Renukaswamy Case 5 ತಿಂಗಳಿನಿಂದ ಪವಿತ್ರಾಗೆ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ!
ಇನ್ಸ್ಟಾಗ್ರಾಂ ಮೂಲಕ 200ಕ್ಕೂ ಅಧಿಕ ಸಂದೇಶ ಕಳುಹಿಸಿದ್ದ
Team Udayavani, Jun 29, 2024, 6:50 AM IST
ಬೆಂಗಳೂರು: ನಟಿ ಪವಿತ್ರಾ ಗೌಡಗೆ ಚಿತ್ರದುರ್ಗದ ರೇಣುಕಾಸ್ವಾಮಿ ಕಳೆದ ಐದು ತಿಂಗಳಿನಿಂದ ಸಂದೇಶ ಕಳುಹಿಸುತ್ತಿದ್ದ ಎನ್ನುವುದು ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ಕಳೆದ ಫೆಬ್ರವರಿಯಲ್ಲಿ ಇನ್ಸ್ಟಾಗ್ರಾಂ ಮೂಲಕ ಪವಿತ್ರಾ ಗೌಡಳನ್ನು ಪರಿಚಯಿಸಿಕೊಂಡ ರೇಣುಕಾಸ್ವಾಮಿ, ಅಂದಿನಿಂದಲೇ ನಿತ್ಯ ಪವಿತ್ರಾ ಗೌಡಗೆ ಮೆಸೇಜ್ ಮಾಡುತ್ತಿದ್ದ. ಆದರೆ ಈತನ ಅಶ್ಲೀಲ ಚಾಟಿಂಗ್ಗೆ ಪವಿತ್ರಾ ಗೌಡ ಉತ್ತರಿಸುತ್ತಿರಲಿಲ್ಲ. ಹೀಗಾಗಿ ಸುಮಾರು 200ಕ್ಕೂ ಹೆಚ್ಚು ಸಂದೇಶಗಳನ್ನು ಕಳುಹಿಸಿದ್ದ ರೇಣುಕಾಸ್ವಾಮಿ, ಅಶ್ಲೀಲ ಸಂದೇಶಗಳ ಜತೆಗೆ ಅಶ್ಲೀಲ ಫೋಟೋ ಕೂಡ ಕಳುಹಿಸಿದ್ದಾನೆ. ಅದರಿಂದ ಕೋಪಗೊಂಡ ಪವಿತ್ರಾ ಗೌಡ, ತನ್ನ ಆಪ್ತ ಪವನ್ಗೆ ಮಾಹಿತಿ ತಿಳಿಸಿದ್ದಳು.
ಬಳಿಕ ಪವನ್, ಪವಿತ್ರಾ ಗೌಡ ಹಾಗೂ ಬೇರೆ ಯುವತಿಯರ ರೀತಿ ನಕಲಿ ಖಾತೆ ತೆರೆದು ಚಾಟ್ ಮಾಡಿದಾಗ ರೇಣುಕಾಸ್ವಾಮಿ ಸಂತೋಷದಿಂದ ಪ್ರತಿಕ್ರಿಯೆ ನೀಡುತ್ತಿದ್ದ. ಹೀಗೆ ಮಾತಾಡುತ್ತಾ, ರೇಣುಕಾಸ್ವಾಮಿ ಬಳಿ ಪವನ್ ಫೋಟೋ ಕಳುಹಿಸುವಂತೆ ಹೇಳಿದ್ದಾ ನೆ. ಅಂತೆಯೇ ರೇಣುಕಾಸ್ವಾಮಿ ತನ್ನ ಫೋಟೋ ಕಳುಹಿಸಿದ್ದಾ ನೆ. ಫೋಟೋ ಸಿಕ್ಕ ಬಳಿಕ, ಚಿತ್ರದುರ್ಗ ದರ್ಶನ್ ಅಭಿಮಾನಿಗಳ ಸಂಘದ ಅಧ್ಯಕ್ಷ ರಾಘವೇಂದ್ರನಿಗೆ ಕಳುಹಿಸಿ, ರೇಣುಕಾಸ್ವಾಮಿಯನ್ನು ಬೆಂಗಳೂರಿಗೆ ಕರೆತರುವಂತೆ ಸೂಚಿಸಿದ್ದ. ಬಳಿಕ ಈ ವಿಚಾರವನ್ನು ದರ್ಶನ್ಗೂ ತಿಳಿಸಿದ್ದರು. ಆನಂತರ ಪಟ್ಟಣಗೆರೆ ಶೆಡ್ಗೆ ಕರೆದೊಯ್ದು ಭೀಕರವಾಗಿ ಹತ್ಯೆಗೈದು, ಮೃತದೇಹವನ್ನು ಸುಮ್ಮನಹಳ್ಳಿ ರಾಜಕಾಲುವೆ ಬಳಿ ಎಸೆದಿದ್ದರು.
