Agriculture ಹಡಿಲು ಭೂಮಿಗೆ ಜೀವ ತುಂಬುವ ರೈತ

2 ದಶಕದಿಂದ ಹಡಿಲು ಗದ್ದೆಗಳಲ್ಲಿ ಕೃಷಿ ಮಾಡುವ ಗಂಗಾಧರ ಪೂಜಾರಿ

Team Udayavani, Jun 29, 2024, 7:18 AM IST

Agriculture ಹಡಿಲು ಭೂಮಿಗೆ ಜೀವ ತುಂಬುವ ರೈತ

ಕುಂದಾಪುರ: ಇಲ್ಲೊಬ್ಬ ಅಪರೂಪದ ಕೃಷಿಕ ತನ್ನ ಮಾದರಿ ಕಾರ್ಯದ ಮೂಲಕ ಎಕ್ರೆಗಟ್ಟಲೆ ಹಡಿಲು ಭೂಮಿಯನ್ನು ಹಸನು ಮಾಡುತ್ತಿದ್ದಾರೆ. ಊರಲ್ಲಿ ಹಡಿಲು ಬೀಳುವ ಗದ್ದೆಗಳನ್ನು ಗೇಣಿಗೆ ಪಡೆದು ಬೇಸಾಯ ಮಾಡುವುದೇ ಇವರ ಕಾಯಕ. 20 ವರ್ಷಗಳಿಂದ ನಿರಂತರವಾಗಿ ಈ ಕಾರ್ಯವನ್ನು ಬದ್ಧತೆಯಿಂದ ಮಾಡುತ್ತಿದ್ದಾರೆ. ಕುಂದಾಪುರ ಕೋಡಿಯ ಗಂಗಾಧರ ಪೂಜಾರಿ ಅವರೇ ಮಾದರಿ ಕೃಷಿಕ.

ಇವರು ತನ್ನ ಒಂದು ಎಕ್ರೆ ಗದ್ದೆಯೊಂದಿಗೆ ಕೋಡಿಯ ಶ್ರೀ ಚಕ್ರೇಶ್ವರಿ ದೇವಸ್ಥಾನದ ಆಸುಪಾಸಿನಲ್ಲಿ ರೈತರು ಹಡಿಲು ಬಿಡುವ ಗದ್ದೆಗಳನ್ನು ಹುಡುಕಿ, ಅವುಗಳಲ್ಲಿ ಬೇಸಾಯ ಮಾಡುತ್ತಿದ್ದಾರೆ. ಈ ವರ್ಷ ಒಟ್ಟಾರೆ 45 ಎಕ್ರೆ ಗದ್ದೆಗಳಲ್ಲಿ ನಾಟಿ ಕಾರ್ಯ ಕೈಗೊಂಡಿದ್ದಾರೆ. ಈ ಬಾರಿ ಸೋನ್ಸ್‌ ಶಾಲೆ ಹತ್ತಿರ ಹೆಚ್ಚುವರಿಯಾಗಿ 15 ಎಕ್ರೆ ಗದ್ದೆಗಳಿಗೆ ಜೀವ ತುಂಬುವ ಪ್ರಯತ್ನವನ್ನು ಮಾಡುತ್ತಿದ್ದಾರೆ.

