![Bidar; ಲೈಂಗಿಕ ಕಿರುಕುಳ ಪ್ರಕರಣ: ಇಬ್ಬರು ಶಿಕ್ಷಕರ ಅಮಾನತ್ತು](https://www.udayavani.com/wp-content/uploads/2024/07/suspended-415x229.jpg)
Kampli: ಅರಣ್ಯ ಇಲಾಖೆಯ ಬಲೆಗೆ ಬೀಳದ ಮೊಸಳೆ ಮಿನುಗಾರರ ಬಲೆಗೆ ಬಿತ್ತು…
ನಿಟ್ಟುಸಿರು ಬಿಟ್ಟ ಜನ
Team Udayavani, Jun 28, 2024, 10:16 AM IST
![Kampli: ಅರಣ್ಯ ಇಲಾಖೆಯ ಬಲೆಗೆ ಬೀಳದ ಮೊಸಳೆ ಮಿನುಗಾರರ ಬಲೆಗೆ ಬಿತ್ತು… ನಿಟ್ಟುಸಿರು ಬಿಟ್ಟ ಜನ](https://www.udayavani.com/wp-content/uploads/2024/06/mosale-620x363.jpg)
ಕಂಪ್ಲಿ: ಪಟ್ಟಣದ ಐತಿಹಾಸಿಕ ಸೋಮಪ್ಪನ ಕೆರೆಯಲ್ಲಿ ಮೊಸಳೆಯೊಂದು ಪ್ರತ್ಯಕ್ಷವಾಗಿ ಸಾರ್ವಜನಿಕರಲ್ಲಿ ಆತಂಕ ಮೂಡಿಸಿತ್ತು.ಈ ಬಗ್ಗೆ ಪುರಸಭೆಯವರು ಕೆರೆಯಲ್ಲಿ ಮೊಸಳೆಯೊಂದು ಇದ್ದು ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಬ್ಯಾನರ್ ಅಳವಡಿಸಿದ್ದರು. ಜೊತೆಗೆ ಅರಣ್ಯ ಇಲಾಖೆಗೆ ಮೊಸಳೆ ಸೆರೆಗೆ ಮನವಿ ಮಾಡಿದ್ದರು.
ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಮೊಸಳೆ ಸೆರೆಗೆ ಬಲೆ ಮತ್ತು ದಂಡೆಯಲ್ಲಿ ಸತ್ತ ಕೋಳಿಗಳನ್ನು ಹಾಕಿ ಪ್ರಯತ್ನಗಳನ್ನು ಮಾಡಿದ್ದರು. ಆದರೆ ಎರಡು ದಿನಗಳಾದರು ಮೊಸಳೆ ಸೆರೆಯಾಗಿರಲಿಲ್ಲ. ಇಂದು ಕಂಪ್ಲಿ ಕೋಟೆಯ ಮೀನುಗಾರ ಸಹಕಾರ ಸಂಘದವರು ಕೆರೆಯಲ್ಲಿನ ಮೀನುಗಳನ್ನು ಹಿಡಿಯಲು 15ಕ್ಕೂ ಅಧಿಕ ಹರಗೋಲು ಮತ್ತು ಹೆಚ್ಚಿನ ಪ್ರಮಾಣದಲ್ಲಿ ಬಲೆಗಳನ್ನು ಬಳಸಿದ್ದರಿಂದ ಮೊಸಳೆ ಬಲೆಗೆ ಬಿದಿದ್ದು, ನಂತರ ಮೊಸಳೆಯನ್ನು ಹಗ್ಗದಿಂದ ಬಂಧಿಸಿ ಹೊಸಪೇಟೆ ಪ್ರಾದೇಶಿಕ ವಲಯ ಅರಣ್ಯ ಇಲಾಖೆ ಸಿಬ್ಬಂದಿಗಳಾದ ಬಿ.ರಾಘವೇಂದ್ರ ಮತ್ತು ಬಿ.ನಾಗರಾಜ ಅವರಿಗೆ ಒಪ್ಪಿಸಿದ್ದಾರೆ.