1 ಗಂಟೆಗೂ ಅಧಿಕ ಕಾಲ ಹಿಂಸೆ!
ಜೂನ್ 8ರಂದು ಪಟ್ಟಣಗೆರೆಯ ಶೆಡ್ಗೆ ರೇಣುಕಾಸ್ವಾಮಿಯನ್ನು ಕರೆದೊಯ್ದ ದರ್ಶನ್ ಆ್ಯಂಡ್ ಗ್ಯಾಂಗ್ ಸುಮಾರು 1 ಗಂಟೆಗೂ ಅಧಿಕ ಕಾಲ ಚಿತ್ರಹಿಂಸೆ ನೀಡಿದೆ. ಹಲ್ಲೆ ವೇಳೆ ರೇಣುಕಾಸ್ವಾಮಿ ಮೊಬೈಲ್ ಅನ್ನು ಪವನ್ಗೆ ಕೊಟ್ಟ ದರ್ಶನ್, ಆತ ಪವಿತ್ರಾ ಗೌಡಗೆ ಕಳುಹಿಸಿರುವ ಸಂದೇಶಗಳನ್ನು ಓದುವಂತೆ ಹೇಳಿದ್ದಾನೆ. ಪ್ರತಿ ಸಂದೇಶಕ್ಕೂ ದರ್ಶನ್ ಮತ್ತು ತಂಡ ಹಲ್ಲೆ ನಡೆಸಿದೆ. ಪವಿತ್ರಾ ಗೌಡ ಕೂಡ ರೇಣುಕಾಸ್ವಾಮಿಗೆ ಚಪ್ಪಲಿಯಿಂದ ಹೊಡೆದಿದ್ದಾಳೆ. ಹೀಗೆ ಸುಮಾರು 1 ಗಂಟೆಗೂ ಅಧಿಕ ಕಾಲ ದರ್ಶನ್ ಮತ್ತು ತಂಡ ರೇಣುಕಾಸ್ವಾಮಿ ಮೇಲೆ ಹಲ್ಲೆ ನಡೆಸಿದೆ ಎಂಬುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pen Drive Case 4 ತಿಂಗಳಿಗೊಮ್ಮೆ ಎಚ್ಐವಿ ಟೆಸ್ಟ್ ಮಾಡಿಸುತ್ತಿದ್ದ ಪ್ರಜ್ವಲ್?
Private Hospital ಡೆಂಗ್ಯೂ ಪರೀಕ್ಷೆಗೆ ಶುಲ್ಕ ನಿಗದಿ: ಸಚಿವ ದಿನೇಶ್
ಡಿಕೆಶಿ ಕಾಂಗ್ರೆಸ್ಗೆ ಕಾಲಿಡುವ ಮೊದಲೇ ನೋಟಿಸ್, ಉಚ್ಚಾಟನೆ ಎಲ್ಲಾ ನೋಡಿದ್ದೀನಿ…; ರಾಜಣ್ಣ
CM Siddaramaiah ರೈತರಿಗೆ ನಿತ್ಯ 5 ಕೋಟಿ ರೂ. ಪ್ರೋತ್ಸಾಹ ಧನ
KMF ಹಾಲಿನ ಹೊಳೆ: ನಿತ್ಯ 1 ಕೋಟಿ ಲೀಟರ್!-ಕೆಎಂಎಫ್ ಇತಿಹಾಸದಲ್ಲೇ ದಾಖಲೆ ಕ್ಷೀರ ಸರಬರಾಜು
MUST WATCH
ಹೊಸ ಸೇರ್ಪಡೆ
Dakshina Kannada: ಅಕ್ರಮ ಆಸ್ತಿ ಗಳಿಕೆ ಪ್ರಕರಣ; ನಿವೃತ್ತ ಕಮಾಂಡೆಂಟ್ ದೋಷಮುಕ್ತ
Agriculture: ಭತ್ತದ ಕೃಷಿಗೆ ಯಂತ್ರವೂ ಸಿಗುತ್ತಿಲ್ಲ, ಕಾರ್ಮಿಕರೂ ಬರುತ್ತಿಲ್ಲ
Manipal: ಅನಾಮಧೇಯ ಆ್ಯಪ್ ಡೌನ್ಲೋಡ್ ಮಾಡಿ ವಂಚನೆಗೊಳಗಾದ ಮಹಿಳೆ!
Udupi Pocso Court: ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ; ಆರೋಪದಿಂದ ತಂದೆ ದೋಷಮುಕ್ತ
Mangaluru: ಪತಿಯ ಹತ್ಯೆ ಪ್ರಕರಣ; ಮಹಿಳೆ ಸಹಿತ ಐವರಿಗೆ ಜೀವಾವಧಿ ಶಿಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.