ಇಡೀ ಕುಟುಂಬ ಜತೆಗಿದೆ
ಗಂಗಾಧರ ಪೂಜಾರಿ ವೃತ್ತಿಯಲ್ಲಿ ಎಲೆಕ್ಟ್ರಿಕಲ್‌ ಹಾಗೂ ಡೆಕೊರೇಶನ್‌ ಕೆಲಸ ಮಾಡುತ್ತಿದ್ದು, ಅವರಿಗೆ ಕೃಷಿಯಲ್ಲಿ ಅಪಾರ ಆಸಕ್ತಿಯಿದೆ. ತಂದೆಯಿಂದ ಬಳುವಳಿಯಾಗಿ ಬಂದ ಕೃಷಿ ಕಾಯಕವನ್ನು ಎಂದಿಗೂ ಬಿಡಲಾರೆ ಎನ್ನುವ ಅವರಿಗೆ ಈ ಕಾರ್ಯದಲ್ಲಿ ಇಡೀ ಕುಟುಂಬವೇ ಸಹಕಾರ ನೀಡುತ್ತಿದೆ. ಮನೆಮಂದಿ ಜತೆಗೆ ಸಹೋದರ, ಅಳಿಯ, ಮಾವ ಹೀಗೆ ಎಲ್ಲರೂ ನಾಟಿ ಕಾರ್ಯದಲ್ಲಿ ಭಾಗಿಯಾಗುತ್ತಿದ್ದಾರೆ. ಇವರೆಲ್ಲರ ಬೆಂಬಲದಿಂದ ಯಾವತ್ತೂ ಈ ಕಾರ್ಯ ತನಗೆ ಹೊರೆ ಎನಿಸಿಲ್ಲ ಎಂದು ಗಂಗಾಧರ ಪೂಜಾರಿ ಅವರು ಹೇಳುತ್ತಿದ್ದಾರೆ.

ಲಾಭಕ್ಕಿಂತಲೂ ಖುಷಿ ಜಾಸ್ತಿ
ತಂದೆ ಕಾಲದಿಂದಲೂ ಈ ಕಾರ್ಯ ಮಾಡುತ್ತಿದ್ದೇವೆ. ಮೊದಲಿಗೆ 10 ಎಕ್ರೆ ಮಾಡಿದ್ದೇವೆ. ಹಿಂದೆ 30-40 ಆಳುಗಳಿಂದ ನಾಟಿ ಮಾಡುತ್ತಿದ್ದೆವು. ಆದರೆ ಕೂಲಿಯಾಳುಗಳ ಸಮಸ್ಯೆಯಿಂದ ಯಾಂತ್ರೀಕೃತ ನಾಟಿ ಮಾಡುತ್ತಿದ್ದೇವೆ. ಮನೆಯಂಗಳದಲ್ಲೇ ಚಾಪೆ ನೇಜಿ ಮಾಡುತ್ತಿದ್ದು, ಇದು ಲಾಭದಾಯಕ. ಲಾಭಕ್ಕಿಂತಲೂ ಹೆಚ್ಚು ಇದರಿಂದ ಸಿಗುವ ಖುಷಿಯೇ ವಿಶೇಷವಾದುದು. ಈ ಬಾರಿ 45 ಎಕ್ರೆ ಗದ್ದೆಯಲ್ಲಿ ನಾಟಿ ಮಾಡುತ್ತಿದ್ದೇವೆ. 1 ಎಕ್ರೆ ಬಿಟ್ಟರೆ ಮತ್ತೆಲ್ಲವೂ ಹಡಿಲು ಭೂಮಿಯೇ. ಈವರೆಗೆ 2.70 ಲಕ್ಷ ರೂ. ಖರ್ಚಾಗಿದೆ. ಇನ್ನು ಗೊಬ್ಬರ, ಕಟಾವು ಸೇರಿ ಒಟ್ಟು ಖರ್ಚು 5 ಲಕ್ಷ ರೂ. ಆಗಬಹುದು. ಉತ್ತಮ ಆದಾಯವೂ ಸಿಗುತ್ತದೆ, ಜತೆಗೆ ನಮ್ಮ ಇಡೀ ಕುಟುಂಬಕ್ಕೆ ವರ್ಷಪೂರ್ತಿ ಅಕ್ಕಿಯೂ ಸಿಗುತ್ತದೆ. ಗದ್ದೆಯ ಮಾಲಕರಿಗೆ 40 ಸೆಂಟ್ಸ್‌ಗೆ 1 ಮುಡಿ ಹಾಗೂ ಎಕ್ರೆಗೆ ಒಂದು ಕ್ವಿಂಟಾಲ್‌ ಅಕ್ಕಿ ಗೇಣಿ ನೀಡುತ್ತೇವೆ.
– ಗಂಗಾಧರ ಪೂಜಾರಿ ಕೋಡಿ, ಕೃಷಿಕ

