ
Pen Drive Case 4 ತಿಂಗಳಿಗೊಮ್ಮೆ ಎಚ್ಐವಿ ಟೆಸ್ಟ್ ಮಾಡಿಸುತ್ತಿದ್ದ ಪ್ರಜ್ವಲ್?
NASA; ಅಂತರಿಕ್ಷದಲ್ಲೇ ಅತಂತ್ರ! ಬಾಹ್ಯಾಕಾಶದಿಂದ ಅಮೆರಿಕದ ಗಗನಯಾತ್ರಿಗಳು ಮರಳ್ಳೋದು ಯಾವಾಗ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.