ಅರಣ್ಯ ಇಲಾಖೆ ಸಿಬ್ಬಂದಿಗಳು ಮೊಸಳೆಯನ್ನು ಕಮಲಾಪುರ ಅಟಲ್ ಬಿಹಾರಿ ವಾಜಪೇಯಿ ಜುಯಲಾಜಿಕಲ್ ಪಾಕ್೯ಗೆ ಸ್ಥಳಾಂತಿಸಿದರು. ಮೊಸಳೆಯನ್ನು ನೋಡಲು ನೂರಾರು ಸಾರ್ವಜನಿಕರು ಆಗಮಿಸಿದ್ದು, ಅವರನ್ನು ನಿಯಂತ್ರಿಸಲು ಹರಸಾಹಸ ಪಟ್ಟರು.
ಇದನ್ನೂ ಓದಿ: Kalasa: ತಡವಾಗಿ ಘೋಷಣೆಯಾದ ರಜೆ… ಶಾಲೆಗೆ ಹೋಗಿ ವಾಪಸ್ಸಾದ ವಿದ್ಯಾರ್ಥಿಗಳು
ಟಾಪ್ ನ್ಯೂಸ್
![Bidar; ಲೈಂಗಿಕ ಕಿರುಕುಳ ಪ್ರಕರಣ: ಇಬ್ಬರು ಶಿಕ್ಷಕರ ಅಮಾನತ್ತು](https://www.udayavani.com/wp-content/uploads/2024/07/suspended-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![BJP-flag](https://www.udayavani.com/wp-content/uploads/2024/07/BJP-flag-150x90.jpg)
Congress ಸರ್ಕಾರದಿಂದ ರಾಜ್ಯ ಬರ್ಬಾದ್ ; ಬಿಜೆಪಿ ಟೀಕೆ
![laxmi-hebbalkar](https://www.udayavani.com/wp-content/uploads/2024/07/laxmi-hebbalkar-150x83.jpg)
Belagavi; ಅಭಯ್ ಪಾಟೀಲ್ ‘ಕೇಂದ್ರದ ಮೊಬೈಲ್’ ಹೇಳಿಕೆಗೆ ಸಚಿವೆ ಹೆಬ್ಬಾಳ್ಕರ್ ಗರಂ
![Vijayapura; ರಾಜ್ಯದ ಅಭಿವೃದ್ಧಿ ಆಗಬೇಕಾದರೆ ನಾನು ಸಿಎಂ ಆಗಬೇಕು: ಯುವಕನ ವಿಡಿಯೋ ವೈರಲ್](https://www.udayavani.com/wp-content/uploads/2024/07/vijay-viral-150x83.jpg)
Vijayapura; ರಾಜ್ಯದ ಅಭಿವೃದ್ಧಿ ಆಗಬೇಕಾದರೆ ನಾನು ಸಿಎಂ ಆಗಬೇಕು: ಯುವಕನ ವಿಡಿಯೋ ವೈರಲ್
![Chikkamagaluru: ಬಸ್ ಹತ್ತುವ ವೇಳೆ ತುಂಡಾದ ಡೋರ್ ಲಾಕ್… ಮಹಿಳೆಗೆ ಗಾಯ](https://www.udayavani.com/wp-content/uploads/2024/07/ksrtc-150x96.jpg)
Chikkamagaluru: ಡೋರ್ ಲಾಕ್ ತುಂಡಾಗಿ ಬಸ್ಸಿನಿಂದ ಹೊರಬಿದ್ದ ಮಹಿಳೆ…
![Sirsi: ಕೇಂದ್ರ ಸಚಿವರನ್ನು ಭೇಟಿಯಾದ ಕಾಗೇರಿ: ಚತುಷ್ಪತ ರಾ.ಹೆದ್ದಾರಿ ತ್ವರಿತಕ್ಕೆ ಮನವಿ](https://www.udayavani.com/wp-content/uploads/2024/07/kageri-150x87.jpg)
Sirsi: ಕೇಂದ್ರ ಸಚಿವರನ್ನು ಭೇಟಿಯಾದ ಕಾಗೇರಿ: ಚತುಷ್ಪತ ರಾ.ಹೆದ್ದಾರಿ ತ್ವರಿತಕ್ಕೆ ಮನವಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.