ಕಷ್ಟಪಟ್ಟರೆ ಲಾಭ..
ಬಹಳ ಹಿಂದೆ ಕೈ ನಾಟಿಯೇ ಜಾಸ್ತಿ ಇತ್ತು. ಈಗ ಯಂತ್ರ ಬಂದಿರುವುದರಿಂದ ತುಂಬಾ ಸಹಾಯವಾಗುತ್ತಿದೆ. ಕೂಲಿ ತುಂಬಾ ಹೊರೆ ಯಾಗುತ್ತಿತ್ತು. ಇಂಥ ಸಂದರ್ಭ ದಲ್ಲಿ ಮನೆಯವರೆಲ್ಲ ಸೇರಿದರೆ ಅನುಕೂಲವಾಗುತ್ತದೆ ಹಾಗೂ ಉತ್ತಮ ಲಾಭವೂ ಸಿಗುತ್ತದೆ.
– ಶಂಕರ ಪೂಜಾರಿ ಕೋಡಿ

-ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

Court-Symbol

Mangaluru: ಪತಿಯ ಹತ್ಯೆ ಪ್ರಕರಣ; ಮಹಿಳೆ ಸಹಿತ ಐವರಿಗೆ ಜೀವಾವಧಿ ಶಿಕ್ಷೆ

Train ಶಿವಮೊಗ್ಗ-ಶೃಂಗೇರಿ-ಮಂಗಳೂರು ಹೊಸ ರೈಲು ಮಾರ್ಗ ಮಂಜೂರಾತಿಗೆ ಮನವಿ

Train ಶಿವಮೊಗ್ಗ-ಶೃಂಗೇರಿ-ಮಂಗಳೂರು ಹೊಸ ರೈಲು ಮಾರ್ಗ ಮಂಜೂರಾತಿಗೆ ಮನವಿ

Pen Drive Case 4 ತಿಂಗಳಿಗೊಮ್ಮೆ ಎಚ್‌ಐವಿ ಟೆಸ್ಟ್‌ ಮಾಡಿಸುತ್ತಿದ್ದ ಪ್ರಜ್ವಲ್‌?

Pen Drive Case 4 ತಿಂಗಳಿಗೊಮ್ಮೆ ಎಚ್‌ಐವಿ ಟೆಸ್ಟ್‌ ಮಾಡಿಸುತ್ತಿದ್ದ ಪ್ರಜ್ವಲ್‌?

When will American astronauts return from space?

NASA; ಅಂತರಿಕ್ಷದಲ್ಲೇ ಅತಂತ್ರ! ಬಾಹ್ಯಾಕಾಶದಿಂದ ಅಮೆರಿಕದ ಗಗನಯಾತ್ರಿಗಳು ಮರಳ್ಳೋದು ಯಾವಾಗ?

Annamalai to resign as Tamil Nadu BJP president?

Annamalai; ತಮಿಳುನಾಡು ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಅಣ್ಣಾಮಲೈ ರಾಜೀನಾಮೆ?

Private Hospital ಡೆಂಗ್ಯೂ ಪರೀಕ್ಷೆಗೆ ಶುಲ್ಕ ನಿಗದಿ: ಸಚಿವ ದಿನೇಶ್‌

Private Hospital ಡೆಂಗ್ಯೂ ಪರೀಕ್ಷೆಗೆ ಶುಲ್ಕ ನಿಗದಿ: ಸಚಿವ ದಿನೇಶ್‌

Byndoor ತುಂಬಿದ ಹೊಳೆ ಮಧ್ಯೆ ಮಕ್ಕಳನ್ನು ಹೊತ್ತೊಯ್ಯುವ ನಿತ್ಯದ ಕಸರತ್ತು

Byndoor ತುಂಬಿದ ಹೊಳೆ ಮಧ್ಯೆ ಮಕ್ಕಳನ್ನು ಹೊತ್ತೊಯ್ಯುವ ನಿತ್ಯದ ಕಸರತ್ತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Train ಶಿವಮೊಗ್ಗ-ಶೃಂಗೇರಿ-ಮಂಗಳೂರು ಹೊಸ ರೈಲು ಮಾರ್ಗ ಮಂಜೂರಾತಿಗೆ ಮನವಿ

