![Road](https://www.udayavani.com/wp-content/uploads/2024/07/Road-415x234.jpg)
NEET ಪರೀಕ್ಷೆಯಿಂದ ತಮಿಳುನಾಡನ್ನು ಹೊರಗಿಡುವ ನಿರ್ಣಯ ಅಂಗೀಕಾರ
Team Udayavani, Jun 29, 2024, 12:25 AM IST
![stalin](https://www.udayavani.com/wp-content/uploads/2024/06/stalin-1-620x372.jpg)
ಚೆನ್ನೈ: ನೀಟ್ ಪರೀಕ್ಷೆಯಿಂದ ತಮಿಳುನಾಡನ್ನು ಹೊರಗಿಡಬೇಕು ಮತ್ತು ಪ್ಲಸ್ 2 ತರಗತಿಯ ಅಂಕವನ್ನು ಆಧರಿಸಿ ವೈದ್ಯಕೀಯ ಕೋರ್ಸ್ಗಳಿಗೆ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಬೇಕು ಎಂದು ಕೇಂದ್ರ ಸರಕಾರಕ್ಕೆ ಆಗ್ರಹಿಸಿ ತಮಿಳುನಾಡು ವಿಧಾನಸಭೆ ಮತ್ತೂಮ್ಮೆ ಗೊತ್ತುವಳಿಯನ್ನು ಪಾಸ್ ಮಾಡಿದೆ.
ಈ ಗೊತ್ತುವಳಿ ಮಂಡನೆ ವೇಳೆ ಬಿಜೆಪಿ ವಿರೋಧ ವ್ಯಕ್ತಪಡಿಸಿದ್ದು, ಶಾಸಕರು ಹೊರನಡೆದಿದ್ದಾರೆ. ಆದರೆ ಬಿಜೆಪಿಯ ಮಿತ್ರಕೂಟದಲ್ಲಿರುವ ಪಿಎಂಕೆ ಗೊತ್ತುವಳಿಗೆ ಬೆಂಬಲ ನೀಡಿದೆ. ನೀಟ್ ಪರೀಕ್ಷೆ ಗ್ರಾಮೀಣ, ಬಡ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡುತ್ತಿದೆ ಎಂದು ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಹೇಳಿದ್ದಾರೆ. ಈ ಸಂಬಂಧ ಪಶ್ಚಿಮ ಬಂಗಾಲ ಸಿಎಂ ಮಮತಾ ಬ್ಯಾನರ್ಜಿ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖೀಲೇಶ್ ಯಾದವ್, ವಿಪಕ್ಷ ನಾಯಕ ರಾಹುಲ್ ಗಾಂಧಿ ಮುಂತಾದವರಿಗೆ ಪತ್ರ ಬರೆಯಲು ಸ್ಟಾಲಿನ್ ಸೂಚಿಸಿದ್ದಾರೆ.
ಟಾಪ್ ನ್ಯೂಸ್
![Road](https://www.udayavani.com/wp-content/uploads/2024/07/Road-415x234.jpg)
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.