Train ಶಿವಮೊಗ್ಗ-ಶೃಂಗೇರಿ-ಮಂಗಳೂರು ಹೊಸ ರೈಲು ಮಾರ್ಗ ಮಂಜೂರಾತಿಗೆ ಮನವಿ

Byndoor ತುಂಬಿದ ಹೊಳೆ ಮಧ್ಯೆ ಮಕ್ಕಳನ್ನು ಹೊತ್ತೊಯ್ಯುವ ನಿತ್ಯದ ಕಸರತ್ತು

Byndoor ತುಂಬಿದ ಹೊಳೆ ಮಧ್ಯೆ ಮಕ್ಕಳನ್ನು ಹೊತ್ತೊಯ್ಯುವ ನಿತ್ಯದ ಕಸರತ್ತು

Shiroor : ಗಾಳಿ ಮಳೆಗೆ ಹಾರಿ ಹೋದ ಹೊಟೇಲ್‌ ಮೇಲ್ಛಾವಣಿ

Shiroor : ಗಾಳಿ ಮಳೆಗೆ ಹಾರಿ ಹೋದ ಹೊಟೇಲ್‌ ಮೇಲ್ಛಾವಣಿ

udupi-Malpe

Udupi: ಪ್ರವಾಸೋದ್ಯಮ ಚಟುವಟಿಕೆ ಸ್ಥಗಿತಕ್ಕೆ ಸೂಚನೆ

Udupi ಬೈಕ್‌ ಡೂಮ್‌ನಲ್ಲಿ ಹಾವು; ಬೆಚ್ಚಿ ಬಿದ್ದ ಸವಾರ!

Udupi ಬೈಕ್‌ ಡೂಮ್‌ನಲ್ಲಿ ಹಾವು; ಬೆಚ್ಚಿ ಬಿದ್ದ ಸವಾರ!

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

Court-Symbol

Mangaluru: ಪತಿಯ ಹತ್ಯೆ ಪ್ರಕರಣ; ಮಹಿಳೆ ಸಹಿತ ಐವರಿಗೆ ಜೀವಾವಧಿ ಶಿಕ್ಷೆ

Dina Bhavishya

Daily Horoscope; ಹಿತಶತ್ರುಗಳ ಕಾಟ, ಉದ್ಯೋಗಸ್ಥರಿಗೆ ವೇತನ ಏರಿಕೆಯಲ್ಲಿ ವಿಳಂಬ

Train ಶಿವಮೊಗ್ಗ-ಶೃಂಗೇರಿ-ಮಂಗಳೂರು ಹೊಸ ರೈಲು ಮಾರ್ಗ ಮಂಜೂರಾತಿಗೆ ಮನವಿ

Train ಶಿವಮೊಗ್ಗ-ಶೃಂಗೇರಿ-ಮಂಗಳೂರು ಹೊಸ ರೈಲು ಮಾರ್ಗ ಮಂಜೂರಾತಿಗೆ ಮನವಿ

1993 Mumbai riot accused arrested after 31 years

Mumbai; 31 ವರ್ಷ  ಬಳಿಕ ಸೆರೆಸಿಕ್ಕ 1993 ಮುಂಬೈ ಗಲಭೆ ಆರೋಪಿ

Pen Drive Case 4 ತಿಂಗಳಿಗೊಮ್ಮೆ ಎಚ್‌ಐವಿ ಟೆಸ್ಟ್‌ ಮಾಡಿಸುತ್ತಿದ್ದ ಪ್ರಜ್ವಲ್‌?

Pen Drive Case 4 ತಿಂಗಳಿಗೊಮ್ಮೆ ಎಚ್‌ಐವಿ ಟೆಸ್ಟ್‌ ಮಾಡಿಸುತ್ತಿದ್ದ ಪ್ರಜ್ವಲ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.